- Friday
- August 7th, 2026
ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಮೂರು ದಿನಗಳ ಜಗದ್ವಿಖ್ಯಾತ ಹಂಪಿ ಉತ್ಸವದ ವಿರುಪಾಕ್ಷೇಶ್ಬರ ವೇದಿಕೆಯಲ್ಲಿ ಜನವರಿ 28 ರಂದು ನಡೆದ ಕವಿಗೋಷ್ಠಿಯಲ್ಲಿ ಸುಳ್ಯದ ಸಾಹಿತಿ ಡಾ.ಅನುರಾಧಾ ಕುರುಂಜಿಯವರು ಕವನ ವಾಚಿಸಿದರು.ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿಯವರು ಉದ್ಘಾಟಿಸಿದ ಕವಿ ಗೋಷ್ಠಿಯ ಅಧ್ಯಕ್ಷತೆಯನ್ನುಸಾಹಿತಿ ಡಾ. ಹೆಚ್ ಟಿ ಪೋತೆ ವಹಿಸಿದ್ದರು....
ಸಮಾಜ ಕಲ್ಯಾಣ ಇಲಾಖೆಯ ರೂ 10 ಲಕ್ಷ ಮತ್ತು ಸಚಿವ ಅಂಗಾರರ ವಿಶೇಷ ಅನುದಾನ ರೂ.3 ಲಕ್ಷ ದಲ್ಲಿ ಕುದುರೆಪಾಯ ಮಾಪಳಕಜೆ ಎಸ್ .ಟಿ ಮನೆಗಳ ಸಂಪರ್ಕ ರಸ್ತೆ ಅಭಿವ್ರದ್ದಿಗೆ ಪೆರಂಬಾರು ಬಳಿ ರಸ್ತೆ ಕಾಂಕ್ರೀಟಿಕರಣಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಸಿ.ಟಿ ಸುರೇಶ್ ಮತ್ತು ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅವರು...
ನೆಹರೂ ಮೆಮೋರಿಯಲ್ ಕಾಲೇಜು ಕುರುಂಜಿಭಾಗ್ ಸುಳ್ಯ ಇಲ್ಲಿನ ಭೌತಶಾಸ್ತ್ರ ಹಾಗೂ ಗಣಿತಶಾಸ್ತ್ರ ವಿಭಾಗದ ವತಿಯಿಂದ 28ರಂದು ಆಕಾಶ ಕಾಯದಲ್ಲಿ ಕಪ್ಪು ರಂಧ್ರದ ಕುರಿತು ಅತಿಥಿ ಉಪನ್ಯಾಸವು ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಪ್ರೊ ರುದ್ರಕುಮಾರ್.ಎಮ್.ಎಮ್ ಪ್ರಾಂಶುಪಾಲರು ಎನ್.ಎಮ್.ಸಿ ಸುಳ್ಯ ಇವರು ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಮ್.ಬಾಲಚಂದ್ರ ಗೌಡ ಇವರ ಮೊಮ್ಮಗನಾದ ವಿಹಾನ್ ದೊರೆ...
ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ಕಾಮರ್ಸ್ ಡಿಪಾರ್ಟ್ಮೆಂಟ್ ಮತ್ತು ಅಸೋಸಿಯೇಶನ್ ವತಿಯಿಂದ 'ಇನ್ವೆಸ್ಟರ್ಸ್ ಅವಾರ್ನೆಸ್'ನ ಬಗ್ಗೆ ಒಂದು ದಿನದ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ . ಜ.23ರಂದು ನಡೆಯಿತು. ಕಾರ್ಯಾಗಾರವನ್ನು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಬಾಲಚಂದ್ರ ಗೌಡರವರು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ವಾಣಿಜ್ಯ ಶಾಸ್ತ್ರ...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ ದಿನಾಂಕ 26.01.2023ನೇ ಗುರುವಾರ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಮತ್ತು ಪ್ರತಿಭಾದಿನೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. 74ನೇ ಗಣರಾಜ್ಯೋತ್ಸವದ ಧ್ವಜಾರೋಹಣಹವನ್ನು ನಮ್ಮ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಯುತ ಅಬ್ದುಲ್ ಶರೀಫ್ ನೆರವೇರಿಸಿದರು ಮಕ್ಕಳಿಂದ ಪಥ ಸಂಚಲನವು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಊರಿನ ಗಣ್ಯರಾದ ಶ್ರೀಯುತ ಲೋಕನಾಥ್ ರೈ ಪಟ್ಟೆ, ರಘುನಾಥ...
ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಇಂದು ಬೆಳಗ್ಗೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು, ಸಪರಿವಾರ ದೈವಗಳು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ ಸಚಿವ ಹಾಗೂ ದ.ಕ.ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ಪುರಸಭೆಯ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಹಾಗೂ ಬಂಟ್ವಾಳ ಪುರಸಭೆಯ ಸದಸ್ಯರಾದ ಸುಳ್ಯದ ಭಾರತ್ ಮೆಡಿಕಲ್ಸ್ ನಲ್ಲಿಕಾರ್ಯನಿರ್ವಹಿಸುತ್ತಿರುವ ಜಯರಾಮ್ ಎಂಬವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯದಲ್ಲಿ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮಾತನಾಡಿ ದ ಮಹಮ್ಮದ್ ಶರೀಫ್ ರಿಯಾಜ್ ನೇತೃತ್ವದ ಟ್ರಸ್ಟ್ ನ ಸಮಾಜ ಸೇವೆ ಯುವಕರಿಗೆ ಅನುಕರಣೀಯ ಅವರ ಅರೋಗ್ಯ ಸೇವೆ, ನಿಗಮದ ಮನೆ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮುಸ್ಲಿಂ ಸೆಂಟ್ರಲ್ ಕಮಿಟಿ ಗೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ, ಎಸ್ ಸಂಶುದ್ದೀನ್ ರವರನ್ನು ನೇಮಕ ಮಾಡಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ, ಮಾಜಿ ವಿಧಾನ ಪರಿಷತ್...
Loading posts...
All posts loaded
No more posts
