ಮೀನುಗಾರಿಕಾ ನಿಗಮ ಅಧ್ಯಕ್ಷ ಎ.ವಿ.ತೀರ್ಥರಾಮರಿಂದ ಚಿಕ್ಕಮಂಗಳೂರಿನಲ್ಲಿ ಮಾರುಕಟ್ಟೆ ಉದ್ಘಾಟನೆ

ಮೀನುಗಾರಿಕೆ ಇಲಾಖೆ ಹಾಗೂ ಕರ್ನಾಟಕ ಮೀನುಗಾರಿಕೆ ನಿಗಮದ ವತಿಯಿಂದ ಚಿಕ್ಕಮಂಗಳೂರಿನಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಮೀನು ಮಾರುಕಟ್ಟೆ ಉದ್ಘಾಟನೆ ಇಂದು ನಡೆಯಿತು. ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ಉದ್ಘಾಟಿಸಿ, ಮಾತನಾಡಿದರು.

ಚೆಂಬು : ಭಾರಿ ಅಗ್ನಿ ಅವಘಡ, ರಬ್ಬರ್ ಸ್ಮೋಕ್ ಹೌಸ್ ನಿಂದ ಮನೆಗೆ ಬೆಂಕಿ

ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿ ಸಮೀಪದಲ್ಲಿದ್ದ ಮನೆಗೂ ವ್ಯಾಪಿಸಿದ ಘಟನೆ ಜ.2 ರಂದು ನಡೆದಿದೆ. ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂ. ಮೌಲ್ಯದ ಹಾನಿ ಸಂಭವಿಸಿದೆ. ರಬ್ಬರ್ ಶೀಟ್ ಒಣಗಿಸುವ ಸ್ಮೋಕ್ ಹೌಸ್ ಗೆ ಬೆಂಕಿ ಹೊತ್ತಿಕೊಂಡಿದ್ದು ಪರಿಣಾಮ ಬೆಂಕಿಯ ಕೆನ್ನಾಲಿಗೆಗಳು ಸುತ್ತಲಿಡೀ ವ್ಯಾಪಿಸಿ ಅಪಾರ ಪ್ರಮಾಣದ ಹಾನಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ಕೃಷಿಕ...
Ad Widget

” ಒಂದೇ ಸೂರಿನಡಿ ನೂರಾರು ಮಕ್ಕಳು ಭಜಿಸಿ ,ಶ್ಲೋಕ ಹೇಳಿ ಕುಣಿದು ಕುಪ್ಪಳಿಸಿದ ಬಾಲಸಂಗಮ”

ಎಲಿಮಲೆ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯ ಮತ್ತು ಸೇವಾ ಭಾರತಿ helpline ಟ್ರಸ್ಟ್ (ರಿ) ಸುಳ್ಯ ಇವುಗಳ ಸಹಯೋಗದಲ್ಲಿ ಎಲಿಮಲೆ ಜ್ಞಾನ ದೀಪ ಶಾಲೆಯಲ್ಲಿ "ಬಾಲಸಂಗಮ " ನಡೆಯಿತು. ಸುಳ್ಯ ತಾಲೂಕಿನ ಹಲವಾರು ಅಂಗನವಾಡಿ,ಶಿಶುಮಂದಿರ ಹಾಗು ಬಾಲಗೋಕುಲದಿಂದ ಒಂಭತ್ತನೇ ತರಗತಿಯ ಒಳಗಿನ ನೂರಾರು ಮಕ್ಕಳ ಸಂಗಮಕ್ಕೆ ಎಲಿಮಲೆ ಜ್ಞಾನ ದೀಪ ಶಾಲೆ...

ಜಯನಗರ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನಕ್ಕೆ ಆರ್.ಕೆ.ನಾಯರ್ ಭೇಟಿ

ಗುಜರಾತಿನ ಕಚ್ ಪ್ರದೇಶದಲ್ಲಿ ಪ್ರಕೃತಿಯನ್ನು ಆರಾಧಿಸುತ್ತಾ,ಲಕ್ಷ ಲಕ್ಷ ಮರಗಳನ್ನು ಬೆಳೆಸಿ ಪೋಷಿಸುತ್ತಿರುವ ನಮ್ಮ ಊರಿನವರೇ ಆದ ಆರ್.ಕೆ.ನಾಯರ್ ಅವರು ಇಂದು ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮ ಜಯನಗರದ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ,ಶ್ರೀ ಗುಳಿಗ ದೈವ,ಶ್ರೀ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿದರು.ಬಳಿಕ ದೈವಗಳ ಪ್ರಸಾದ ಸ್ವೀಕರಿಸಿ,ದೈವಸ್ಥಾನದ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ...

ಜ. 3 (ಇಂದು) ರಂದು ದೇವಚಳ್ಳ ಗ್ರಾಮ ಸಭೆ

ದೇವಚಳ್ಳ ಗ್ರಾಮ ಪಂಚಾಯತ್ ನ 2022-23 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜ.3 ರಂದು ಪೂ. 11 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.3 (ನಾಳೆ)ಬೆಳ್ಳಾರೆಯಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ಬೆಳ್ಳಾರೆ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ . ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ,ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ...

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತ ಸಂಭ್ರಮ ಪ್ರಯುಕ್ತ ಕ್ರೀಡಾಕೂಟಕ್ಕೆ ಚಾಲನೆ

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತ ಸಂಭ್ರಮದದ ಪ್ರಯುಕ್ತ ಜನುವರಿ 1 ,2 ಮತ್ತು 8 ರಂದು ಕ್ರೀಡಾಕೂಟ ಹಾಗು ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದ್ದು, ಜ.1 ರಂದು ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಸುಳ್ಯ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೀಣಾ ಎಂ.ಟಿ.ಉದ್ಘಾಟನೆ ನೆರವೇರಿಸಿದರು. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ...

ಗುತ್ತಿಗಾರು : ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ – ಸಚಿವ ಎಸ್ ಅಂಗಾರರಿಂದ ಪ್ರಯೋಗಾಲಯ ಕೊಠಡಿ,ಇಂಟರ್ ಲಾಕ್ ಹಾಗೂ ಶಾಲಾ ರಸ್ತೆಯ ಕಾಂಕ್ರೀಟ್ ಉದ್ಘಾಟನೆ

ಗುತ್ತಿಗಾರು ಸರಕಾರಿ ಪ್ರೌಢಶಾಲಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.31 ರಂದು ನಡೆಯಿತು. ಸುವರ್ಣ ಮಹೋತ್ಸವ ಪ್ರಯುಕ್ತ ನೂತನವಾಗಿ ನಿರ್ಮಾಣ ಗೊಂಡ ಪ್ರಯೋಗಾಲಯ ಕೊಠಡಿ, ಶಾಲಾ ರಸ್ತೆಯ ಕಾಂಕ್ರೀಟ್ , ಶಾಲಾ ಎದುರಿನ ಇಂಟರ್ ಲಾಕ್‌ ನ್ನು ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಿ ಮಾತನಾಡಿದರು. ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ರೇವತಿ...

ಸಂಧ್ಯಾರಶ್ಮಿ- ಪುಸ್ತಕಗಳ ಬಿಡುಗಡೆ, ಕುವೆಂಪು ಜಯಂತಿ ಆಚರಣೆ

ಸುಳ್ಯ ತಾಲೂಕು ನಿವೃತ್ತ ನೌಕರರ ಸಂಘ (ರಿ) ಹಾಗೂ ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗ ಆಶ್ರಯದಲ್ಲಿ ಸಂಘದ ‘ ಸಂಧ್ಯಾರಶ್ಮಿ” ಯಲ್ಲಿ ಪುಸ್ತಕಗಳನ್ನು ಬಿಡುಗಡೆ ಹಾಗೂ ಕುವೆಂಪು ಜಯಂತಿ ಆಚರಿಸಲಾಯಿತು. ಸ್ವಂತಿಕಾ ಸಾಹಿತ್ಯ-ಸಾಂಸ್ಕೃತಿಕ ಬಳಗದ ಅಧ್ಯಕ್ಷ ನೀರಬಿದಿರೆ ನಾರಾಯಣ ಸುಳ್ಯ (ನೀನಾಸು)ಅಧ್ಯಕ್ಷತೆ ವಹಿಸಿದ್ದರು. ಸಂಘದ ಅಧ್ಯಕ್ಷ ಡಾ| ಎಸ್ ರಂಗಯ್ಯ, ಗೌರವಾಧ್ಯಕ್ಷ ಶ್ರೀ ಅಚ್ರಪ್ಪಾಡಿ ಬಾಬು...

ನಿನಾದ ತಂಟೆಪ್ಪಾಡಿಯಲ್ಲಿ “ಬಾಬು ಮಾಸ್ಟರ್ ನೆನಪು” ಕಾರ್ಯಕ್ರಮ ಹಾಗೂ ಯಕ್ಷಗಾನ ಬಯಲಾಟ ನಾಗ ಸಂಜೀವನ

ಕಳಂಜ ಗ್ರಾಮದ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿಯಲ್ಲಿ ಜ.01ರಂದು ತಂಟೆಪ್ಪಾಡಿ ಶಾಲೆಯಲ್ಲಿ 12 ವರ್ಷ ಸೇವೆ ಸಲ್ಲಿಸಿರುವ ಪ್ರಸಿದ್ಧ ಚೆಂಡೆ ವಾದಕರಾಗಿದ್ದ ಬಾಬು ಮಾಸ್ಟರ್ ರವರನ್ನು ನೆನಪಿಸುವ ಸಲುವಾಗಿ "ಬಾಬು ಮಾಸ್ಟರ್ ನೆನಪು" ಕಾರ್ಯಕ್ರಮ ಹಾಗೂ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್...
Loading posts...

All posts loaded

No more posts

error: Content is protected !!