- Tuesday
- August 11th, 2026
ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಮೀನು ಮಂಜೂರಾತಿಗೆ ತಹಶೀಲ್ದಾರ ಸುಳ್ಯ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಪೈಕ ಪ್ರಧಾನ ಕಾರ್ಯದರ್ಶಿ ರಂಜಿತ್ ಕೇರ್ಪಳ ಹಿಂದೂ ಜಾಗರಣಾ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ...
ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾಕೂಟ 2022 ರ ಯೋಗಾಸನದಲ್ಲಿ ಸಬ್ ಜೂನಿಯರ್ ಸ್ಫರ್ಡೆಯಲ್ಲಿ ಸುಳ್ಯದ ಅವನಿ ಎಂಎಸ್ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮೊಂಟಡ್ಕ ಶಶಿಧರ ಎಂ.ಜೆ ಮತ್ತು ರೇಷ್ಮಾ ದಂಪತಿಗಳ ಪುತ್ರಿ. ಪ್ರಸ್ತುತ ಸುಳ್ಯು ಸೈಂಟ್ ಜೋಸೆಫ್ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಮೊದಲು ಇವರು...
ಸುಳ್ಯದ ಬಾಳೆಮಕ್ಕಿಯ ಪ್ರಭು ಕಂಪೌಂಡ್ನಲ್ಲಿ ಕಾಯರ್ತೋಡಿಯ ರಘುನಾಥ ರೈಯವರ ಮಾಲಕತ್ವದ ಶ್ರೀ ಮಾತಾ ತರಕಾರಿ ಅಂಗಡಿ ಮತ್ತು ಫ್ರುಟ್ಸ್ ಸೆಂಟರ್ ಶುಭಾರಂಭಗೊಂಡಿದೆ.
ಗಾಂಧಿನಗರದ ಜನತಾ ಕಾಲೋನಿಯಲ್ಲಿ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಎನ್.ಎಸ್.ಎಸ್., ಯೂತ್ ರೆಡ್ ಕ್ರಾಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು, ದ.ಕ. ಸುಳ್ಯ ಐ.ಐ.ಸಿ. ವಿಭಾಗದ ವತಿಯಿಂದ ಆರೋಗ್ಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರಮಿಳಾ, ಬಿ.ಹೆಚ್.ಇ.ಒ. ಸುಳ್ಯ ಇವರು ತುಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯಿಂದ ಇವರು ಮಾತನಾಡಿ ದೂಮಪಾನ ಹಾಗೂ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ ಹಾಗೂ ಪಕ್ಷದ ಪ್ರಮುಖರ ಸಭೆ ಇಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜೀಪಿಲಿ ಪ್ರಸಕ್ತ ಚುನಾವಣಾ ವರ್ಷದಲ್ಲಿ ಪಕ್ಷದ ಕಾರ್ಯವೈಖರಿಯ ಬಗ್ಗೆ ಮಾರ್ಗದರ್ಶನ ನೀಡಿದರು ಹಾಗೂ ಸಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ...
ಸ್ಪಂದನ ಗೆಳೆಯಯರ ಬಳಗ ಅಡ್ತಲೆ ಇದರ 4ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮ ಆ. 21ರಂದು ಅಡ್ತಲೆಯ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲಾ ವಠಾರ ದಲ್ಲಿ ನಡೆಯಿತು. ಬೆಳಿಗ್ಗೆ ಕಾರ್ಯಕ್ರಮವನ್ನು ಸ್ಪಂದನ ಗೆಳೆಯಯರ ಬಳಗದ ಗೌರವ ಸಲಹೆಗಾರಾದ ಶ್ರೀ ಭವಾನಿಶಂಕರ ಅಡ್ತಲೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಆರಂತೋಡು...
ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಿರಣರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು, ಕಲಾಮಾಯೆ(ರಿ.) ಏನೆಕಲ್ ಇವರ ವತಿಯಿಂದ ಆ.21 ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಅಮೃತ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಬಹುಭಾಷಾ ಕವಿಗೋಷ್ಠಿ, ಬಹುಭಾಷಾ ಕಥಾಗೋಷ್ಠಿ, ಅರೆಭಾಷೆ ಪದ್ಯಗಳ ಬುತ್ತಿ “ಗಮ್ಮತ್” ಪುಸ್ತಕ ಬಿಡುಗಡೆ, ಕಿರಣ ಗೌರವ ಸನ್ಮಾನ, ಜಲಶ್ರೀ ಪ್ರತಿಷ್ಠಾನ ಕಡ್ಲಾರು ಸಂಸ್ಥೆಯ ಲೋಗೋ ಬಿಡುಗಡೆ,...
ಎನ್ ಎಂ ಸಿ ಯಲ್ಲಿ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ 2K22 ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದಿಂದ ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಫೆಸ್ಟ್ 2K22 ನ್ನು ಆ. 22ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ವಿವಿಧ ಕಾಲೇಜಿನ ಬಿ ಬಿ ಎ ಮತ್ತು ಬಿ ಕಾಂ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಒಂಬತ್ತು ತಂಡಗಳು ಭಾಗವಹಿಸಿ ಹಣಕಾಸು, ಮಾರುಕಟ್ಟೆ,...
ಆ.22 ರಂದು ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಶ್ರೀ ಡಾ ಮಂಜುನಾಥ ರೇವಣಕರ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸುಬ್ರಾಯ ಭಟ್ ಅವರು ಕಳೆದ ೨೫ ವರುಷ ಗಳಿಂದ ಹೊಸಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುರಕ್ಷಾ ದಂತ ಚಿಕಿತ್ಸಾಲಯಕ್ಕೆ ಬೇಟಿ ನೀಡಿದರು. ಇದೇ ಸಂದರ್ಭದಲ್ಲಿ ಗಡಿನಾಡು...
ಸೇವಾಜೆಯ ಶ್ರೀ ಕೃಷ್ಣ ಸಾಂಸ್ಕೃತಿಕ ಸೇವಾ ಸಮಿತಿ ಮತ್ತು ಊರ ಭಕ್ತಾಭಿಮಾನಿಗಳ ಸಹಯೋಗದೊಂದಿಗೆ ೧೭ ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸೇವಾಜೆ ಶಾಲಾ ವಠಾರದಲ್ಲಿ ಆ.21 ಅದ್ದೂರಿಯಾಗಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಪ್ರಗತಿಪರ ಕೃಷಿಕರಾದ ಚಿನ್ನಪ್ಪ ಗೌಡ ಶೆಟ್ಟಿಮಜಲು ಇವರು ದೀಪ ಬೆಳಗಿಸುವ ಮೂಲಕ ನೆರವೆರಿಸಿದರು.ಬಳಿಕ ಅಂಗನವಾಡಿ ಮಕ್ಕಳಿಗೆ ಮುದ್ದುಕೃಷ್ಣ ವೇಷ ಹಾಗೂ ಶಾಲಾ...
Loading posts...
All posts loaded
No more posts
