ಸರಕಾರಿ ಪ್ರೌಢಶಾಲೆ ಎಣ್ಮೂರು: ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯ ಉದ್ಘಾಟನೆ

ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ SDMC ಕಾರ್ಯಾಧ್ಯಕ್ಷ ಶ್ರೀ ಪದ್ಮನಾಭ ಗೌಡ ಪೂದೆ ಧ್ವಜಾರೋಹಣ ನೆರವೇರಿಸಿದರು. ದಕ ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ನೀಡಲಾದ ಬಾಲಕರ ನೂತನ ಶೌಚಾಲಯವನ್ನು ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರಿ ಜಾನಕಿ ಮುರುಳ್ಯ ಉದ್ಘಾಟಿಸಿ, ವಿದ್ಯಾರ್ಥಿಗಳು ದೇಶಭಕ್ತಿಯನ್ನು ಮೈಗೂಡಿಸಿಕೊಂಡು ದೇಶ ಸೇವೆ ಮಾಡಲು...

ಆ.29: ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನಾಚರಣೆ

ಆ.29ರಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನಾಚರಣೆ ನಡೆಯಲಿದೆ.‌ ಇದರ ಅಂಗವಾಗಿ ಆ.16 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು.ಈ ಸಂದರ್ಭದಲ್ಲಿ ಸುಳ್ಯದ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ಕಾರ್ಯಕ್ರಮದ ಮಾಹಿತಿಯನ್ನು ತಿಳಿಸಿದರು....
Ad Widget

ಸುಬ್ರಹ್ಮಣ್ಯ :- ಹಾಲುತ್ಪಾದಕರ ಮಹಿಳಾ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆ

ಹಾಲುತ್ಪಾದಕರ ಮಹಿಳಾ ಸಹಕಾರಿ ಸಂಘ(ನಿ.) ಸುಬ್ರಹ್ಮಣ್ಯ ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.16 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಶೋಭಾ ನಲ್ಲೂರಾಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗತ ವರ್ಷದಲ್ಲಿ ಸಂಘವು 2,08,002.72 ರೂ ನಿವ್ವಳ ಲಾಭವನ್ನು ಪಡೆದಿರುತ್ತದೆ. ಪ್ರತೀ ಹಾಲುತ್ಪಾದಕರಿಗೆ ಲೀಟರ್ ಗೆ 1.32 ಪೈಸೆ ಬೋನಸ್ ಕೊಡುವುದೆಂದು...

ಎಲಿಮಲೆ: ಸರಕಾರೀ ಪ್ರೌಡಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

75ನೇ ಸ್ವಾತಂತ್ರ್ಯೋತ್ಸವವನ್ನು ಸರಕಾರೀ ಪ್ರೌಡಶಾಲೆ ಎಲಿಮಲೆಯಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಯಿತು. ಎಸ್. ಡಿ. ಎಂ. ಸಿ. ಕಾರ್ಯಾಧ್ಯಕ್ಷರಾದ ಶ್ರೀಯುತ ಜಯಂತ ಹರ್ಲಡ್ಕರವರು ಧ್ವಜಾರೋಹಣವನ್ನು ನೆರವೇರಿಸಿದರು.. ಶಾಲಾ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ತಿರುಮಲೇಶ್ವರಿಯವರು ಸಹಕರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷರಾದ ಜಯಂತ ಹರ್ಲಡ್ಕರವರು ಕೇಂದ್ರ ಸರ್ಕಾರದ ನೂತನ ಯೋಜನೆ ಹರ್ ಘರ್ ತಿರಂಗಾದ ಬಗ್ಗೆ...

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಜಪಾನಿನ ಆಯುರ್ವೇದ ಸಂಸ್ಥೆಯ ನಿರ್ದೇಶಕರಿಂದ ಉಪನ್ಯಾಸ

ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಆ. 15 ರಂದು ಜಪಾನಿನ ಪ್ರತಿಷ್ಠಿತ ಆಯುರ್ವೇದ ಸಂಸ್ಥೆಯ ನಿರ್ದೇಶಕರಾದ ಪ್ರೊ.ಡಾ. ಯು. ಕೆ. ಕೃಷ್ಣ ಇವರಿಂದ "ಆಯುರ್ವೇದದಲ್ಲಿ ಅಗ್ನಿಯ ಮಹತ್ವ ಮತ್ತು ಆರೋಗ್ಯ ಕಾಪಾಡುವಲ್ಲಿ ಅದರ ಪರಿಣಾಮ” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ...

ಮಸೀದಿಗಳಲ್ಲಿ ಕೋಮುವಾದಕ್ಕೆ ಯಾವುದೇ ರೀತಿಯ ಸಹಕಾರ ಇಲ್ಲ – ಟಿ.ಎಂ.ಶಹೀದ್

ಇಂದಿನ ಯುವ ಜನತೆ ಕೋಮುಗಲಭೆಗೆ ತುತ್ತಾಗುತ್ತಿರುವ ವಿಷಯವಾಗಿ ತೆಕ್ಕಿಲ್ ಪ್ರತಿಷ್ಠಾನದ ಟಿ.ಎಂ.ಶಹೀದ್ ಅವರಿಂದ ಆ.16ರಂದು ಪತ್ರಿಕಾಗೋಷ್ಟಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸುಳ್ಯದಲ್ಲಿ ಎರಡು ಹತ್ಯೆ ಮಾಡಿದ್ದು ದೊಡ್ಡ ನಷ್ಟ ಉಂಟಾಗಿದೆ ಈ ನಷ್ಟವನ್ನು ಯಾವ ಸಂಘಟನೆಗಳು ಭರ್ತಿ ಮಾಡಲು ಸಾಧ್ಯವಿಲ್ಲ. ಮುಖ್ಯವಾಗಿ ಯುವಕರು ಜೀವ ತೆಗೆಯುವ ಮಟ್ಟಕ್ಕೆ ಹೋಗುವುದು ಒಳ್ಳೆ ಲಕ್ಷಣ ಅಲ್ಲ....

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಧ್ವಜಾರೋಹಣ

ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ ಅಮೃತ ಮಹೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಕೂಸಪ್ಪಗೌಡ ಮುಗುಪ್ಪು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರು ಮತ್ತು ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ ನಾಯಕ್ ಮತ್ತು ಸಿಬ್ಬಂದಿಗಳು , ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಕಿಲಂಗೋಡಿ, ಸದಸ್ಯರು ಮತ್ತು ಸಿಬ್ಬಂದಿ...

ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಆಚರಣೆ

ಕೆವಿಜಿ ಐಪಿಎಸ್, ಕೆವಿಜಿ ಐಟಿಐ ಮತ್ತು ಕೆವಿಜಿ ಅಮರಜ್ಯೋತಿ ಪಿಯು ಕಾಲೇಜು ಜಂಟಿಯಾಗಿ ಅ.15 ರಂದು ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು . ಕೆವಿಜಿ ಐಟಿಐ ಸಿಬ್ಬಂದಿ ಭವಾನಿ ಶಂಕರ್ ಅಡ್ತಲೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ನಿವೃತ್ತ ಸೈನಿಕ ಸಂಘ ಸುಳ್ಯ ಇದರ ಉಪಾಧ್ಯಕ್ಷ ಮಾಧವ ಬಿ....

ಗುತ್ತಿಗಾರು : ಎಸ್.ಬಿ‌.ಗ್ರೂಪ್ಸ್ ವತಿಯಿಂದ ದೈವನರ್ತಕ ವಾಸು ಪರವ ಅವರಿಗೆ ಗೌರವಾರ್ಪಣೆ

ಎಸ್.ಬಿ ಗ್ರೂಪ್ಸ್ ವತಿಯಿಂದ ಅರ್ಪಿತ್ ಕೋಲ್ಚಾರು ಸ್ಮರಣಾರ್ಥ ಎರಡನೇ ವರ್ಷದ ಅರ್ಪಿತ ಬಿಂದು ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಈ ಬಾರಿ ಕಂದ್ರಪ್ಪಾಡಿಯ ದೈವರಾಧಕ ವಾಸು ಪರವ ಅವರಿಗೆ ದೈವರಾಧನೆಯ ಮೂಲ ಕಟ್ಟು ಕಟ್ಟಲೆಯಲ್ಲಿ ಆರಾಧನಾ ವಿಚಾರವಾಗಿ ಗೌರವ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಯುವತೇಜಸ್ಸು ಸಂಸ್ಥೆಯ ಆಶಿತ್ ಕಲ್ಲಾಜೆ, ಸದಸ್ಯರಾದ ಉಜ್ವಲ್ ಚಿದ್ಗಲ್ಲು, ಜನಾರ್ಧನ...

ಗುತ್ತಿಗಾರು : ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ – ಮಹಿಳಾ ಸಾಧಕಿಯರಿಗೆ ಸನ್ಮಾನ.

ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ ಆ. 15 ರಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇವತಿ ಆಚಳ್ಳಿ ಧ್ವಜಾರೋಹಣ ನೆರವೇರಿಸಿದರು. ತದನಂತರ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ಗ್ರಾಮದ ಮಾತಾ ಭಗಿನಿಯರು ಜಯಘೋಷಗಳೊಂದಿಗೆ ವಿವಿಧ ವೇಷಭೂಷಣಗಳಲ್ಲಿ ಟಾಬ್ಲೊ ಹಾಗೂ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ನೊಂದಿಗೆ ಗ್ರಾಮ ಪಂಚಾಯತ್...
Loading posts...

All posts loaded

No more posts

error: Content is protected !!