ನಡುಗಲ್ಲು : ಬಿಜೆಪಿಯಿಂದ ಭರ್ಜರಿ ಪ್ರಚಾರ

ನಡುಗಲ್ಲು ಬೂತ್ ನಲ್ಲಿ ಮೇ.06 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿಯ ಪ್ರಮುಖ ನಾಯಕರು ಬೆಳಿಗ್ಗೆ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ನಂತರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.80 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹಾಗೂ ಮಾತೆಯರು ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ...

ದೇವಚಳ್ಳ :- ಶೈಲೇಶ್ ಅಂಬೆಕಲ್ಲು ಮನೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ದೇವಚಳ್ಳ ಗ್ರಾಮದ ಬಿಜೆಪಿ ಕಾರ್ಯಕರ್ತರ ಸಭೆ ಮೆ.06 ರಂದು ಸಂಜೆ ಶೈಲೇಲ್ ಅಂಬೆಕಲ್ಲು ಮನೆಯಲ್ಲಿ ನಡೆಯಿತು. ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡಲು ಶೈಲೇಶ್ ಅಂಬೆಕಲ್ಲು ಹಾಗೂ ಕಾರ್ಯಕರ್ತರಲ್ಲಿ ಬಿಜೆಪಿ ನಾಯಕರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಎಸ್.ಎನ್.ಮನ್ಮಥ, ಎನ್.ಎ. ರಾಮಚಂದ್ರ, ಬಿ ಕೆ ಬೆಳ್ಯಪ್ಪ, ಸಂತೋಷ್ ಕುತ್ತಮೊಟ್ಟೆ, ಹರೀಶ್ ರೈ ಉಬರಡ್ಕ, ಜಯಪ್ರಕಾಶ್...
Ad Widget

ರಂಗಮನೆಯಲ್ಲಿ ಸುಗಮ ಸಂಗೀತ ಕಾರ್ಯಾಗಾರದ ಸಮಾರೋಪ.”ಸುಗಮ ಸಂಗೀತದಲ್ಲಿ ಕವಿತ್ವದ ಅರಳುವಿಕೆ : ಚೊಕ್ಕಾಡಿ”

' ಮನದಲ್ಲಿ ಅರಳುವ ಚಿತ್ರಣವನ್ನು ಗಾಯನದ ಮೂಲಕ ಅನಾವರಣಗೊಳಿಸಲು ಸುಗಮ ಸಂಗೀತದಲ್ಲಿ ಸಾಧ್ಯವಿದೆ. ಕವಿತ್ವದ ಅರಳುವಿಕೆ ಇಲ್ಲಿ ಸಾಧ್ಯ ' ಎಂದು ಕವಿ ಸುಬ್ರಾಯ ಚೊಕ್ಕಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಸುಳ್ಯ ರಂಗಮನೆಯಲ್ಲಿ ನಡೆದಸಂಗಮ ಕಲಾ ಕ್ಷೇತ್ರ (ರಿ)ಟ್ರಸ್ಟ್ ಬೆಂಗಳೂರು ಹಾಗೂ ಗಣೇಶ್ ಮ್ಯೂಸಿಕಲ್ಸ್ ಸುಳ್ಯ ದ.ಕ ಹಾಗೂ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ...

ನಾಳೆ(ಮೇ.08) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ

ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 10.00 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಮಂಡಳಿ ಮಾಹಿತಿ ನೀಡಿದೆ. ಈ ಬಾರಿ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು 11.00 ಗಂಟೆಯಿಂದ...

ಸುಳ್ಯ ವಿಧಾನ ಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮ

ಸುಳ್ಯ:ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಸುಳ್ಯ ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಸುಳ್ಯ ಪೇಟೆಯ ಖಾಸಗಿ ಬಸ್ ತಂಗುದಾಣದಲ್ಲಿ ತಾಲೂಕು SVEEP ಸಮಿತಿ ಹಾಗೂ ಸುಳ್ಯ ನಗರಪಂಚಾಯತ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸಾರ್ವಜನಿಕರಿಗೆ ಆಯೋಗದಿಂದ ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ...

ಶ್ರೀಕೇಶವ ಕೃಪಾದಲ್ಲಿ ವೇದ ಯೋಗ ಕಲಾ ಶಿಬಿರದ ಸಮಾಪನ ಮತ್ತು ಸಾಧಕರಿಗೆ ಶ್ರೀ ಕೇಶವಸ್ಮೃತಿ ಪ್ರಶಸ್ತಿ ಪ್ರದಾನ-2023

ವೇದ ಯೋಗ ಮತ್ತು ಕಲೆಗಳ ಉಳಿವಿಗಾಗಿ ತನ್ನದೇ ಕೊಡುಗೆಯನ್ನು ಕೊಡುತ್ತಿರುವ ಸುಳ್ಯದ ಶ್ರೀಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನವು ಪ್ರತಿ ವರ್ಷ ಬೇಸಿಗೆ ರಜೆಯಲ್ಲಿ ಸರಿ ಸುಮಾರು ಒಂದು ತಿಂಗಳ ವೇದ ಯೋಗ ಕಲಾ ಶಿಬಿರವನ್ನು ಆಯೋಜಿಸುತ್ತಿದ್ದು, ಈ ವರ್ಷದ ಶಿಬಿರವು ಏಪ್ರಿಲ್ ೧೬ ರಿಂದ ಆರಂಭಗೊಂಡಿದ್ದು ಮೇ 14ರಂದು ಸಮಾಪನಗೊಳ್ಳಲಿದೆ.ರಾಜ್ಯ ಮತ್ತು ಹೊರರಾಜ್ಯದ...

ಸುಳ್ಯ : ಆಮ್ ಆದ್ಮಿ ಗೆಲ್ಲಿಸುವ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ : ಆಪ್ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ

“ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ ಅದರಿಂದ ಬೇಸತ್ತಿರುವ ಸುಳ್ಯ ಕ್ಷೇತ್ರದ ಮತದಾರರು ಈ ಸಲ ಹೊಸ ರಾಜಕೀಯ ಪರ್ಯಾಯವನ್ನು ಬೆಂಬಲಿಸಲಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನರವರು ಸುಶಿಕ್ಷಿತ, ಸಮರ್ಥ ಅಭ್ಯರ್ಥಿ. ಅವರಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವಿದೆ, ಅದನ್ನು ಪರಿಹರಿಸುವ...

ಪವಿತ್ರ ಹಜ್ಜ್ ಯಾತ್ರೆಗೆ ಬೀಳ್ಕೊಡುಗೆ ಸಮಾರಂಭ.

ಈ ವರ್ಷದ ಪವಿತ್ರ ಹಜ್ಜ್ ಯಾತ್ರೆಗೆ ತೆರಳುತ್ತಿರುವ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದರಸ ಇದರ ಮಾಜಿ ಸದರ್ ಉಸ್ತಾದ್ ಕೆ.ಕೆ. ಅಲಿ ಮುಸ್ಲಿಯಾರ್ ಪಟ್ಟಾಂಬಿ ಮತ್ತು ಸುಳ್ಯದ ಉದ್ಯಮಿ ನಾಸಿರ್ ಕಟ್ಟೆಕ್ಕಾರ್ಸ್ ಇವರನ್ನು ಮದರಸ ಸಭಾಂಗಣದಲ್ಲಿ ಏರ್ಪಡಿಸಲಾದ ಸಮಾರಂಭದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಗಾಂಧಿನಗರ ಜುಮ್ಮಾ ಮಸ್ಜಿದ್ ಅಧ್ಯಕ್ಷ ಕೆ.ಎಂ.ಮುಸ್ತಫಾ ವಹಿಸಿದ್ದರು, ಗಾಂಧಿನಗರ ಖತೀಬರಾದ ಅಲ್...

ಕುಂದಾಪುರದ ಹೊಳೆಯಲ್ಲಿ ಮುಳುಗಿ ನಾಪತ್ತೆಯಾದ ಐವರ್ನಾಡಿನ ಯುವಕ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

ಐವರ್ನಾಡಿನ ಯುವಕ ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಮಡ್ತಿಲ ಮೀರನಾಥ್ ಗೌಡ ಎಂಬುವರ ಮಗ ಸುಹಾಸ್ಂ.ಎಂ. (21) ಎಂಬಾತ ನಾಪತ್ತೆಯಾಗಿರುವ ಯುವಕ. ಈತ ಮೂಡಬಿದ್ರೆಯ ಆಯುರ್ವೇದ ಔಷಧಿ ಕಂಪೆನಿಯೊಂದರ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ.ಇಂದು ಬೆಳಿಗ್ಗೆ ತನ್ನ ಮನೆಯಿಂದ...

ಮಡಪ್ಪಾಡಿ:ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮತಪ್ರಚಾರ.

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮಡಪ್ಪಾಡಿ ಗ್ರಾಮದ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಶೀರಡ್ಕ, ಕೇವಲ, ಮಡಪ್ಪಾಡಿ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗೂ ರಾಜ್ಯ ಮಹಿಳಾ ಮೊರ್ಚಾದ ಅಧ್ಯಕ್ಷೆ ಗೀತಾ ವಿವೇಕಾನಂದ, ರಾಷ್ಟ್ರೀಯ ಮಹಿಳಾ ಮೊರ್ಚಾದ ಕಾರ್ಯಕಾರಣಿ ಸದಸ್ಯೆ ಆಶ್ವಿನಿ ಮಂಜೇಶ್ವರ, ಜಿಲ್ಲಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ,ಜಿಲ್ಲಾ...
Loading posts...

All posts loaded

No more posts

error: Content is protected !!