- Tuesday
- August 11th, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಯೇನೆಕಲ್ಲು ಇದರ ಆಶ್ರಯದಲ್ಲಿ 15ನೇ ವರ್ಷದ ಶ್ರೀ ಗಣೇಶೋತ್ಸವ ಆ. 31 ಮತ್ತು ಸೆ.1ರಂದು ಯೇನೆಕಲ್ಲಿನ ಬಾಲಾಡಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಿತು. ಎ. 31ರಂದು ಗಣಪತಿ ಹೋಮ, ಗಣೇಶನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಸಂಜೆ ಗಂಟೆ 6.00 ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸೆ.1ರಂದು...
ಸರ್ಕಾರಿ ಪದವಿ ಕಾಲೇಜು ಸುಳ್ಯದಲ್ಲಿ ಆ.30 ರಂದು ನಡೆದ ಶಾಲಾ ವಿದ್ಯಾರ್ಥಿಗಳ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ. ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎನ್.ಎಂ.ಪಿ.ಸಿ ಅರಂತೋಡು ಇಂದಿನ ಮುಖ್ಯ ಶಿಕ್ಷಕರಾದ ನಿವೃತ್ತ ನಿವೃತ್ತರಾಗಿ ಆಗಮಿಸಿದ ಆನಂದ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕಿ ಹಾಗೂ ಕಾರ್ಯಕ್ರಮಗಳ...
ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1996 ರಲ್ಲಿ ಖಾಯಂ ಗುಮಾಸ್ತರಾಗಿ ಕರ್ತವ್ಯಕ್ಕೆ ಸೇರಿ 2016 ರಿಂದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಬಡ್ತಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಆ.31 ರಂದು ನಿವೃತ್ತಿ ಹೊಂದಿದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಕುಜುಂಬಾರು ಅವರಿಗೆ ಆ.30 ರಂದು ಪ್ರಾ.ಕೃ.ಪ.ಸ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸುಬ್ರಹ್ಮಣ್ಯ ಐನೆಕಿದು...
ಹಾವೇರಿಯಲ್ಲಿ ನಡೆಯಲಿರುವ ಅಗ್ನಿಪಥ್ ಆಯ್ಕೆ ಶಿಬಿರದಲ್ಲಿ ಭಾಗವಹಿಸಿದ ಸುಳ್ಯ ಕ್ಷೇತ್ರದ ಅಗ್ನಿವೀರ್ ಆಕಾಂಕ್ಷಿಗಳಿಗೆ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಡನಾಡು ಜಲ ಸಾರಿಗೆ ಅಧಿಕಾರಿಗಳು ಮತ್ತು ಸುಳ್ಯ ಕ್ಷೇತ್ರದ ಶಾಸಕರಾದ ಶ್ರೀ ಎಸ್ ಅಂಗಾರರವರು ಪ್ರಯಾಣಿಸಲು ಬಸ್ಸಿನ ವ್ಯವಸ್ಥೆ ಮಾಡಿದ್ದು ಸುಳ್ಯದಿಂದ ಹಾವೇರಿಗೆ ಎರಡು ಬಸ್ಸಿನಲ್ಲಿ 105 ಯುವಕರನ್ನು ಕಳುಹಿಸುವ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭದಲ್ಲಿ...
ಸುಳ್ಯದ ಅಂಬಟೆಡ್ಕ ಗಿರಿದರ್ಶಿನಿ ಕಲಾ ಮಂದಿರದಲ್ಲಿ ಸುಳ್ಯ ಕಲ್ಲುಮುಟ್ಲು ನಿವಾಸಿ ದಿ.ಸುಬ್ಬಯ್ಯ ಮಣಿಯಾಣಿ ಯವರ ಪತ್ನಿ ಶ್ರೀಮತಿ ಪುಷ್ಪಾವತಿ ಮಣಿಯಾಣಿ ಕಲ್ಲುಮುಟ್ಲು ರವರು ಆ.19 ರಂದು ನಿಧನರಾಗಿದ್ದು ಅವರ ಉತ್ತರ ಕ್ರಿಯಾಧಿ ಸದ್ಗತಿ ಶ್ರದ್ಧಾಂಜಲಿ ಕಾರ್ಯಕ್ರಮ ಆ.30 ರಂದು ನಡೆಯಿತು.ಮೃತರ ಜೀವನಗಾಥೆಯ ಕುರಿತು ಸಾಮಾಜಿಕ ಧುರೀಣ ಲ| ಎಂ.ಬಿ.ಸದಾಶಿವ, ಹಿರಿಯ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ...
ಅರಂಬೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ 36 ನೇ ವರ್ಷದ ಶ್ರೀ ಗಣೇಶೋತ್ಸವ ವು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಬೆಳಗ್ಗೆ ಪುರೋಹಿತ ಕೃಷ್ಣ ಭಟ್ ಇಡ್ಯಡ್ಕ ಮತ್ತು ಅಭಿರಾಮ್ ಭಟ್ ಸರಳಿಕುಂಜ ರವರ ನೇತೃತ್ವದಲ್ಲಿ ಗಣಪತಿ ಹವನದೊಂದಿಗೆ ಆರಂಭಗೊಂಡಿತು. ಬಳಿಕ ಗಣಪತಿ ಮೂರ್ತಿಯ ಪ್ರತಿಷ್ಠಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಮಂದಿರದ ಗೌರವಾಧ್ಯಕ್ಷ ಬಿ.ಶ್ರೀಪತಿ...
ಹಳೆಗೇಟು ವಸಂತಕಟ್ಟೆ ವಠಾರದಲ್ಲಿ ಆ.31 ರಿಂದ ಸೆ.2 ರ ತನಕ ಸುಳ್ಯ ಹಳೆಗೇಟು ಸಾಂಸ್ಕೃತಿಕ ಸಂಘ ರಿ. ಆಶ್ರಯದಲ್ಲಿ ನಡೆಯಲಿರುವ 39 ನೇ ವರ್ಷದ ಗಣೇಶೋತ್ಸವಕ್ಕೆ ಆ.31 ಚಾಲನೆ ನೀಡಿ ಬೆಳಗ್ಗೆ ಪುರೋಹಿತ್ ನಟರಾಜ್ ಭಟ್ ರವರ ನೇತೃತ್ವದಲ್ಲಿ ಗಣಪತಿ ಹೋಮ, ಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್,...
ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕಗಳ ಸಹಯೋಗದೊಂದಿಗೆ ಆ.30 ರಂದು ಪಂಚಾಯತ್ ಸಭಾಭವನದಲ್ಲಿ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್ ರಂಗನಾಥ ರವರ ಜನ್ಮದಿನೋತ್ಸವ ಕಾರ್ಯಕ್ರಮ ನಡೆಯಿತು. ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ, ಮಕ್ಕಳು ಬಿಡಿಸಿದ ರಂಗ ರವರ...
ಪದವಿ ಪೂರ್ವ ಶಿಕ್ಷಣ ಇಲಾಖೆ.ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಸುಳ್ಯ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಆ. 29 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ, ಹಾಗೂ ಇದೆ ತಂಡದ ದೇವಿಕಾ.ಕೆ...
ಸ..ಹಿ.ಪ್ರಾ.ಶಾಲೆ ಕಲ್ಮಡ್ಕದಲ್ಲಿ ಆ. 29ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಪಂಜ ಇದರ ವತಿಯಿಂದ ನಡೆದ ಪಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕೆ.ಎಸ್.ಜಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯು ಸಮಗ್ರ ಪ್ರಶಸ್ತಿಯನ್ನು...
Loading posts...
All posts loaded
No more posts
