- Wednesday
- August 5th, 2026
ಕೋಲ್ಚಾರು ತರವಾಡು ಕುಟುಂಬದ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಕಟ್ಡು ಮಹೋತ್ಸವದ ಹಿನ್ನಲೆ ಭಕ್ತಿ ಸಡಗರದಿಂದ ಹಸಿರುವಾಣಿ ಮೆರವಣಿಗೆ ಸಾಗಿಬಂದಿತು.ಇಂದು ಬೆಳಿಗ್ಗೆ ಗಂಟೆ 8.30 ರಿಂದ ಕೋಲ್ಟಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯಲ್ಲಿ ನೂರಾರು ವಾಹನಗಳೊಂದಿಗೆ ಸಾಗಿ ಬಂದು ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ...
ಅನ್ಸಾರ್ ವತಿಯಿಂದ ಹಜ್ ತರಬೇತಿ ಶಿಬಿರ ಮತ್ತು ಬೀಳ್ಕೊಡುಗೆ ಸಮಾರಂಭ.ಪವಿತ್ರ ಹಜ್ ಯಾತ್ರಿಕ ಸೃಷ್ಟಿಕರ್ತನ ಅತಿಥಿ ಸರ್ವಾದರಣಿಯರು ಅಶ್ರಫ್ ಕಾಮಿಲ್ ಸಖಾಫಿ ಪ್ರಸಕ್ತ ಸಾಲಿನಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳುತ್ತಿರುವ ಸುಳ್ಯ ಮತ್ತು ಆಸುಪಾಸು ತಾಲೂಕುಗಳ ಯಾತ್ರಿಕರಿಗೆ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ವತಿಯಿಂದ ಹಜ್ ತರಬೇತಿ ಶಿಬಿರ ಮತ್ತು ಬೀಳ್ಕೊಡುಗೆ ಸಮಾರಂಭ ಅನ್ಸಾರಿಯ ಎಜುಕೇಶನ್ ಸೆಂಟರ್...
ಆಲೆಟ್ಟಿ ಗ್ರಾಮದ ಕೋಲ್ಚಾರು ಕುಟುಂಬಸ್ಥರ ತರವಾಡು ಮನೆತನದ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮೇ.16,17 ಮತ್ತು 18 ರಂದು ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ನಡೆಯಲಿಮೇ.16 ರಂದು ಬೆಳಗ್ಗೆ ಗಂಟೆ 8.30 ರಿಂದ ಕೋಲ್ಚಾರು ಐನ್ ಮನೆಯಿಂದ ಮತ್ತು ಶ್ರೀ ಶಾರದಾಂಬಾ ಭಜನಾ ಮಂದಿರದ ಬಳಿಯಿಂದ ಹಸಿರುವಾಣಿ ಮೆರವಣಿಗೆಯು ಸಾಗಿ ಬರಲಿದೆ. ಬಳಿಕಉಗ್ರಾಣ ತುಂಬುವ...
ಸುಳ್ಯ ಹಳೆಗೇಟು ವಿದ್ಯಾನಗರದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾರೋಪ ಹಾಗೂ ಶ್ರೀಕೇಶವ ಸ್ಮೃತಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ.14ರಂದು ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿದ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಮಕ್ಕಳನ್ನು ಉತ್ತಮ ವ್ಯಕ್ತಿಗಳಾಗಿ ರೂಪಿಸಲು ಸಂಸ್ಕಾರಯುತ ಶಿಕ್ಷಣ ಹಾಗೂ...
ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯ ಕೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯರವರು ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಮಾತನಾಡಿದ ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ.ತೀರ್ಥರಾಮರವರು ಸುಳ್ಯ ಬಿಜೆಪಿಯ ಭದ್ರಕೋಟೆಯೆಂದು ಸುಳ್ಯದ ಮತದಾರರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಕಳೆದ ಬಾರಿಯ ಅಂತರದಿಂದ 5 ಸಾವಿರ ಹೆಚ್ಚು ಅಂತರದಿಂದ ಭಾಗೀರಥಿ...
ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಮುಸಲ್ಮಾನರ ಪವಿತ್ರ ತೀರ್ಥ ಯಾತ್ರೆಯಾದ ಹಜ್ ವ್ಯವಸ್ಥೆಯನ್ನು ಬದಲಿಸಿ ಕೇರಳದ ಕಣ್ಣೂರಿಗೆ ನೀಡಿರುವುದು ಖಂಡನೀಯ ಎಂದು ಕೆಪಿಸಿಸಿ ವಕ್ತಾರ ಟಿ.ಎಂ. ಶಹೀದ್ ಹೇಳಿದ್ದಾರೆ. ಮೇ.12ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮುಸಲ್ಮಾನರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಾ ಬರುತ್ತಿದೆ. ಹಲವಾರು ವರ್ಷಗಳಿಂದ ಇದ್ದ ಹಜ್ ಯಾತ್ರಿಕರಿಗೆ...
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮರ್ಕಂಜದ ನಿವಾಸಿ ಕುಸುಮಾಧರ ಮುಂಡೋಡಿ ಎಂಬವರ ಮೃತದೇಹ ಅರಂತೋಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಸುಮಾಧರರು ಅರಂತೋಡಿನಲ್ಲಿ ವಾಸವಾಗಿದ್ದು, ಎರಡು ದಿನಗಳ ಹಿಂದೆ ಅವರು ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು. ಇಂದು ಅವರು ವಾಸವಿದ್ದ ಮನೆಯ ಪಕ್ಕದ ತೋಟದಲ್ಲಿ ಕೊಕ್ಕೋ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ...
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯಗೆಲುವು ಸಾಧಿಸಿದ್ದಾರೆ. ಭಾಗೀರಥಿ ಮುರುಳ್ಯ 30 ಸಾವಿರಕ್ಕೂ ಅಧಿಕ ಮತಗಳ ಬಹುಮತ ಪಡೆದಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ ಎಂದು ತಿಳಿದು ಬಂದಿದೆ.
ಮರ್ಕಂಜದ ನಿವಾಸಿ, ಅರಂತೋಡಿನಲ್ಲಿ ವಾಸವಾಗಿರುವ ಕುಸುಮಾಧರ ಮುಂಡೋಡಿ (೪೩) ಇವರು ಬುಧವಾರ ರಾತ್ರಿಯಿಂದ ಕಾಣೆಯಾಗಿರುತ್ತಾರೆ ಎಂದು ಮನೆಯವರು ಸುಳ್ಯ ಠಾಣೆಯಲ್ಲಿ ಇಂದು ದೂರು ನೀಡಿರುತ್ತಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಿದ್ದಲ್ಲಿ ಹತ್ತಿರದ ಪೋಲೀಸ್ ಠಾಣೆ ಅಥವಾ ದೂರವಾಣಿ ಸಂಖ್ಯೆ 99012 04497 ಗೆ ತಿಳಿಸಬೇಕಾಗಿ ಮನೆಯವರು ವಿನಂತಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಎರಡು ಗುಂಪುಗಳ ನಡೆಯುವ ಆಂತರಿಕ ಕಲಹದಿಂದ ಹಲವಾರು ಹಾನಿಯಾಗಿದೆ, ಹಲವರು ಜೀವ ಕಳೆದುಕೊಂಡಿದೆ, ಕೆಲವು ಸಮುದಾಯಗಳ ಮೇಲೂ ದಾಳಿಯಾಗಿದೆ. ಈ ಕಲಹವನ್ನು ತಕ್ಷಣವೇ ನಿಲ್ಲಿಸಲು ಸರ್ಕಾರ ಮಧ್ಯಪ್ರವೇಶ ಮಾಡಬೇಕು ಬೆಳ್ತಂಗಡಿ ಧರ್ಮಪ್ರಾಂತ್ಯದ ಶ್ರೀಸಾಮಾನ್ಯರ ಸಂಘಟನೆಯಾದ ಕೆಎಸ್ಎಂಸಿಎ ಒತ್ತಾಯಿಸುತ್ತದೆ ಎಂದು ಸಂಘಟನೆಯ ಅಧ್ಯಕ್ಷ ಬಿಟ್ಟಿ ನೆಡುನೀಲಂ ಹೇಳಿದ್ದಾರೆ.ಈ ಬಗ್ಗೆ ತುರ್ತುಸಭೆ ನಡೆಸಿ...
Loading posts...
All posts loaded
No more posts
