ಅಜ್ಜಾವರ : ಅಂಬೇಡ್ಕರ್ ಭಾವಚಿತ್ರದ ಧ್ವಜ ತೆರವಿಗೆ ಆಕ್ರೋಶ – ಪ್ರತಿಭಟನೆಯ ಎಚ್ಚರಿಕೆ

ಅಜ್ಜಾವರ ಗ್ರಾಮದ ಮೇನಾಲ ಡಾ||ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿದ್ದ ಸಂವಿಧಾನ ಶಿಲ್ಪಿ ಡಾ||ಬಿ.ಆರ್ ಅಂಬೇಡ್ಕರ್ ಅವರ ಭಾವುಟವನ್ನು ಅಜ್ಜಾವರ ಪಂಚಾಯತ್ ತೆರವುಗೊಳಿಸಿದ್ದ ಘಟನೆ ನಡೆದಿದ್ದು ಈ ಬಗ್ಗೆ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಸಮಿತಿಯ ಜಿಲ್ಲಾ ಮತ್ತು ಸುಳ್ಯ ತಾಲೂಕು,ಅಜ್ಜಾವರ ಘಟಕ ಸಮಿತಿಯ ಪದಾಧಿಕಾರಿಗಳು ಪಂಚಾಯತ್ ಗೆ ಭೇಟಿ ನೀಡಿ ಗ್ರಾ. ಪಂ.ಅಧ್ಯಕ್ಷರು,...

ಅತ್ಯಾಚಾರ ಆರೋಪದಡಿಯ ಆರೋಪಿಗೆ ನಿರೀಕ್ಷಣಾ ಜಾಮೀನು

ದೇವಚಳ್ಳ ಗ್ರಾಮದ ತಳೂರು ಆಚಾರಿಕಾನ ಮನೆ ಎಂಬಲ್ಲಿನ ವ್ಯಕ್ತಿ ಪವನ್ ಕುಮಾರ್ ಬಾಡಿಗೆ ಮನೆ ಮಾಡಿಕೊಂಡಿರುವ ವಿವಾಹಿತ ಮಹಿಳೆಯೋರ್ವಳಿಗೆ ಮದುವೆಯಾಗುತ್ತೇನೆ ಎಂದು ನಂಬಿಸಿ ಬಳಿಕ , ಬಲಾತ್ಕಾರವಾಗಿ ಅತ್ಯಾಚಾರವನ್ನು ಎಸಗಿರುತ್ತಾನೆ ಎಂದು ಆರೋಪಿಸಿ, ನೊಂದ ಮಹಿಳೆಯು ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಯವರಿಗೆ ದೂರು ನೀಡಿದ್ದರು. ಆರೋಪಿ ಪವನ್ ಕುಮಾರ್ ವಿರುದ್ಧ ನೀಡಿದ ದೂರಿನನ್ವಯ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ...
Ad Widget

ಪಂಜ: ಪ್ರಾ.ಕೃ.ಪ.ಸ ಸಂಘದ ಅಮೃತವರ್ಷಿಣಿ ನೂತನ ಗೋದಾಮು ಕಟ್ಟಡದ ಉದ್ಘಾಟನೆ

ಪಂಜ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಮೃತವರ್ಷಿಣಿ ನೂತನ ಗೋದಾಮು ಕಟ್ಟಡ (ನಬಾರ್ಡ್ ಎಂ.ಎಸ್ ಸಿ ಯೋಜನೆ) ಉದ್ಘಾಟನಾ ಸಮಾರಂಭ ಅ.1 ರಂದು ಬೆಳಗ್ಗೆ 10.30 ಕ್ಕೆ  ಬೀದಿಗುಡ್ಡೆಯಲ್ಲಿ ನಡೆಯಲಿದೆ.ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ  ಎಸ್.ಅಂಗಾರ ಗೋದಾಮು ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಆದರ್ಶವರ್ಷಿಣಿ ಸಭಾಭವನ ಉದ್ಘಾಟನೆಯನ್ನು  ಮಂಗಳೂರು ಲೋಕಸಭಾ ಕ್ಷೇತ್ರ...

ನೊಬೆಲ್ ವರ್ಲ್ಡ್ ರೆಕಾರ್ಡ್ ಬುಕ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡ ಮಾನ್ಯ ಪಲ್ಲೋಡಿ

ದಾವಣಗೆರೆಯ ಸಪ್ತಋಷಿ ಯೋಗಾಸನ ಕ್ರೀಡಾ ಅಕಾಡೆಮಿ ವಾರ್ಷಿಕೋತ್ಸವದಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 80 ವಿದ್ಯಾರ್ಥಿಗಳಲ್ಲಿ ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಮಾನ್ಯ ಪಲ್ಲೋಡಿ ವೃಕ್ಷಾಸನ, ಉತ್ಕಟಾಸನ, ಧನು‌ರಾಸನ, ಸರ್ವಾಂಗಾಸನದಲ್ಲಿ ನಿರಂತರ 120 ಸೆಕೆಂಡುಗಳ ಕಾಲ ಯೋಗ ಪ್ರದರ್ಶಿಸಿ ನೊಬೆಲ್ ವರ್ಲ್ಡ್ ರೆಕಾರ್ಡ್ ಬುಕ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ....

ಹರಿಹರಪಲ್ಲತ್ತಡ್ಕ : ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ – ವ್ಯಕ್ತಿಯಿಂದ ವಿಡಿಯೋ ಚಿತ್ರೀಕರಣಕ್ಕೆ ಆಕ್ರೋಶ – ಪೊಲೀಸ್ ವಶಕ್ಕೆ

ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.) ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಹಾಗೂ ಮದ್ಯ ಮುಕ್ತ ಹೋರಾಟ ಸಮಿತಿ ಹರಿಹರ ಪಲ್ಲತ್ತಡ್ಕ ಇದರ ನೇತೃತ್ವದಲ್ಲಿ ಹರಿಹರ ಪಲ್ಲತ್ತಡ್ಕ ಮುಖ್ಯ ಪೇಟೆಯಲ್ಲಿ ಸೆ.29...

ಅ.1ರಂದು ರೈತ ಸಂಘದ ತಾಲೂಕು ಕಚೇರಿ ಉದ್ಘಾಟನೆ – ಕೃಷಿ ಬದುಕು ಕುರಿತು ವಿಚಾರ ವಿನಿಮಯ

ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ತಾಲೂಕು ಘಟಕದ ನೂತನ ತಾಲೂಕು ಕಚೇರಿ ಉದ್ಘಾಟನೆ ಹಾಗೂ ಕೃಷಿ ಬದುಕು ಕುರಿತು ವಿಚಾರ ವಿನಿಮಯ ಕಾರ್ಯಕ್ರಮ ಅ.1ರಂದು ಬೆಳಗ್ಗೆ 10.30 ಕ್ಕೆ ಪೈಚಾರು ಬಸ್ ನಿಲ್ದಾಣದ ಬಳಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರು ಹಾಗೂ ಚಿಂತಕರಾದ ತೇಜಕುಮಾರ್ ಕುಡೆಕಲ್ಲು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ತಾಲೂಕು ರೈತ ಸಂಘದ ಅಧ್ಯಕ್ಷ...

ಪತ್ರಕರ್ತರ ಸಂಘದಿಂದ ಆರೋಗ್ಯ ತಪಾಸಣೆ – ಆಭಾ ಕಾರ್ಡ್ ನೋಂದಣಿ ಶಿಬಿರ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಗ್ರಾಮ್ ಒನ್ ನಾಗರಿಕಾ ಸೇವಾ ಕೇಂದ್ರ ಅರಂತೋಡು ಇದರ ಆಶ್ರಯದಲ್ಲಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ನಡೆದ ಪತ್ರಕರ್ತರ ಆರೋಗ್ಯ ತಪಾಸಣೆ ಹಾಗೂ ಆಭಾ ಕಾರ್ಡ್ ನೋಂದಣಿ ಶಿಬಿರ ಸೆ.28 ರಂದು ನಡೆಯಿತು. ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಚಾಲನೆ ನೀಡಿ ಮಾತನಾಡಿ, ಒಂದು ದೇಶ...

ಹರಿಹರಪಲ್ಲತ್ತಡ್ಕ : ಮದ್ಯದಂಗಡಿ ತೆರೆಯದಂತೆ ಉಸ್ತುವಾರಿ ಸಚಿವರಿಗೆ ಮನವಿ

ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯದಂತೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಸೆ.27ರಂದು ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರು ಊರವರ ಪರವಾಗಿ ಮನವಿ ನೀಡಿದರು. ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ ಹಾಗೂ ತೆರೆದಲ್ಲಿ ಯುವ ಸಮೂಹ ದುಶ್ಚಟಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗಿ ಊರಿನಲ್ಲಿ ಅಶಾಂತಿ ಸೃಷ್ಟಿಗೆ...

ಸುಳ್ಯ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ರೆಡ್ ಕ್ರಾಸ್ ಘಟಕ ಉದ್ಘಾಟನೆ

ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು ಸುಳ್ಯ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು  ಜಂಟಿ ಆಶ್ರಯದಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ಸೆ.28 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆಹರೂ ಸ್ಮಾರಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಅನುರಾಧ ಕುರುಂಜಿ ನೆರವೇರಿಸಿದರು.  ಅಧ್ಯಕ್ಷತೆಯನ್ನು  ದ ಕ ಗೌಡ ವಿದ್ಯಾ ಸಂಘದ...

ಕೆ ಎಸ್ ಎಸ್ ಕಾಲೇಜಿನಲ್ಲಿ ಜನಪರ ಉತ್ಸವ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಮಣೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜನಪರ ಉತ್ಸವವ ಕಾರ್ಯಕ್ರಮ ಸೆ. 27ರಂದು ನಡೆಯಿತು.ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಉದ್ಘಾಟಿಸಿದರು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯನ ಪ್ರಾಂಶುಪಾಲ...
Loading posts...

All posts loaded

No more posts

error: Content is protected !!