ಶ್ರೀಮತಿ ರಶ್ಮಿ ಕೆ.ಎಂ.ಯವರಿಗೆ ಹಿರಿಯ ಸಹಾಯಕ ನಿರ್ದೇಶಕರಾಗಿ ಮುಂಬಡ್ತಿ

ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ರಶ್ಮಿ ಕೆ.ಎಂ.ರವರು ಮುಂಬಡ್ತಿ ಹೊಂದಿ ಮಂಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಿರಿಯ ಸಹಾಯಕ ನಿರ್ದೇಶಕರಾಗಿ ನಿಯೋಜನೆಗೊಂಡಿರುತ್ತಾರೆ. 2006ರಿಂದ 2019ರ ತನಕ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಆಪ್ತ ಸಮಾಲೋಚಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು 2017ರಲ್ಲಿ ಕೆ.ಪಿ.ಎಸ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶಿಶು ಅಭಿವೃದ್ಧಿ ಅಧಿಕಾರಿಯಾಗಿ...

ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆ
ರಂಗಮನೆಯ ಮನುಜ ನೇಹಿಗ ಪ್ರಥಮ ಶ್ರೇಣಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ, ಸುಳ್ಯ ರಂಗಮನೆಯ ಮನುಜ ನೇಹಿಗ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ.ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್ ಡ್ಯಾನ್ಸ್ ಇತ್ಯಾದಿಯಾಗಿ ಬಹುಮುಖ ಪ್ರತಿಭೆ ಹೊಂದಿರುವ ಈತ ಆರಂಭದಲ್ಲಿ ಆಳ್ವಾಸ್ ನಲ್ಲಿ ತಬಲ ಶಿಕ್ಷಕರಾಗಿದ್ದ ದಯಾನಂದ ಧಾರವಾಡ ಮತ್ತು ಪ್ರಸ್ತುತ ವಿದ್ವಾನ್ ವಿನೋದ್...
Ad Widget

ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ಶತಮಾನೋತ್ಸವದ ಪೂರ್ವಭಾವಿ ಸಭೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಮುಂದಿನ ವರ್ಷ ಶತಮಾನೋತ್ಸವವನ್ನು ಆಚರಿಸಲಿದ್ದು, ಆದರ ಪೂರ್ವಭಾವಿ ಸಭೆಯು ಮಾ.18 ರಂದು ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಹರ್ಷಕುಮಾರ್ ದೇವಜನ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶೇಖರ್ ಅಂಬೆಕಲ್ಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನಮನೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೂವಪ್ಪ ಗೌಡ,...

ಕಲ್ಮಕಾರಿನ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಕಲ್ಮಕಾರಿನ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆಮಾಡಿಕೊಂಡ ಘಟನೆ ಮಾ.22 ರಂದು ವರದಿಯಾಗಿದೆ. ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ಲೋಕೇಶ(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಚಿಕ್ಕಮಗಳೂರಿನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವಕ ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ,ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

ಬೆಳ್ಳಾರೆ: ವಿಶ್ವ ಮಹಿಳಾ ದಿನಾಚರಣೆ

ಬೆಳ್ಳಾರೆಯ ಸ್ನೇಹಶ್ರೀ ಮಹಿಳಾ ಮಂಡಲ ಮತ್ತು ಬೆಳ್ಳಾರೆ ಗ್ರಾ.ಪಂ. ಆಶ್ರಯದಲ್ಲಿ ಬೆಳ್ಳಾರೆಯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.ಬೆಳ್ಳಾರೆ ಗ್ರಾ. ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಕುಸುಮ ಕುರುಂಬುಡೇಲು ಸಭಾಧ್ಯಕ್ಷತೆ ವಹಿಸಿದ್ದರು.ಸ್ವಉದ್ಯೋಗ ಮತ್ತು ಮಹಿಳೆ ವಿಷಯದ ಬಗ್ಗೆ ಎನ್ ಆರ್ ಎಲ್ ಎಂ...

ಕೆ.ವಿ.ಜಿ. ಡೆಂಟಲ್ ಕಾಲೇಜು ವಿಶ್ವ ಬಾಯಿ ಆರೋಗ್ಯ ದಿನಾಚರಣೆ

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸಾಂದೀಪನಿ ವಿಶೇಷ ಮಕ್ಕಳ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಬಾಯಿಯ ಆರೋಗ್ಯ ದಿನ ಆಚರಣೆಯು ಸುಳ್ಯ ಸಾಂದೀಪನಿ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಉದ್ಘಾಟಿಸಿ ಮಾತನಾಡಿದ ಅವರು ವ್ಯಕ್ತಿಯ ವ್ಯಕ್ತಿತ್ವ ಮತ್ತು ಬೆಳವಣಿಗೆಯಲ್ಲಿ ಬಾಯಿಯ ಆರೋಗ್ಯ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ...

ಸುಮನಾ ಬೆಳ್ಳಾರ್ಕರ್ ಸುಳ್ಯದ ಆಮ್ ಆದ್ಮಿಪಕ್ಷದ ಅಭ್ಯರ್ಥಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸುಮನಾ ಬೆಳ್ಳಾರ್ಕರ್ ಆಯ್ಕೆಯಾಗಿದ್ದಾರೆ.ಇವರು ಸುಳ್ಯದ ಮಾಜಿ ಶಾಸಕ ಕೆ.ಕುಶಲರವರ ಪುತ್ರಿ.

ಅಂಕತಡ್ಕ : ದಿ‌.ಪ್ರವೀಣ್ ನೆಟ್ಟಾರು ಸ್ಮರಣಾರ್ಥ ವೀರ ಸಾವರ್ಕರ್ ವೃತ್ತ ಲೋಕಾರ್ಪಣೆ

ದಿ‌.ಪ್ರವೀಣ್ ನೆಟ್ಟಾರು ರವರ ಸ್ಮರಣಾರ್ಥವಾಗಿ ಸವಣೂರು ಗ್ರಾ.ಪಂ.ವತಿಯಿಂದ ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತ ದ ಲೋಕಾರ್ಪಣೆ ಕಾರ್ಯಕ್ರಮ.ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರು, ದ.ಕ.ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲು, ಸವಣೂರು ಗ್ರಾ.ಪಂ.ಅಧ್ಯಕ್ಷರಾದ ಶ್ರೀಮತಿ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷರಾದ ದಿನೇಶ್ ಮೆದು, ಕಾಣಿಯೂರು...

ಮಾ. 24 : ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ದೃಢ ಕಲಶಾಭಿಷೇಕ

ಇತ್ತೀಚೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದ ಕಾಯರ್ತೋಡಿಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರಿಗೆ ದೃಢಕಲಶಾಭಿಷೇಕವು ಮಾ. 24 ರಂದು ನಡೆಯಲಿದೆ.ಮಾ. 23 ರಂದು ಶುದ್ಧಿ ಕಲಶ ಪ್ರಕ್ರಿಯೆಗಳು ನಡೆದು, ಮಾ. 24 ರ ಬೆಳಿಗ್ಗೆ 7 ರಿಂದ ಶ್ರೀ ಗಣಪತಿ ಹವನ ನಡೆದ ಬಳಿಕ, ಪೂರ್ವಾಹ್ನ 9 ಕ್ಕೆ ದೃಢಕಲಶಾಭಿಷೇಕ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ...

ಮಾ. 26: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ 20ನೇ ಶಾಖೆ ಕಕ್ಕೆಪದವಿನಲ್ಲಿ ಉದ್ಘಾಟನೆ

ಸುಳ್ಯದಲ್ಲಿ ಪ್ರಧಾನ ಕಛೇರಿ ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ೨೦ನೇ ಶಾಖೆ ಬಂಟ್ವಾಳದ ತಾಲೂಕಿನ ಕಕ್ಕೆಪದವಿನ ವಿದ್ವಾನ್‌ರಾಜ್ ಕಾಂಪ್ಲೆಕ್ಸ್‌ನಲ್ಲಿ ಮಾ.೨೬ರಂದು ಉದ್ಘಾಟನೆಗೊಳ್ಳಲಿದೆ.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಶಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶಾಖೆಯ ಕಛೇರಿ ಉದ್ಟಾಟಿಸಲಿದ್ದಾರೆ. ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್‌ ಸೊಸೈಟಿ ನಿ .ಸುಳ್ಯ ಇದರ ಅಧ್ಯಕ್ಷ ಪಿ.ಸಿ.ಜಯರಾಮ ಸಭಾಧ್ಯಕ್ಷತೆ ವಹಿಸಲಿದ್ದಾರೆ, ಮಾಜಿ...
Loading posts...

All posts loaded

No more posts

error: Content is protected !!