- Friday
- August 14th, 2026
ಮೀನುಗಾರಿಕೆ ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಕೊಲ್ಲಮೊಗ್ರು ಗ್ರಾಮದ ಮಲ್ಲಾಜೆ ಬೆಂಡೋಡಿ ರಸ್ತೆಯ ಮಲ್ಲಾಜೆ ಎಂಬಲ್ಲಿ ರೂ.10 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಂಕ್ರೀಟೀಕರಣದ ಮೂಲಕ ಈ ಭಾಗದ ಜನರ ಬಹುವರ್ಷದ ಬೇಡಿಕೆಗೆ ಸ್ಪಂದಿಸಿ ಫೆ.18 ರಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಸುಳ್ಯ...
ಹರಿಹರಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಳದಲ್ಲಿ ಫೆ.20 ರಿಂದ 22 ರವರೆಗೆ ನಡೆಯುವ ಜಾತ್ರೋತ್ಸವ ಮತ್ತು ಇತರ ಸಂದರ್ಭದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರ ವ್ಯವಹಾರಕ್ಕೆ ಅವಕಾಶ ನೀಡದಂತೆ ಮತ್ತು ದೇವಳದಲ್ಲಿ ಏಕರೂಪ ವಸ್ತ್ರಸಂಹಿತೆ ಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಹಿಂದು ಜಾಗರಣ ವೇದಿಕೆ ಸುಳ್ಯ ತಾಲೂಕು ಸಮಿತಿ ವತಿಯಿಂದ ದೇವಳದ ಅಭಿವೃದ್ಧಿ ಸಮಿತಿ ಸಂಚಾಲಕರಿಗೆ ಮನವಿ ಸಲ್ಲಿಸಲಾಯಿತು. ಈ...
ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿಯಲ್ಲಿ ಸುಮಾರು 4 ಕಿಲೋಮೀಟರ್ ಉದ್ದದ ಲ್ಯಾಂಡ್ ಲೈನ್ ಕೇಬಲ್ ಹಾದುಹೋಗಿದ್ದು, ಊರಿನವರು ಮಂಗಳೂರಿನಿಂದ ತಂದು ಗುಂಡಿ ತೆಗೆದು ಕೇಬಲ್ ಅನ್ನು ನೆಲದ ಒಳಗೆ ಅಳವಡಿಸಿದ್ದರು. ಆದರೆ ಒಂದು ಕಡೆ ಕಾಂಕ್ರೀಟ್ ರಸ್ತೆ ಇದ್ದ ಕಾರಣ ಕೇಬಲ್ ಅನ್ನು ಸುಮಾರು 50 ಮೀಟರ್ ಉದ್ದ ನೆಲದ ಹೊರಗೆ ಅಳವಡಿಸಲಾಗಿತ್ತು. ಈ ನೆಲದ...
ಆಲೆಟ್ಟಿ ಗ್ರಾಮದ ಗುತ್ತಿನಡ್ಕ ಸುಬ್ರಾಯ ಭಟ್ ಎಂಬವರ ತೋಟಕ್ಕೆ ಫೆ.17 ರಂದು ರಾತ್ರಿ ಕಾಡಾನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಅಡಿಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಅಪಾರ ಹಾನಿಯಾಗಿದೆ.
ಕುಕ್ಕರ್ ಸ್ಪೋಟಗೊಂಡು ಗೃಹಿಣಿಯೊಬ್ಬರು ಅಪಾಯದಿಂದ ಪಾರಾದ ಘಟನೆ ಫೆ. 17ರಂದು ಕಳಂಜ ಗ್ರಾಮದಲ್ಲಿ ನಡೆದಿದೆ. ಕಳಂಜ ಗ್ರಾಮದ ಕಿಲಂಗೋಡಿಯ ವಾಸುದೇವ ಆಚಾರ್ಯರ ಮನೆಯಲ್ಲಿ ಕುಕ್ಕರ್ ಸ್ಪೋಟಗೊಂಡಿರುವುದಾಗಿದೆ. ಶ್ರೀಮತಿ ಸುಮಾ ವಿ. ಆಚಾರ್ಯರು ಅಪಾಯದಿಂದ ಪಾರಾದ ಗೃಹಿಣಿ. ಬೆಳಗ್ಗಿನ ಉಪಹಾರಕ್ಕೆ ಕುಕ್ಕರ್ ನಲ್ಲಿ ಪಲಾವ್ ಇಟ್ಟಿದ್ದರು. ಕುಕ್ಕರ್ ನಲ್ಲಿ ಒಂದು ವಿಷಲ್ ಆಗುವಷ್ಟು ಹೊತ್ತಿಗೆ ಹೊರಗಿನಿಂದ ಯಾರೋ...
ಸುಳ್ಯ ನಗರ ಪಂಚಾಯತ್ಗೆ 3 ಮಂದಿ ನಾಮನಿರ್ದೇಶನ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ. ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ, ಯತೀಶ್ ಬೀರಮಂಗಲ ಅವರನ್ನು ನಗರ ಪಂಚಾಯತ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ ಮತ್ತು ಯತೀಶ್ ಬೀರಮಂಗಲ ಅವರು ಸ್ಪರ್ಧಿಸಿದ್ದರು.
ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಲಯ ಶಿಕ್ಷೆ ನೀಡಿ ಆದೇಶಿಸಿದೆ. ದುಗಲಡ್ಕ ನಿವಾಸಿ ಸುಳ್ಯದ ಮರದ ವ್ಯಾಪಾರಿ ಮಹಮ್ಮದ್ ಅಶ್ರಫ್ ಎಂಬವರು ದಿನಾಂಕ 01/01/2019 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಜಬಳೆ ಸೋಮಶೇಖರ್ ನಾಯಕ್ ಎಂಬವರ ಮನೆಗೆ ಪಿಕಪ್ ವಾಹನದಲ್ಲಿ ಧಾವಿಸಿ, ಸುಲಿದು...
ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಹಾಕಿರುವ ಹಲವು ಚಯರ್ ಗಳು ಮುರಿದು ಬಿದ್ದು ಕಬ್ಬಿಣದ ರಾಡ್ ಮಾತ್ರ ಉಳಿದುಕೊಂಡಿತ್ತು. ಇದರಿಂದ ಪ್ರಯಾಣಿಕರು ಸಂಕಟ ಅನುಭವಿಸುತ್ತಿರುವ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ನಲ್ಲಿ ಫೆ. 14 ರಂದು ವರದಿ ಪ್ರಕಟಿಸಿ ಅಧಿಕಾರಿಗಳನ್ನು ಎಚ್ಚರಿಸಿತ್ತು.ವಾರದೊಳಗೆ ಸರಿಪಡಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಫೆ.17 ರಂದು ಚಯರ್ ದುರಸ್ತಿ...
(ಚಿತ್ರ : ಶಾಂತಾಲ ಸುಬ್ರಹ್ಮಣ್ಯ) ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುಬ್ರಹ್ಮಣ್ಯ ಶಾಖೆಯ ಉದ್ಘಾಟನೆಯು ಫೆ. 17 ರಂದು ಶ್ರೀಕೃಪಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಗೊಂಡಿತು. ಶಾಖೆಯ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.12ರಂದು ಬೆಳಗ್ಗೆ ಉಗ್ರಾಣ ಮುಹೂರ್ತ ನಡೆದು ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ, ರಾತ್ರಿ ಧ್ವಜಾರೋಹಣ ನಡೆಯಿತು. ಬಳಿಕ...
Loading posts...
All posts loaded
No more posts
