- Saturday
- August 8th, 2026
ಸಂಪಾಜೆ ಗ್ರಾಮದ ಚೆಡಾವು ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಂಪಾಜೆ ಪಂಚಲಿಂಗೇಶ್ವರ ದೇವಸ್ಥಾನದ ಮೋಕ್ತೆಸರರ ಎಂ.ಬಿ ಸದಾಶಿವ ಸುಳ್ಯ ರವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಪಿ ಎಲ್, ಸ್ವಾಮಿ ಕೊರಗಜ್ಜ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ಬಾಬು ಹೆಚ್.ಎಂ, ಅಧ್ಯಕ್ಷರಾದ ಹುಕ್ರಪ್ಪ ಪಿ, ಸದಸ್ಯರಾದ ಶಶಿಕುಮಾರ್ ಹೆಚ್.ಬಿ, ನಾರಾಯಣ...
ಸುಳ್ಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಮಹಾದೇವ್ ಎಸ್.ಪಿ ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ,ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ, ಬೆಳ್ಳಾರೆ ಸರಕಾರಿ ಪದವಿಪೂರ್ವ...
ಸುಳ್ಯದ ಬಹುಕಾಲದ ಬೇಡಿಕೆಯಾದ 110 ಕೆವಿ ಸಬ್ಸ್ಟೇಷನ್ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜನವರಿ 10 ರಂದು ಶಂಕುಸ್ಥಾಪನೆ ನಡೆಯಲಿದೆ ಎಂದು ಬಂದರು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜ.10 ಪೂ.10.30ಕ್ಕೆ ಸುಳ್ಯದ ವಿದ್ಯುತ್ ಸಬ್ ಸ್ಟೇಷನ್ ಬಳಿಯಲ್ಲಿ ಇಂಧನ ಸಚಿವರಾದ ವಿ.ಸುನಿಲ್ ಕುಮಾರ್ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಾಡಾವಿನಿಂದ...
ನಾಗರಿಕ ಸೇವಾ ಸಮಿತಿ ಕೊಲ್ಲಮೊಗ್ರು-ಕಲ್ಮಕಾರು ಇದರ ವತಿಯಿಂದ ಡಿ.30 ರಂದು ಕೊಲ್ಲಮೊಗ್ರು ಶ್ರೀ ಮಯೂರ ಕಲಾಮಂದಿರದಲ್ಲಿ ಕಾಂತಾರ ಚಲನಚಿತ್ರದ ಓಟಿಟಿ ಪ್ರದರ್ಶನ ಹಾಗೂ ದೈವ ನರ್ತಕರಿಗೆ ಮತ್ತು ರಂಗಭೂಮಿ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ನಾಗರಿಕ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ನಿವೃತ್ತ ಶಿಕ್ಷಕರಾದ ಕುಂಞಟ್ಟಿ ಶಿವರಾಮ ಮಾಸ್ತರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದ ಪ್ರಧಾನ...
ಅರಂತೋಡು ಗ್ರಾಮದ ಉಳುವಾರು ಮಧುಸೂದನ ಉಳುವರು ಬ್ರೈನ್ ಹ್ಯಾಮರೇಜ್ ಇಂದು ನಿಧನರಾದರು ಎಂದು ತಿಳಿದುಬಂದಿದೆ. ಅವರಿಗೆ 43 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ತಿಲೋತ್ತಮೆ, ಪತ್ನಿ ಮಮತಾ ಹಾಗೂ ಮಕ್ಕಳಾದ ಪ್ರೀತಮ್ ಹಾಗೂ ಮೌಲ್ಯ ಅವರನ್ನು ಅಗಲಿದ್ದಾರೆ.
ಡಿ.28 ರಂದು ಮಧ್ಯಾಹ್ನ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಮುಖಂಡ ಸುಧೀರ್ ರೈ ಮೇನಾಲ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ 48 ವರ್ಷ ವಯಸ್ಸಾಗಿತ್ತು. ವಿಷ ಸೇವಿಸಿರುವುದು ಮನೆಯವರಿಗೆ ತಿಳಿಯುತ್ತಿದ್ದಂತೆ ಸುಳ್ಯ ಜ್ಯೋತಿ ಆಸ್ಪತ್ರೆಗೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು...
ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಿತು. ಬೆಳಿಗ್ಗೆ ಗಣಹೋಮ ನಂತರ ಸತ್ಯನಾರಾಯಣ ಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ಬಳಿಕ ಅನ್ನಸಂತರ್ಪಣೆ ನಡೆಯಿತು. ಆ ಬಳಿಕ ಶ್ರೀ ಕೊರಗಜ್ಜ ದೈವದ ನೇಮೋತ್ಸವ...
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಅಡಿಕೆ ಕೃಷಿಗೆ ಭವಿಷ್ಯವಿಲ್ಲ ಎಂಬ ಆರಗ ಜ್ಞಾನೇಂದ್ರರವರ ಹೇಳಿಕೆಯನ್ನು ಖಂಡಿಸಿ ಡಿ. 30ರಂದು ಯೂತ್ ಕಾಂಗ್ರೇಸ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಯೂತ್ ಕಾಂಗ್ರೇಸ್ ಉಸ್ತುವಾರಿ ಅಭಿಷೇಕ್ ಬೆಳ್ಳಿಪಾಡಿ ಮಾತನಾಡಿ "ಜಿಲ್ಲೆ ಹಾಗೂ ರಾಜ್ಯದಲ್ಲಿ ಅಡಿಕೆ ಕೃಷಿಗೆ ಒಂದು ಗೌರವವಿದೆ. ಕೃಷಿಯನ್ನೇ ಅವಲಂಬಿಸಿರುವ ಅನೇಕ ಕುಟುಂಬಗಳನ್ನು ನಾವೀಗ ಕಾಣಬಹುದು....
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿ ಏನೆಕಲ್ಲಿನ ಯುವಕನೊಬ್ಬನ ಮೇಲೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
Loading posts...
All posts loaded
No more posts
