- Saturday
- August 8th, 2026
ಸುಳ್ಯ ತಾಲೂಕು ಕಛೇರಿಯಲ್ಲಿ 74 ನೇ ಗಣರಾಜ್ಯೋತ್ಸವ ಅಂಗವಾಗಿ ಇಂದು ತಹಶೀಲ್ದಾರ್ ಕು. ಅನಿತಾ ಲಕ್ಷ್ಮೀ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಚಂದ್ರಕಾಂತ್, ಗ್ರೇಡ್ ೨ ತಹಶೀಲ್ದಾರ್, ಮಂಜುನಾಥ್ ಎಂ., ಕಂದಾಯ ನಿರೀಕ್ಷಕ ಶಂಕರ, ಸರ್ವೇ ಇಲಾಖೆ ಹಾಗೂ ಕಂದಾಯ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಮತದಾರರ ದಿನ-2023ನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ., ಯವರು ಪ್ರತಿಜ್ಞಾವಿಧಿ ಬೋಧಿಸಿ, ಮತದಾನದ ಮಹತ್ವದ ಬಗ್ಗೆ ತಿಳಿಸಿದ್ದರು.ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು,...
ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಅಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಉಪಾಧ್ಯಕ್ಷರಾದ ಶ್ರೀಮತಿ....
ಬೆಳ್ಳಾರೆ: ಇಲ್ಲಿನ ಹಿದಾಯತುಲ್ ಇಸ್ಲಾಂ ಮದರಸ, ಝಖರಿಯ್ಯಾ ಜುಮಾ ಮಸ್ಜಿದ್ ಬೆಳ್ಳಾರೆ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಮದರಸ ಮುಖ್ಯೋಪಾಧ್ಯಾಯರಾದ ಬಹು ಮುಹಮ್ಮದ್ ಮುಸ್ಲಿಯಾರ್ ಧ್ವಜಾರೋಹಣ ನೆರವೇರಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ದ ಕುರಿತು ಮಾತನಾಡಿದರು. ನಂತರ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ಬಹು.ಝೈನುದ್ದೀನ್ ಮುಸ್ಲಿಯಾರ್, ಬಹು.ಹಸೈನಾರ್ ಮುಸ್ಲಿಯಾರ್, ಬಹು.ಶಮೀಮ್ ಹುದವಿ, ಝಖರಿಯ್ಯಾ ಜುಮಾ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಎಂ ಧ್ರುವನಾರಾಯಣ್ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ನಮ್ಮ ತುಳುನಾಡು ವೈವಿಧ್ಯಮಯವಾದ ಶ್ರೀಮಂತ ಸಂಸ್ಕೃತಿಯನ್ನು ಹೊಂದಿರುವ ಪ್ರದೇಶ. ಇಲ್ಲಿನ ಜನರು ಪ್ರಕೃತಿಯನ್ನೆ ತಮ್ಮ ದೈವ ದೇವರೆಂದು ಪೂಜಿಸುತ್ತ ಬಂದವರು. ನಮ್ಮ ತುಳುನಾಡಿನ ಪ್ರಕೃತಿ ಮತ್ತು ಬೌಗೋಳಿಕ ವಿನ್ಯಾಸ ಇಲ್ಲಿನ ಆಚರಣೆಗಳಿಗೆ ಪ್ರೇರಣೆ ನೀಡುತ್ತದೆ. ನಮ್ಮ ಪೂರ್ವಜರು ಈ ಮಣ್ಣಿನಲ್ಲಿ ಕಂಡು ಕೊಂಡ ಸತ್ಯಗಳು ಇಂದಿನ ಜನರಲ್ಲಿ ಹಾಸುಹೊಕ್ಕಾಗಿವೆ.ನಂಬಿಕೆ ಮತ್ತು ಆರಾಧನೆಯೆ ಇಲ್ಲಿನ ಜನರ ವಿಶೇಷತೆ....
ವಿಜಯಕರ್ನಾಟಕ ಪ್ರಸ್ತುತಪಡಿಸುವ 5 ನೇ ಆವೃತ್ತಿಯ ‘ವಿಕ ಸೂಪರ್ ಸ್ಟಾರ್ ರೈತ’ ಪುರಸ್ಕಾರಕ್ಕೆ ಅಮರ ಮೂಡ್ನೂರು ಗ್ರಾ.ಪಂ. ಸದಸ್ಯ, ಸಮಗ್ರ ಕೃಷಿಕ ಅಶೋಕ್ ಚೂಂತಾರು ರವರು ಆಯ್ಕೆಯಾಗಿದ್ದು, ಜ. 24 ರಂದು ಮಂಗಳೂರಿನ ವಾಮಂಜೂರು ಚರ್ಚ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುರಸ್ಕಾರ ಸ್ವೀಕರಿಸಿದರು. 5 ವರ್ಷಗಳಿಂದ ಸಾಧಕ ಕೃಷಿಕರ ಪುರಸ್ಕಾರ ಕಾರ್ಯಕ್ರಮ ರಾಜ್ಯದಾದ್ಯಂತ ಮಾಡುತ್ತಿರುವ ವಿಜಯ...
ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಸುಳ್ಯದ ಲೇಖಕಿ, ಕವಯಿತ್ರಿ ಡಾ. ಅನುರಾಧಾ ಕುರುಂಜಿ ಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರುಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಹಂಪಿ ಉತ್ಸವವನ್ನು ಆರಂಭಿಸಿದ್ದು, 2023ರ ಹಂಪಿ ಉತ್ಸವವು ಜನವರಿ 27ರಿಂದ 29 ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದ್ದು, ಉತ್ಸವದ...
ಕರ್ನಾಟಕ ಸರಕಾರದ ಯಶಸ್ವಿನಿ ಆರೋಗ್ಯ ಕಾರ್ಡ್ ಯೋಜನೆಯ ಸೌಲಭ್ಯ ಪಡೆಯಲು ನೋಂದಾವಣೆ ಮಾಡಬೇಕಾಗಿದ್ದು, ಈ ಕಾರ್ಡ್ ನಿಂದ ಕುಟುಂಬ ಸದಸ್ಯರು ಅನಾರೋಗ್ಯಕ್ಕೆ ಒಳಗಾದಾಗ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿದೆ. ಇದೀಗ ಕಲ್ಲುಗುಂಡಿಯ ಅಮ್ಮನ್ ಸಹಕಾರಿ ಸಂಘದಲ್ಲಿ ಯಶಸ್ವಿನಿ ಆರೋಗ್ಯ ಕಾರ್ಡ್ ನೋಂದಾವಣೆ ಆರಂಭಗೊಂಡಿದೆ ಎಂದು ಸಂಘದ ವ್ಯವಸ್ಥಾಪಕರಾದ ಶಿವ ಪೆರುಮಾಳ್ ತಿಳಿಸಿದ್ದಾರೆ.
ಧರ್ಮಯೋಗಿ ಪ್ರೊಡಕ್ಷನ್ ಸಾರಥ್ಯ ದಲ್ಲಿ ಶ್ರೀ ಸುರೇಂದ್ರ ಮೋಹನ್ ಮುದ್ರಾಡಿ ಇವರ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಕರಾವಳಿ ಕರ್ನಾಟಕದ ವಿಶ್ವಾಸದ ಪ್ರತಿಬಿಂಬ ನಮ್ಮ ಕುಡ್ಲ ವಾಹಿನಿ ಮುಖೇನ ಮೂಡಿ ಬರುತ್ತಿರುವ ತುಳುನಾಡ ಬಂಗಾರ್ ಗರೋಡಿಲು ಸಾಕ್ಷ ಚಿತ್ರ ತಂಡ ಪ್ರಸ್ತುತ ಪಡಿಸುವ ಯುದ್ಧ ಭೂಮಿಯಲ್ಲಿ ನಡೆದ ಕೋಟಿ ಚೆನ್ನಯರ ಭಾವನಾತ್ಮಕ ಸನ್ನಿವೇಶದ ಸಿನಿದೃಶ್ಯ ಚಿತ್ರೀಕರಣದ ಮುಹೂರ್ತ...
Loading posts...
All posts loaded
No more posts
