ಬೆಳೆಸಾಲದ ಮಿತಿ ಏರಿಕೆ ಮಾಡಿ ಆಶ್ವಾಸನೆ ಈಡೇರಿಸಿದ ಕಾಂಗ್ರೆಸ್ ಸರ್ಕಾರ ರೈತಪರ ಎಂದು ಸಾಬೀತು – ಪಿ.ಸಿ.ಜಯರಾಮ್, ಪಿ.ಎಸ್.ಗಂಗಾಧರ ಸ್ಪಷ್ಟನೆ

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳಲ್ಲಿ ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಯನ್ನು ಈಡೇರಿಸುವ ಬದ್ಧತೆಯನ್ನ ತೋರಿಸಿ ರೈತಪರವಾದ ಸರ್ಕಾರ ಎಂಬುವುದನ್ನು ಸಾಬೀತುಪಡಿಸಿದೆ. 0% ಗೆ ರೂ. 3 ಲಕ್ಷದವರೆಗೆ ಕೊಡುತ್ತಿದ್ದ ಬೆಳೆ ಸಾಲದ ಮಿತಿಯನ್ನು ರೂ. 5 ಲಕ್ಷಕ್ಕೆ ಏರಿಸಿದೆ. ಅದರ ಜೊತೆಗೆ 3% ಬಡ್ಡಿದರದಲ್ಲಿ ನೀಡುತ್ತಿದ್ದ ದೀಘ್ರಾವಧಿ ಸಾಲದ ಮಿತಿಯನ್ನು ರೂ. 10 ಲಕ್ಷದಿಂದ...

ನಡುಗಲ್ಲು : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆ.15ರಂದು ಆಚರಿಸಲಾಯಿತು. ಇದರ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳು ಓದಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
Ad Widget

ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಮೊಸರು ಕುಡಿಕೆ ಉತ್ಸವ ವೈಭವದ ಶೋಭಾಯಾತ್ರೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ವತಿಯಿಂದ ಮೊಸರು ಕುಡಿಕೆ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ 10ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಶೋಭಾಯಾತ್ರೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಆರಂಭಗೊಂಡಿತು. ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಗೆ ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ ತೆಂಗಿನಕಾಯಿ...

ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ವೈಭವದ ಅಟ್ಟಿ ಮಡಕೆ ಒಡೆಯುವ ಸ್ಪರ್ಧೆ, ಧಾರ್ಮಿಕ ಸಭೆ.

ಜಗತ್ತಿಗೆ ಬೆಳಕನ್ನು ನೀಡಿದ ದೇಶ ನಮ್ಮ ಭಾರತ. ಭಾರತ ದೇವಲೋಕಕ್ಕೆ ಸಮಾನವಾದ ಪುಣ್ಯ ಭೂಮಿ. ದೇವತೆಗಳು ಮತ್ತೆ ಹುಟ್ಟಿ ಬರಲು ಬಯಸುವ ಭೂಮಿ ಇದು. ಆಯಾ ಕಾಲದಲ್ಲಿ ಹೇಗೆ ಬದುಕಬೇಕು ಎಂದು ಭಗವಂತನು ಮನುಷ್ಯನಾಗಿ ಹುಟ್ಟಿ ಬಂದು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ. ಆ ರೀತಿ ಬದುಕುವುದು ನಮ್ಮ ಧರ್ಮ. ಭಗವಂತನು ನೀಡಿದ ಈ ಸಂದೇಶ ನಮ್ಮ ಜೀವನಕ್ಕೆ...

ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್ : ಸಾಮಾನ್ಯ ಜ್ವರ ಎಂದು ಕಡೆಗಣಿಸಿದ್ದಲ್ಲಿ ಜೀವಕ್ಕೇ ಕುತ್ತು

ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. ೧೯೯೯ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ...

ಗುತ್ತಿಗಾರು : ಬಾಲಕರ ತ್ರೋಬಾಲ್ ತಂಡ ರನ್ನರ್

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ) ಗಾಂಧಿನಗರ  ಸುಳ್ಯ ಇವರ ಜಂಟಿ ಆಶ್ರಯದಲ್ಲಿ ಸೆ. 16ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ತ್ರೋಬಾಲ್  ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತ್ರೋಬಾಲ್ ತಂಡವು  ನೆಹರು ಮೆಮೋರಿಯಲ್ ಪಿ.ಯು ಕಾಲೇಜುನೊಂದಿಗೆ ಸೆಣಸಾಡಿ...

ವಿಟ್ಲದಲ್ಲಿ ಗಾಂಜಾ ವಶ – ಆರೋಪಿ ಸುಳ್ಯದ ವ್ಯಕ್ತಿ ಬಂಧನ

ರಿಕ್ಷಾವೊಂದರಲ್ಲಿ ಅಕ್ರಮವಾಗಿ ನಿಷೇದಿತ ಗಾಂಜಾ ಸಾಗಾಟ ಮಾಡುತ್ತಿದ್ದ ಸುಳ್ಯದ ವ್ಯಕ್ತಿ ಹಾಗೂ ರಿಕ್ಷಾದಲ್ಲಿದ್ದ 6 ಕೆ ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಸೆ.16 ರಂದು ವಿಟ್ಲ ಸಮೀಪ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ, KA-21-B-7248 ನಂಬರಿನ ಅಟೋರಿಕ್ಷಾದಲ್ಲಿ ಸುಳ್ಯ ಕಸಬಾ ಗ್ರಾಮ ಸುಳ್ಯ ನಿವಾಸಿಯಾದ ಎನ್ ಎಂ ಮಹಮ್ಮದ್ ಕಲಂದರ್ ಶಾ (36) ...

ಗಾಯಗೊಂಡ ಹಸುವಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಪಶುವೈದ್ಯ ವೆಂಕಟಾಚಲಪತಿ

ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ಗಾಯಗೊಂಡು ನಡೆದಾಡಲಾಗದ ಸ್ಥಿತಿಯಲ್ಲಿದ್ದ ಹಸುವಿಗೆ ಪಶುವೈದ್ಯರಾದ ವೆಂಕಟಾಚಲಪತಿ ಅವರು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.ಸೆ.15 ರಂದು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಉಚಿತ ಹುಚ್ಚುನಾಯಿ ರೋಗನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ ನಡೆದಿದ್ದು, ಲಸಿಕೆ ನೀಡಲು ಪಶುವೈದ್ಯರಾದ ವೆಂಕಟಾಚಲಪತಿ ಅವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಲ್ಲೇಮಠ ಎಂಬಲ್ಲಿ ಹಸುವೊಂದು...

ಹರಿಹರ ಪಲ್ಲತ್ತಡ್ಕ : ಸೆ.18 ರಿಂದ ಸೆ.20 ರವರೆಗೆ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಸಹಭಾಗಿತ್ವದೊಂದಿಗೆ ಸೆ.18 ರಿಂದ ಸೆ.20 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 14ನೇ ವರ್ಷದ ಶ್ರೀ ಗಣೇಶೋತ್ಸವವು ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸೆ.18 ಸೋಮವಾರದಂದು ಬೆಳಿಗ್ಗೆ 9:05 ಕ್ಕೆ ಶ್ರೀ ಗೌರಿ ಮೂರ್ತಿ ಪ್ರತಿಷ್ಠಾಪನೆ ನಂತರ...

ಗಣೇಶ ಚತುರ್ಥಿ ಅಂಗವಾಗಿ ದ.ಕ.ಜಿಲ್ಲೆಯಲ್ಲಿ ಸೆ.19 ರಂದು ಸರಕಾರಿ ರಜೆ ಘೋಷಣೆ

ರಾಜ್ಯಾದ್ಯಂತ ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಆದರೆ ದ.ಕ. ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18 ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ತೀರ್ಮಾನ ತೆಗೆದುಕೊಳ್ಳುವಂತೆ ಆದೇಶದಲ್ಲಿ ತಿಳಿಸಿದೆ.
Loading posts...

All posts loaded

No more posts

error: Content is protected !!