ಹರಿಹರ ಪಳ್ಳತ್ತಡ್ಕ : ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮ

ಹರಿಹರ ಪಳ್ಳತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.12ರಂದು ನಡೆಯಿತು.ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ರವರು ತೆಂಗಿನಕಾಯಿ ಒಡೆಯುವ ಮೂಲಕ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಧರ ಭಾಗವತ್ ರವರು ದೀಪ ಬೆಳಗಿಸುವ ಮೂಲಕ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರವನ್ನು ಉದ್ಘಾಟಿಸಿ...

ಅರಂತೋಡು : ಪೆಟ್ರೋಲ್ ಹಾಕಿ ಹಣ ಪಾವತಿಸದೇ ಕಾರು ಚಾಲಕ ಪರಾರಿ – ಪೋಲೀಸರ ಫೋನ್ ಬಂದ ನಂತರ ಹಣ ಪಾವತಿಸಿದ ಚಾಲಕ

ಅರಂತೋಡು ನಯಾರ ಪೆಟ್ರೋಲ್ ಪಂಪ್ ನಲ್ಲಿ ಪೆಟ್ರೋಲ್ ಹಾಕಿ ಹಣ ಕೊಡದೇ ಕಾರು ಚಾಲಕ ಪರಾರಿಯಾದ ಘಟನೆ ಫೆ.13 ರಂದು ಬೆಳಿಗ್ಗೆ ನಡೆದಿದೆ. ಕಾರು ಚಾಲಕ 2510 ರೂ ಪೆಟ್ರೋಲ್ ಹಾಕಿ, ಸ್ಕ್ಯಾನರ್ ಫೋಟೋ ತೆಗೆದು ಹಣ ಪಾವತಿ ಪೂರ್ಣಗೊಳಿಸದೇ , ಹಣ ಬರಲಿಲ್ಲ ಎಂದು ಸಿಬ್ಬಂದಿಗಳು ಹೇಳಿದರೂ ಕಾರು ನಿಲ್ಲಿಸದೇ ಪರಾರಿಯಾಗಿದ್ದರು. ನಂತರ ಜಾಲ್ಸೂರು...
Ad Widget

ಆಡ್ತಲೆ : ಆನೆ ದಾಳಿ ಕೃಷಿ ಹಾನಿ – ಶಾಸಕರ ಭೇಟಿ

ಅರಂತೋಡು ಗ್ರಾಮದ ಅಡ್ತಲೆ ಮತ್ತಿತರ ಭಾಗಗಳಲ್ಲಿ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ, ಕಿರ್ಲಾಯ ಶಾಲೆಯ ಆವರಣಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿಯಾಗಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ, ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯ ಹರೀಶ ಕಂಜಿಪಿಲಿ, ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು, ಬೂತ್...

ದ್ವಾದಶ ರಾಶಿಗಳ ದಿನ ಭವಿಷ್ಯ

ದಿನಾಂಕ 13.02.2026*01,🐏ಮೇಷರಾಶಿ🐏*🌻,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಪರಿಹಾರ :-ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು,*02,🐂ವೃಷಭರಾಶಿ🐂*🌻,ಈ ದಿನ ನೀವು ಮಾಡುವ ಕೆಲಸ ಕಾರ್ಯಗಳು ಕೆಲವು ತೊಂದರೆಗಳಿಂದ ಕೂಡಿರಬಹುದು,...

ಗುತ್ತಿಗಾರು: ಅಡ್ಡನಪಾರೆಯಲ್ಲಿ  ಕೊಳೆತ ಸ್ಥಿತಿಯಲ್ಲಿ  ಯುವಕನ ಮೃತದೇಹ ಪತ್ತೆ

ಅಮಲು ಪದಾರ್ಥ ಸೇವಿಸಿ ತನ್ನ ಮನೆಗೆ ಬೆಂಕಿ ಹಚ್ಚಿ ನಾಪತ್ತೆಯಾಗಿದ್ದ ಯುವಕ ಯುವಕನೋರ್ವನ ಮೃತದೇಹ ಶೌಚಾಲಯದೊಳಗೆ  ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗುತ್ತಿಗಾರು ಗ್ರಾಮದ ಅಡ್ಡನಪಾರೆಯಲ್ಲಿ ಫೆ.12ರಂದು ಸಂಜೆ ವರದಿಯಾಗಿದೆ.. ಅಡ್ಡನಪಾರೆ ಗೋಪಾಲ ನಾಯ್ಕ ಅವರ ಪುತ್ರ ಮಹಾಬಲ ಅವರು ಫೆ.4ರಂದು ರಾತ್ರಿ ಅಮಲು ಪದಾರ್ಥ ಸೇವಿಸಿ, ಮನೆಗೆ ಬಂದು ತನ್ನ ಮನೆಗೆ ಬೆಂಕಿ ಹಚ್ಚಿ...

ಜೆಸಿಐ ಉಡುಪಿ ಸಿಟಿ ವತಿಯಿಂದ ಕೃಷ್ಣ ಅಚ್ರಪ್ಪಾಡಿಯವರಿಗೆ ಸನ್ಮಾನ

ಉಡುಪಿ ಸಿಟಿಯ ಜೆಸಿಐ ವತಿಯಿಂದ ನಡೆದ ಟಾಪ್ ಟ್ರೈನರ್ಸ್ ಟ್ರೈನಿಂಗ್ ನಲ್ಲಿ ಭಾಗವಹಿಸಿದ್ದ ಕೃಷ್ಣ ಅಚ್ರಪ್ಪಾಡಿಯವರ ಸಾಧನೆಯನ್ನು ಗುರುತಿಸಿ ಜ.31 ರಂದು ಸನ್ಮಾನ ಮಾಡಲಾಯಿತು.ಕೃಷ್ಣ ಅಚ್ರಪ್ಪಾಡಿಯವರು ವಿದ್ಯುತ್ ಹರಿಯುವಾಗ  ಬರಿಗೈಯಿಂದ ನೇರವಾಗಿ ಮುಟ್ಟಿದಾಗ ಅವರ ಶರೀರವೆಲ್ಲಾ ವಿದ್ಯುತ್ ಮಯವಾಗುತ್ತದೆ. ಅವರ ಶರೀರದ ಯಾವುದೇ ಭಾಗಕ್ಕೆ ಟೆಸ್ಟರ್ ತಾಗಿಸಿದರೂ ಟೆಸ್ಟರ್ ಉರಿಯುತ್ತದೆ. ಆದರೆ ಇವರಿಗೆ ಏನೂ ಆಗುವುದಿಲ್ಲ(ಹಾಗಂತ...

ಬೆಳ್ಳಾರೆ : ಭಾರತ್ ಕೃಷಿ ಅಭಿವೃದ್ಧಿ
ಸಂಸ್ಥೆ ವತಿಯಿಂದ ಫಲಾನುಭವಿಗಳಿಗೆ ಏಣಿ ವಿತರಣೆ

ಬೆಳ್ಳಾರೆ, ಕೊಡಿಯಾಲ ಹಾಗೂ ಪೆರುವಾಜೆ ಮೂರು ಗ್ರಾಮಗಳ 35 ಮಂದಿ ಫಲಾನುಭವಿ ರೈತರಿಗೆ ಫೆ.11 ರಂದು ವಿಟ್ಲದ ಭಾರತ್ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿರಾಂಬೃತ ಯೋಜನೆಯ ಮೊದಲ ಹಂತದ ಏಣಿಯನ್ನು ವಿತರಿಸಲಾಯಿತು.ಈ ವಿತರಣಾ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು,ಶಪಿಡಿಒ ಹಾಗೂ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಫಲಾನುಭವಿ ರೈತರು ಪಾಲ್ಗೊಂಡಿದ್ದರು.

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಮುಖ್ಯಮಂತ್ರಿ ವಿಶೇಷ ಅನುದಾನದ ರಸ್ತೆಗಳ ಉದ್ಘಾಟನೆ
ಸವಲತ್ತುಗಳ ವಿತರಣೆ ; “ಸಂಪಾಜೆ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ” :ಎಂ.ಎ ಗಫೂರ್

"ಗ್ರಾಮಗಳ ಅಭಿವೃದ್ಧಿಯಿಂದ ನಿಜವಾದ ರಾಮ ಸ್ವರಾಜ್ಯ ಮೂಲಕ ಗಾಂಧೀಜಿಯ ಕನಸನ್ನು ನನಸು ಮಾಡಿ ಸಂಪಾಜೆ ಗ್ರಾಮ ಪಂಚಾಯತ್ ದೇಶಕ್ಕೆ ಮಾದರಿಯಾಗಿದೆ" ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ರವರ ವಿಶೇಷ ಮುತುವರ್ಜಿಯಿಂದ ಮುಖ್ಯ...

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಂದ್ರಪ್ಪಾಡಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಫೆ.12ರಂದು ನಡೆಯಿತು.ಆಮಂತ್ರಣ ಪತ್ರಿಕೆಯನ್ನು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನವರು ಉಪಸ್ಥಿತರಿದ್ದರು.

ಬೆಳ್ಳಾರೆ ಗ್ರಾ.ಪಂ.ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಭೇಟಿ ನೀಡಿದ ಕೆ.ಪಿ.ಎಸ್ ವಿದ್ಯಾರ್ಥಿಗಳು

ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ-ಗ್ರಂಥಾಲಯದಲ್ಲಿ ಫೆ.10 ರಂದು "ಶಾಲಾ ವಿದ್ಯಾರ್ಥಿಗಳು ಒಂದು ದಿನ" ಕಾರ್ಯಕ್ರಮ ನಡೆಯಿತು.  ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಖುಷಿಪಟ್ಟರು.‌ಈ ಸಂದರ್ಭದಲ್ಲಿ ಸಹಶಿಕ್ಷಕರುಗಳಾದ ಅರುಣಾಕ್ಷಿ ಕೆ.ಎಲ್, ಸುಶೀಲ ಹೆಗಡೆ, ಇಳಶ್ರೀ ಸಿ.ಜಿ, ತೃಪ್ತಿ ಎಂ.ಎಂ ಉಪಸ್ಥಿತರಿದ್ದರು.ಗ್ರಂಥಾಪಾಲಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ ವಂದಿಸಿದರು.
Loading posts...

All posts loaded

No more posts

error: Content is protected !!