- Tuesday
- August 11th, 2026
ಗುತ್ತಿಗಾರು ಗ್ರಾಮದ ಅಡ್ಡನಪಾರೆ ಭವಾನಿಶಂಕರ ರವರ ಮನೆಯ ಸಮೀಪ ಕಂಡು ಬಂದ ಕಾಳಿಂಗ ಸರ್ಪವನ್ನು ಹಿಡಿದು ಬಳ್ಪ ರಕ್ಷಿತಾರಣ್ಯಕ್ಕೆ ಬಿಡಲಾಯಿತು. ಉರಗ ಪ್ರೇಮಿ ಕರುಣಾಕರ ಮೆಟ್ಟಿನಡ್ಕ ಹಾವನ್ನು ಯಶಸ್ವಿಯಾಗಿ ಹಿಡಿದು ಕಾಡಿಗೆ ಬಿಟ್ಟರು.
ಮನದಲ್ಲಿ ಛಲವಿತ್ತು, ಹೊಸತನದ ಹುರುಪಿತ್ತು, ಬದುಕಿನಲ್ಲಿ ಗೆಲ್ಲುವ ಆಕಾಂಕ್ಷೆ ಮೊದಲೇ ಇತ್ತು…ಪ್ರತಿಬಾರಿ ಸೋತಾಗಲೂ ಮತ್ತೊಮ್ಮೆ ಗೆಲ್ಲುವ ನಿರೀಕ್ಷೆ ಇತ್ತು, ಸೋಲನ್ನು ಸೋಲಿಸುವ ಹಂಬಲವಿತ್ತು…ಬದುಕಿನಲ್ಲಿ ಸೋತಾಗ ಬರುವ ಕಣ್ಣೀರು ಮನವ ಕುಗ್ಗಿಸುತ್ತಿತ್ತು, ಆತ್ಮವಿಶ್ವಾಸವ ತಗ್ಗಿಸುತ್ತಿತ್ತು, ಆದರೂ ಮತ್ತೊಮ್ಮೆ ಗೆದ್ದೇ ಗೆಲ್ಲುವೆ ಎನ್ನುವ ಛಲವು ಮನವ ಬಡಿದೆಬ್ಬಿಸುತ್ತಿತ್ತು…ಜೀವನದಲ್ಲಿ ಗೆಲುವು ಸಿಗಲಿಲ್ಲ ಎಂಬ ಹತಾಶೆ ಮನವ ಕಾಡುತ್ತಿತ್ತು, ಮತ್ತೊಂದೆಡೆ ಪ್ರತೀ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ಬಾಳುಗೋಡು ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ.26 ರಂದು ದ.ಕ.ಜಿ.ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡು ಇಲ್ಲಿ ನಡೆಯಿತು.ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕರಾದ ಧನಂಜಯ.ಬಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕೆ.ವಿ.ಜಿ ಪವರ್ ಹೌಸ್ ಕಾರ್ಯನಿರ್ವಹಣಾಧಿಕಾರಿ ವಸಂತ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ದ.ಕ.ಜಿ.ಹಿರಿಯ...
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೂ.27 ರಂದು ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಭೇಟಿ ನೀಡಿದರು. ಠಾಣೆಯ ವತಿಯಿಂದ ಗೃಹ ಸಚಿವರಿಗೆ ಗೌರವ ವಂದನೆ ಸಲ್ಲಿಸಲಾಯಿತು.ಸುಬ್ರಹ್ಮಣ್ಯ ಠಾಣೆಗೆ ಟರ್ಪಾಲು ಹೊದಿಸಿರುವ ಬಗ್ಗೆ ಮಾಧ್ಯಮ ವರದಿಯನ್ನರಿತು, ಠಾಣೆಯ ಕಟ್ಟಡ ಪರಿಶೀಲಿಸಿ ಮಾತನಾಡಿದ ಅವರು ಎಲ್ಲಾ ತೊಡಕು ನಿವಾರಿಸಿ ಶೀಘ್ರವೇ ಸುಬ್ರಹ್ಮಣ್ಯ ಠಾಣೆಗೆ ಹೊಸ ಕಟ್ಟಡ ಕಟ್ಟುವಂತೆ ಕ್ರಮ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೂ.26 ರಂದು ಭೇಟಿ ನೀಡಿದ್ದು, ಜೂ.27 ರಂದು ದೇವರ ದರ್ಶನ ಪಡೆದು ಆಶ್ಲೇಷ ಪೂಜೆಯಲ್ಲಿ ಭಾಗಿಯಾದರು.ತೀರ್ಥಹಳ್ಳಿಯ ಪುರುಷೋತ್ತಮ ರಾವ್ ಕೃಷಿ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ನಡೆದ ಆಶ್ಲೇಷ ಪೂಜೆ, ಶೇಷ ಸೇವೆಯಲ್ಲಿ ಪಾಲ್ಗೊಂಡರು.ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್...
ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನವೋದಯ ಸ್ವ ಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಜೂ.27 ರಂದು ಐವರ್ನಾಡು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮವಸ್ತ್ರ ವಿತರಣೆ ಮಾಡಿದರು.ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ಬಿಚಾರಕ ಶ್ರೀಧರ ಮಾಣಿಮರ್ದು ಪ್ರಾಸ್ತಾವಿಕವಾಗಿ...
ಸುಳ್ಯ ಹಾಗೂ ಕೊಡಗು ಭಾಗದಲ್ಲಿ ಸಂಭವಿಸಿದ ಲಘು ಭೂಕಂಪನದ ಕುರಿತಂತೆ ಕರ್ನಾಟಕ ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ಅಧಿಕೃತ ಬುಲೆಟಿನ್ ಬಿಡುಗಡೆಗೊಳಿಸಿದ್ದು, ಇದರ ಪ್ರಕಾರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಸಮೀಪ ಭೂ ಕಂಪನ ಉಂಟಾಗಿದ್ದು ರಿಕ್ಟರ್ ಸ್ಕೇಲ್ನಲ್ಲಿ 3.0 ದಾಖಲಾಗಿದೆ.ಇದರ ಪ್ರಭಾವದಿಂದ ಸುಳ್ಯ ತಾಲೂಕಿನ ಹಲವೆಡೆ ಭೂಮಿಕಂಪಿಸಿರುವುದಾಗಿ ಹೇಳಲಾಗಿದೆ. ಜೂ.28...
ಪೈಚಾರು ಬಳಿಯ ಶಾಂತಿನಗರ ತಿರುವು ಬಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಗೊಳಿಸುವ ಸಂದರ್ಭ ಸ್ಥಳದಲ್ಲಿದ್ದ ಪ್ರಯಾಣಿಕರ ತಂಗುದಾಣವನ್ನು ತೆರವುಗೊಳಿಸಲಾಗಿತ್ತು.ಇದರಿಂದ ಶಾಂತಿನಗರ ಹಾಗೂ ಬೆಟ್ಟಂಪಾಡಿ ಪರಿಸರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಸ್ ಗೆ ಕಾಯುವ ಸಂದರ್ಭ ಮಳೆ ಹಾಗೂ ಬಿಸಿಲಿನಿಂದ ರಕ್ಷಣೆ ಪಡೆಯಲು ವ್ಯವಸ್ಥೆ ಇಲ್ಲದೇ ಸಮಸ್ಯೆಯಾಗುತ್ತಿದೆ.ಈಗಾಗಲೇ ಮಳೆಗಾಲ ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ವಾಹನಕ್ಕಾಗಿ ಕಾಯುವ ಸಂದರ್ಭ ತಂಗುದಾಣ...
ಕಳೆದಎರಡು ದಿನಗಳ ಹಿಂದಷ್ಟೇ ಭೂಕಂಪನವಾಗಿದ್ದ ದ.ಕ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗಿನ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಮುಂಜಾನೆ 7.46 ರ ಸುಮಾರಿಗೆ ಕಂಪನವಾಗಿದ್ದು ಜನ ಭಯಬೀತರಾಗಿ ಮನೆಗಳಿಂದ ಹೊರಗೋಡಿದ್ದಾರೆ. ಪೆರಾಜೆ, ಸುಳ್ಯ , ಉಬರಡ್ಕ, ಮಡಪ್ಪಾಡಿ, ಕೊಲ್ಲಮೊಗ್ರು, ಕಲ್ಮಕಾರು, ದೇವಚಳ್ಳ, ಜಾಲ್ಸೂರು, ಆಲೆಟ್ಟಿ, ಐವರ್ನಾಡು, ಅಮರಮುಡ್ನೂರು, ಸಂಪಾಜೆ ಸೇರಿದಂತೆ ಬಹುತೇಕ ಕಡೆ ಭೂಮಿ...
ಕಳೆದ ವಾರವಷ್ಟೇ ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಸಂತೆ ಮಾರುಕಟ್ಟೆಯ ತ್ಯಾಜ್ಯ ಸೂಕ್ತ ಸಮಯಕ್ಕೆ ವಿಲೇವಾರಿಯಾಗದೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸುಳ್ಯ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿಯವರು ದ.ಕ.ಜಿಲ್ಲಾಧಿಕಾರಿಗಳ ಕಛೇರಿಗೆ ದೂರು ನೀಡಿದ ಬಳಿಕ ವಿಲೇವಾರಿಯಾಗಿ ಸುದ್ದಿಯಾಗಿತ್ತು. ಇದೀಗ ಕಳೆದ ಶನಿವಾರ ಬೆಳ್ಳಾರೆಯಲ್ಲಿ ವಾರದ ಸಂತೆ ನಡೆದಿದ್ದು, ಸಂತೆ ನಡೆದ ಬಳಿಕ ಮಾರುಕಟ್ಟೆಯಲ್ಲಿ ಮತ್ತೆ ವಿಲೇವಾರಿಯಾಗದೆ...
Loading posts...
All posts loaded
No more posts
