- Tuesday
- August 11th, 2026
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸೆ.24 ರಂದು ಸಂಘದ ದೀನದಯಾಳ್ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನಲ್ಲಿ ಸಂಘವು 434 ಕೋಟಿ ವ್ಯವಹಾರ ಮಾಡಿದ್ದು 1.42 ಕೋಟಿ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.7 ಡಿವಿಡೆಂಟ್ ಘೋಷಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕಾ...
ಇತ್ತೀಚೆಗೆ ಭೀಕರ ಪ್ರವಾಹದಿಂದಾಗಿ ಸುಳ್ಯ ಕ್ಷೇತ್ರದ ಕೆಲವೊಂದು ಭಾಗಗಳಲ್ಲಿ ವಿಪರೀತ ಸಮಸ್ಯೆಗಳಾಗಿದ್ದು, ಕೊಲ್ಲಮೊಗ್ರು ಗ್ರಾಮದ ಕಡಂಬಳ ಸೇತುವೆ ಕೂಡಾ ಕೊಚ್ಚಿ ಹೋಗಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಮಳೆಗಾಲದಲ್ಲಿ ತಕ್ಷಣ ಸೇತುವೆ ನಿರ್ಮಾಣ ಕಾರ್ಯ ಅಸಾಧ್ಯವಾದುದರಿಂದ ಅಲ್ಲಿ ಸ್ವಲ್ಪ ವಿಳಂಬವಾಗಿ ಮೋರಿ ಪೈಪು ಅಳವಡಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ...
ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಹರಿಹರಪಲ್ಲತ್ತಡ್ಕ ನಿವಾಸಿ ಕಾರ್ಕಳದಲ್ಲಿ ಉದಯವಾಣಿ ಪತ್ರಿಕೆಯ ವರದಿಗಾರರಾಗಿರುವ ಬಾಲಕೃಷ್ಣ ಭೀಮಗುಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರಿಯೆ...
ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿದ್ದ ದಿ.ಬಿ.ಕೆ.ಶಾರದಾಬಾಯಿ ನಾವಡರವರ ಸ್ಮರಣಾರ್ಥ ಅವರ ಪತಿ ಕೃಷ್ಣ ನಾವಡರು ಹಾಗೂ ಮಕ್ಕಳು ಕೊಡುಗೆಯಾಗಿ ನೀಡಿದ ನಲಿಕಲಿ ಕೊಠಡಿಯ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು.ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ಸ್ವಾಮೀಜಿಯವರು ಕಾರ್ಯಕ್ರಮ ಆಶೀರ್ವಚನ ನುಡಿಗಳಲ್ಲಿ ದೇಶ ಭಕ್ತಿಯು ಎಳೆಯವಯಸ್ಸಿನಲ್ಲಿ ಕಲಿಸಬೇಕು ಇದೀಗ ಕಲಿತವರೇ ದೇಶದ್ರೋಹದ ಕೆಲಸಗಳನ್ನು...
ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಹಾಬಲ ಕಟ್ಟಕೋಡಿಯವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಸೆ.19 ರಂದು ನಡೆದ ಸಂಘದ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಮೇಶ್ ದೇಲಂಪಾಡಿ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಮಹಾಬಲ ಕಟ್ಟಕೋಡಿ, ನಿರ್ದೇಶಕರು, ಮುಖ್ಯ...
ಐವರ್ನಾಡು ಗ್ರಾಮ ಪಂಚಾಯತ್ ಮತ್ತು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಗೆಳೆಯರ ಬಳಗ ದೇರಾಜೆ,ಮಂಜುಶ್ರೀ ಗೆಳೆಯರ ಬಳಗ ,ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಮತ್ತು ರೆಡ್ ಕ್ರಾಸ್ ಸಂಸ್ಥೆ ದ.ಕ ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಪ್ರಯುಕ್ತ...
ಅಚ್ರಪ್ಪಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಅಡಿಕೆ ತೋಟ ರಚಿಸುವ ಯೋಜನೆಗೆ ಸೆ.23 ರಂದು ಚಾಲನೆ ನೀಡಲಾಯಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜನಾರ್ಧನ, ಶಾಲಾ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ವಸಂತ ಬೊಳ್ಳಾಜೆ, ಗೌರವಾಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಉಪಾಧ್ಯಕ್ಷ ಹೊನ್ನಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘದ...
ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ ಸೆ.14ರಂದು ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ರವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಅನಸೂಯ ಕೆ ಆರ್ ರವರು ಹಿಂದಿ ದಿವಸ ಆಚರಣೆಯ ಹಿನ್ನೆಲೆ ಹಾಗೂ ಮಹತ್ವದ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಫಾತಿಮತ್ ರುಶ್ದಾರವರು ಹಿಂದಿ...
ಕಡಂಬಳ ಸೇತುವೆ ಕಾಮಗಾರಿಗೆ ಸಚಿವರಾದ ಎಸ್.ಅಂಗಾರ ಅವರ ಸೂಚನೆಯಂತೆ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರ ನಿರ್ದೇಶನದಂತೆ ಸೆ.22 ರಂದು ಪ್ರಾರಂಭಗೊಂಡಿದೆ. ಯಾವ ಸಮಯದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಬೇಕೋ ಅಂತಹ ಸಮಯದಲ್ಲಿ ನಮ್ಮ ಸಚಿವರು ನಾಯಕರುಗಳು ಸ್ಪಂದಿಸಿದ್ದಾರೆ. ಭೀಕರ ಮಳೆಯಿಂದ ಕೊಚ್ಚಿ ಹೋದ ನಮ್ಮ ಗ್ರಾಮದ ನಾಲ್ಕು ಸೇತುವೆಗಳನ್ನು ಎಂಟು ದಿನಗಳಲ್ಲಿ ನಮ್ಮ ಸಚಿವರು,...
ಹರಿಹರ ಪಲ್ಲತ್ತಡ್ಕ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗ ದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಚರಣೆಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಅಮೃತ ಗೊಂಚಲು ಸಭೆ ಕಾರ್ಯಕ್ರಮ ಸೆ.21 ರಂದು ಹರಿಹರೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀಮತಿ ತಾರಾಮಲ್ಲಾರ ಉದ್ಘಾಟಿಸಿದರು. ಶ್ರೀಮತಿ ಹರ್ಷಿಣಿಯವರು ಅಧ್ಯಕ್ಷತೆ ವಹಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ...
Loading posts...
All posts loaded
No more posts
