- Monday
- August 10th, 2026
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೊಲೀಸ್ ಇಲಾಖಾ ಪರೀಕ್ಷೆಯ ಬಗ್ಗೆ ತರಬೇತಿ ಕಾರ್ಯಕ್ರಮ ಇಂದು ನಡೆಯಿತು. ಮಾಹಿತಿ ಕಾರ್ಯಾಗಾರವನ್ನು ಬೆಂಗಳೂರಿನ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ನಡೆಸಿಕೊಟ್ಟರು. ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಪಂಚಾಯತ್ ಪಿ. ಡಿ. ಓ. ಧನಪತಿ ನಿವೃತ್ತ ದೈ. ಶಿ....
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ 4ನೇ ವರ್ಷದ ಶಾರದಾಂಬ ಉತ್ಸವವು ಅ.5ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು. ಬೆಳಿಗ್ಗೆ ಗಣಪತಿ ಹವನ, ಸಾಮೂಹಿಕ ಪ್ರಾರ್ಥನೆ, ಧ್ವಜಾರೋಹಣ, ಶ್ರೀ ಶಾರದಾಂಬ ದೇವಿಯ ವಿಗ್ರಹ ಪ್ರತಿಷ್ಠೆ, ನಡೆಯಿತು. .ಬಳಿಕ ಬಾಲ ಸರಸ್ವತಿ ಹೋಮ, ಅಕ್ಷರಾಭ್ಯಾಸ, ಸಾಮೂಹಿಕ...
ಅಮರಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚತಾ ಹೀ ಸೇವಾ ಮತ್ತು ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಪಂಚಾಯತ್ ಸ್ವಚ್ಚ ಸಂಕೀರ್ಣ ಘಟಕದ ಕಾರ್ಮಿಕರನ್ನು ಹಾಗೂ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.ಪಂಚಾಯತ್ ಅಧ್ಯಕ್ಷೆ ಪದ್ಮ ಪ್ರಿಯಾ ಮೇಲ್ತೋಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪಂಚಾಯತ್ ಸದಸ್ಯರು ಹಾಗೂ ಪಿ.ಡಿ.ಒ ಆಕಾಶ್ ಮತ್ತು ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಆರೋಗ್ಯ...
ಸುಳ್ಯ ನಾಡ ಹಬ್ಬಗಳ ದಿನಾಚರಣಾ ಸಮಿತಿ,ತಾಲೂಕು ಆಡಳಿತ ಇದರ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವು ಅ.9ರಂದು ಬೆಳಗ್ಗೆ 10:30 ಕ್ಕೆ ಸುಳ್ಯ ತಾಲೂಕು ಪಂಚಾಯತ್ " ಸಾಮರ್ಥ್ಯ ಸೌಧದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕೆ, ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ವಹಿಸಲಿದ್ದಾರೆ. ಉದ್ಘಾಟನೆಯನ್ನು ಸುಳ್ಯ ನಗರ...
ಪೇರಾಲಿನ ಯುವಕರ ತಂಡ ಕ್ರಿಕೆಟ್ ಪಂದ್ಯಾಟವನ್ನು ಆ.2 ರಂದು ನಡೆಸಿತ್ತು. ಇದರಲ್ಲಿ ಒಟ್ಟು 38 ತಂಡಗಳು ಭಾಗವಹಿಸಿ ಒಂದು ತಂಡದ ನೋಂದಣಿ ಶುಲ್ಕ ರೂ. 800 ಪಡೆದುಕೊಂಡಿದ್ದರು. ಪಂದ್ಯಾಟ ಮುಗಿದು ಬಹುಮಾನ ವಿತರಣೆಯಾದ ಬಳಿಕ ಉಳಿಕೆ ಹಣ ಎಣಿಸಿದಾಗ ರೂ.40 ಸಾವಿರ ಸಂಗ್ರಹವಾಗಿತ್ತು. ಈ ಹಣವನ್ನು ಗುತ್ತಿಗಾರಿನ ಸಮೀಕ್ಷಾ ಎಂಬ ಬಾಲಕಿ ಕ್ಯಾನ್ಸರ್ ಕಾಯಿಲೆಯಿಂದ ಹಾಗೂ...
ಗುತ್ತಿಗಾರು ಹರಿಹರಪಲ್ಲತ್ತಡ್ಕ ಮಧ್ಯೆ ಅ.5 ರಂದು ಅಮೂಲ್ಯ ದಾಖಲೆಗಳಿದ್ದ ಪರ್ಸೊಂದು ಕಳೆದುಹೋಗಿವೆ. ಸಿಕ್ಕಿದವರು ದಯ ವಿಟ್ಟು ಈ ನಂಬರ್ ಗೆ ( 9353548576) ತಿಳಿಸಬೇಕಾಗಿ ವಿನಂತಿಸಿದ್ದಾರೆ.
ಕಲ್ಮಕಾರು ಗ್ರಾಮದ ಚನಿಯಪ್ಪ ನಾಯ್ಕ ಪನ್ನೆ ಅವರು ಅಕ್ಟೋಬರ್ 06 ರಂದು ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ಮೃತರು ಕುಟುಂಬಸ್ಥರು ಹಾಗೂ ಬಂಧು ಮಿತ್ರರುಗಳನ್ನು ಅಗಲಿದ್ದಾರೆ.
ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧೀನಲ್ಲಿರುವ ಹಾಸನದ ಮತ್ಸ್ಯ ದರ್ಶನಿಗೆ ಕೆ.ಎಫ್.ಡಿ.ಸಿ. ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ ರವರು ಹಠತ್ತಾಗಿ ಭೇಟಿದರು. ಕಛೇರಿಯ ಲೆಕ್ಕಪತ್ರಗಳ ಪರಿಶೀಲನೆ ನಡೆಸಿದರು.
ಐನೆಕಿದು ಗ್ರಾಮದ ಕೊಪ್ಪಳಗದ್ದೆ ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದನದ ಹತ್ಯೆ ಮಾಡಿದವರು ಹಾಗೂ ಸ್ಥಳಿಯವಾಗಿ ಸಹಕರಿಸಿದವರು ಸಿಗಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅ.04 ರಂದು ಶ್ರೀ ಹರಿಹರೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಮಹಿಳೆಯೋರ್ವರ ಕಿವಿಯ ಬೆಂಡೋಲೆ ಬಿದ್ದು ಹೋಗಿತ್ತು. ಇದು ಉಬರಡ್ಕ ಗ್ರಾಮದ ರಾಧಾಕೃಷ್ಣ ಬೈತಡ್ಕ ಹಾಗೂ ಹವ್ಯಾ ಬೈತಡ್ಕ ರವರ ಮಗಳಾದ ಜನಿತಾಳಿಗೆ ಸಿಕ್ಕಿತ್ತು. ಕೂಡಲೇ ಅದನ್ನು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಪ್ರಾಮಾಣಿಕತೆ ಮೆರೆದ ಆಕೆಗೆ ವ್ಯವಸ್ಥಾಪನಾ ಸಮಿತಿ ವತಿಯಿಂದ ಭಗವದ್ಗೀತೆ ಪುಸ್ತಕ ನೀಡಿ ಗೌರವಿಸಲಾಯಿತು.
Loading posts...
All posts loaded
No more posts
