ಸುಳ್ಯದ ಗೋಕುಲಂ ಮಕ್ಕಳ ವಸ್ತ್ರ ಮಳಿಗೆಯಲ್ಲಿ ವಿಶೇಷ ದರ ಕಡಿತ ಮಾರಾಟ- ಬಿಗ್ ಆಫರ್

ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿರುವ ಗೋಕುಲಂ ಮಕ್ಕಳ ಸಿದ್ಧ ಉಡುಪುಗಳ ವಸ್ತ್ರ ಮಳಿಗೆಯಲ್ಲಿ ಆರ್ಥಿಕ ವರ್ಷಾಂತ್ಯ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಇಂದಿನಿಂದ ಆರಂಭಗೊಂಡಿದೆ. ಮಕ್ಕಳ ಉಡುಪುಗಳಪ್ರತಿ ಖರೀದಿಯ ಮೇಲೆ ರೂ.500/- ಗಿಂತ ಮಿಕ್ಕಿ ಖರೀದಿಗೆ ಶೇ.30% ಮತ್ತು ರೂ.500/- ರ ಒಳಗೆ ಖರೀದಿಯ ಮೇಲೆ ಶೇ.15% ರಷ್ಟು...

ನವೀನ್ ಚಾತುಬಾಯಿಯವರಿಗೆ ಚಂದನ ಆದರ್ಶ ಕೃಷಿ ರತ್ನ ಪ್ರಶಸ್ತಿ

ಐವರ್ನಾಡಿನ ಕೃಷಿಕರಾದ ಸಿ.ಕೆ.ನವೀನ ಚಾತುಬಾಯಿಯವರಿಗೆ 2023 ನೇ ಸಾಲಿನ ಚಂದನ ಆದರ್ಶ ಕೃಷಿ ರತ್ನ ಪ್ರಶಸ್ತಿಯನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆದ ರಾಜ್ಯ ಮಟ್ಟದ ಕವಿಗೋಷ್ಟಿ ಕವಿಸಂಗಮದಲ್ಲಿ ನೀಡಿ ಗೌರವಿಸಲಾಯಿತು.ಇವರು ಸಮಗ್ರ ಕೃಷಿಯೊಂದಿಗೆ ವಿಶಿಷ್ಟವಾದ ಮುತ್ತು ಕೃಷಿಯನ್ನು ಮಾಡಿ ಯಶಸ್ವಿಯಾದವರು..ಇವರಿಗೆ ಕೃಷಿ ಇಲಾಖೆಯಿಂದ 2022 ನೇ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಟ ಕೃಷಿ ಪ್ರಶಸ್ತಿ...
Ad Widget

ಮಾ .11; ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದಲ್ಲಿ ರೋಡ್ ಶೋ

ರಾಜ್ಯ ಬಿಜೆಪಿ ನೇತೃತ್ವದಲ್ಲಿ ಈಗಾಗಲೇ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆ ಮಾ.11 ರಂದು ಸುಳ್ಯಕ್ಕೆ ಆಗಮಿಸಲಿದೆ. ಸುಳ್ಯದಲ್ಲಿ ಅದ್ದೂರಿ ರೋಡ್ ಶೋ ನಡೆಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಮಾ.11 ರಂದು ಬೆಳಗ್ಗೆ ಮಡಿಕೇರಿಯಿಂದ ಹೊರಡುವ ವಿಜಯ ಸಂಕಲ್ಪ ಯಾತ್ರೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಪಾಜೆಗೆ ಬರಲಿದೆ. ಅಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಯಾತ್ರೆಯನ್ನು...

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಉನ್ನತ ಶಿಕ್ಷಣ ಸಚಿವ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖಾ ಸಚಿವ ಡಾ.ಅಶ್ವಥ್ ನಾರಾಯಣ್ ಸಿ.ಎನ್. ಅವರು ಕುಟುಂಬ ಸಮೇತರಾಗಿ ಇಂದು ಭೇಟಿ ನೀಡಿದರು.ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಶಾಲಾ ಮೈದಾನದಕ್ಕೆ ಹೆಲಿಕಾಪ್ಟರ್ ಮೂಲಕ ಬಂದಿಳಿದು ಕಾರಲ್ಲಿ ಸುಬ್ರಹ್ಮಣ್ಯ ಕ್ಕೆ ಬಂದರು.ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಚಿವರನ್ನು ಸ್ವಾಗತಿಸಲಾಯಿತು....

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವರ ವರ್ಷಾವಧಿ ಜಾತ್ರೋತ್ಸವ ಸಂಪನ್ನ

ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ಮಾ.5 ರಿಂದ ಮಾ.7 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಜಾತ್ರೋತ್ಸವವು ನಡೆಯಿತು. ಮಾ.5 ರಂದು ಬೆಳಿಗ್ಗೆ ತೋರಣ ಮುಹೂರ್ತ ಮತ್ತು ಉಗ್ರಾಣ ಪೂಜೆ, ಹಸಿರುವಾಣಿ ಸಮರ್ಪಣೆ ನಡೆಯಿತು. ನಂತರ ಶ್ರೀ ಬೆಳರಂಪಾಡಿ ವನಶಾಸ್ತಾವು ಕ್ಷೇತ್ರದಲ್ಲಿ ಸಾನಿಧ್ಯ ಕಲಶ ಮತ್ತು...

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಬಿಡುಗಡೆ

ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವವು ಮಾ.25 ರಿಂದ ಏ.10 ರವರೆಗೆ ನಡೆಯಲಿದ್ದು, ಮಾ.7 ರಂದು ಆಮಂತ್ರಣ ಬಿಡುಗಡೆ ನಡೆಯಿತು.ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತ ಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ದೇವತಕ್ಕರಾದ ರಾಜಗೋಪಾಲ ರಾಮಕಜೆ, ತಕ್ಕ ಮುಖ್ಯಸ್ಥರಾದ ವಿಶ್ವನಾಥ ಮೂಲೆಮಜಲು, ಭವಾನಿಶಂಕರ ಕೋಡಿ, ಮಾಜಿ ಮೊಕ್ತೇಸರರಾದ ವಿಶ್ವನಾಥ ಕುಂಬಳಚೇರಿ, ಮಾಜಿ ಜೀರ್ಣೋದ್ಧಾರ...

ಕುಲ್ಕುಂದ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ

ಕುಲ್ಕುಂದದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ೫೪ನೇ ವರ್ಷದ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಮಾ.3 ಮತ್ತು ಮಾ. 4 ರಂದು ನಡೆಯಿತು.ಮಾ.3 ರ ಸಂಜೆ ಭಂಡಾರ ತೆಗೆದ ಬಳಿಕ ಭಂಡಾರದ ಮೆರವಣಿಗೆಯು ದೈವಸ್ಥಾನದಿಂದ ಕುಲ್ಕುಂದದ ತನಕ ನಡೆಯಿತು. ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ಮಾಡಲಾಯಿತು. ಬಳಿಕ ಕುಲ್ಕುಂದ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ, ಊರ ವಿದ್ಯಾರ್ಥಿಗಳಿಂದ...

ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ

ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲಾ ರಂಗಗಳಲ್ಲಿ ಮುನ್ನುಗುತ್ತಿದ್ದು ಕುಟುಂಬ, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮಹಿಳೆಯರು ಕೇವಲ ಮನೆಯ ನಾಲ್ಕು ಗೋಡೆ ಕೋಣೆಗೆ ಸೀಮಿತವಾಗಿರದೇ, ಶಿಕ್ಷಣ ಮತ್ತು ಸಮಾಜಮುಖೀ ಕೆಲಸ - ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಕಲ್ಪಿಸುವ ಮೂಲಕ ಉಜ್ಜಲ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯದ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ , ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖಾ ಸಚಿವ ಡಾ.ಅಶ್ವಥ್ ನಾರಾಯಣ್ ಸಿ.ಎನ್. ಮಂಗಳವಾರ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳನ್ನು ಶ್ರೀ ದೇವಳದ ವ್ಯವಸ್ಥಾಪನಾ...

ಯುವ ಕವಯತ್ರಿ ಪ್ರಿಯಾ ಸುಳ್ಯ ಬರೆದ ಕವನ ಸಂಕಲನ ಬಿಡುಗಡೆ

ಯುವ ಕವಯತ್ರಿ ಪ್ರಿಯಾ ಸುಳ್ಯ ಬರೆದ ಕವನ ಸಂಕಲನ ಬಿಡುಗಡೆ ಯುವ ಕವಯತ್ರಿ ಪ್ರಿಯಾ ಸುಳ್ಯರ ಚೊಚ್ಚಲ ಕವನ ಸಂಕಲನ "ನಾನು, ನಾನು... ನಾವು" ಪುನರೂರಿನ ಶ್ರೀ ವಿಶ್ವನಾಥ ದೇವಾಲಯದ ಸಭಾಂಗಣದಲ್ಲಿ ಮಾರ್ಚ್ 5ರಂದು ನಡೆದ 13 ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಡಾ.ಶೇಖರ ಅಜೆಕಾರುರವರು ಬಿಡುಗಡೆಗೊಳಿಸಿದರು. ಕವಯತ್ರಿ ಪ್ರಿಯಾ...
Loading posts...

All posts loaded

No more posts

error: Content is protected !!