- Monday
- August 31st, 2026
ನವದೆಹಲಿ: ಈಗಾಗಲೇ ಚಲಾವಣೆಯಿಂದ ಹಿಂಪಡೆಯಲಾಗಿರುವ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮರಳಿಸಲು ಅಥವಾ ವಿನಿಮಯ ಮಾಡಲು ನೀಡಲಾಗಿದ್ದ ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಕ್ಟೋಬರ್ 7ರವರೆಗೆ ವಿಸ್ತರಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಆರ್ಬಿಐ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಬ್ಯಾಂಕ್ಗೆ ಮರಳಿಸಲು ಅಥವಾ ವಿನಿಮಯ ಮಾಡಲು ಈ ಹಿಂದೆ ನಿಗದಿಪಡಿಸಿದ್ದ ಅವಧಿಯೂ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಪ್ರಸಿದ್ಧ ಚಾರಣ ತಾಣ ಕುಮಾರಪರ್ವತಕ್ಕೆ ಚಾರಣಕ್ಕೆ ಅ.3ರಿಂದ ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಠಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ...
ವಿನೋಬನಗರದ ವಿವೇಕಾನಂದ ಹಿ.ಪ್ರಾ.ಶಾಲೆಯ 6ನೇ ತರಗತಿ ವಿದ್ಯಾರ್ಥಿ ನಿಮಿಷ ಮಹಾಬಲಡ್ಕ ಕೈಯಲ್ಲಿ ಅರಳಿದ ಮಹಾತ್ಮ ಗಾಂಧೀಜಿಯ ಚಿತ್ರ. ಈಕೆ ಜಾಲ್ಸೂರು ಗ್ರಾಮದ ಮಹಾಬಲಡ್ಕ ನವೀನ್ ಹಾಗೂ ಉಷಾ ದಂಪತಿಗಳ ಪುತ್ರಿ.
ಪೆರಾಜೆ : ಚಿಗುರು ಯುವಕ ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯ ಅ.1 ರಂದು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಭುವನ್ ಕುಂಬಳಚೇರಿ,ಉಪಾಧ್ಯಕ್ಷ ಪ್ರದೀಪ್ ಕುಂಬಳಚೇರಿ,ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್ ಮಜಿಕೋಡಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಧೀಶರಾದ ಶ್ರೀಪೂರ್ಣಾನಂದ ಪುರಿ ಮಹಾಸ್ವಾಮೀಜಿ ಆಶೀರ್ವಚನ ನೀಡುತ್ತಾ ‘ಗಾಣಿಗ ಸಮುದಾಯವನ್ನು ಒಟ್ಟಾಗಿಸಲು ಸಂಘಟನೆ ಸ್ಥಾಪಿಸಲಾಗಿದೆ. ಆ ಬಳಿಕ ಸಮುದಾಯವು ಸಾಕಷ್ಟು ಸಂಘಟಿತರಾಗಿದ್ದಾರೆ, ಸಮುದಾಯದ ಮಧ್ಯೆ ಸಂಬಂಧಗಳು ಬೆಳೆದಿದೆ. ಸಂಘಟನೆಯನ್ನು ಕಟ್ಟಿ ಬೆಳೆಸುವವರಿಗೆ ಸಮುದಾಯ ಪ್ರೋತ್ಸಾಹ ನೀಡಬೇಕು ಎಂದು ಅವರು ಹೇಳಿದರು.ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನದ ವತಿಯಿಂದ...
ಸ್ವಚ್ಚತಾ ಕಾರ್ಯಕ್ರಮ ಗಾಂಧಿ ಜಯಂತಿ, ಸ್ವಚ್ಚತಾ ಪಕ್ವಾಡ ಹಾಗೂ ಸ್ವಚ್ಚತಾ ಹಿ ಸೇವಾ ಪ್ರಯುಕ್ತ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ, ಭಾರತ ಸರಕಾರದ ನಿರ್ದೇಶದಂತೆ ಸ್ವಚ್ಚತಾ ಕಾರ್ಯಕ್ರಮವನ್ನು ಕೆ.ವಿ.ಜಿ ಆಯುರ್ವೇದ ವ್ಶೆದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಇದರ ಎನ್.ಎಸ್.ಎಸ್. ಘಟಕದಿಂದ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ನಗರ, ವಿವೇಕಾನಂದ ಸರ್ಕಲ್, ಪಾರಂಪರಿಕ ತಾಣವಾದ ಶ್ರೀ...
ಮುಳ್ಯದಲ್ಲಿ ಕೂಲಿ ಕೆಲಸಗಾರರನ್ನು ಕರೆದುಕೊಂಡು ಹೋಗುವ ವ್ಯಕ್ತಿಗೆ ಕತ್ತಿಯಿಂದ ಕಡಿದು ಗಾಯಗೊಂಡು ಇದೀಗ ಸರಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಇದೀಗ ವರದಿಯಾಗಿದೆ , ಪೋಲಿಸ್ ಸದ್ಯ ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಕ್ಟೋಬರ್ ಒಂದರಂದು ಗಾಂಧಿ ಜಯಂತಿ ಪ್ರಯುಕ್ತ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಗ್ರಾಮ ಪಂಚಾಯತ್ ಪೆರಾಜೆ ಸಹಯೋಗದೊಂದಿಗೆ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ಉಪಾಧ್ಯಕ್ಷರಾದ ಶ್ರೀ ಅಶೋಕ ಪಿ ಎಂ ಇವರು ಗ್ರಾಮ ಪಂಚಾಯತ್ ಪಿಡಿಒ ರವರಾದ ಮಹದೇವ ಪ್ರಭುರವರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ...
ಗಾಂಧಿ ಜಯಂತಿಯ ಅಂಗವಾಗಿ ಕರ್ನಾಟಕ ಸರಕಾರದ ಸ್ವಚ್ಛತಾ ಹಿ ಸೇವಾ ಅಭಿಯಾನ (ಸೆ15ರಿಂದ ಅ2)ಆಂದೋಲನದ ಅಂಗವಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಗ ಅರಿವು ಕೇಂದ್ರದಲ್ಲಿ ನವೋದಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಲು ಪ್ರಾಯೋಗಿಕ ಚಟುವಟಿಕೆ ನಡೆಸಲಾಯಿತು, ವಿದ್ಯಾರ್ಥಿಗಳು ಸಂಗ್ರಹಿಸಿದ ತಮ್ಮ ಮನೆ...
ಗ್ರಾಮ ಪಂಚಾಯತ್ ಜಾಲ್ಸೂರು, ಮೊಹಿಯದ್ದೀನ್ ಜುಮ್ಮಾ ಮಸೀದಿ ಕುಂಬರ್ಚೋಡು, ಪೀಸ್ ಸ್ಕೂಲ್ ಬೊಳುಬೈಲು ಹಾಗೂ ಬಿ.ಯಫ್.ಸಿ ಸ್ಪೋರ್ಟ್ಸ್ ಕ್ಲಬ್ ಇದರ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಕುಂಬರ್ಚೋಡಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ. ತಿರುಮಲೇಶ್ವರಿ, ಮಸೀದಿ ಅಧ್ಯಕ್ಷರಾದ ಶ್ರೀ. ಅಬ್ದುಲ್ ಕರೀಂ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯದ ಶ್ರೀ. ಸುಬ್ಬಯ್ಯ,...
Loading posts...
All posts loaded
No more posts
