ಸುಳ್ಯದ ಕುಂ..ಕುಂ.. ವಸ್ತ್ರ ಮಳಿಗೆ ನವೀಕರಣಗೊಂಡು ಶುಭಾರಂಭ

ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂ..ಕುಂ… ಫ್ಯಾಶನ್ 10 ವರ್ಷಗಳನ್ನು ಪೂರೈಸಿದ್ದು, ಇದೀಗ ಸಂಸ್ಥೆಯು ನವೀಕರಣಗೊಂಡಿದ್ದು, ಇದರ ಶುಭಾರಂಭ ಕಾರ್ಯಕ್ರಮ ಇಂದು ಬೆಳಗ್ಗೆ ನೆರವೇರಿತು.ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯು ದಶಕಗಳಿಂದ ಗ್ರಾಹಕರ ಅಚ್ಚುಮೆಚ್ಚಿನ ವಸ್ತ್ರ ಮಳಿಗೆಯಾಗಿ ಹೆಸರು ಪಡೆದುಕೊಂಡಿದೆ.ಬದಲಾವಣೆಗೆ ತಕ್ಕಂತೆ ಒಗ್ಗಿಕೊಂಡು ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಹೊಸ ವಿನ್ಯಾಸದ ವಸ್ತ್ರಗಳನ್ನು ಸಂಸ್ಥೆಯು ತನ್ನ ಗ್ರಾಹಕರಿಗೆ...

ರೋಯಲ್ ಫ್ರೆಂಡ್ಸ್ ಆರ್ಟ್ಸ್ &ಸ್ಪೋರ್ಟ್ಸ್ ಟ್ರಸ್ಟ್ ಗೂನಡ್ಕ (ರಿ ) ಇದರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ

ಸಾಮಾಜಿಕ, ಶೈಕ್ಷಣಿಕ, ಕ್ರೀಡಾಕ್ಷೇತ್ರ ,ಸಾಂತ್ವನ ಕಾರ್ಯಗಳಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿರುವ ರೋಯಲ್ ಫ್ರೆಂಡ್ಸ್ ಆರ್ಟ್ಸ್ & ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದಸಾಮಾಜಿಕ ಕಳಕಳಿ ಹಾಗೂ ಬದ್ಧತೆಯೊಂದಿಗೆ, ಬಡವರ ಮೇಲೆ ವಿಶೇಷ ಕಾಳಜಿಯೊಂದಿಗೆ ಪುಣ್ಯ ರಮಳಾನ್ ತಿಂಗಳನ್ನು ಬಡತನದ ಬೇಗೆ ನಿವಾರಿಸುವ ನಿಟ್ಟಿನಲ್ಲಿ ಅರ್ಹರು ಸಂತೋಷದಿಂದ ಪುಣ್ಯ ರಮಳಾನ್ ತಿಂಗಳನ್ನು ಸ್ವಾಗತಿಸಲಿ ಎಂಬ ಸದುದ್ದೇಶದಿಂದ ಕೊಯನಾಡು, ಸಂಪಾಜೆ, ಕಲ್ಲುಗುಂಡಿ, ಗೂನಡ್ಕ,ಪೆರಾಜೆ,...
Ad Widget

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ.

ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡರನ್ನು ನೇಮಕಗೊಳಿಸಿಲು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಮಾಡಿದ್ದಾರೆ. ಈ ಬಗ್ಗೆ ವೆಂಕಪ್ಪ ಗೌಡರಿಗೆ ಪತ್ರ ಕಳಿಸಿರುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ, ಕ್ಷೇತ್ರದ ಅಭ್ಯರ್ಥಿ, ಬ್ಲಾಕ್ ಅಧ್ಯಕ್ಷರು ಹಾಗೂ ನಾಯಕರುಗಳನ್ನು ಒಳಗೂಡಿಗೊಂಡು ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ತೊಡಗಿಸಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗಲು ಸಂದೇಶ ರವಾನಿಸಿದ್ದಾರೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಘಟಕ ಅಸ್ತಿತ್ವಕ್ಕೆ, ಅಧ್ಯಕ್ಷರಾಗಿ ಅವಿನಾಶ್ ಕಾರಿಂಜ , ಪ್ರಧಾನ ಕಾರ್ಯದರ್ಶಿಯಾಗಿ ಜೀವನ್ ನಾರ್ಕೋಡು ಆಯ್ಕೆ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದು , ಇಂದು ರಾಜ್ಯದಲ್ಲಿ ನೊಂದವರ ದ್ವನಿಯಾಗಿ ಕೆಲಸ ಮಾಡುತ್ತಿದ್ದು, ಆರಂಭದಲ್ಲಿ 15 ಮಂದಿ ಇದ್ದ ಪಕ್ಷದ ಕಾರ್ಯಕರ್ತರು, ಇಂದು 45000 ವಾಗಿದೆ ಈ ನಿಟ್ಟಿನಲ್ಲಿ ಸುಳ್ಯದಲ್ಲೂ ಪಕ್ಷ ತನ್ನ ಕಾರ್ಯ ಚಟುವಟಿಕೆ ಆರಂಭಿಸು ನಿಟ್ಟಿನಲ್ಲಿ ಘಟಕ ರಚಿಸಿದ್ದು, ಘಟಕದ ಅಧ್ಯಕ್ಷರಾಗಿ ಅವಿನಾಶ್ ಕಾರಿಂಜ ಹಾಗೂ...

ಸುಳ್ಯ : ಚುನಾವಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಪೊಲೀಸ್ ಪಡೆ ಮತ್ತು ಪೊಲೀಸ್ ತುಕಡಿಗಳ ಪಥ ಸಂಚಲನ

ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಕಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ.ಆರ್.ಪಿ.ಎಪ್ ಪಡೆ ಆಗಮಿಸಿದ್ದು ಇಂದು ಸುಳ್ಯದ ಪ್ರಮುಖ ಹಾಗೂ ಸೂಕ್ಷ್ಮ ಸ್ಥಳಗಳಲ್ಲಿ ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ್ ನೇತೃತ್ವದಲ್ಲಿ 2 CRPF ಪಡೆ ಹಾಗೂ ಒಂದು...

ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಆದಿ ಬೈದಿರುಗಳ ನೇಮೋತ್ಸವ

ಎಣ್ಮೂರು ಶ್ರೀನಾಗಬ್ರಹ್ಮ ಕೋಟಿ ಚೆನ್ನಯ ಆದಿಬೈದೇರುಗಳ ನೇಮೋತ್ಸವವು ಎ.5 ರಂದು ವಿಜೃಂಭಣೆಯಿಂದ ನಡೆಯಿತು.ಏ.3ರಂದು ಬೆಳಿಗ್ಗೆ ಶ್ರೀ ಮಹಾ ಗಣಪತಿ ಹವನ ನಡೆದು, ರಾತ್ರಿ ಶ್ರೀ ಉಳ್ಳಾಕುಳ ನೇಮ ಮತ್ತು ಕಾಜು ಕುಜುಂಬ ನೇಮ, ಕೈಕಾಣಿಕೆ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.ಎ.4ರಂದು ರಾತ್ರಿ ಇಷ್ಟದೇವತೆ ನೇಮೋತ್ಸವ ನಡೆದು, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಏ....

ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಆರಂತೋಡಿಗೆ ಭೇಟಿ

ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಕೃಷ್ಣಪ್ಪ ರವರು ಇಂದು ಅರಂತೋಡಿಗೆ ಭೇಟಿ ನೀಡಿ ಆ ಭಾಗದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಅಧ್ಯಕ್ಷ ಪಿ.ಸಿ. ಜಯರಾಮ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಸದಾನಂದ ಮಾವಜಿ, ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತನ್ ಕೊಡಪಾಲ ಹಾಗೂ ಅರಂತೋಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.

ಸುಬೇದಾರ್ ಏಕನಾಥ ಶೆಟ್ಟಿಗೆ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ ಪ್ರದಾನ

ಕೆದಂಬಾಡಿ ರಾಮಯ್ಯ ಗೌಡ ಅವರ ನೇತೃತ್ವದಲ್ಲಿ ನಡೆದಿದ್ದ ಅಮರಸುಳ್ಯ ಹೋರಾಟದ ವಿಷಯ ಪಠ್ಯದಲ್ಲಿ ಸೇರ್ಪಡೆಗೊಂಡು ಯುವ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಮಂಗಳೂರು ವತಿಯಿಂದ ನಗರದಲ್ಲಿ ಬುಧವಾರ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ ಸಂಸ್ಮರಣಾ ದಿನಾಚರಣೆ,...

ಸುಬ್ರಹ್ಮಣ್ಯ:ದರ್ಪಣ ತೀರ್ಥ ನದಿಯಲ್ಲಿ ಸತ್ತು ಬಿದ್ದಿರುವ ಮೀನುಗಳು, ಸ್ನಾನ ಘಟ್ಟವನ್ನು ಸೇರುತ್ತಿದೆ ಕಲುಷಿತ ನೀರು

ಸುಬ್ರಹ್ಮಣ್ಯದ ಪ್ರಸಿದ್ಧ ಉಪನದಿ ದರ್ಪಣ ತೀರ್ಥ ನದಿಯಲ್ಲಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ಎ.5 ರಂದು ವರದಿಯಾಗಿದೆ. ಒಂದು ಕಡೆ ನೀರಿನ ಹರಿವಿನ ಪ್ರಮಾಣ ಕಡಮೆಯಾಗಿರುವುದು ಹಾಗೂ ನೀರಿಗೆ ಡ್ರೈನೇಜ್ ನೀರು ಸೇರುತ್ತಿರುವುದು ಕಂಡು ಬಂದಿದ್ದು ಇದರಿಂದ ಸಾವಿರಾರು ಜಲಚರಗಳು ಸತ್ತಿರುವುದು ಕಂಡು ಬಂದಿದೆ. ಮೀನುಗಳು ಸತ್ತು ತೆಲುತ್ತಿದೆ. ಇದರಿಂದಾಗಿ ಭಾರಿ ವಾಸನೆಯೂ ಬರುತ್ತಿದೆ. ನದಿಯ...

ಗುತ್ತಿಗಾರು : ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಜೀವನ ಶಿಕ್ಷಣ ಮಾಹಿತಿ ಕಾರ್ಯಗಾರ

ಏ.05 ರಂದು ಗುತ್ತಿಗಾರು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ಮಾಹಿತಿ ಕಾರ್ಯಗಾರ ಏರ್ಪಡಿಸಲಾಗಿತ್ತು.ಮಾಹಿತಿಯನ್ನು ಜೀವನ ಶಿಕ್ಷಣ ತರಬೇತುದಾರರಾದ ಲೋಕೇಶ್ ಪೀರನಮನೆ ನಡೆಸಿಕೊಟ್ಟರು.ಕಂಪ್ಯೂಟರ್ ತರಬೇತಿಯ ಜೊತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಚಟುವಟಿಕೆಗಳ ಬಗ್ಗೆ ಶ್ರೀ ದುರ್ಗಾ ಕಂಪ್ಯೂಟರ್ ನ ಮಾಲಕಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ಮಾಹಿತಿ ನೀಡಿದರು.ಕಂಪ್ಯೂಟರ್ ಶಿಕ್ಷಕಿ ಯಶಸ್ವಿ ಗಿರೀಶ್...
Loading posts...

All posts loaded

No more posts

error: Content is protected !!