- Monday
- August 3rd, 2026
ಸಾವಿರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳು ತೆರಳುವ ಕುರುಂಜಿಭಾಗ್ ರಸ್ತೆಯಲ್ಲಿ ನೀರು ತುಂಬಿ ಸಂಕಷ್ಟ ಪಡಬೇಕಾಯಿತು. ನಗರ ಪಂಚಾಯತ್ ವ್ಯಾಪ್ತಿಯ ಕುರುಂಜಿ ಭಾಗ್ ರಸ್ತೆಯಲ್ಲಿರುವ ಒಳಚರಂಡಿ ವ್ಯವಸ್ಥೆ ಅವ್ಯವಸ್ಥೆಯಿಂದಾಗಿ ಹೊಳೆಯಾಗಿ ಮಾರ್ಪಾಡಾಗಿ ವಾಹನಸವಾರರು ಪರದಾಡುವ ಪ್ರಸಂಗ ಉಂಟಾಯಿತು. ಇನ್ನಾದರೂ ನಗರ ಪಂಚಾಯತ್ ಮತ್ತು ತಾಲೂಕು ಆಡಳಿತ ಎಚ್ಚೆತ್ತುಕೊಳ್ಳುವುದೇ ಎಂದು ಕಾದು ನೋಡಬೇಕಿದೆ.
ನಿವೇದಿತಾ ಸಂಚಾಲನ ಸಮಿತಿ ಅಮರಪಡ್ನೂರು ಇವರ ವತಿಯಿಂದ ಭಾರತ ಮಾತಾ ಪೂಜಾನಾ ಕಾರ್ಯಕ್ರಮ ಚೊಕ್ಕಾಡಿ ಮಹಿಳಾ ಹಾಲು ಉತ್ಪಾದಕರ ಕಟ್ಟಡದಲ್ಲಿ ನಡೆಯಿತು. ಸಂಚಾಲನ ಸಮಿತಿಯ ಸಂಚಾಲಕಿ ಗೀತಾ ಕೊರತ್ಯಡ್ಕ ಅಧ್ಯಕ್ಷತೆ ವಹಿಸಿದ್ದರು.ಸಂಸ್ಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿ ಕುಸುಮಾಧರ ಎ ಟಿ ಬೌದ್ಧಿಕ್ ನೀಡಿದರು. ಮಾತೃ ಸಂಸ್ಥೆ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ.)ಇದರ ಆಡಳಿತ...
ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಹರಿಹರ ಕ್ಲಸ್ಟರ್ ನ ಎಲ್ಲ ಶಾಲೆಗಳಿಗೆ ಹಾಗೂ ಸುಬ್ರಹ್ಮಣ್ಯ ಕ್ಲಸ್ಟರ್ ನ ಆಯ್ದ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶ ಮಾಡಿದ್ದಾರೆ. ಸುಬ್ರಹ್ಮಣ್ಯ ಕ್ಲಸ್ಟರ್ ನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ,ಎಸ್ ಎಸ್ ಪಿ ಯು ಸುಬ್ರಹ್ಮಣ್ಯ, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ವಾಲ್ಮೀಕಿ...
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ) ಬಿ ಯಂ ಯಸ್ ಸಂಯೋಜಿತ ವತಿಯಿಂದ ಬಿ ಯಂ ಯಸ್ (ಭಾರತೀಯ ಮಜ್ದೂರ್ ಸಂಘ) ಸ್ಥಾಪಕ ದಿನಾಚರಣೆ ಕಾರ್ಯಕ್ರಮವನ್ನು ಹಳೆಗೇಟಿನ ಸಂಘದ ಕಟ್ಟಡ ಕಾರ್ಮಿಕರ ತಿಲಕಭವನದಲ್ಲಿ ಜು.23 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ದೀಪ ಬೆಳಗಿಸಿ ಮಾತನಾಡಿದರು.ಅಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ...
ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಸೇತುವೆ ಇಂದು ಸುರಿದ ಭಾರಿ ಮಳೆಗೆ ಕಳೆದ ವರ್ಷದಂತೆ ಈ ಬಾರಿಯೂ ಸಂಪರ್ಕ ಕಳೆದುಕೊಂಡಿದೆ. ನಿನ್ನೆಯಿಂದ ಕಲ್ಮಕಾರು, ಕೂಜುಮಲೆ, ಕಡಮಕಲ್ ಭಾಗದಲ್ಲಿ ಸುರಿದ ಭಾರಿ ಮಳೆಗೆ ಅಪಾರ ಪ್ರಮಾಣದ ನೀರು ಹರಿದು ಬಂದ ಪರಿಣಾಮ ಮೋರಿ ಅಳವಡಿಸಿ ಮರಳು ಚೀಲ ಇರಿಸಿ ನಿರ್ಮಿಸಿದ್ದ ಸಂಪರ್ಕ ಮತ್ತೆ ಕೊಚ್ಚಿಹೋಗಿದೆ. ಕಳೆದ ಬಾರಿ ಉಂಟಾದ...
ಭಾರಿ ಮಳೆಯಿಂದಾಗಿ ಕುಮಾರಧಾರ ನದಿಯು ಉಕ್ಕಿ ಹರಿಯುತ್ತಿದ್ದು, ಪಂಜ ಸಮೀಪದ ಪುಳಿಕುಕ್ಕು ಎಂಬಲ್ಲಿ ಹೊಳೆ ನೀರಿನ ನೆರೆ ಮುಖ್ಯ ರಸ್ತೆಯಲ್ಲಿ ತುಂಬಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.ಕಡಬ-ಪಂಜ ಕಡೆಗೆ ಸಂಚರಿಸಲು ನಿಂತಿಕಲ್ಲು -ಎಡಮಂಗಲ ರಸ್ತೆಯಾಗಿ ಪರ್ಯಾಯ ರಸ್ತೆಯನ್ನು ಬಳಸಬೇಕಾಗಿದೆ.
✍️ ಭಾಸ್ಕರ ಜೋಗಿಬೆಟ್ಟು ಭಾರಿ ಮಳೆ ಸುರಿಯುತ್ತಿರುವುದರಿಂದ ಜೋಗಿಬೆಟ್ಟು ಮಂಞನಕಾನ ಸಂಪರ್ಕ ಮಾಡುವ ರಸ್ತೆಯು ಹದೆಗೆಟ್ಟು ಈ ಭಾಗದ ಜನರಿಗೆ ಬಹಳ ತೊಂದರೆಯುನ್ನು ಉಂಟುಮಾಡುತ್ತಿದೆ. ಸುಮಾರು ಮೂವತ್ತಕ್ಕೂ ಹೆಚ್ಚು ಮನೆಗಳನ್ನು ಸಂಪರ್ಕಿಸುವ ಈ ರಸ್ತೆಯ ಅಧೋಗತಿಯನ್ನು ನೋಡುವವರು ಕೇಳುವವರು ಯಾರು ಇಲ್ಲದಂತಾಗಿದೆ. ಸರಿಯಾದ ಚರಂಡಿ ವ್ಯವಸ್ತೆ ಇಲ್ಲದೆ ಮಳೆಯ ನೀರು ಭಾರಿ ಪ್ರಮಾಣದಲ್ಲಿ ರಸ್ತೆಯಲ್ಲೇ ಹರಿಯುವುದರಿಂದ...
ಹಳೆಗೇಟು ಬಳಿ ನಿನ್ನೆ ಸಂಜೆ ಬೈಕ್ ಗಳ ಮಧ್ಯೆ ಪರಸ್ಪರ ಡಿಕ್ಕಿಯಾಗಿ ಸವಾರರಿಗೆ ಗಾಯವಾದ ಘಟನೆ ನಡೆದಿದೆ. ಬೆಟ್ಟಂಪಾಡಿಯ ಸ್ಮರಣ್ ಗಾಯಗೊಂಡವರು. ಪೈಚಾರ್ ನಿಂದ ಸುಳ್ಯಕ್ಕೆ ಬೈಕ್ ನಲ್ಲಿ ಬರುತ್ತಿದ್ದಾಗ ಸುಳ್ಯದಿಂದ ಪೈಚಾರ್ ಕಡೆಗೆ ಬರುತ್ತಿದ್ದ ಇನ್ನೊಂದು ಬೈಕ್ ಕಾರ್ ಅನ್ನು ಒವರ್ ಟೇಕ್ ಮಾಡುವ ಭರದಲ್ಲಿ ಸ್ಮರಣ್ ರವರ ಬೈಕಿಗೆ ಢಿಕ್ಕಿಯಾಗಿದ್ದು ಅವರು ಅಲ್ಲೆ...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ, ಅರಂಬೂರು ಇಲ್ಲಿ ಮೆಂಡ ಫೌಂಡೇಶನ್, ಎಸ್.ಪಿ. ಗ್ಲೋಬಲ್ ಮತ್ತು ಸೆಲ್ಕೋ ಸೋಲಾರ್ ಸಂಸ್ಥೆಯ ಸಹಯೋಗದೊಂದಿಗೆ ಒಂದು ಲಕ್ಷ 75 ಸಾವಿರ ರೂ. ವೆಚ್ಚದಲ್ಲಿ ಸೋಲಾರ್ ಆಧಾರಿತ ಸ್ಮಾರ್ಟ್ ಕ್ಲಾಸ್ ಸಿಸ್ಟಮ್ ನ್ನು ಕೊಡುಗೆಯಾಗಿ ನೀಡಲಾಗಿದ್ದು, ಈ ಸ್ಮಾರ್ಟ್ ಸಿಸ್ಟಮ್ ಉದ್ಘಾಟನಾ ಕಾರ್ಯಕ್ರಮ ಜು.22 ರಂದು ನಡೆಯಿತು. ಸಭಾ...
ನಿನ್ನೆ ರಾತ್ರಿಯಿಂದ ಅಜ್ಜಾವರದ ಕರಿಯಮೂಲೆಯ ರಾಮ್ ಪ್ರಸಾದ್ ಕಾರ್ನಿಕ , ವಿಶ್ವನಾಥ ರಾವ್ ಸರಿದಂತೆ ಇತರರ ತೋಟಗಳಿಗೆ ನೀರು ನುಗ್ಗಿದ ಘಟನೆ ವರದಿಯಾಗಿದೆ.ಮೊನ್ನೆಯಿಂದ ಘಟ್ಟ ಹಾಗೂ ಕರಾವಳಿಯಾಧ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಪಯಸ್ವಿನಿ ಉಕ್ಕಿ ಹರಿಯುತ್ತಿದ್ದು ಕಾಂತಮಂಗಲ ರಾಘವೇಂದ್ರ ಮಠ ಹಾಗೂ ಇತರ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಂಭವವಿದ್ದು ಮುನ್ನೆಚ್ಚರಿಕೆ ಕೈಗೊಳ್ಳಬೇಕಿದೆ
Loading posts...
All posts loaded
No more posts
