ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ  ಸ್ವಚ್ಛತಾ ಜಾಗೃತಿ ಕಾರ್ಯಕ್ರಮ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಸ್ನೇಹಿತರ ಕಲಾ ಸಂಘ  ಬೆಳ್ಳಾರೆ ಆಶ್ರಯದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚಸಪ್ತತಿ 2025   ಅಂಗವಾಗಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ನ.24ರಂದು ಬೆಳ್ಳಾರೆ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ  ನಡೆಯಿತು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ ಗೌಡ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ...

ಬೊಳುಬೈಲು : ಕಾರು ಪಲ್ಟಿ – ಅಪಾಯದಿಂದ ಪಾರು

ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ಬೊಳುಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ  ಕಾರು ಪಲ್ಟಿಯಾದ ಘಟನೆ ನ.24 ರಂದು ನಡೆದಿದೆ. ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
Ad Widget

ವಳಲಂಬೆ : ಮಕ್ಕಳ ದಿನಾಚರಣೆ, ಸಮಾಜಸೇವಕರಿಗೆ ಸನ್ಮಾನ – ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ ಪುಟಾಣಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ

ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ವಳಲಂಬೆ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಯೋಗದೊಂದಿಗೆ ನ.24 ರಂದು ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ “ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ” ನಡೆಯಿತು. ಕಾರ್ಯಕ್ರಮವನ್ನು ಗುತ್ತಿಗಾರು ಗ್ರಾ.ಪಂ ಸದಸ್ಯ ವೆಂಕಟ್ ವಳಲಂಬೆ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ...

ಸೇವಾಜೆ ಮಡಪ್ಪಾಡಿ ರಸ್ತೆಯಲ್ಲಿ ಸೇತುವೆ ಕಾಮಗಾರಿ ಆರಂಭ

ಸೇವಾಜೆ - ಮಡಪ್ಪಾಡಿ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ಸೇವಾಜೆ(ದೊಡ್ಡಿಕಾಡು) ಎಂಬಲ್ಲಿ ಸುಳ್ಯ ಶಾಸಕಿ ಬಾಗೀರಥಿ ಮುರುಳ್ಯ ಇವರ ಪ್ರಯತ್ನದಿಂದ ಮಂಜೂರಾದ 40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಕಾಮಗಾರಿ ಆರಂಭಗೊಂಡಿದ್ದು, ಸಾರ್ವಜನಿಕರ ಪ್ರಯೋಜನಕ್ಕಾಗಿ ಪಕ್ಕದಲ್ಲೇ ಬದಲಿ ರಸ್ತೆ ನಿರ್ಮಿಸಿದ್ದು ಸಾರ್ವಜನಿಕರು ಸಹಕರಿಸುವಂತೆ  ದೇವಚಳ್ಳ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಮತ್ತು ಮಡಪ್ಪಾಡಿ ಸೊಸೈಟಿ ಅಧ್ಯಕ್ಷ ವಿನಯ್...

ಸೇವಾಜೆ ಮಡಪ್ಪಾಡಿ ರಸ್ತೆಯಲ್ಲಿ ಸೇತುವೆ ಕಾಮಗಾರಿ ಆರಂಭ

ಸೇವಾಜೆ --ಮಡಪ್ಪಾಡಿ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ಸೇವಾಜೆ (ದೊಡ್ಡಿಕಾಡು ) ಎಂಬಲ್ಲಿ ಸುಳ್ಯ ಶಾಸಕಿ ಬಾಗೀರಥಿ ಮುರುಳ್ಯ ಇವರ ಪ್ರಯತ್ನ ದಿಂದ ಮಂಜೂರಾದ 40 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೇತುವೆ ಕಾಮಗಾರಿ ಆರಂಭಗೊಂಡಿದ್ದು, ಸಾರ್ವಜನಿಕರ ಪ್ರಯೋಜನಕ್ಕಾಗಿ ಪಕ್ಕದಲ್ಲೇ ಬದಲಿ ರಸ್ತೆ ನಿರ್ಮಿಸಿದ್ದು ಸಾರ್ವಜನಿಕರು ಸಹಕರಿಸುವಂತೆ ದೇವಚಳ್ಳ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಮತ್ತು ಮಡಪ್ಪಾಡಿ ಸೊಸೈಟಿ...

ಸುಳ್ಯದ ಪ್ರತಿಷ್ಠಿತ “ಸ್ವರ್ಣಂ ಜ್ಯುವೆಲ್ಸ್‌” ನಲ್ಲಿ ಗೋಲ್ಡ್ ಎಕ್ಸ್ ಚೇಂಜ್ ಮೇಳ – ನ.24ರಿಂದ ಡಿ.04ರ ವರೆಗೆ “ಬೃಹತ್ ಗೋಲ್ಡ್ ಎಕ್ಸ್‌ಚೇಂಜ್ ಮೇಳ”

ಸುಳ್ಯ : ಸುಳ್ಯದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ “ಸ್ವರ್ಣಂ ಜ್ಯುವೆಲ್ಸ್‌” ನಲ್ಲಿ “ಗೋಲ್ಡ್ ಎಕ್ಸ್ ಚೇಂಜ್ ಮೇಳ” ನ.24ರಿಂದ ಡಿ.04ರ ವರೆಗೆ ನಡೆಯಲಿದೆ. 10 ದಿನಗಳ ಕಾಲ ಬೃಹತ್ ಗೋಲ್ಡ್ ಎಕ್ಸ್‌ಚೇಂಜ್ ಮೇಳ ನಡೆಯಲಿದ್ದು, ನಿಮ್ಮ ಹಳೆಯ ಚಿನ್ನಾಭರಣಗಳನ್ನು ಹೊಸ 916 ಹಾಲ್ ಮಾರ್ಕ್ ಆಭರಣಗಳೊಂದಿಗೆ ವಿನಿಮಯ ಮಾಡಿಕೊಳ್ಳುವ ಸುವರ್ಣಾವಕಾಶ ಇಲ್ಲಿದೆ. ಅಲ್ಲದೆ ಹೊಸ ಆಭರಣಗಳ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವ ಕ್ಷೇತ್ರದ ವಿಶೇಷತೆಗಳು

ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16 ರಿಂದ ಆರಂಭವಾಗಿ ಡಿಸೆಂಬರ್ 02ರ ತನಕ ನಡೆಯಲಿರುವುದು. ನ.26 ಬುಧವಾರದಂದು ಪ್ರಾತಃಕಾಲ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರು ಚಂಪಾಷಷ್ಠಿ ಮಹಾ ರಥೋತ್ಸವದಲ್ಲಿ ಬ್ರಹ್ಮರಥ ಏರಿ ನೆರೆದ ಲಕ್ಷಾಂತರ ಭಕ್ತರನ್ನು ಹರಸುವರು.ಕ್ಷೇತ್ರದ ವಿಶೇಷತೆಗಳು - 1) ಮೂಲ ಮೃತ್ತಿಕೆ ಪ್ರಸಾದ : ವರ್ಷಕ್ಕೊಮ್ಮೆ...

ಕ್ಯಾಂಪ್ಕೋ ಚುನಾವಣೆ – ಶೇ 45.53 ಮತದಾನ – ನ.25ರಂದು ಮತ ಎಣಿಕೆ

ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಆಡಳಿತ ಮಂಡಳಿಗೆ 13 ಸ್ಥಾನ ಅವಿರೋಧವಾಗಿ ಆಯ್ಕೆಯಾಗಿದ್ದು ಬಾಕಿ ಉಳಿದ 6 ಸ್ಥಾನಗಳಿಗೆ  ನ.23 ರಂದು ಚುನಾವಣೆ ನಡೆಯಿತು. ಒಟ್ಟು 5651 ಮತದಾರರ ಪೈಕಿ 2573 ಮತದಾರರು ಮತ ಚಲಾಯಿಸಿದ್ದು ಶೇ.45.53% ಮತದಾನವಾಗಿದೆ.  6 ಸ್ಥಾನಗಳಿಗೆ  8 ಅಭ್ಯರ್ಥಿಗಳು ಕಣದಲ್ಲಿದ್ದರು. 6 ಜನ ಸಹಕಾರ ಭಾರತಿಯಿಂದ ಮತ್ತು ಇಬ್ಬರು ಸ್ವತಂತ್ರ ಅಭ್ಯರ್ಥಿಗಳಾಗಿ...

ಮುರೂರಿನಲ್ಲಿ ಚೆಕ್ ಪೋಸ್ಟ್ ಮತ್ತು ಬಸ್ ಸ್ಟ್ಯಾಂಡ್ ಬಳಿ ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ

ವೀರವನಿತೆ ಕ್ರೀಡಾ ಮತ್ತು ಕಲಾಸಂಘ ಮಂಡೆಕೋಲು ಇದರ ವತಿಯಿಂದ ಯುವಜನ ಸಂಯುಕ್ತ ಮಂಡಳಿಯವರು ಹಮ್ಮಿಕೊಂಡಿರುವ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚಸಪ್ತತಿ 2025 ಇದರ ಅಂಗವಾಗಿ ಕರ್ನಾಟಕ ಕೇರಳದ ಗಡಿ ಭಾಗವಾದ  ಮಂಡೆಕೋಲು ಗ್ರಾಮದ ಮುರೂರು ಚೆಕ್ ಪೋಸ್ಟ್ ಬಳಿ ಹಾಗೂ ಮೂರೂರು ಬಸ್ ಸ್ಟ್ಯಾಂಡ್ ಹಾಗೂ ಸುತ್ತಮುತ್ತ ಕಾಡು ಕಡಿದು ಕಸ ಹೆಕ್ಕಿ ಸ್ವಚ್ಛತೆ...

ನ.27 ಮತ್ತು 28 ರಂದು ಬೆಳ್ಳಾರೆ ಜ್ಞಾನದೀಪದಲ್ಲಿ ರಂಗ ಚಟುವಟಿಕೆ ಶಿಬಿರ

ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೃತ್ಯ ಮತ್ತು ಅಭಿನಯದ ಮೂಲಕ ಪರಿಣಾಮಕಾರಿಯಾಗಿ ಬೋಧಿಸಲು ಅಗತ್ಯವಾದ ಎರಡು ದಿನಗಳ ರಂಗ ಚಟುವಟಿಕೆ ಶಿಬಿರವು ನ.27 ಮತ್ತು ನ.28ರಂದು ನಡೆಯಲಿದೆ ಕಾಂತಾರ ಮತ್ತು ಸುಫ್ರಮ್ ಸೋ ಖ್ಯಾತಿಯ ಜಾನಪದ ಕಲಾವಿದ ಮೈಮ್ ರಾಮ್ ದಾಸ್, ಕಾರ್ಕಳದ ವರ್ಧಮಾನ ಶಿಕ್ಷಣ ಸಂಸ್ಥೆಗಳ...
Loading posts...

All posts loaded

No more posts

error: Content is protected !!