ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು. ನಲ್ಲಿ 1100 ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಯೋಗಾಸನ ; ಚಿತ್ತ ಚಾಂಚಲ್ಯ ಹೋಗಲಾಡಿಸಿ  ಏಕಾಗ್ರತೆ ಸಾಧಿಸಲು ಯೋಗ ಅಡಿಗಲ್ಲು- ಸೋಮಶೇಖರ ನಾಯಕ್ ಅಭಿಮತ

ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ.  ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ  ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ.ವಿಶ್ವ ಇದನ್ನು ಅನುಸರಿಸುತ್ತಿದೆ.ದೇವತೆಯ ಆರಾಧನೆಗೆ ಯೋಗಾಸನವನ್ನು ಬಳಸಲಾಗುತ್ತದೆ. ಸೂರ್ಯನ ಪೂಜನೆಮಾಡುವ  ಸೂರ್ಯ ನಮಸ್ಕಾರ ಅತ್ಯಂತ ಶ್ರೇಷ್ಠವಾದ ಆಸನವಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಇದೀಗ ವಿಶ್ವಾದ್ಯಂತ ಯೋಗದ...

ಜೂ.23; ನಗರ ಪಂಚಾಯತ್ ನಲ್ಲಿ ಅಂಚೆ ಇಲಾಖೆ ವತಿಯಿಂದ ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಕಾರ್ಯಕ್ರಮ

ಸುಳ್ಯ ನಗರ ಪಂಚಾಯತ್ ನಲ್ಲಿ ಅಂಚೆ ಇಲಾಖೆ ವತಿಯಿಂದ ಜೂ. 23 ರಂದು ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಅಂಚೆ ಇಲಾಖೆಯ ಯೋಜನೆಗಳಾದ ಪಿಎಲ್‌ಐ, ಆರ್ ಪಿ ಎಲ್ ಐ, ಬಜಾಜ್ ಆಕ್ಸಿಡೆಂಟ್ ಇನ್ಸೂರೆನ್ಸ್ ಪಾಲಿಸಿಗಳು, ಮಹಿಳಾ ಸಮ್ಮಾನ್ ಐಪಿಪಿಬಿ ಖಾತೆಗಳನ್ನು ತೆರೆಯುವ ಸೇವೆಯೂ ಲಭ್ಯವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ...
Ad Widget

ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿಜೂ 21ರಂದು 9ನೇ ಅಂತ ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಗೂನಡ್ಕದಲ್ಲಿ ಆಚರಿಸಲಾಯಿತು. ಈ ದಿನದ ಮಹತ್ವದ ಕುರಿತಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ.ಡಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಯೋಗವು ಜೀವನದ ಪ್ರಮುಖ ಭಾಗವಾಗಿದ್ದು, ನೆಮ್ಮದಿಯ ಜೀವನಕ್ಕೆ ಬಹಳಷ್ಟು ಸಹಾಯಕಾರಿ ಮತ್ತು ವಿದ್ಯಾರ್ಥಿಗಳು ಶಾಲಾ ಹಂತದ ಕಲಿಕೆಯಲ್ಲಿ ಯೋಗವನ್ನು...

ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಯೋಗ ದಿನಾಚರಣೆ ; ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗವೇ ಸಾಧನ- ಡಾ. ಶಶಿಧರ್ ಹಾಸನಡ್ಕ

ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಜೂ 21.ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ‘ ಆರೋಗ್ಯಕ್ಕಾಗಿ ಯೋಗ ’ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.   ವೈದ್ಯರು ಮತ್ತು ಯೋಗ ಪರಿಣಿತರಾದ ಡಾ. ಶಶಿಧರ್ ಹಾಸನಡ್ಕ ಇವರು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ‘ಯೋಗ ಮತ್ತು ಧ್ಯಾನದ ಉಪಯೋಗಗಳು’ ಎಂಬ ವಿಷಯದ ಬಗ್ಗೆ ವಿವರಿಸಿದ ಡಾ. ಶಶಿಧರ್ ಹಾಸನಡ್ಕ ಹಲವಾರು ಮಾಹಿತಿಗಳನ್ನು...

ಯೋಗದಿಂದ ರೋಗ ದೂರವಾಗುತ್ತದೆ – ಡಾ. ಚೂಂತಾರು

ದಿನವಿಡೀ ನಿಂತುಕೊಂಡು 8 ರಂದ 12 ಗಂಟೆಯ ಕಾಲ ಕೆಲಸ ಮಾಡುವ ಗೃಹರಕ್ಷಕರಿಗೆ ದೈಹಿಕ ಆರೋಗ್ಯ ಅತೀ ಅಗತ್ಯ. ಟ್ರಾಫಿಕ್ ನಿಯಂತ್ರಣ, ನೆರೆ ನಿಯಂತ್ರಣ ಮತ್ತು ಬೆಂಕಿ ಅವಘಡ ಮುಂತಾದ ಒತ್ತಡದ ಸಂದರ್ಭದಲ್ಲಿ ಕೆಲಸ ನಿರ್ವಹಿಸುವಾಗ ಗೃಹರಕ್ಷಕರಿಗೆ ವಿಪರೀತ ಮಾನಸಿಕ ಒತ್ತಡದ ಸನ್ನಿವೇಶ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಮತ್ತು ಮಾನಸಿಕ ಆರೋಗ್ಯಕ್ಕೆ...

ಎಸ್‌ಡಿಪಿಐ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕಲ್ಲಿ ಧ್ವಜಾರೋಹಣ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ 15ನೇಯ ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಗೂನಡ್ಕದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಸುಳ್ಯ ರೂರಲ್ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ವಹಿಸಿದರು ಧ್ವಜಾರೋಹಣವನ್ನು ಎಸ್ಡಿಪಿಐ ಸಂಪಾಜೆ ಗ್ರಾಮ ಸಮಿತಿ ಕಾರ್ಯದರ್ಶಿ ಸಾಜೀದ್ ಐ ಜಿ ನೆರವೇರಿಸಿದರು.ಸಂದೇಶ ಭಾಷಣಗೈದ ಎಸ್ಡಿಪಿಐ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿ...

ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

ಕಲ್ಲುಗುಂಡಿಯ ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಭಾರ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಿತಾ ಬಿ ರವರು  ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.  9ನೇ ತರಗತಿ ವಿದ್ಯಾರ್ಥಿನಿ ತನ್ವಿ ಅವರು ಯೋಗಾಸನದ ಮಹತ್ವವನ್ನು ತಿಳಿಸಿದರು. ನಂತರ ವಿದ್ಯಾರ್ಥಿನಿಯರು ಯೋಗ ನೃತ್ಯ ರೂಪಕವನ್ನು ಪ್ರಸ್ತುತಪಡಿಸಿದರು. ಬಳಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳು...

ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ
ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ, ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 9ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಡಾ. ಚಿದಾನಂದ ಕೆ. ವಿ. ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ...

ಸುಳ್ಯ : ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಬೆಳ್ಳಿ ಹಬ್ಬ ಸಂಭ್ರಮ – ಇಂದು ಆಮಂತ್ರಣ ಬಿಡುಗಡೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆರಂಭವಾಗಿ 25 ವರ್ಷ ಪೂರ್ಣಗೊಳಿಸಿದ ನೆನಪಿಗಾಗಿ  ಜು.19 ರಂದು ಬೆಳ್ಳಿ ಹಬ್ಬ ಸಮಾರಂಭ ‌ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ‌ಸಮಾರಂಭ ಜೂ.21 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ‌ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು....

ಸಂಪಾಜೆ ಗ್ರಾ.ಪಂ.ಗೆ ಸುಳ್ಯ ಠಾಣಾ ಪೋಲೀಸ್ ಉಪ ನಿರೀಕ್ಷಕ ಈರಯ್ಯ ಭೇಟಿ – ಪ್ರಾಕೃತಿಕ ವಿಕೋಪದ ಮುನ್ನೆಚ್ಚರಿಕೆ ಬಗ್ಗೆ ಚರ್ಚೆ

ಸಂಪಾಜೆ ಗ್ರಾಮ ಪಂಚಾಯತ್ ಕಚೇರಿಗೆ ಸುಳ್ಯದ ಆರಕ್ಷಕ ಠಾಣಾ ಉಪ ನೀರಿಕ್ಷಕರಾದ ಈರಯ್ಯ ದೂಂತೂರು ಇಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಮಟ್ಟದ ಸಮಸ್ಯೆಗಳು, ಹೂಳೆತ್ತುವ ಕಾಮಗಾರಿ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.‌ ಹಾಗೂ ಇಲಾಖೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ.ಕೆ....
Loading posts...

All posts loaded

No more posts

error: Content is protected !!