ಪಿಗ್ಮಿ ಸಂಗ್ರಾಹಕರು ಬೇಕಾಗಿದ್ದಾರೆ

ಕಲ್ಲುಗುಂಡಿಯ ಶ್ರೀ ಅಮ್ಮನ್ ಸಹಕಾರಿ ಸಂಘಕ್ಕೆ ಪಿಗ್ಮಿ ಸಂಗ್ರಾಹಕರು ಬೇಕಾಗಿದ್ದಾರೆ. ಹೆಚ್ವಿನ ಮಾಹಿತಿಗೆ 9481602140 ಕರೆ ಮಾಡಬಹುದು.

ಗುತ್ತಿಗಾರು ಕ್ಲಸ್ಟರ್ ನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಗುತ್ತಿಗಾರು ಕ್ಲಸ್ಟರ್ ನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜ.23 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು...
Ad Widget

ಸುಳ್ಯ: ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ.

ಸುಳ್ಯ, ಜ.23: ಪಂಜದ ಚಿಂಗಾಣಿಗುಡ್ಡೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿ, ಪೈಪ್ ಅಳವಡಿಸಿ ಟ್ಯಾಂಕ್ ಗೆ ನೀರು ಸರಬರಾಜು ಮಾಡದೇ ಇರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಒತ್ತಾಯಿಸಲಾದ ಘಟನೆ ನಡೆಯಿತು.ಸುಳ್ಯದ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಅಧಿಕಾರಿಗಳ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಸೋಮವಾರ ನಡೆಯಿತು. ಲೋಕಾಯುಕ್ತ ಎಸ್ಪಿ ಸೈಮನ್...

ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ-
ನೂತನ ಅಧ್ಯಕ್ಷರಾಗಿ ಲೋಕನಾಥ್ ಅಮೆಚೂರ್ ಆಯ್ಕೆ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕಿನ ವಾರ್ಷಿಕ ಮಹಾಸಭೆಯು ಜನಜಾಗೃತಿ ವೇದಿಕೆಯ ಅಧ್ಯಕ್ಷ ವಿಶ್ವನಾಥ ರೈ ಕಳಂಜ ಅವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜ.23 ರಂದು ನಡೆಯಿತು. ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಲೋಕನಾಥ್ ಅಮೆಚೂರು ಅವರನ್ನು ಆಯ್ಕೆಮಾಡಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿ.ಹೆಚ್.ಪಿ. ಸುಳ್ಯ ಪ್ರಖಂಡದ ಅಧ್ಯಕ್ಷ...

ಮಾ. 3,4 ಮತ್ತು 5ರಂದು ಕುಂಬಳಚೇರಿಯಲ್ಲಿ ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಾ.3,4 ಮತ್ತು 5 ರಂದು ವಯನಾಟ್ 'ಕುಲವನ್ ದೈವಕಟ್ಟು ಮಹೋತ್ಸವ ನಡೆಯಲಿದ್ದು, ಈ ಉತ್ಸವದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜ.23ರಂದು ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ದೈವಕಟ್ಟು ಮಹೋತ್ಸವ ಸಮಿತಿಯ...

ಕುಲ್ಕುಂದ : ಮಾ.02 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.02 ರಂದು ಶ್ರೀ ಕೊರತಿಯಮ್ಮ ದೈವದ 8ನೇ ವರ್ಷದ ನೇಮೋತ್ಸವ ಹಾಗೂ ಮಾ.03 ರಿಂದ 04 ರವರೆಗೆ ಶ್ರೀ ಮಹಾವಿಷ್ಣುಮೂರ್ತಿ ದೈವದ 54ನೇ ವರ್ಷದ ಒತ್ತೆಕೋಲವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಾ.02 ರಂದು ಬೆಳಿಗ್ಗೆ 9:30ಕ್ಕೆ ಗಣಪತಿ ಹೋಮ, ರಾತ್ರಿ 7:30 ರಿಂದ ಶ್ರೀ ಕೊರತಿಯಮ್ಮ...

ಮಡಪ್ಪಾಡಿ : ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯ ಸಭೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಜ. 24 ರಂದು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಅಯ್ಯನಕಟ್ಟೆ ಜಾತ್ರೋತ್ಸವದ ಅಂಗವಾಗಿ ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ವತಿಯಿಂದ ಶ್ರಮಸೇವೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವದ ಅಂಗವಾಗಿ ನಾಗರಿಕ ಸೇವಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ವತಿಯಿಂದ ಶ್ರಮಸೇವೆ ನಡೆಯಿತು. ಶ್ರಮಸೇವೆಯ ಮೂಲಕ ಸಪರಿವಾರ ಉಳ್ಳಾಕುಲು ಮೂಲಸ್ಥಾನದ ಬಳಿಯಿರುವ ನಾಗಸಾನ್ನಿಧ್ಯದ ಬಲಭಾಗದಲ್ಲಿರುವ ಕಾನಾಜೆ ಮರಕ್ಕೆ ಮುರಕಲ್ಲಿನ ಚೌಕಾಕಾರದ ಕಟ್ಟೆಯನ್ನು ನಿರ್ಮಿಸಲಾಯಿತು.

ಕಳಂಜ ಗ್ರಾಮ ಪಂಚಾಯತಿಯ ಗ್ರಾಮ ಸಭೆ

ಕಳಂಜ ಗ್ರಾಮ ಪಂಚಾಯತಿಯ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಅಧ್ಯಕ್ಷರಾದ ಪ್ರಶಾಂತ್ ಕುಮಾರ್ ಕಿಲಂಗೋಡಿಯವರ ಅಧ್ಯಕ್ಷತೆಯಲ್ಲಿ ಇಂದು(ಜ.23) ನಡೆಯಿತು. ಸಭೆಯಲ್ಲಿ ಇಲಾಖಾಧಿಕಾರಿಗಳು ಬರದಿರುವ ಬಗ್ಗೆ, ಶಿಕ್ಷಕರ ಕೊರತೆ, ಗ್ರಾಮಕ್ಕೆ ಘನತ್ಯಾಜ್ಯ ವ್ಯವಸ್ಥೆ ಮಾಡದಿರುವ ಕುರಿತು ತೀವ್ರ ಚರ್ಚೆ ನಡೆಯಿತು. ಗ್ರಾಮ ಸಭೆಯ ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಮತಿ ಗೀತಾ ಭಾಗವಹಿಸಿದ್ದರು....

ಅರಂತೋಡು : ಸಾಗರ ಪ್ರೆಶ್ ಫಿಶ್ ಮಾರ್ಕೆಟ್ ಶುಭಾರಂಭ

ಅರಂತೋಡು ಮೆಸ್ಕಾಂ ಕಛೇರಿ ಎದುರು ಸಾಗರ ಪ್ರೆಶ್ ಫಿಶ್ ಮಾರ್ಕೆಟ್ ಇಂದು ಶುಭಾರಂಭಗೊಂಡಿತು. ಅರಂತೋಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಸುಮಾಧರ ಅಡ್ಕಬಳೆ , ನಾಗೇಶ್ ಕಾಡುಪಂಜ, ಹೇಮನಾಥ್ ಕಡಪಳ, ಸಂಪ್ರೀತ್ ಕಡೆಪಾಲ ಉಪಸ್ಥಿತರಿದ್ದರು. ಉತ್ತಮ ಗುಣಮಟ್ಟದ ವಿವಿಧ ಬಗೆಯ ಮೀನುಗಳು ಲಭ್ಯವಿದ್ದು, ಶುಚಿಗೊಳಿಸಿ ಕೊಡಲಾಗುವುದು ಎಂದು ಮಾಲಕರಾದ...
Loading posts...

All posts loaded

No more posts

error: Content is protected !!