ಏ.2 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರ್ಮಿಕ ದಿನಾಚರಣೆ ಮತ್ತು ಯುಗಾದಿ ಆಚರಣೆ

ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ.2 ರಂದು ರಾಜ್ಯ ಧಾರ್ಮಿಕ ದಿನಾಚರಣೆ ಮತ್ತು ಯುಗಾದಿ ಆಚರಣೆ ನೆರವೇರಲಿದೆ. ಈ ಪ್ರಯುಕ್ತ ಮುಂಜಾನೆ 6 ಗಂಟೆಯಿಂದ ಶ್ರೀ ವಿದ್ಯಾಸಾಗರ ಭಜನಾ ಸಂಗಮ ಮತ್ತಿತರ ಸ್ವಯಂಸೇವಕ ತಂಡದವರಿದ ಶ್ರೀ ದೇವಳದ ಧರ್ಮಸಮ್ಮೇಳನ ಮಂಟಪದಲ್ಲಿ ಅಹಃಪೂರ್ಣ ಭಜನಾ ಕಾರ್ಯಕ್ರಮ ನೆರವೇರಲಿದೆ. ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥನೆ:ಯುಗಾದಿಯ...

ಅರಂತೋಡು : ಗ್ರಾಮ ಪಂಚಾಯತ್ ಘನತ್ಯಾಜ್ಯ ನಿರ್ವಹಣಾ ತಂಡಕ್ಕೆ ಜಿಲ್ಲಾ ಪ್ರಶಸ್ತಿ

ಅರಂತೋಡು ಗ್ರಾಮ ಪಂಚಾಯತ್ ಘನತ್ಯಾಜ್ಯ ನಿರ್ವಹಣೆಯನ್ನು ಮಾಡುತ್ತಿರುವ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಸಂಘದ ಮಹಿಳಾ ತಂಡವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಮಹಿಳಾ ಘನತ್ಯಾಜ್ಯ ನಿರ್ವಹಣಾ ತಂಡವಾಗಿರುತ್ತದೆ. ಏ.3 ರಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ರವರು ಮಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಿದ್ದಾರೆ. ಘನ...
Ad Widget

ಬೆಳ್ಳಾರೆ : ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಆಂಜನೇಯ ರೆಡ್ಡಿಯವರಿಗೆ ಸನ್ಮಾನ

ಅಂಬೇಡ್ಕರ್ ರಕ್ಷಣಾ ವೇದಿಕೆ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಏ.1 ರಂದು ಬೆಳ್ಳಾರೆ ಪೊಲೀಸ್ ಉಪ ನಿರೀಕ್ಷಕರಾಗಿದ್ದು ಕಡಬ ಠಾಣೆಗೆ ವರ್ಗಾವಣೆಗೊಂಡ ಆಂಜನೇಯ ರೆಡ್ಡಿ ಅವರನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆ, ಜಿಲ್ಲಾ ಸಂಚಾಲಕರಾದ ಪರಮೇಶ್ವರ ಕೆಮ್ಮಿಂಜೆ ರಂಗತ್ತಮಲೆ, ಆನಂದ, ಮಾಸ್ಟರ್ ಸ್ಟುಡಿಯೋ ಮಾಲಕರಾದ ಚೆನ್ನಕೇಶವ ಸುಳ್ಯ ಇವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು. ಅಂಬೇಡ್ಕರ್...

ಕೆ.ವಿ.ಜಿ ಆಯುರ್ವೇದ ಕಾಲೇಜಿಗೆ ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಚಿನ್ನದ ಪದಕ

ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ, ಇವರು ನಡೆಸಿದ ಆಯುರ್ವೇದ ಪದವಿ ಪರೀಕ್ಷೆಯಲ್ಲಿ ಸುಳ್ಯದ ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಡಾ. ಮೇಘನ ಸಿ., ವಿಶ್ವವಿದ್ಯಾಲಯದ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾಳೆ.ವಿದ್ಯಾರ್ಥಿನಿಯನ್ನು, ಎ.ಒ.ಎಲ್.ಇ(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಅರ್ಕಿಟೆಕ್ಟ್. ಅಕ್ಷಯ್ ಕೆ.ಸಿ., ಕಾರ್ಯದರ್ಶಿಗಳಾದ...

ಮುರುಳ್ಯ – ಎಣ್ಮೂರು ಸಹಕಾರಿ ಸಂಘದ ಹೊಸ ಕಟ್ಟಡಕ್ಕಾಗಿ ತಂದಿಟ್ಟಿದ್ದ ರೂ1.52 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ಸ್ ಸಾಧನ ಕಳವು

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮುರುಳ್ಯ – ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಲೆಕ್ಕಾಡಿ ಕಟ್ಟಡದಲ್ಲಿ...

ಉಳುವಾರು : ವಿಷ್ಣುಮೂರ್ತಿ ದೈವದ ಬೈಲಕೋಲ

ಅರಂತೋಡು ಗ್ರಾಮದ ಉಳುವಾರು ತರವಾಡು ಮನೆಯಲ್ಲಿ ವಿಷ್ಣುಮೂರ್ತಿ ಬೈಲುಕೋಲ ದಿ.30 ರಂದು ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಹಿರಿಯರು ಪ್ರಮುಖರು ಉಪಸ್ಥಿತರಿದ್ದರು.

ಐವರ್ನಾಡು : ಉದ್ದಂಪಾಡಿಯಲ್ಲಿ ಗೋಂದೋಳು ಪೂಜೆ

ಐವರ್ನಾಡು ಗ್ರಾಮದ ಉದ್ದಂಪ್ಪಾಡಿ ರಾಮಣ್ಣ ನಾಯ್ಕ ಅವರ ಮನೆಯಲ್ಲಿ ರಾತ್ರಿ ದಿ.29 ಮಂಗಳವಾರದಂದು ಶ್ರೀ ದೇವಿ ಅಮ್ಮನವರ ಗೋಂದೋಳು ಪೂಜೆ ನಡೆಯಿತು.

ಕಲ್ಮಕಾರು : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಒಕ್ಕೂಟ ರಚನೆ – ಅಧ್ಯಕ್ಷರಾಗಿ ಶೇಷಪ್ಪ ಗೌಡ ಕೊಪ್ಪಡ್ಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2022-23ನೇ ಸಾಲಿನ ಮುಂದಿನ 3 ವರ್ಷದ ಅವಧಿಗೆ ನೂತನ ಒಕ್ಕೂಟವನ್ನು ಮಾ.29 ರಂದು ರಚನೆ ಮಾಡಲಾಯಿತು. Harinarayana Mamatha devajana ಒಕ್ಕೂಟದ ನೂತನ ಅಧ್ಯಕ್ಷರಾಗಿ ಶೇಷಪ್ಪ ಗೌಡ ಕೊಪ್ಪಡ್ಕ, ಉಪಾಧ್ಯಕ್ಷರಾಗಿ ಹರಿನಾರಾಯಣ ಕೊಂಬೊಟ್ಟು, ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ದೇವಜನ, ಜತೆ ಕಾರ್ಯದರ್ಶಿಯಾಗಿ ಲಿಖಿನ್ ಪಡ್ಪು, ಕೋಶಾಧಿಕಾರಿಯಾಗಿ ಯತೀಶ್ ಕಾರ್ಗೋಡು...

ಮುಕ್ಕೂರು : ಯುವಸೇನೆ ಟ್ರೋಫಿ, ಸಾಧಕರಿಗೆ ಸಮ್ಮಾನ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಶ್ಲಾಘನೀಯ : ಸಂಸದ ನಳಿನ್ ಮುಕ್ಕೂರು : ಹತ್ತಾರು ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯವನ್ನು ಯುವಸೇನೆ ತಂಡ ಕ್ರಿಕೆಟ್ ಕೂಟ ಆಯೋಜನೆಯ ಮೂಲಕ ಮಾಡಿರುವುದು ಉತ್ತಮ ಪ್ರಯತ್ನ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಯುವಸೇನೆ ಮುಕ್ಕೂರು, ಜ್ಯೋತಿ ಯುವಕ ಮಂಡಲ ಮುಕ್ಕೂರು-...

ಪೆರುವಾಜೆ : ಬಿಜೆಪಿ ವಿಶೇಷ ಕಾರ್ಯಕಾರಿಣಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆಯು ಪೆರುವಾಜೆ ಜೆ. ಡಿ. ಆಡಿಟೋರಿಯಂ ನಲ್ಲಿ ನಡೆಯಿತು.ವಿಶೇಷ ಕಾರ್ಯಕಾರಿಣಿ ಯ ಉದ್ಘಾಟನೆಯನ್ನುನಗರ ಪಂಚಾಯತ್ ಅಧ್ಯಕ್ಷರಾದ ವಿನಯ ಕುಮಾರ್ ಕಂದಡ್ಕ ಉದ್ಘಾಟಿಸಿ ಮಾತನಾಡಿದರು. ವಿನಯ ಕುಮಾರ್ ಮಾತನಾಡಿ ಪಕ್ಷ ಸಂಘಟ ಹಾಗೂ ನಮ್ಮ ಜೀವನದ ವಿಚಾರ ದಾರೆ ಬಗ್ಗೆ ಮಾತನಾಡಿದರು.ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ...
Loading posts...

All posts loaded

No more posts

error: Content is protected !!