ಗುತ್ತಿಗಾರು : ರಿಕ್ಷಾ ಚಾಲಕರಿಂದ ಶ್ರಮದಾನ

ಗುತ್ತಿಗಾರು ಮುಖ್ಯ ರಸ್ತೆಯಲ್ಲಿ ಬಸ್ ನಿಲ್ದಾಣದ ಅಂಗಡಿ ಕಟ್ಟಡದ ಮುಂಭಾಗದಲ್ಲಿ ಶ್ರಮದಾನದ ಮೂಲಕ ರಿಕ್ಷಾ ಚಾಲಕರು ಸ್ವಚ್ಛತಾ ಕಾರ್ಯ ಕೈಗೊಂಡರು. ರಿಕ್ಷಾ ಚಾಲಕರ ಮಾದರಿ ಕಾರ್ಯಕ್ಕೆ ವರ್ತಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗೆ ಮನಸ್ವಿನಿ ಬಡ್ಡಡ್ಕ ಆಯ್ಕೆ

ಪೋಲೀಸ್ ಇಲಾಖೆಯ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( Scene Of Crime Officer) ಹುದ್ದೆಗೆ ಮನಸ್ವಿನಿ ಎನ್.ಕೆ. ಬಡ್ಡಡ್ಕ ಆಯ್ಕೆಯಾಗಿದ್ದು ಸೆ.19 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ರೋಟರಿಯಲ್ಲಿ ಪ್ರಾಥಮಿಕ, ಉಜಿರೆಯ ಎಸ್.ಡಿ.ಎಂ.ಸಿ.ಯಲ್ಲಿ ಪ್ರೌಢ ಶಿಕ್ಷಣ, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಜೈನ್ ಯುನಿವರ್ಸಿಟಿಯಲ್ಲಿ ಬಿಎಸ್ಸಿ ಪದವಿ ಹಾಗೂ ಗುಜರಾತ್ ನ ಫೋರೆನ್ಸಿಕ್ ಯೂನಿವರ್ಸಿಟಿಯಲ್ಲಿ...
Ad Widget

ಗುತ್ತಿಗಾರು : ಅಜಾದಿ ಕಾ ಅಮೃತಮಹೋತ್ಸವ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಶನ್ ಮತ್ತು ಸಂಟ್ ಮೇರಿಸ್ ಚರ್ಚ್ ಗುತಿಗಾರು ಸಂಯುಕ್ತವಾಗಿ ಗುತಿಗಾರು ಗ್ರಾಮದ ಪ್ರೌಢ ಶಾಲಾ ಮಕ್ಕಳಿಗೆ. 75 ನೇ ಸ್ವಾತಂತ್ರ್ಯತ್ಸವ ಪ್ರಯುಕ್ತ “ಪ್ರಜಾಪ್ರಭುತ್ವ ದೇಶ, ನನ್ನ ಭಾರತ ” ಎಂಬ ವಿಷಯದ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಸೆ.18 ರಂದು ಗುತಿಗಾರು ಚರ್ಚಿನ ಸಭಾ ಭವನದಲ್ಲಿ...

ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎ.ವಿ.ತೀರ್ಥರಾಮ ಅಧಿಕಾರ ಸ್ವೀಕಾರ

ಸುಳ್ಯದ ಬಿ. ಜೆ. ಪಿ. ಮುಂದಾಳು, ರಾಜ್ಯ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ಎ. ವಿ. ತೀರ್ಥರಾಮರನ್ನು ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ರಾಜ್ಯ ಸರಕಾರವು ನೇಮಕ ಮಾಡಿದ್ದು, ಇಂದು ಮಂಗಳೂರಿನ ನಿಗಮದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಪಿ.ಮುಖಂಡರುಗಳಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಸುಭೋದ್ ಶೆಟ್ಟಿ ಮೇನಾಲ,ರಾಕೇಶ್...

ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಗೆ ದ್ವಿತೀಯ ಬಹುಮಾನ

ಉಪ್ಪಿನಂಗಡಿಯ ರಾಮನಗರ ಗಾಣಿಗ ಸಮುದಾಯ ಭವನದಲ್ಲಿ ಆರ್ ಪಿ ಕ್ರಿಯೇಷನ್ಸ್ ಪಾಂಬಾರು ಆಯೋಜಿಸಿದ್ದ ಗಾನ ಶಾರದೆ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಸುಳ್ಯದ ತನ್ಮಯ್ ಎಮ್ ಸೋಮಯಾಗಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾನೆ . ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರಿನ ಶಾಸಕರಾದ ಶ್ರೀ ಸಂಜೀವ್ ಮತಂದೂರು ರವರು ವಹಿಸಿದ್ದರು . ಸುಳ್ಯದ ಖ್ಯಾತ ಸಾಹಿತಿ , ಗಾಯಕ ಮತ್ತು...

ಕೆಪಿಸಿಸಿ ಸದಸ್ಯರಾಗಿ ನಂದಕುಮಾರ್ ಮತ್ತು ಭರತ್ ಮುಂಡೋಡಿ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರಾಗಿ ಸುಳ್ಯದಿಂದ ಭರತ್ ಮುಂಡೋಡಿ ಮತ್ತು ಮಡಿಕೇರಿಯಿಂದ ನಂದಕುಮಾರ್ ನೇಮಕಗೊಂಡಿರುತ್ತಾರೆ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭರತ್ ಮುಂಡೋಡಿಯವರು ಕಳೆದ ಅವಧಿಯಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಕೆಪಿಸಿಸಿ ಸದಸ್ಯರಾಗಿ ನೇಮಕಗೊಂಡಿರುವ ಎಚ್.ಎಂ.ನಂದಕುಮಾರ್ ಮಡಿಕೇರಿ ಪುರಸಭಾ ಮಾಜಿ ಸದಸ್ಯರಾಗಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್...

ಅಡ್ಕಾರು: ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಕುರಿತು ಪೂರ್ವಭಾವಿ ಸಭೆ- ನೂತನ ಉತ್ಸವ ಸಮಿತಿ ರಚನೆ

ಜಾಲ್ಲೂರು ಗ್ರಾಮದ ಅಡ್ಕಾರಿನ ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ವತಿಯಿಂದ ಅಯ್ಯಪ್ಪ ಮಂದಿರದಲ್ಲಿ ಡಿಸೆಂಬರ್ ತಿಂಗಳಲ್ಲಿ ಜರುಗುವ ವಾರ್ಷಿಕೋತ್ಸವದ ಕುರಿತು ಪೂರ್ವಭಾವಿ ಸಭೆ ಹಾಗೂ ನೂತನ ಉತ್ಸವ ಸಮಿತಿಯನ್ನು ಸೆ.18ರಂದು ರಚಿಸಲಾಯಿತು. ಸಭೆಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಅಶೋಕ್ ಅಡ್ಡಾರು ಅದ್ಯಕ್ಷತೆ ವಹಿಸಿದ್ದರು. ಶ್ರೀ ಅಯ್ಯಪ್ಪ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ನಾರಾಯಣ ಮಡಿವಾಳ ಅವರ ಉಪಸ್ಥಿತರಿದ್ದರು. ಈ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಒಡಿಯೂರು ಗ್ರಾಮವಿಕಾಸ ಯೋಜನೆಯ ಸದಸ್ಯರಿಂದ ಶ್ರಮದಾನ

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ನವರಾತ್ರಿಯ ಅಂಗವಾಗಿ ಒಡಿಯೂರು ಗ್ರಾಮವಿಕಾಸ ಯೋಜನೆಯ ಬೆಳ್ಳಾರೆ ಘಟ ಸಮಿತಿಯಿಂದ ಸೆ.18 ರಂದು ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಬೆಳ್ಳಾರೆ ಘಟಸಮಿತಿಯ ಅಧ್ಯಕ್ಷರು, ಸಂಘದ ಸದಸ್ಯರು ಮತ್ತು ದೇವಸ್ಥಾನದ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಮುರುಳ್ಯ- ಎಣ್ಮೂರು ಪ್ರಾ.ಕೃ.ಪ.ಸ.ಸಂಘದ 2021-22 ನೇ ಸಾಲಿನ ವಾರ್ಷಿಕ ಮಹಾಸಭೆ- ಪೂರ್ವಭಾವಿ ಸಭೆ

ಮುರುಳ್ಯ- ಎಣ್ಮೂರು ಪ್ರಾ.ಕೃ.ಪ.ಸ.ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯ ಬಗ್ಗೆ ಪೂರ್ವಭಾವಿ ಸಭೆಯು ಸಂಘದ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರಾದ ವಸಂತ ಹೆಚ್.ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು ಸಭೆಯಲ್ಲಿ ಉಪಾಧ್ಯಕ್ಷೆ ಕುಸುಮಾವತಿ ರೈ ಎಣ್ಮೂರುಗುತ್ತು, ನಿರ್ದೇಶಕರುಗಳಾದ ರಘುನಾಥ ರೈ ಕೆ.ಎನ್.ವಸಂತ ನಡುಬೈಲ್, ರೂಪರಾಜ ರೈ, ರಾಜಶೇಖರ ಶೃಂಗೇರಿ, ದಿನೇಶ್ ಹೆಚ್.,ಪುರುಷೋತ್ತಮ ಆಚಾರ್ಯ,ದಿನೇಶ್ ಎ.ಶೇಖರ ಸಾಲಿಯಾನ್,ನಳಿನಿ ಸೀತಾರಾಮ ರೈ ಯು...

ಸುಳ್ಯ ದಸರಾ ಪ್ರಯುಕ್ತ ಡಿ.ಜೆ.ಫ್ರೆಂಡ್ಸ್ ವತಿಯಿಂದ 4 ನೇ ವರ್ಷದ ಹುಲಿ ವೇಷ ಸ್ಥಬ್ದ ಚಿತ್ರದ ಆಮಂತ್ರಣ ಬಿಡುಗಡೆ

ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ,ಸುಳ್ಯ ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ 51 ನೇ ವರ್ಷದ ದಸರಾ ಉತ್ಸವ 2022 ರ ಅಂಗವಾಗಿ ಅ.10 ರಂದು ನಡೆಯಲಿರುವ ವೈಭವದ ಶಾರದಾ ದೇವಿಯ ಶೋಭಾಯಾತ್ರೆಯ ಮೆರುಗು ಹೆಚ್ಚಿಸುವ ಸಲುವಾಗಿ ಡಿ.ಜೆ.ಫ್ರೆಂಡ್ಸ್ ಕ್ಲಬ್ ಸುಳ್ಯ ಇವರ 4 ನೇ ವರ್ಷದ ಹುಲಿ ವೇಷಗಳ ಸ್ಥಬ್ಧ...
Loading posts...

All posts loaded

No more posts

error: Content is protected !!