ಆ.30 ರಂದು ಸ್ವಾತಂತ್ರ್ಯದ ಅಮೃತಮಹೋತ್ಸವ ಪ್ರಯುಕ್ತ ಜಾಲ್ಸೂರಿನಿಂದ ಸುಳ್ಯದವರೆಗೆ ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮ

ಸುಳ್ಯ: ಸ್ವಾತಂತ್ರ್ಯದ ಅಮೃತಮಹೋತ್ಸವ ಪ್ರಯುಕ್ತ ರಾಜ್ಯಾದ್ಯಂತ ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯದ ನಡಿಗೆ ಕಾರ್ಯಕ್ರಮದ ಕುರಿತು ಆ.27ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮರವರಿಂದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು. ಗೋಷ್ಠಿಯಲ್ಲಿ ಮಾತನಾಡಿದ ಅವರು ಆ.30 ರಂದು 75ರ ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗಾಗಿ ಜಾಲ್ಸೂರಿನಿಂದ ಸುಳ್ಯದವರೆಗೆ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ...

ಏನೆಕಲ್ಲು: ಶ್ರೀ ಕ್ಷೇ. ಧ. ಗ್ರಾ. ಯೋಜನೆ ಪಂಜ ಸುಬ್ರಹ್ಮಣ್ಯ ವಲಯದ ಪದಗ್ರಹಣ ಕಾರ್ಯಕ್ರಮ.

ಏನೆಕಲ್ಲು : ಬಾಲಾಡಿ ಶ್ರೀ ಆದಿಶಕ್ತಿ ಭಜನಾ ಮಂದಿರದ ಸಭಾಭವನದಲ್ಲಿ ಆ. 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಂಜ ಸುಬ್ರಹ್ಮಣ್ಯ ವಲಯದ ಏನೆಕಲ್ಲು, ಸುಬ್ರಹ್ಮಣ್ಯ, ದೇವರಹಳ್ಳಿ, ಕುಲ್ಕುಂದ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.ಕಾರ್ಯಕ್ರಮವನ್ನು ಶ್ರೀ ಆದಿಶಕ್ತಿ ಭಜನಾ ಮಂದಿರದ ಅಧ್ಯಕ್ಷ ಗಿರಿಯಪ್ಪ ಗೌಡ ಬಾಲಾಡಿ ಉದ್ಘಾಟಿಸಿದರು. ನೂತನ...
Ad Widget

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಎನ್ ಎಸ್ ಎಸ್ ಘಟಕದ ಒಂದು ದಿನದ ಶಿಬಿರ

ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆ.25ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಒಂದು ದಿನದ ಶಿಬಿರ ನಡೆಯಿತು. ಈ ಶಿಬಿರದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿ ರಂಜನ್, ಕೆ.ಎನ್, ಉಪನ್ಯಾಸಕರುಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು ಭಾಗವಹಿಸಿದರು.

ಉಜಿರಡ್ಕ :- ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ದೈವದ ಹರಕೆ ನರ್ತನ ಸೇವೆ

ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಉಜಿರಡ್ಕದಲ್ಲಿ ಆ.27 ರಂದು ಸಂಜೆ ಕೊರಗಜ್ಜ ದೈವದ ಹರಕೆ ನರ್ತನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಹರಕೆ ನರ್ತನ ಸೇವೆ ಕುಟುಂಬಸ್ಥರು ಹಾಗೂ ಊರ ಪರವೂರ ಭಕ್ತಾದಿಗಳು ಮತ್ತು ಚಲನಚಿತ್ರ ನಟರು ಉಪಸ್ಥಿತರಿದ್ದು ದೈವದ ಗಂಧ ಪ್ರಸಾದ ಸ್ವೀಕರಿಸಿದರು. ನಂತರ ಅನ್ನಸಂತರ್ಪಣೆ ನಡೆಯಿತು. ವರದಿ :- ಉಲ್ಲಾಸ್ ಕಜ್ಜೋಡಿ

ಡಿ.ಸಿ.ಸಿ ಬ್ಯಾಂಕಿನಿಂದ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕಿನಿಂದ 2021-22ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷ ವಸಂತ ಹುದೇರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್ ಪ್ರಶಸ್ತಿ ಸ್ವೀಕರಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೂಟ್ಟು, ಸಹಕಾರಿ...

ಕಾಯರ್ತೋಡಿ ಶ್ರೀನಿಧಿ ಮಹಿಳಾ ಮಂಡಲದ ಮಹಾಸಭೆ-ಅಧ್ಯಕ್ಷರಾಗಿ ಶೃತಿ ಮಂಜುನಾಥ, ಕಾರ್ಯದರ್ಶಿ ವನಿತಾ

ಕಾಯರ್ತೋಡಿ ಶ್ರೀನಿಧಿ ಮಹಿಳಾ ಮಂಡಲದ ಮಹಾಸಭೆ ಆ. 20 ರಂದು ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷೆ ಮಹಿಳಾ ಮಂಡಲದ ಅಧ್ಯಕ್ಷೆ ಹೇಮ ವೇಣುಗೋಪಾಲ್ ರಕಾಯರ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಹೇಮ್ ವೇಣುಗೋಪಾಲ್, ಅಧ್ಯಕ್ಷರಾಗಿ ಶೃತಿ ಮಂಜುನಾಥ, ಕಾರ್ಯದರ್ಶಿಯಾಗಿ ವನಿತಾ ಸಂತೋಷ್, ಕೋಶಾಧಿಕಾರಿಯಾಗಿ ಲತಾ ರಾಧಾಕೃಷ್ಣ...

ಐವರ್ನಾಡು: ವಿಕಲಚೇತನರ ಸಂಜೀವಿನಿ ಸಂಘಗಳ ಉದ್ಘಾಟನೆ

ಐವರ್ನಾಡು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಆ.22 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ವಿಕಲಚೇತನರ ಸಂಜೀವಿನಿ ಸಂಘಗಳ ಉದ್ಘಾಟನೆಯನ್ನು ಸಮಗ್ರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸಭಾಧ್ಯಕ್ಷರಾದ ಶ್ರೀಮತಿ ರೇವತಿ ಬೋಳುಗುಡ್ಡೆ ದೀಪ ಬೆಳಗಿಸಿ ಸಂಘ ಉದ್ಘಾಟನೆ ಮಾಡಿದರು. ಸುಳ್ಯ ತಾಲೂಕು ಸಂಜೀವಿನಿ ಸಂಘಗಳ ಮೇಲ್ವಿಚಾರಕ ಮಹೇಶ್ ಸಂಜೀವಿನಿ ಸಂಘದ ಮಹತ್ವದ ಬಗ್ಗೆ...

ಬಿ.ಎಂ.ಟಿ.ಸಿ ಅಪಘಾತ ರಹಿತ ಚಾಲಕ ಗೂನಡ್ಕದ ಎಂ.ಎ. ಬಾಷರಿಗೆ ಬೆಳ್ಳಿ ಪದಕ

ಹಲವಾರು ವರ್ಷಗಳಿಂದ ಬೆಂಗಳೂರಿನ ಪ್ರಮುಖ ಸಾರಿಗೆ ಸಂಸ್ಥೆಯಾಗಿರುವ ಬಿಎಂಟಿಸಿ ಅಪಘಾತ ರಹಿತ ಚಾಲಕರನ್ನು ಗುರುತಿಸಿ ಗೌರವಿಸಿದೆ. ಬೆಂಗಳೂರಿನಲ್ಲಿ ಇವರು ಬಸ್ ಚಾಲಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ವೃತ್ತಿ ಜೀವನದಲ್ಲಿ ಯಾವುದೇ ಅಪಘಾತಗಳಿಗೆ ಆಸ್ಪದ ನೀಡದೆ ಸುರಕ್ಷಿತವಾಗಿ ಬಸ್ ಚಾಲನೆಯನ್ನು ನಿರ್ವಹಿಸಿದಕ್ಕೆ ಬಿ.ಎಂ.ಟಿ.ಸಿ. ಅಪಘಾತ ರಹಿತ ಚಾಲಕರೆಂದು ಗುರುತಿಸಿ ಗೂನಡ್ಕದ ಎಂ.ಎ.ಬಾಷ ರವರಿಗೆ ಬೆಳ್ಳಿ ಪದಕ ನೀಡಿ...

ಗುತ್ತಿಗಾರು : ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಮಹಾಸಭೆ – ಅಧ್ಯಕ್ಷ ಅಚ್ಚುತ ಗುತ್ತಿಗಾರು, ಕಾರ್ಯದರ್ಶಿ ಲೋಹಿತ್ ಚೈಪೆ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಆ.28 ರಂದು ನಡೆಯಿತು. ಅಧ್ಯಕ್ಷರಾಗಿ ಅಚ್ಚುತ ಗುತ್ತಿಗಾರು, ಪ್ರಧಾನ ಕಾರ್ಯದರ್ಶಿ ಲೋಹಿತ್ ಚೈಪೆ, ಗೌರವಾಧ್ಯಕ್ಷರಾಗಿ ಮಾಧವ ಎರ್ದಡ್ಕ, ಉಪಾಧ್ಯಕ್ಷರಾಗಿ ಸಚಿನ್ ಮೊಟ್ಟೆ, ಜತೆ ಕಾರ್ಯದರ್ಶಿ ಜಯಪ್ರಕಾಶ್ ಬಾಕಿಲ, ಕೋಶಾಧಿಕಾರಿಯಾಗಿ. ವಿನ್ಯಾಸ್ ಕೊಚ್ಚಿ ಆಯ್ಕೆಯಾಗಿದ್ದಾರೆ. .

ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಚೆಕ್ ವಿತರಿಸಿದ ಸಚಿವ ಅಂಗಾರ

ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಾಕೃತಿಕ ವಿಕೋಪ ಯೋಜನೆಯಡಿ ಹೊಸ ಮನೆ ನಿರ್ಮಾಣ ಮಾಡಲು ಸರಕಾರದಿಂದ ಒದಗಿಸಲಾಗುವ ರೂ.5 ಲಕ್ಷ ಮೊತ್ತದ ಪರಿಹಾರ ಧನದ ಮೊದಲ ಹಂತದ ರೂ.95,100 ಮೊತ್ತದ ಚೆಕ್ ನ್ನು 7 ಜನ ಫಲಾನುಭವಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು...
Loading posts...

All posts loaded

No more posts

error: Content is protected !!