- Sunday
- May 3rd, 2026
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ.) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವತಿಯಿಂದ ಡಿ.19 ರಂದು ಕುಕ್ಕೆ ಸುಬ್ರಹ್ಮಣ್ಯದ ಪಂಚಾಯತ್ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯಿತು.ಈ ಸಂಧರ್ಭದಲ್ಲಿ ಸುಳ್ಯವಲಯದ ಅಧ್ಯಕ್ಷರಾದ ಶಶಿ ಗೌಡ “ಸುಳ್ಯ ಫೋಟೋಗ್ರಾಫಿ ಎಂಬುದು ಕೇವಲ ಉದ್ಯಮ ಮಾತ್ರವಲ್ಲ ಪ್ರತಿಯೊಂದು ಕ್ಷಣಗಳನ್ನು ಸೆರೆ ಹಿಡಿಯುವುದಲ್ಲದೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇದರ ವಿದ್ಯಾರ್ಥಿಗಳಾದ ಗಗನ್ ದೇವ ಗುತ್ತಿಗಾರು ಹಾಗೂ ಗೆಳೆಯರಿಗೆ ಬಸ್ ನಲ್ಲಿ ಬಿದ್ದು ಸಿಕ್ಕಿದ ಪರ್ಸ್ ಅನ್ನು ಗೆಳೆಯರಲ್ಲಿ ಒಬ್ಬರಾದ ರಚನ್ ಹುಲಿಮನೆ ಇವರು ಅದರ ವಾರಿಸುದಾರರಾದ ಗಿರಿಯಪ್ಪ ಬಾಳುಗೋಡು ಇವರಿಗೆ ನಡುಗಲ್ಲಿನಲ್ಲಿ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ಯನಿತ್ ಪಡ್ರೆ, ಕುಶನ್ ಉತ್ರಂಬೆ ಉಪಸ್ಥಿತರಿದ್ದರು. ಪರ್ಸ್ ನಲ್ಲಿ 3,500 ಮೊತ್ತ ಹಾಗೂ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ನಿಪುಣ್ ಭಾರತ್ ಮಿಷನ್ ಪ್ರಾಯೋಜಿತ ಕಾರ್ಯಕ್ರಮ “ಕಲಿಕಾ ಹಬ್ಬ...
ಕೊಲ್ಲಮೊಗ್ರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಲ್.ಸಿ.ಆರ್.ಪಿ ಮೀನಾಕ್ಷಿ ಬೆಂಡೋಡಿ ಅವರು ಡಿ.20ರಂದು ಬೆಳಿಗ್ಗೆ 10:00 ಗಂಟೆ ಸುಮಾರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೋ-ಬಿ.ಪಿ ಗೆ ಒಳಗಾಗಿ ಕೋಮಾ ಸ್ಥಿತಿಗೆ ಜಾರಿದ್ದ ಅವರು ಇಂದು(ಡಿ.20) ನಿಧನರಾದರು ಎಂದು ತಿಳಿದುಬಂದಿದೆ.ಮೃತರಿಗೆ 40 ವರ್ಷ ವಯಸ್ಸಾಗಿತ್ತು, ಮೃತರು...
ಸುಳ್ಯ ನಗರ ಪಂಚಾಯತ್ ಗೆ ಮಾಸಿಕ ಸಭೆ ನಡೆಸಲು ಆಗಮಿಸಿದ ಆಡಳಿತಾಧಿಕಾರಿಯಾದ ತಹಶೀಲ್ದಾರ್ ಶ್ರೀಮತಿ ಮಂಜುಳಾ ರವರನ್ನು ಭೇಟಿ ಮಾಡಿದ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಕೆಲವು ಪ್ರಚಲಿತ ಸಮಸ್ಯೆ ಗಳ ಬಗ್ಗೆ ಚರ್ಚಿಸಿದರು ಅಮೃತ 2.0 ಯೋಜನೆಯಡಿ ಪೈಪ್ ಲೈನ್ ಗೆ ಅಗೆದ ರಸ್ತೆಯನ್ನು ಸರಿಪಡಿಸುವಂತೆ ಸಂಬಂಧ ಪಟ್ಟವರಿಗೆ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನ ನೂತನ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಪ್ರಧಾನ ಕಾರ್ಯದರ್ಶಿ ಶ್ರೀಜಿತ್ ಸಂಪಾಜೆ, ಕೋಶಾಧಿಕಾರಿ ಅನಿಲ್ ಕಳಂಜ ತಂಡದ ಪದಗ್ರಹಣ ಸಮಾರಂಭ ಡಿ.11ರಂದು ಸುಳ್ಯದ ರಂಗ ಮಯೂರಿ ಕಲಾ ಶಾಲೆಯಲ್ಲಿ ನಡೆಯಿತು.ತಾಲೂಕು ಸಂಘದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಕೊಯಿಂಗೋಡಿಯವರ ಅಧ್ಯಕ್ಷತೆಯಲ್ಲಿ ಸಭೆ ಆರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಕಡಬ ತಾಲೂಕಿನ ಐನೆಕಿದು ಗ್ರಾಮದ ಜಯಪ್ರಕಾಶ್ ಕೂಜುಗೋಡು ಹಾಗೂ ಸುರೇಶ್ ಕೂಜುಗೋಡು ರವರ ತೋಟಗಳಿಗೆ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದ್ದು, ಡಿ.18 ರಂದು ರಾತ್ರಿ ಜಯಪ್ರಕಾಶ್ ಕೂಜುಗೋಡು ರವರ ತೋಟಕ್ಕೆ ಹಾಗೂ ಡಿ.19 ರಂದು ಸುರೇಶ್ ಕೂಜುಗೋಡು ರವರ ತೋಟಕ್ಕೆ ದಾಳಿ ನಡೆಸಿದ ಆನೆ ಕಂಗು, ತೆಂಗು ಹಾಗೂ ಬಾಳೆ ಕೃಷಿಯನ್ನು ನಾಶಪಡಿಸಿದೆ.ಈ ಸಂದರ್ಭದಲ್ಲಿ...
ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಒನ್ ಮಾಲ್ ನಲ್ಲಿ ಡಿ.20 ರಿಂದ ಜ.04 ರವರೆಗೆ “ಜಿ.ಎಲ್ ಮಾಲ್ ಉತ್ಸವ” ಶಾಪಿಂಗ್ ಸಂಭ್ರಮವು ಗ್ರಾಹಕರ ಚಳಿಗಾಲವನ್ನು ಬೆಚ್ಚಗಾಗಿಸಲು ಆಕರ್ಷಕ “ಫುಡ್ ಫೆಸ್ಟಿವಲ್” ನೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ರೀಲ್ಸ್ ಚಾಲೆಂಜ್, ಎಲ್ಲಾ ಮಳಿಗೆಗಳಲ್ಲಿ ವಿಶೇಷ ಕೊಡುಗೆಗಳು, ಶಾಪಿಂಗ್ ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ಇರಲಿವೆ....
ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಆದರ್ಶ ಪರಿಶುದ್ಧತೆ ಶತಮಾನಗಳಿಂದ ಎಂಬ ಧ್ಯೇಯವಾಕ್ಯದೊಂದಿಗೆ ಸಮಸ್ತ 100ನೇ ವಾರ್ಷಿಕ ಪ್ರಚಾರ ಸಮ್ಮೇಳನಾರ್ಥ ಧ್ವಜ ದಿನವನ್ನು ಆಚರಿಸಲಾಯಿತು. ದ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ನೆರವೇರಿಸಿದರು. ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ಗಟ್ಟಮನೆ ಸಂದೇಶ ಭಾಷಣ ಮಾಡಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ಕಾರ್ಯದರ್ಶಿ ಕೆ.ಎಂ...
ಕೆ.ವಿ.ಜಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ 2026ನೇ ವರುಷದ ಕ್ಯಾಲೆಂಡರ್ನ್ನು ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರು ಡಿಸೆಂಬರ್ 18ರಂದು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಸಂತ ಕಿರಿಭಾಗ, ನಿರ್ದೆಶಕರುಗಳಾದ ಯಶೋಧ ರಾಮಚಂದ್ರ, ಮಾಧವ ಬಿ.ಟಿ, ಕಮಲಾಕ್ಷ ನಂಗಾರು, ಡಾ. ಮನೋಜ್ ಕುಮಾರ್, ದಿನೇಶ್ ಮಡ್ತಿಲ, ಭವಾನಿಶಂಕರ ಅಡ್ತಲೆ, ದಯಾನಂದ ಅಟ್ಲೂರು,...
Loading posts...
All posts loaded
No more posts
