ಬೆಳ್ಳಾರೆ : ಸಚಿವರಿಂದ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟನೆ

ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ.ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುವ...

ಬೆಂಗಳೂರಿನ ಜ್ಞಾನ ಮಂದಾರ ಟ್ರಸ್ಟ್ ವತಿಯಿಂದ ಪ್ರತಿಭೋತ್ಸವ – ಪ್ರಶಸ್ತಿ ಪ್ರಧಾನ ಸಮಾರಂಭ – ಸಾಧಕರನ್ನು ಗುರುತಿಸಿ, ಯುವ ಪ್ರತಿಭೆಗಳನ್ನು ಬೆಳಗುತ್ತಿರುವುದು ಜ್ಞಾನ ಮಂದಾರದ ಮಹತ್ತರ ಸಾಧನೆ : ನ್ಯಾಯಾಧೀಶ ಸೋಮಶೇಖರ್ ಎ.

ಕಲೆ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ. ಜ್ಞಾನ ಮಂದಿರ ಸಂಸ್ಥೆ ಕಳೆದ 25 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರತಿಭೆಗಳನ್ನು ಪ್ರೋತ್ಸಾಹ ನೀಡುತ್ತಾ ಬಂದಿದೆ. ಸಮಾಜದಲ್ಲಿ ಧಾರ್ಮಿಕ ಗೊಂದಲಗಳು ಕಾಣಿಸುತ್ತಿರುವ ಸಮಯದಲ್ಲಿ ಎಲ್ಲ ಧರ್ಮದವರನ್ನು ಯಾವುದೇ ಬೇಧವಿಲ್ಲದೇ ಗುರುತಿಸಿ ಗೌರವಿಸುತ್ತಿರುವುದು ಅಭಿನಂದನೀಯ. ಧರ್ಮ, ಪ್ರಾಂತೀಯ ಪ್ರತ್ಯೇಕವಾದ ಬೇಡ. ನಾವೆಲ್ಲರೂ ಕನ್ನಡಿಗರು. ಎಲ್ಲರೂ ಒಂದು ಎಂಬ...
Ad Widget

ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ದಲ್ಲಿ ಇಂದು ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡದ ಪ್ರದರ್ಶನ

ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ದಲ್ಲಿ ಕಡಬ ತಾಲೂಕಿನ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡದ ಪ್ರದರ್ಶನ ಇಂದು ನಡೆಯಲಿದೆ. ಇಂದು ರಾತ್ರಿ 9.00ಗಂಟೆಗೆ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರಗೊಳ್ಳಲಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ದಲ್ಲಿ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡವು ರಾಹುಲ್ ಮತ್ತು...

ಗೃಹರಕ್ಷಕ ದಳದ ಕಟ್ಟಡ ನಿರ್ಮಿಸಲು ಜಾಗ ಒದಗಿಸಬೇಕೆಂದು ಸಚಿವ ಅಂಗಾರರಿಗೆ ಮನವಿ

ಬೆಳ್ಳಾರೆಯಲ್ಲಿ ಗೃಹರಕ್ಷಕ ದಳದ ಕಟ್ಟಡ ನಿರ್ಮಿಸಲು 10 ಸೆಂಟ್ಸ್ ಜಾಗ ನೀಡಬೇಕೆಂದು ಸಚಿವ ಎಸ್. ಅಂಗಾರರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀಮೋಹನ್ ಚೂಂತಾರು, ಬೆಳ್ಳಾರೆ ಯುನಿಟ್ ಅಧಿಕಾರಿ ವಸಂತ, ಗೃಹರಕ್ಷಕ ಸಿಬ್ಬಂದಿಗಳಾದ ಹೂವಪ್ಪ, ದಿವಾಕರ, ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು.

ಬೆಳ್ಳಾರೆ: ಗೃಹರಕ್ಷಕ ದಳದಿಂದ ವನಮಹೋತ್ಸವ

ಗೃಹರಕ್ಷಕ ದಳ ಬೆಳ್ಳಾರೆ ಯುನಿಟ್ ವತಿಯಿಂದ ಜೂ. 12ರಂದು ಬೆಳ್ಳಾರೆ ಪರಿಸರದಲ್ಲಿ ವನಮಹೋತ್ಸವ ಆಚರಿಸಲಾಯಿತು. ಸಂಸ್ಥೆಯ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀಮೋಹನ್ ಚೂಂತಾರು, ಯುನಿಟ್ ಅಧಿಕಾರಿ ವಸಂತ, ಗೃಹರಕ್ಷಕ ಸಿಬ್ಬಂದಿಗಳಾದ ಹೂವಪ್ಪ, ದಿವಾಕರ, ಅಶ್ವಿನಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಬೆಳ್ಳಾರೆಯಲ್ಲಿ ಗೃಹರಕ್ಷಕ ದಳದ ಕಟ್ಟಡ ನಿರ್ಮಿಸಲು 10ಸೆಂಟ್ಸ್ ಜಾಗ ನೀಡಬೇಕೆಂದು ಸಚಿವ...

ಬೆಳ್ಳಾರೆ: ಸಂತೆ ಮಾರುಕಟ್ಟೆಯ ತ್ಯಾಜ್ಯ ವಿಲೇವಾರಿ ಮಾಡುವಂತೆ ಸದಾಶಿವ ಪೂಜಾರಿ ಬೆಳ್ಳಾರೆ ಒತ್ತಾಯ

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಪ್ರತಿ ಶನಿವಾರ ವಾರದ ಸಂತೆ ನಡೆಯುತ್ತದೆ. ಸಂತೆ ನಡೆದ ಮರುದಿನ ಇಡಿ ಮಾರುಕಟ್ಟೆ ಕೊಳೆತ ಸಾಮಾಗ್ರಿಗಳಿಂದ ನಾರುತ್ತದೆ. ಅಲ್ಲದೆ ಈಗ ಮಳೆಗಾಲ ಪ್ರಾರಂಭವಾಗಿರುವುದರಿಂದ ಕೊಳೆತ ವಾಸನೆ ಇನ್ನೂ ಹೆಚ್ಚಾಗಿ ಇಡೀ ಪರಿಸರವನ್ನು ಆವರಿಸುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಕ್ರಮ ತೆಗೆದುಕೊಂಡು ಸಾರ್ವಜನಿಕರು ಶುದ್ಧ ಗಾಳಿ ಹಾಗೂ ನೆಮ್ಮದಿಯ...

ನಿವೃತ್ತ ಯೋಧ ದೇರಣ್ಣ ಗೌಡ ಸಹಸ್ರ ಚಂದ್ರ ದರ್ಶನ ಕಾರ್ಯಕ್ರಮ – ಸಮಾಜದ ಋಣ ತೀರಿಸಲು ಸಾಧ್ಯವಿಲ್ಲ: ಕಜಂಪಾಡಿ ಸುಬ್ರಹ್ಮಣ್ಯ ಭಟ್

ನಮ್ಮ ಬದುಕು ರೂಪಿಸಲು ಈ ಸಮಾಜ ಅನೇಕ ಕೊಡುಗೆಗಳನ್ನು ನೀಡಿದೆ. ಈ ಸಮಾಜದ ಋಣವನ್ನು ತೀರಿಸಲು ಸಾಧ್ಯವಿಲ್ಲ. ಆದರೂ ಕಿಂಚಿತ್ತಾದರೂ ಋಣ ತೀರಿಸಬೇಕೆಂದು ಪ್ರಯತ್ನ ನಡೆಸುವ ಅನೇಕರು ನಮ್ಮ ಮುಂದೆ ಇದ್ದಾರೆ. ಅವರು ನಮಗೆ ಆದರ್ಶ ಪ್ರಾಯರು ಎಂದು ಎಂದು ಹಿಂದೂ ಸಂಘಟನೆಯ ಮುಂದಾಳು ಕಜಂಪಾಡಿ ಸುಬ್ರಹ್ಮಣ್ಯ ಭಟ್ ಹೇಳಿದರು. ಅವರು ಶುಕ್ರವಾರ ಅಡ್ಕಾರು ಶ್ರೀ...

ಗುತ್ತಿಗಾರು: ಹೊಂಬೆಳಕು ಸ್ವಚ್ಛತಾ ಸೇವಾ ತಂಡದಿಂದ ಸ್ವಚ್ಛತಾ ಶ್ರಮದಾನ

ನಾಲ್ಕೂರು ಗ್ರಾಮದ ಹೊಂಬೆಳಕು ಸ್ವಚ್ಛತಾ ಸೇವಾ ತಂಡದ ಜೂನ್ ತಿಂಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಗುತ್ತಿಗಾರು ಮುಖ್ಯ ಪೇಟೆಯ ಪ್ರಯಾಣಿಕರ ತಂಗುದಾಣ ಹಾಗೂ ಶುದ್ಧ ಕುಡಿಯುವ ನೀರು ಘಟಕದ ಸ್ಥಳವನ್ನು ಸ್ವಚ್ಛತೆ ಮಾಡಲಾಯಿತು. ಇದು ತಂಡದ ಎಂಟನೇ ಕಾರ್ಯಕ್ರಮವಾಗಿದ್ದು, ತಂಡದ ಎಲ್ಲಾ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.

ಧರ್ಮ ಸಂಘರ್ಷ ಮುಂದುವರಿದರೆ ಜನರ ಬದುಕು ಸುಧಾರಣೆ ಅಸಾಧ್ಯ : ಅಣ್ಣಾ ವಿನಯಚಂದ್ರ

ಧರ್ಮ ಸಂಘರ್ಷ ಮುಂದುವರಿದರೆ ಈ ಜನರ ಬದುಕು ಸುಧಾರಣೆ ಅಸಾಧ್ಯ. ಈ ಬಗ್ಗೆ ಯೋಚನೆ ಆರಂಭವಾಗಬೇಕಿದೆ ಎಂದು ವಿಧಾನಪರಿಷತ್‌ ಮಾಜಿ ಸದಸ್ಯ, ಗಾಂಧಿವಿಚಾರ ವೇದಿಕೆ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ ಹೇಳಿದರು. ಅವರು ಗಾಂಧಿ ವಿಚಾರ ವೇದಿಕೆಯ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಐವತ್ತೊಕ್ಲು ಎಣ್ಮೂರು ರಹ್ಮಾನಿಯಾ ಕೇಂದ್ರ ಜುಮ್ಮಾ ಮಸ್ಜಿದ್‌ ನ ಸಫಾ ಅಡಿಟೋರಿಯಂನಲ್ಲಿ ಶನಿವಾರ...

ಅರೆಭಾಷೆ ಅಕಾಡೆಮಿಯ ದೇಯೋದ್ದೇಶ ಕಡೆಗಣಿಸಿರುವ ಅಧ್ಯಕ್ಷರನ್ನು ವಜಾ ಮಾಡುವಂತೆ ಸಾಹಿತಿ ಎ.ಕೆ.ಹಿಮಕರ ಒತ್ತಾಯ

ಅರೆಭಾಷೆ ಅಕಾಡೆಮಿ ಸ್ಥಾಪನೆಯಾದಾಗ ಯಾವ ದೇಯೋದ್ದೇಶ ಇತ್ತೋ ಅದನ್ನು ಕಡೆಗಣಿಸಿರುವ ಅಧ್ಯಕ್ಷರನ್ನು ವಜಾ ಮಾಡುವಂತೆ ಎ.ಕೆ.ಹಿಮಕರ ಒತ್ತಾಯಿಸಿದರು. ಅವರು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ಆರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಸ್ಥಾಪನೆಯಾಗಿ ದಶಮಾನೋತ್ಸವದ ಮೊದಲೇ ಆಕಾಡೆಮಿಯು ಅಧೋಗತಿಗೆ ತಲುಪಿರುವುದು ದುರಂತ. ಈ ದುಸ್ಥಿತಿಗೆ ತಲುಪಲು ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಸಹಸದಸ್ಯ ಡಾ| ವಿಶ್ವನಾಥ...
Loading posts...

All posts loaded

No more posts

error: Content is protected !!