ಗುತ್ತಿಗಾರು : ಹೃದಯಾಘಾತದಿಂದ ಯುವಕ ಮೃತ್ಯು

ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಗುತ್ತಿಗಾರಿನಿಂದ ವರದಿಯಾಗಿದೆ. ಗುತ್ತಿಗಾರು ಗ್ರಾಮದ ಪೈಕ ಕೊರ್ತ್ಯೆಡ್ಕ ಪರಶುರಾಮ ಕೆ. ಮೃತಪಟ್ಟ ದುರ್ದೈವಿ. ಮರ್ಕಂಜಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದೆನೋವು ಬಂದುದರಿಂದ ರಸ್ತೆ ಬದಿ ಕುಳಿತಲ್ಲಿ ಕುಸಿದು ಬಿದ್ದರೆನ್ನಲಾಗಿದೆ. ಜತೆಗಿದ್ದ ತೇಜಕುಮಾರ್ ಎಂಬವರು ಅತನನ್ನು ಸುಳ್ಯ ಸರಕಾರಿ ಸಾಗಿಸಿದರಾದರೂ ಮೃತಪಟ್ಟರೆಂದು ತಿಳಿದುಬಂದಿದೆ.

ಬಾವಿ ಕೆಲಸಗಾರರಿಂದ ಎರಡು ಮೂರು ದಿನದಿಂದ ಗುಂಡಿಯಲ್ಲಿದ್ದ ಗಂಡು ಕರುವಿನ ರಕ್ಷಣೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ಸಮೀಪದ ಇಂಜಾಡಿಯ ಬೆಳ್ಳಿ ಬಾರ್ ಆಂಡ್ ಫ್ಯಾಮಿಲಿ ರೆಸ್ಟೋರೆಂಟ್ ನ ಬಳಿಯಲ್ಲಿರುವ ಮುಂಡೋಡಿ ಮನೆತನದವರ ಜಾಗದಲ್ಲಿ ಬಾವಿ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ನೀರು ಸಿಕ್ಕಾಗ ತೆಂಗಿನ ಕಾಯಿ ಒಡೆಯುವ ಕ್ರಮಕ್ಕಾಗಿ ವೀಳ್ಯದೆಲೆ, ಅಡಿಕೆ, ತುಂಬೆ ಹೂ, ಕಾಡು ಕೇಪುಲ ಹೂ, ಬೆಳ್ತಿಗೆ ಅಕ್ಕಿಯೊಂದಿಗೆ ದಾನ ಬಿಡುವುದಕ್ಕಾಗಿ ಬಾಳೆ ಎಲೆಯ ಅಗತ್ಯವಿರುತ್ತದೆ. ಹಾಗಾಗಿ ಬಾಳೆ...
Ad Widget

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸಾಹಿತಿ ಟಿ ಜಿ ಮುಡೂರು ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಸಪ್ತಸ್ವರ ಸಂಗೀತ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಇತ್ತೀಚಿಗೆ ಅಗಲಿದ ಹಿರಿಯ ಸಾಹಿತಿಗಳು, ವಿದ್ವಾನ್ ಶ್ರೀ ಟಿ ಜಿ ಮುಡೂರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಎಚ್ .ಭೀಮರಾವ್ ವಾಷ್ಠರ್ ರವರು ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಾಹಿತಿಗಳಾದ ಅನುರಾಧಾ ಶಿವಪ್ರಕಾಶ್ ,...

ಅರಂತೋಡು : ಹೊಳೆಯ ನೀರಿನಲ್ಲಿ ಮುಳುಗಿ ಬಾಲಕ ಸಾವು

ಮಂಗಳೂರಿನ ಮನ್ವಿತ್(12 ವರ್ಷ) ಎಂಬಾತಅರಂತೋಡು ಗ್ರಾಮದ ಕುಕ್ಕುಂಬಳ ಹೊಳೆಯಲ್ಲಿ ಸ್ನಾನಮಾಡಲೆಂದು ಹೋದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ವರದಿಯಾಗಿದೆ. ಅರಂತೋಡಿನ ದಾಮೋದರ ಶೆಟ್ಟಿಯವರ ಪುತ್ರಿಯನ್ನುಮಂಗಳೂರಿಗೆ ವಿವಾಹ ಮಾಡಿಕೊಡಲಾಗಿದ್ದು, ಅವರ ಮಗ ಮನ್ವಿತ್ ಅಜ್ಜನ ಮನೆಗೆ ಬಂದ ಸಂದರ್ಭ ಹಂಸಕುಕ್ಕುಂಬಳರವರ ಮನೆ ಸಮೀಪ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕ ನೀರಿನಲ್ಲಿ ಮುಳುಗಿದನೆಂದು ತಿಳಿದುಬಂದಿದೆ.ಶರತ್...

ಕುಕ್ಕನ್ನೂರು ಶ್ರೀ ಕಿನ್ನಿಮಾಣಿ- ಪೂಮಾಣಿ ದೈವಸ್ಥಾನದಲ್ಲಿ ಗೊನೆ ಮುಹೂರ್ತ

ಜಾಲ್ಸೂರು ಗ್ರಾಮದ ಕುಕ್ಕನ್ನೂರು ಶ್ರೀ ಕಿನ್ನಿಮಾಣಿ -ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವುಮೇ.2ರಿಂದ ಮೇ.6ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಜಾತ್ರೋತ್ಸವಕ್ಕೆ ಎ.26ರಂದು ಮುಹೂರ್ತದ ಗೊನೆ ಕಡಿಯಲಾಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ ಕುಕ್ಕಂದೂರು, ವೆಂಕಟ್ರಮಣ ಭಟ್ ಬೊಮ್ಮೆಟ್ಟಿ, ನಯನ ಸುತ್ತುಕೋಟೆ, ಗಂಗಾಧರ ಗೌಡ ಮಾರಡ್ಕ,ರಾಧಾಕೃಷ್ಣ ದೋಳ್ತಿಲ,...

ಕೊಲ್ಲಮೊಗ್ರು-ಹರಿಹರ ಸೊಸೈಟಿಯ ಕೊಲ್ಲಮೊಗ್ರು ಶಾಖೆಯ ನೂತನ ಗೋದಾಮು ಕಟ್ಟಡ ಉದ್ಘಾಟನೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಲ್ಲಮೊಗ್ರು ಶಾಖೆಯ ನೂತನ ಗೋದಾಮು ಕಟ್ಟಡ ಉದ್ಘಾಟನಾ ಸಮಾರಂಭವು ಎ.25 ರಂದು ನಡೆಯಿತು. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ನೂತನ ಗೋದಾಮು ಕಟ್ಟಡವನ್ನು ಉದ್ಘಾಟಿಸಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ಸುಕನ್ಯಾ ನಾಮಫಲಕ ಅನಾವರಣ ಮಾಡಿದರು....

ದೇವ : ವಾಲಿಬಾಲ್ ಪಂದ್ಯಾಟ : ಟೀಮ್ ಸಿಗ್ನೇಚರ್ ವಾಲ್ತಾಜೆ ಪ್ರಥಮ – ವಿಷ್ಣು ಯುವಕ ಮಂಡಲ ಮಾವಿನಕಟ್ಟೆ ದ್ವಿತೀಯ

ದೇವಚಳ್ಳ ಗ್ರಾಮದ ದೇವ ಗೆಳೆಯರ ಬಳಗದ ವತಿಯಿಂದ "ಗೆಳೆಯರ ಬಳಗ ಟ್ರೋಫಿ 2022" ವಾಲಿಬಾಲ್ ಪಂದ್ಯಾಟ ಎ.23 ರಂದು ನಡೆಯಿತು. ಪಂದ್ಯಾವಳಿಯ ಉದ್ಘಾಟನೆಯನ್ನು ಗುತ್ತಿಗಾರು ಪ್ರಕೃತಿ ಸ್ಟುಡಿಯೋ ಮಾಲಕ ಶಿವರಾಮ್ ದೇವ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ದೇವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಸದಸ್ಯ ಭವಾನಿಶಂಕರ್ ಮುಂಡೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

ಸುಳ್ಯ: ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಭರದ ಸಿದ್ಧತೆ – ಸುಸಜ್ಜಿತ ಗ್ಯಾಲರಿಯಲ್ಲಿ ವೀಕ್ಷಿಸಲು ಅವಕಾಶ

ಸುಳ್ಯದಲ್ಲಿ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ ಮೇ.4 ರಿಂದ ಆರಂಭಗೊಂಡು ಮೇ.8ರವರೆಗೆ ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ಮೈದಾನದಲ್ಲಿ ಪಂದ್ಯಾಟ ನಡೆಯಲಿದೆ. ಸುಮಾರು 13 ವರ್ಷಗಳ ಬಳಿಕ ಈ ಪಂದ್ಯಾವಳಿ ನಡೆಯುತ್ತಿದೆ. ಈಗಾಗಲೇ ಮೈದಾನ ಸಜ್ಜುಗೊಂಡಿದ್ದು ಗ್ಯಾಲರಿ ಕೆಲಸ ನಡೆಯುತ್ತಿದೆ. ಪುರುಷರ 6 ಹಾಗೂ ಮಹಿಳೆಯರ 4 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಲಿದೆ. ಸುಸಜ್ಜಿತವಾದ ಬೃಹತ್ ಗ್ಯಾಲರಿ ನಿರ್ಮಾಣಗೊಳ್ಳುತ್ತಿದೆ...

ಬಳ್ಪ: ಮದರಂಗಿ ಕಾರ್ಯಕ್ರಮದಲ್ಲಿ ಭಜನೆ

ಬಳ್ಪ ಗ್ರಾಮದ ಕೊರಪ್ಪಣೆ ಸತೀಶ್ ಪೂಜಾರಿಯವರ ಮದುವೆಯ ಪ್ರಯುಕ್ತ ನಡೆದ ಮದರಂಗಿ ಶಾಸ್ತ್ರ ಕಾರ್ಯಕ್ರಮದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮದರಂಗಿ ಶಾಸ್ತ್ರ ಮುಗಿದ ನಂತರ ಸಂಜೆ ಸ್ಥಳೀಯ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ನೆರವೇರಿತು.

ಪ್ರತಿಯೊಬ್ಬರ ಹೃದಯದಲ್ಲಿ ಧರ್ಮದ ಪ್ರತಿಷ್ಟಾಪನೆ ಆಗಬೇಕಿದೆ: ನಳಿನಿ ಆಚಾರ್ಯ

ಮರಕತ ಶ್ರೀ ದುರ್ಗಾಪರಮೇಶ್ವರಿ ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ ಪ್ರತಿಯೊಬ್ಬರ ಹೃದಯದಲ್ಲಿ ಧರ್ಮದ ಪ್ರತಿಷ್ಠಾಪನೆ ಆಗಬೇಕಾಗಿದೆ. ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಧಾರ್ಮಿಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಸುಳ್ಯದ ರೋಟರಿ ಆಂಗ್ಲಮಾಧ್ಯಮ ಶಾಲಾ ಶಿಕ್ಷಕಿ ನಳಿನಾಕ್ಷಿ ಆಚಾರ್ಯ ಅವರು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಏ. 23 ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ...
Loading posts...

All posts loaded

No more posts

error: Content is protected !!