- Monday
- August 10th, 2026
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ಮಹಿಳೆಯೋರ್ವರ ಕಿವಿಯ ಬೆಂಡೋಲೆ ಬಿದ್ದು ಹೋಗಿತ್ತು. ಇದು ಉಬರಡ್ಕ ಗ್ರಾಮದ ರಾಧಾಕೃಷ್ಣ ಬೈತಡ್ಕ ಹಾಗೂ ಹವ್ಯಾ ಬೈತಡ್ಕ ರವರ ಮಗಳಾದ ಜನಿತಾಳಿಗೆ ಸಿಕ್ಕಿತ್ತು. ಕೂಡಲೇ ಅದನ್ನು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಪ್ರಾಮಾಣಿಕತೆ ಮೆರೆದ ಆಕೆಗೆ ವ್ಯವಸ್ಥಾಪನಾ ಸಮಿತಿ ವತಿಯಿಂದ ಭಗವದ್ಗೀತೆ ಪುಸ್ತಕ ನೀಡಿ ಗೌರವಿಸಲಾಯಿತು.
ಕಲ್ಲಪ್ಪಳ್ಳಿ ಪ್ರೀತಿ ಕಲಾ ಮತ್ತು ಕ್ರೀಡಾ ಸಂಘದ ಮಹಾಸಭೆಯು ಕ್ಲಬ್ ನ ಕಚೇರಿಯಲ್ಲಿ ಎನ್. ನಿರಂಜನ ಮಾಸ್ತರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. Nithin MS ಕಾರ್ಯದರ್ಶಿ ಗುಡ್ಡಪ್ಪ ವರದಿ ವಾಚಿಸಿದರು. ಲೆಕ್ಕಪತ್ರ ಅಂಗೀಕಾರವಾದ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಹೇಶ್ ಗರುಗುಂಜ, ಕಾರ್ಯದರ್ಶಿಗಳಾಗಿ ವಸಂತ ಯಂ.ಯಂ., ಖಜಾಂಚಿಯಾಗಿ ನಿತಿನ್ ಯಂ.ಎಸ್., ಉಪಾಧ್ಯಕ್ಷರಾಗಿ ಪ್ರದೀಪ್...
ಅಜ್ಜಾವರ ಗ್ರಾಮದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ವಿಜಯದಶಮಿಯಂದು ಶ್ರೀ ದೇವಿಗೆ ವಿಶೇಷ ಮಹಾಪೂಜೆ ನೈವೇದ್ಯ ಸಮರ್ಪಣೆ ಹಾಗೂ ಮಕ್ಕಳಿಗೆಅನ್ನಪ್ರಾಶನ ಹಾಗೂ ಮಹಾ ಅನ್ನದಾನ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಸಂಬಂಧಪಟ್ಟ ಹತ್ತು ಸಮಸ್ತರು ಹಾಗೂ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮೇನಾಲ, ಮಹಮ್ಮಾಯಿ ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷರಾದ...
ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಿವಿಲ್ ಪೊಲೀಸ್ /ರಿಸರ್ವ್ ಪೊಲೀಸ್ ಮತ್ತು ಪಿ.ಯಸ್.ಐ ನೇಮಕಾತಿಯ ಲಿಖಿತ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ಅ.7 ರಂದು ಶನಿವಾರ ಬೆಳಿಗ್ಗೆ 9.00 ಕ್ಕೆಪಂಚಾಯತ್ ಬಳಿಯ ಪ. ವರ್ಗದ ಸಭಾ ಭವನದಲ್ಲಿ ನಡೆಯಲಿದೆ. ಬೆಂಗಳೂರು ನಗರ ಠಾಣೆಯ ಪಿ.ಎಸ್.ಐ. ಪ್ರದೀಪ್ ಗೌಡ ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ...
ಸುಳ್ಯದ ಲಾಲ್ ಬಹದ್ದೂರ ಶಾಸ್ತ್ರಿ ಸಾಂಸ್ಕೃತಿಕ ಕಲಾ ಸಂಘದಿಂದ ಸರಕಾರಿ ಆಸ್ಪತ್ರೆಯಲ್ಲಿಯ ರೋಗಿಗಳಿಗೆ ಹಣ್ಣು ವಿತರಣಾ ಕಾರ್ಯಕ್ರಮ ಕಾರ್ಯಕ್ರಮವು ಅಕ್ಟೊಬರ್ 2 ರಂದು ನಡೆಯಿತು . ಅಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮತ್ತು ಮಹಾತ್ಮಾ ಗಾಂಧೀಜಿ ಅವರ ಜಯಂತಿ ಇದ್ದ ಪ್ರಯುಕ್ತ ಸಂಘಟನೆಯು ರೋಗಿಗಳು ಬೇಗ ಗುಣಮುಖರಾಗಿ ಆರೋಗ್ಯ ಏಳಿಗೆ ಕಂಡು ಸುಂದರ ಬಾಳು...
ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ವತಿಯಿಂದ 35ನೇ ವರ್ಷದ ಶ್ರೀ ಶಾರದೋತ್ಸವವು ಅ.05 ರಂದು ಬೆಳ್ಳಾರೆ ಅಚಲಾಪುರ ಕಟ್ಟೆಯ ಬಳಿ ನಡೆಯಿತು. ಬೆಳಿಗ್ಗೆ ಶಾರದಾ ಪ್ರತಿಷ್ಠೆ ಪೂಜೆ ನಡೆಯಿತು. ನಂತರ ವಿದ್ಯಾರಂಭ (ಅಕ್ಷರಾಭ್ಯಾಸ) ಶಾರದಾ ಸಹಸ್ರ ನಾಮಾರ್ಚನೆ, ಅಷ್ಟೋತ್ತರನಾಮಾರ್ಚನೆ, ಆಯುಧ ಪೂಜೆ, ಇತ್ಯಾದಿ ಸೇವೆಗಳು ನಡೆದವು. ಶಾರದೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ,...
ಪೆರಾಜೆ ಚಿಗುರು ಕ್ರೀಡಾ ಮತ್ತು ಕಲಾ ಯುವಕ ಮಂಡಲ ಇದರ ಮಾಸಿಕ ಶ್ರಮದಾನವು ಅಡ್ಕಾರ್ ವನವಾಸಿ ಕಲ್ಯಾಣ ಬಾಲಕರ ವಸತಿ ನಿಲಯದಲ್ಲಿ ನಡೆಯಿತು. ಶ್ರಮದಾನದಲ್ಲಿ ಚಿಗುರು ಯುವಕಮಂಡಲದ ಅಧ್ಯಕ್ಷ ಭುವನ್ ಕುಂಬಳಚೇರಿ, ಕಾರ್ಯದರ್ಶಿ ಜೀವನ್ ಮಜಿಕೋಡಿ, ಖಜಾಂಜಿ ಪ್ರವೀಣ್ ಮಜಿಕೋಡಿ, ಮಾಜಿ ಅಧ್ಯಕ್ಷ ಶೀತಲ್ ಕುಂಬಳಚೇರಿ,ಪೆರಾಜೆ ಗ್ರಾಮಪಂಚಾಯತ್ ಸದಸ್ಯ ಉದಯಚಂದ್ರ ಕುಂಬಳಚೇರಿ ಹಾಗೂ ಸಂಘದ ಸದಸ್ಯರು...
ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಸಂದರ್ಭದಲ್ಲಿ ಸರಕಾರಿ ಆಂಬುಲೆನ್ಸ್ ನ ಆಕ್ಸಿಜನ್ ಸಿಸ್ಟಮ್ ಕೈಕೊಟ್ಟ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಧಾವಿಸಿ ಬಂದ ಅಮರ ಚಾರಿಟೇಬಲ್ ಟ್ರಸ್ಟ್ ನ ಆಂಬುಲೆನ್ಸ್ ವಾಹನದಿಂದಾಗಿ ವ್ಯಕ್ತಿಯೊಬ್ಬರ ಜೀವ ಉಳಿದಿದೆ. ಅ.1 ರಂದು ಸಂಜೆ ಕೊಲ್ಲಮೊಗ್ರದಿಂದ ಸುಳ್ಯಕ್ಕೆ ಉಸಿರಾಟದ ತೀವ್ರ ತೊಂದರೆಯಿದ್ದು ಅನಾರೋಗ್ಯ ದಿಂದ ಬಳಲುತ್ತಿದ್ದ ಕೆಂಚಪ್ಪ ಎಂಬವರನ್ನು ಸರಕಾರಿ...
ಅಚ್ರಪ್ಪಾಡಿ ಸ.ಕಿ.ಪ್ರಾ. ಶಾಲಾ ರಂಗಮಂದಿರ ನಿರ್ಮಾಣಕ್ಕೆ ಅ. 2 ರಂದು ಗುದ್ದಲಿಪೂಜೆ ನೆರವೇರಿತು. ಧರ್ಮಪಾಲ ಅಡ್ಡನಪಾರೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರ ಪೋಷಕರಾದ ಎಂ.ಎಸ್.ಕೃಷ್ಣ ಮತ್ತು ಶ್ರೀಮತಿ ಶಶಿಕಲಾ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಪ್ರಶಾಂತ ಮೆದು, ಶಾಲಾ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಬಾಬು...
ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಾಗೂ ಕೆವಿಜಿ ಆಯುರ್ವೇದ ಫಾರ್ಮ್ ಮತ್ತು ರಿಸರ್ಚ್ ಸೆಂಟರ್ ನಲ್ಲಿ ನವರಾತ್ರಿ ಮತ್ತು ವಿಜಯದಶಮಿ ಪ್ರಯುಕ್ತ ಅ.4ರಂದು ಆಯುಧ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಾಹನ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ,...
Loading posts...
All posts loaded
No more posts
