ಡಿ.31 ; ಮಂಡ್ಯ ತಹಶೀಲ್ದಾರ್ ಕುಂಞಿ ಅಹಮದ್ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ದಾಮೋದರ ಮಾಸ್ಟರ್ ರವರಿಗೆ ‘ಸಜ್ಜನ ಸಿರಿ’ ಪುರಸ್ಕಾರ

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೊಂ)ಇದರ ವತಿಯಿಂದ ಪ್ರತಿವರ್ಷ ಕೊಡಮಾಡಲ್ಪಡುವ ಪ್ರತಿಷ್ಠಿತ ಕರ್ನಾಟಕ ರಾಜ್ಯ ಮಟ್ಟದ ಸಜ್ಜನ ಸಿರಿ ರಾಜ್ಯ ಪ್ರಶಸ್ತಿಯನ್ನು ಈ ಹಿಂದೆ ಸುಳ್ಯ ತಾಲೂಕಿನಲ್ಲಿ ತಹಶಿಲ್ದಾರ್ ಆಗಿ ಬಹಳ ಹೆಸರು ಗಳಿಸಿ ಸಾರ್ವಜನಿಕರ ಪ್ರೀತಿಪಾತ್ರರಾಗಿರುವ ಪ್ರಸ್ತುತ ಮಂಡ್ಯ ತಹಶಿಲ್ದಾರ್ ಆಗಿರುವ ಶ್ರೀ ಕುಂಞಿಅಹ್ಮದ್ ಕೆ ಎ ಎಸ್ ಹಾಗೂ ಸರಳ ಸಜ್ಜನ ವ್ಯಕ್ತಿತ್ವದಿಂದ ಜನರ...

ಕರಂಗಲ್ಲು ಸ.ಕಿ.ಪ್ರಾ ಶಾಲೆಯ ನಲಿಕಲಿ ವಿದ್ಯಾರ್ಥಿಗಳಿಗೆ ಚಯರ್ ಕೊಡುಗೆ

ಲಯನ್ಸ್ ಕ್ಲಬ್ ಗುತ್ತಿಗಾರು ಇದರ ಅಧ್ಯಕ್ಷರಾದ ಶ್ರೀ ಮಣಿಕುಮಾರ್ ಮುಂಡೋಡಿ ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕರಂಗಲ್ಲು ಇಲ್ಲಿನ ನಲಿಕಲಿ ವಿದ್ಯಾರ್ಥಿಗಳಿಗೆ 12 ಚಯರ್ ಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಸರ್ವ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಯವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
Ad Widget

ಡಿ.30: ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವ

ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ರಾತ್ರಿ ಗಂಟೆ 8.00ಕ್ಕೆ ಅನ್ನಸಂತರ್ಪಣೆ...

ಬೆಳ್ಳಾರೆ : ಅಪಹರಣ ಪ್ರಕರಣ – ಅತ್ತೆಯ ವಿರುದ್ಧ ಕಳ್ಳತನದ ಆರೋಪ ಮಾಡಿ, ದೂರು ನೀಡಿದ ಸೊಸೆ

ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಡ್ರಾಮ ಮುಂದುವರಿದಿದ್ದು, ನವೀನ್ ತಾಯಿ ಮೇಲೆ ಚಿನ್ನಾಭರಣ ಕಳ್ಳತನದ ಆರೋಪ ಹೊರಿಸಿ ದೂರು ದಾಖಲಾದ ಘಟನೆ ಡಿ.23 ರಂದು ನಡೆದಿದೆ.ಉದ್ಯಮಿ ನವೀನ್ ಪತ್ನಿ ಸ್ಪಂದನ ಅವರು ಬೆಳ್ಳಾರೆ ಕಾವಿನ ಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಪೊಲೀಸ್ ದೂರು ನೀಡಿದ್ದಾರೆ. ದೂರಿನಲ್ಲಿ ನವೀನ್ ಪತ್ನಿ...

ಸುಳ್ಯ ಜಾತ್ರೋತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ನಿಷೇಧಿಸಲು ಹಿಂ.ಜಾ.ವೇ.ಮನವಿ

ಸುಳ್ಯದ ಪ್ರಸಿದ್ಧ ದೇವಸ್ಥಾನ ಚೆನ್ನಕೇಶವ ದೇವರ ಜಾತ್ರಾ ಸಂದರ್ಭದಲ್ಲಿ ಅನ್ಯ ಧರ್ಮಿಯರಿಗೆ ಸಂತೆ ಮೈದಾನದಲ್ಲಿ ಏಲಂಗೆ ಅವಕಾಶ ನೀಡದಂತೆ ದೇವಸ್ಥಾನದ ಅಡಳಿತ ಮಂಡಳಿಗೆ ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಮನವಿ ನೀಡಲಾಯಿತು.ಈ ಸಂದರ್ಭದಲ್ಲಿ ಹಿಂ.ಜಾ.ವೇ. ನಗರ ಸಂಚಾಲಕ್ ನಿಕೇಶ್ ಉಬರಡ್ಕ, ಸಹ ಸಂಚಾಲಕ್ ಪ್ರಶಾಂತ್ ಕಾಯರ್ತ್ತೋಡಿ, ಸಮಿತಿ ಸದಸ್ಯರುಗಳಾದ, ಕೀರ್ತನ್ ಪೆರುಮುಂಡ,ಕೌಶಲ್, ರಕ್ಷಿತ್...

ಐವರ್ನಾಡು : ರಸ್ತೆ ಬದಿ ತ್ಯಾಜ್ಯ ಎಸೆದವರಿಗೆ ಪಂಚಾಯತ್ ದಂಡ – ಸ್ವಚ್ಚ ಸುಳ್ಯವನ್ನಾಗಿಸಲು ತಾಲೂಕು ಆಡಳಿತ ಗಮನಹರಿಸಲಿ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಎಡಮಂಗಲ ನಿವಾಸಿಗಳಿಗೆ ಪಂಚಾಯತ್ ರೂ 2000.00 ದಂಡ ವಿಧಿಸಿದೆ. ಡಿ.16 ರಂದು ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀ ಶ್ಯಾಮ್ ಪ್ರಸಾದ್ ಎಂ ಆರ್ ರವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ...

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಫಾರಮ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗೆ 21-12-2022ರಂದು ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ‌ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ಮೋತಿಲಾಲ್ ಓಸ್ವಾಲ್ ಫೈನಾನ್ಸಿಯಲ್...

ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಬೆಸ್ಟ್ ಮ್ಯೂಸಿಕ್ ಆಲ್ಬಮ್ ಅವಾರ್ಡ್ ಪ್ರದಾನ

ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ( ರಿ) ಧಾರವಾಡ ರವರು ಆಯೋಜಿಸಿದ್ದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ ಮತ್ತು ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಮ್ಯೂಸಿಕ್ ಆಲ್ಬಮ್ ಗೆ ಧಾರವಾಡದಲ್ಲಿ ಬೆಸ್ಟ್ ಮ್ಯೂಸಿಕ್ ಆಲ್ಬಮ್ ಅವಾರ್ಡ್ ಬಂದಿದೆ...

ಜಾಲ್ಸೂರು : ಪಯಸ್ವಿನಿ ಪ್ರೌಢಶಾಲೆಯಲ್ಲಿ ಮೆಟ್ರಿಕ್ ಮೇಳ

ವಿದ್ಯಾರ್ಥಿಗಳಿಗೆ ವ್ಯಾಪಾರದ ಮೂಲಕ ಗಣಿತದ ಕಲಿಕೆಯೂ ನಡೆಯುತ್ತದೆ ಎಂಬುದನ್ನು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಗಣಿತ ದಿನದ ಅಂಗವಾಗಿ ನಡೆದ ಮೆಟ್ರಿಕ್ ಮೇಳದಲ್ಲಿ ಗಣಿತ ಶಿಕ್ಷಕಿ ಸವಿತಾಕುಮಾರಿ ಅವರು ಕಲಿಸಿಕೊಟ್ಟಿದ್ದಾರೆ. ಬೆಳಿಗ್ಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಮೆಟ್ರಿಕ್ ಮೇಳಕ್ಕೆ ಪೂರಕ ತಯಾರಿಯಲ್ಲಿ ತೊಡಗಿಸಿಕೊಂಡರು. ಬಳಿಕ ೧೦ಗಂಟೆಯಿಂದ ಆರಂಭವಾದ ಮೆಟ್ರಿಕ್‌ಮೇಳದಲ್ಲಿ ವಿದ್ಯಾರ್ಥಿಗಳು ತರಕಾರಿ, ತೆಂಗಿನಕಾಯಿ, ತಂಪುಪಾನಿಯಗಳು, ಮಸಾಲೆಪುರಿ, ಪಾನ್‌ಪುರಿ,...

ಉಬರಡ್ಕ ವೀಲ್ ಚೇರ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೊಡ್ಡತೋಟ ವಲಯದ ಉಬರಡ್ಕ ನಿವಾಸಿಯಾಗಿರುವ ಬಾಬು ಇವರು ಅನಾರೋಗ್ಯ ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ಮಂಜೂರಾದ ವೀಲ್ ಚೇರ್ ಅನ್ನು ಡಿ.19 ರಂದು ವಿತರಿಸಲಾಯಿತು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ, ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಪದ್ಮಾವತಿ, ಸೇವಾಪ್ರತಿನಿಧಿ ಶ್ರೀಮತಿ ಸವಿತಾ ಹಾಗೂ...
Loading posts...

All posts loaded

No more posts

error: Content is protected !!