ಜಾಲ್ಸೂರಿನಿಂದ ಸುಳ್ಯದ ವರೆಗೆ ಸುಳ್ಯ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಸ್ವಾತಂತ್ರ್ಯ ನಡಿಗೆ

ಸುಳ್ಯ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸುಳ್ಯ ಬ್ಲಾಕ್‌ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಾಡಿಗೆ ಇಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಾಲ್ಲೂರಿನಿಂದ ಸುಳ್ಯ ತನಕ ನಡೆದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ಹಿಡಿದು, ಗಾಂಧಿ ಟೋಪಿ ಧರಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಸೇರಿದಂತೆ ಹಲವಾರು ಜೊತೆಯಾಗಿ ನಡೆದರು. ಸಂದರ್ಭದಲ್ಲಿ ಕೇಪು ಸುಂದರ ಮಾಸ್ತರ್, ಹಾಜಿ ಇಸಾಕ್...

ಸೆ.10 ಕ್ಕೆ ಮಂಡೆಕೋಲು ಪ್ರಾ.ಕೃ.ಸ‌.ಸಂಘದ ವಾರ್ಷಿಕ ಮಹಾಸಭೆ

ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆಯು ಸೆ.10ರಂದು ಅಮೃತ ಸಹಕಾರ ಸಭಾ ಭವನದಲ್ಲಿ ನಡೆಯಲಿದೆ‌. ಎಲ್ಲಾ ನಿರ್ದೇಶಕರು ಹಾಗೂ ಸರ್ವ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Ad Widget

ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೆ. ನಾರಾಯಣ ಗೌಡ ಕುಜುಂಬಾರು ನಿವೃತ್ತಿ

ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿಯಾಗಿ ಕೆ ನಾರಾಯಣ ಗೌಡ ಕುಜುಂಬಾರು ಇವರು ಆ.೩೧ ರಂದು ನಿವೃತ್ತಿಹೊಂದಲಿದ್ದಾರೆ. ಪಿ.ಯು ಓದಿ, ಜಿ ಡಿ ಸಿ ಶಿಕ್ಷಣ ಪಡೆದಿದ್ದರು. ಐನೆಕಿದು ಗ್ರಾಮದ ಕುಜುಂಬಾರು ಮನೆತನದವರು. ದಿ.ಅಪ್ಪಯ್ಯ ಗೌಡ ಮತ್ತು ಶ್ರೀಮತಿ ದೇವಮ್ಮ ದಂಪತಿಗಳ ಪುತ್ರ.1995ರಲ್ಲಿ ಕರ್ತವ್ಯಕ್ಕೆ ಸೇರಿದ ಇವರು ಒಂದು...

ಬೆಳ್ಳಾರೆ: ಮುಖ್ಯ ರಸ್ತೆಯಲ್ಲಿ ಬೆಳ್ಳಾರೆ ಪೊಲೀಸರಿಂದ ಪಥಸಂಚಲನ

ಶ್ರೀ ಗಣೇಶೋತ್ಸವ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಆ.29 ರಂದು ಬೆಳ್ಳಾರೆ ಪೊಲೀಸರಿಂದ ಬೆಳ್ಳಾರೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಯಿತು. ಬೆಳ್ಳಾರೆ ಪೊಲೀಸು ಠಾಣೆಯಿಂದ ಮಾಸ್ತಿಕಟ್ಟೆಯವರೆಗೆ ಅಲ್ಲಿಂದ ಕೆಳಗಿನ ಪೇಟೆ ದೇವಸ್ಥಾನದವರೆಗೆ ಡಿವೈಎಸ್ಪಿ ವೀರಯ್ಯ ಹಿರೇಮಠ್, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನವೀನಚಂದ್ರ ಜೋಗಿ, ಬೆಳ್ಳಾರೆ ಎಸ್.ಐ.ಸುಹಾಸ್ ನೇತೃತ್ವದಲ್ಲಿ ಪಥಸಂಚಲನ ನಡೆಸಿದರು.ಬೆಳ್ಳಾರೆ ಕರ್ನಾಟಕ ಪಬ್ಲಿಕ್...

ಬೆಳ್ಳಾರೆ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಡಿಗೆ ಪೂರ್ವ ಭಾವಿ ಸಭೆ

ಬೆಳ್ಳಾರೆ ಕಲ್ಪವೃಕ್ಷ ಆರ್ಕೇಡ್ ನಲ್ಲಿ ಆ. 30 ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಡಿಗೆ ಪೂರ್ವ ಭಾವಿ ಸಭೆ ನಡೆಯಿತು.ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ ವಹಿಸಿದ್ದರು. ಈ ಸಂದರ್ಭದಲ್ಲಿ ಭರತ್ ಮುಂಡೋಡಿ , ಕೆಪಿಸಿಸಿ ಸಂಯೋಜಕರಾದ ವೆಂಕಪ್ಪ ಗೌಡ ಹಾಗೂ ಕೃಷ್ಣಪ್ಪ ಮಾತಾನಾಡಿದರು. ಕೆಪಿಸಿಸಿ ಸಂಯೋಜಕ ಪ್ರದೀಪ್ ರೈ ಪಾಂಬಾರು,...

ಸುಳ್ಯ : ಶ್ರೀನಿಧಿ ಕ್ಲಿನಿಕ್ ಶುಭಾರಂಭ

ಸುಳ್ಯ ಗಾಂಧಿನಗರದ ಪಿ.ಕೆ .ಕಾಂಪ್ಲೆಕ್ಸ್ ನಲ್ಲಿ ಡಾ.ಶ್ರೀನಿಧಿ ಮೇಲಡ್ತಲೆ ಯವರ ನೂತನ ಆಯುರ್ವೇದ ಶ್ರೀನಿಧಿ ಕ್ಲಿನಿಕ್ ಆ.29 ರಂದು ಶುಭಾರಂಭಗೊಂಡಿತು. ಹಿರಿಯರಾದ ಶ್ರೀಮತಿ ವೆಂಕಮ್ಮ ಮೇಲಡ್ತಲೆ ಮತ್ತು ಶಿವಣ್ಣ ಗೌಡ ರವರು ದೀಪ ಬೆಳಗಿಸಿದರು.ಈ ಸಂದರ್ಭದಲ್ಲಿ ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ವ್ಯ.ಸ.ಅಧ್ಯಕ್ಷ ಉಮೇಶ್ ಪಿ.ಕೆ, ಸ್ಥಳೀಯ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್,...

ಪೆರುವಾಜೆ ದೇವಸ್ಥಾನದಲ್ಲಿ ತೆನೆ ಮುಹೂರ್ತ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ತೆನೆ ಮುಹೂರ್ತವು ಆ.30 ರಂದು ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಮತ್ತು ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

ಪೇರಾಲುಮೂಲೆ ಅಣ್ಣಪ್ಪ ಗೌಡ ನಿಧನ

ಮಂಡೆಕೋಲು ಗ್ರಾಮದ ಪೇರಾಲುಮೂಲೆ ಅಣ್ಣಪ್ಪ ಗೌಡರು(76) ಅಲ್ಪಕಾಲದ ಅಸೌಖ್ಯದಿಂದ ಆ. 30ರಂದು ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ ಲಲಿತಾಪುತ್ರ ಮನೋಜ್ ಕುಮಾರ್, ಸೊಸೆ ರೇಷ್ಮಾ, ಪುತ್ರಿಯರಾದ ವೀಣಾ ಹೊನ್ನಪ್ಪ, ವಾಣಿ ಸತೀಶ್, ಗೀತಾ ಅಮರನಾಥ್ ಮೊಮ್ಮಕ್ಕಳು, ಅಳಿಯಂದಿರು, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅವರು ಪೇರಾಲು ಬಜಪ್ಪಿಲ ಉಳ್ಳಾಕುಲು ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಹಲವು ಧಾರ್ಮಿಕ...

ಎಣ್ಮೂರು : ಕಲ್ಲೇರಿ ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್‌ ನ ಪದಾಧಿಕಾರಿಗಳ ಆಯ್ಕೆ

ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ಕಲ್ಲೇರಿ - ಎಣ್ಮೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಆ.28 ರಂದು ನಡೆಯಿತು. ಗಣೇಶ್ ಫ್ರೆಂಡ್ಸ್ ಸರ್ಕಲ್ ನ ನೂತನ ಅಧ್ಯಕ್ಷರಾಗಿ ಪ್ರಕಾಶ್ ರೈ ಕುಳಾಯಿತೋಡಿ, ಉಪಾಧ್ಯಕ್ಷರಾಗಿ ಹರೀಶ್ ರೈ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಗಳಾಗಿ ಸುರೇಶ್ ರೈ ಚಾಮೇತಡ್ಕ ಜತೆ ಕಾರ್ಯದರ್ಶಿಗಳಾಗಿ ಹರ್ಷಿತ್ ಶೃಂಗೇರಿ, ಹಾಗೂ ಕೋಶಾಧಿಕಾರಿಯಾಗಿ ಹರಿಪ್ರಸಾದ್ ರೈ...

ಮೊಸರು ಕುಡಿಕೆ ಸ್ಪರ್ಧೆಯಲ್ಲಿ ಉಬರಡ್ಕದ ಹಿಂಜಾವೇ ಪ್ರಥಮ – ಬಹುಮಾನದ ಮೊತ್ತವನ್ನು ಕ್ಯಾನ್ಸರ್ ಪೀಡಿತ ಬಾಲಕಿಯ ಚಿಕಿತ್ಸೆಗೆ ನೀಡಿದ ತಂಡ

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ನಡೆದ 9ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಹಿಂದು ಜಾಗರಣ ವೇದಿಕೆ, ಉಬರಡ್ಕ ತಂಡವು ಪ್ರಥಮ ಸ್ಥಾನ ಪಡೆದಿದ್ದು ಬಹುಮಾನದ ಮೊತ್ತವನ್ನು ನೆರವು ನೀಡುವ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದು ಜನರ ಮೆಚ್ಚಗೆಗೆ ಪಾತ್ರವಾಗಿದೆ. ಗುತ್ತಿಗಾರಿನ ವಿಶ್ವನಾಥ್ ಹೇಮಾವತಿ ದಂಪತಿಗಳ...
Loading posts...

All posts loaded

No more posts

error: Content is protected !!