- Tuesday
- August 11th, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇಲ್ಲಿಯ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮುತ್ತೂಟ್ ಮಿನಿ ಫೈನಾನ್ಸಿಯರ್ಸ್ ಲಿಮಿಟೆಡ್ ಇದರ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಿಸುವ "ಬ್ಯಾಗ್ ಆಫ್ ಜಾಯ್” ಕಾರ್ಯಕ್ರಮ ಸೆ.14 ರಂದು ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಹರೀಶ್ ರವರು ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆಯವರು ಕಾರ್ಯಕ್ರಮ ಉದ್ಘಾಟಿಸಿ...
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್ ಮಂಗಳೂರು ಇವುಗಳ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಸುಳ್ಯ ತಾಲೂಕಿನ ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸೆ.14 ರಂದು ಮಳೆ ನೀರು ಕೊಯ್ಲು ಘಟಕ ಮತ್ತು ಬೂದು ನೀರು ನಿರ್ವಹಣೆ ಸೌಲಭ್ಯ ಕುರಿತು ಪ್ರೇರೇಪಣಾ...
ಐವರ್ನಾಡು ಗ್ರಾಮ ಪಂಚಾಯತ್ ನ 2021-22 ನೇ ಸಾಲಿನ ಜಮಾಬಂಧಿ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಕೀಲಾಡಿ ಅವರ ಸಭಾಧ್ಯಕ್ಷತೆಯಲ್ಲಿ ಸೆ.14 ರಂದು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಿತು.ಪುತ್ತೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಕೃಷ್ಣ ಬಿ. ನೋಡೆಲ್ ಅಧಿಕಾರಿಯಾಗಿ ಜಮಾಬಂಧಿ ನಡೆಸಿದರು. ಪಂಚಾಯತ್ ಸಿಬ್ಬಂದಿ ಪುರುಷೋತ್ತಮರವರು ವರದಿ ಮಂಡಿದರು....
ಉತ್ತಮ ಶಿಕ್ಷಣದಿಂದ ಅಪರಾಧ ನಿಯಂತ್ರಣ ಸಾಧ್ಯ : ಸುಹಾಸ್ ಎಸ್ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು ಸಮಾಜದಲ್ಲಿ ಅಪರಾಧ ಪ್ರಕರಣಗಳು ನಿಯಂತ್ರಣಕ್ಕೆ ಬರುವುದಿಲ್ಲ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುಹಾಸ್ ಎಸ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ದುಶ್ಚಟಗಳಿಂದ ದೂರವಿದ್ದು, ಸಾಮಾಜಿಕ ಜಾಲತಾಣಗಳನ್ನು ಎಚ್ಚರಿಕೆಯಿಂದ ಬಳಸಬೇಕು ಎಂದು ಸುಹಾಸ್ ಹೇಳಿದ್ದಾರೆ. ಜ್ಞಾನದೀಪ ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಚಂದನ್ ಅಧಕ್ಷತೆ...
ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯು ಕೊಡಿಯಾಲಬೈಲಿನ ಗೌಡ ಸಮುದಾಯ ಭವನದಲ್ಲಿ ಸೆ.17 ರಂದು ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಸಿ ಜಯರಾಮ ವಹಿಸಿ ಸಂಘದ ಖರ್ಚು ವೆಚ್ಚದ ಮಾಹಿತಿಯನ್ನು ತಿಳಿಸಿದರು.ಈ ಬಾರಿ ಸಂಘವು 14,875 ಸದಸ್ಯರಿಂದ 3.63ಕೋಟಿ ಪಾಲು ಬಂಡವಾಳ ಹಾಗೂ 127.34 ಕೋಟಿ...
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲಿ ವಿಕಲಚೇತನರಿಗೆ ಮೋದಿ ಅಭಿಮಾನಿಗಳಿಂದ ಹಣ್ಣು ಹಂಪಲು ಹಾಗೂ ಸಿಹಿತಿಂಡಿ ವಿತರಣೆ ನಡೆಯಿತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿ ಸೆ.16 ರಂದು ಪೋಷಣ್ ಅಭಿಯಾನ್ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತರಕಾರಿ, ಹಣ್ಣುಗಳು, ಧಾನ್ಯಗಳು, ಸೊಪ್ಪು ತರಕಾರಿಗಳು, ಸಿರಿಧಾನ್ಯಗಳು ಮುಂತಾದುವುಗಳನ್ನು ತಂದಿದ್ದರು. ನಂತರ ಶಿಕ್ಷಕರ ನೆರವಿನಿಂದ ಅವುಗಳನ್ನು ಪ್ರೊಟೀನ್, ಕಾರ್ಬೋಹೈಡ್ರೇಟ್, ಲಿಪಿಡ್ಗಳು, ಹಾಗೂ ಖನಿಜ ಮತ್ತು ಲವಣಾಂಶಗಳೆಂದು ತರಕಾರಿಗಳನ್ನು ವಿಂಗಡಿಸಿದರು. ನಂತರ ಸಹ ಶಿಕ್ಷಕಿಯಾದ ಶ್ರೀಮತಿ ನಯನ ಕೆ...
ಕಲ್ಲುಗುಂಡಿಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್. ಎಮ್. ಎಸ್. ಎ. ಪ್ರೌಢಶಾಲೆ ಕಲ್ಲುಗುಂಡಿ ಶಾಲೆಯಲ್ಲಿ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಸಮವಸ್ತ್ರ ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಆರ್. ಎಮ್.ಎಸ್.ಎ.ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಶ್ರೀ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಾವತಿ ಡಿ.ಈ., ಶಿಕ್ಷಕರಾದ...
ಸುಳ್ಯದ ಬಹುದಿನಗಳ ಬೇಡಿಕೆಯಾಗಿದ್ದ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದೆ. ಸಚಿವ ಅಂಗಾರ ಹಾಗೂ ಇಂಧನ ಸಚಿವರಾದ ಸುನಿಲ್ ಕುಮಾರ್ ಅವರು 110 ಕೆ.ವಿ.ಸಬ್ ಸ್ಟೇಷನ್ ನಿರ್ಮಾಣದ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದರು. ಅರಣ್ಯ ಇಲಾಖೆಯ ಅಡೆ ತಡೆ ನಿವಾರಿಸಲು ಸತತ ಪ್ರಯತ್ನ ನಡೆಸಿದ್ದರು. ಇದೀಗ ಕೆಪಿಟಿಸಿಎಲ್ 110 ಕೆ.ವಿ....
ಅಚ್ರಪ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.16 ರಂದು ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ವಿವಿಧ ತರಕಾರಿಗಳು ಮತ್ತು ಸಿರಿಧಾನ್ಯಗಳನ್ನು ವೃಕ್ಷದ ರೀತಿಯಲ್ಲಿ ಅಲಂಕರಿಸಿ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಶ್ರೀಮತಿ ಶ್ವೇತ ಕಾರ್ಯಕ್ರಮದ ಮಹತ್ವ ವನ್ನು ತಿಳಿಸಿದರು. ಶಿಕ್ಷಕರಾದ ಶ್ರೀಮತಿ ಜಾನ್ಸಿ ಮತ್ತು ಕುಮಾರಿ ಪೃಥ್ವಿ ಹಾಗೂ ಅಡುಗೆ ಸಹಾಯಕರು ಉಪಸ್ಥಿತರಿದ್ದರು.
Loading posts...
All posts loaded
No more posts
