ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯಿಂದ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಕಾರ‍್ಯಾಗಾರ

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆ ಮತ್ತು ಸ.ಪ್ರ.ದ. ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ವತಿಯಿಂದ ““MATHS SHORT CUT TRICKS & TIPS FOR COMPETITIVE EXAMS” ” ಎಂಬ ವಿಷಯದ ಬಗ್ಗೆ ತರಬೇತಿ ಕಾರ‍್ಯಾಗಾರ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ....

ಐದು ವರ್ಷಗಳ ಸಾಧನೆ ತೃಪ್ತಿ ತಂದಿದೆ – ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು

ಎಪಿಎಂಸಿ ಅಧ್ಯಕ್ಷರಾಗಿ ಐದು ವರ್ಷಗಳ ಸಾಧನೆ ತೃಪ್ತಿ ತಂದಿದೆ. ಸರಕಾರ ನಿರೀಕ್ಷೆಗಿಂತ ಹೆಚ್ಚಿನ ಸಾಧನೆ ಮಾಡಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಹೇಳಿದರು. ಎಪಿಎಂಸಿ ಅಧಿಕಾರ ಅವಧಿ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೂನ್ 8 ರಂದು ಎಪಿಎಂಸಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.ಐದು ವರ್ಷದಲ್ಲಿ ಮಾಡಿದಂತ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು. ಸುಳ್ಯದ...
Ad Widget

ಯೆನೆಪೋಯ ಅಬ್ದುಲ್ ಕುಂಞಿ ಯವರಿಗೆ ಸುಳ್ಯದಲ್ಲಿ ಸನ್ಮಾನ

ಗುಲ್ಬರ್ಗ ವಿಶ್ವವಿದ್ಯಾನಿಲಯದಿಂದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪಡೆದ ಯೆನೆಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಹಾಜಿ ಯೆನೆಪೋಯ ಅಬ್ದುಲ್ಲಕುಂಞಿ ಯವರಿಗೆ ಸುಳ್ಯ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪರವಾಗಿ ಮಂಗಳೂರಿನಲ್ಲಿ ಸನ್ಮಾನಿಸಲಾಯಿತು.ದ. ಕ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಸ್ಲಿಂ ಸಮುದಾಯದ ಉಲಮಾ -ಉಮರಾ ನೇತಾರರ ಸೌಹಾರ್ದ ಸಂಗಮದಲ್ಲಿ ಈ ಗೌರವಾರ್ಪಣೆ ನಡೆಸಲಾಯಿತು.ಈ ಸಂದರ್ಭದಲ್ಲಿ ಕಾಣಚೂರು ಮೆಡಿಕಲ್ ಕಾಲೇಜು...

ಚೆರಿಶ್ಯ ಗಟ್ಟಿಗಾರು ಹುಟ್ಟುಹಬ್ಬ

ಮಡಪ್ಪಾಡಿ ಗ್ರಾಮದ ಗಟ್ಟಿಗಾರು ಲೋಕೇಶ್ ಮತ್ತು ದಿವ್ಯ ದಂಪತಿಗಳ ಪುತ್ರಿ ಚೆರಿಶ್ಯ ಳ ಪ್ರಥಮ ವರ್ಷದ ಹುಟ್ಟುಹಬ್ಬ‌ವನ್ನು‌ ಗಟ್ಟಿಗಾರು ಮನೆಯಲ್ಲಿ ಜೂನ್ 6 ರಂದು ಆಚರಿಸಲಾಯಿತು.

ಅಡ್ಪಂಗಾಯ : ವಿವೇಕ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಅಜ್ಜಾವರ ಅಡ್ಪಂಗಾಯ ವಿವೇಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಮೀಯತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಅಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಮೀಯತುಲ್ ಫಲಾಹ್ ಅಧ್ಯಕ್ಷರಾದ ಹಸ್ಯೆನಾರ್ ಹಾಜಿ ಗೊರಡ್ಕ, ಕಾರ್ಯದರ್ಶಿ ಹಸ್ಯೆನಾರ್ ವಳಂಲಬೆ, ನಿರ್ದೇಶಕರಾದ ಸಿದ್ದೀಕ್ ಕಟ್ಟೆಕಾರ್, ಮತ್ತು ಶಾಲಾ ಮುಖ್ಯೋಪಾಧ್ಯಾಯ ಹೀರಾ...

ಸುಬ್ರಹ್ಮಣ್ಯ : ಪತ್ರಕರ್ತ ಮಂಜುನಾಥ ರಾವ್ ಅವರಿಗೆ ಸಾರ್ವಜನಿಕ ಶ್ರದ್ದಾಂಜಲಿ ಸಭೆ

ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯದ ಹಿರಿಯ ಪತ್ರಕರ್ತರಾದ ಮಂಜುನಾಥ ರಾವ್ ಅವರಿಗೆ ಜೂ.07 ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಶ್ರದ್ದಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು. ಆರಂಭದಲ್ಲಿ ಹಿರಿಯ ಸಾಮಾಜಿಕ ಧುರೀಣ ಚಂದ್ರಶೇಖರ ಮೇಲ್ನಾಡ್ ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು. ನಂತರ ಪತ್ರಕರ್ತ ವಿಶ್ವನಾಥ ನೆಡುತೋಟ ಪ್ರಾಸ್ತಾವಿಕ ನುಡಿಗಳೊಂದಿಗೆ ನುಡಿ ನಮನ ಸಲ್ಲಿಸಿದರು. ನಂತರ ಶಿವರಾಮ...

ಕೆ.ವಿ.ಜಿ. ಶಿಕ್ಷಣ ಸಂಸ್ಥೆಗಳ ಸಿಇಓ ಹಾಗೂ ಸಲಹೆಗಾರರಾಗಿ ಡಾ| ಉಜ್ವಲ್‌ ಊರುಬೈಲು

ಅಕಾಡೆಮಿ ಆಫ್ ಲಿಬರಲ್‌ ಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರು, ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್‌ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್‌ ಊರುಬೈಲುರವರನ್ನು ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಸಲಹೆಗಾರರನ್ನಾಗಿ ನೇಮಕ ಮಾಡಿರುತ್ತಾರೆ. ಇವರು ಕೆ.ವಿ.ಜಿ. ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಕೆ.ವಿ.ಜಿ...

ಗುತ್ತಿಗಾರು : ಗ್ರಾಮಾಭಿವೃದ್ಧಿ ಯೋಜನೆಯ ವಿಎಲ್ಇ ಕಲೆಕ್ಷನ್‌ ಪಾಯಿಂಟ್‌ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಗುತ್ತಿಗಾರು ವಲಯದ ಗುತ್ತಿಗಾರು ಮತ್ತು ವಳಲಂಬೆ ಕಾರ್ಯಕ್ಷೇತ್ರದ ಸಿ ಎಸ್ ಸಿ ಕೇಂದ್ರದಲ್ಲಿ ವಿ ಎಲ್ ಇ ಕಲೆಕ್ಷನ್‌ ಪಾಯಿಂಟ್ ಇಂದು ಉದ್ಘಾಟನೆಗೊಂಡಿತುಒಕ್ಕೂಟದ ಅಧ್ಯಕ್ಷ ಜಿ ಅಚ್ಯುತ ಗುತ್ತಿಗಾರು ಇವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕ ಬಾಲಕೃಷ್ಣ ಗೌಡ ಸೇವಾ ಪ್ರತಿನಿಧಿ...

ಮುಳಿಯ ಜ್ಯುವೆಲ್ಲರ್ಸ್ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಸಾನ್ವಿ ಪಿ.ಎನ್ ಪ್ರಥಮ

ಪುತ್ತೂರಿನ ಮುಳಿಯ ಜ್ಯುವೆಲರ್ಸ್ ಆಯೋಜಿಸಿದ್ದ ರಜೆಯ ವಿಹಾರ ಚಿಣ್ಣರ ವಿಚಾರ 10 ರಿಂದ 15 ವರ್ಷದ ಮಕ್ಕಳಿಗೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಪಿ. ಎನ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಾನ್ವಿ ಪಿ.ಎನ್. ಸುಳ್ಯ ಕಸಬಾ ಕೇರ್ಪಳ ನಿವಾಸಿ ವಿನುತಾ ನಾರಾಯಣ ಹಾಗೂ...

ಸಂಪಾಜೆ : ವಲಯಾರಣ್ಯದಲ್ಲಿ ಬೀಜ ಬಿತ್ತನೆ ಕಾರ್ಯಕ್ರಮ

ಸಂಪಾಜೆ ವಲಯದ, ದಬ್ಬಡ್ಕ ಉಪ ವಲಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಪಾಲ್ಗೊಂಡು, ಅರಣ್ಯದ ಒಳಗಡೆ ವಿವಿಧ ಜಾತಿಯ ಬೀಜ ಗಳನ್ನು ಬಿತ್ತಲಾಯಿತು. ಈ ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಮಧು ಸೂದನ್, ಉಪ ವಲಯ ಅರಣ್ಯ ಅಧಿಕಾರಿ ನಿಸಾರ್ ಮೊಹಮ್ಮದ್, ಅರಣ್ಯ ರಕ್ಷಕರಾದ ಕಾರ್ತಿಕ್. ಡಿ ಮತ್ತು ಚಂದ್ರಪ್ಪ,...
Loading posts...

All posts loaded

No more posts

error: Content is protected !!