- Friday
- August 14th, 2026
ಚಂದನ ವಾಹಿನಿಯಲ್ಲಿ ಇಂದು ರಾತ್ರಿ 9.30 ಕ್ಕೆ ಪ್ರಸಾರವಾಗುವ ಕವಿಗೋಷ್ಠಿಯಲ್ಲಿ ಯುವ ಸಾಹಿತಿ ಸಂಗೀತಾ ರವಿರಾಜ್ ಅವರ ಕವನ ಪ್ರಸಾರವಾಗಲಿದೆ.
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಆರಂಭವಾಗಿದ್ದು ಇಂದುಬೆಳಿಗ್ಗೆ ವಿವಿಧ ವೈದಿಕ ಕಾರ್ಯಗಳು, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಮ್ಮನವರ ಬಲಿ ಉತ್ಸವ ನಡೆಯಿತು. ಫೆ.14 ರವರೆಗೆ ಕಾರ್ಯಕ್ರಮ ನಡೆಯಲಿದೆ. ಫೆ. 13ರಂದು ಬೆಳಿಗ್ಗೆ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಮ್ಮನವರ...
(ಚಿತ್ರ : ಶಾಂತಲಾ ಸುಬ್ರಹ್ಮಣ್ಯ) ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಸಭೆ ಸದಸ್ಯರಾಗಿರುವ ಹೆಚ್ ಡಿ ದೇವೇಗೌಡ ಅವರು ಫೆ.12 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ತುಲಾಭಾರ ಸೇವೆಯನ್ನು ನೆರವೇರಿಸಿ, ದೇವರ ದರ್ಶನ ಪಡೆದರು. ಪತ್ನಿ ಚೆನ್ನಮ್ಮ ಅವರೊಂದಿಗೆ ಆಗಮಿಸಿದ ದೇವೇಗೌಡರನ್ನು ದೇಗುಲದ ವತಿಯಿಂದ ಸ್ವಾಗತಿಸಲಾಯಿತು. ಬಳಿಕ ದೇಗುಲದ ಗೋಪುರ ಬಳಿ...
ಪೇರಡ್ಕ ದರ್ಗಾ ಶರೀಫ್ ವಠಾರದ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಫೆ. 18 ರಿಂದ ಫೆ. 20 ವರೆಗೆ ಉರೂಸ್ ಸಮಾರಂಭ ಮತ್ತು ಮೂರು ದಿನಗಳ ಧಾರ್ಮಿಕ ಉಪನ್ಯಾಸ ನಡೆಯಲಿದೆ ಎಂದು ಎಂ.ಜೆ.ಎಂ ಪೇರಡ್ಕದ ಗೌರವಾಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಫೆ.11 ರಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.ಮೊದಲ ದಿನ ಜುಮಾ ನಮಾಜಿನ ಬಳಿಕ ಧ್ವಜಾರೋಹಣವನ್ನು ಎಂ....
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭದ ಕುರಿತು ಫೆ.12 ರಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಫೆ.20 ರಂದು ಸುಳ್ಯದ...
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶುಕ್ರವಾರದಂದು ಆರಂಭಗೊಂಡಿದ್ದು ಫೆ.14 ಸೋಮವಾರದ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಇಂದು ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಬೆಳಗ್ಗೆ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ ನಡೆಯಿತು. ಕಲ್ಲೇರಿತ್ತಾಯ ಮಹಿಳಾ ಭಜನಾ ತಂಡದಿಂದ ಭಜನಾ ಸೇವೆ...
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು, ಇಂದು(ಫೆ.12) ಬೆಳಗ್ಗೆ ಉಗ್ರಾಣ ಮುಹೂರ್ತ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ,ಅರ್ಚಕರಾದ ಉದಯಕುಮಾರ.ಕೆ.ಟಿ, ವ್ಯವಸ್ಥಾಪನ...
ವಿದ್ಯಾರ್ಥಿ ಸಮುದಾಯ ವಿದ್ಯಾಭ್ಯಾಸ ಮಾಡುವ ಬದಲಿಗೆ ರಾಜಕೀಯ ಕಾರಣಗಳಿಂದ ವೈಮನಸ್ಸು ಬೆಳೆಯುತ್ತಿರುವುದು ಅಪಾಯಕಾರಿ. ಅಲ್ಲದೇ ಧ್ವಜ ಸ್ತಂಭದ ಮೇಲೆ ರಾಷ್ಟ್ರ ಧ್ವಜ ಮಾತ್ರ ಹಾರಿಸಬೇಕೆ ಹೊರತು ಕೇಸರಿ ಧ್ವಜಗಳನ್ನು ಅಲ್ಲ. ಅಂತಹ ಕೃತ್ಯಗಳನ್ನು ನಡೆಸಿದವರ ಮೇಲೆ ಪೋಲಿಸರು ಕೇಸು ದಾಖಲಿಸಬೇಕು ಎಂದು ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿದರು.ಅವರು ಫೆ.11ರಂದು ಪ್ರೆಸ್ ಕ್ಲಬ್ ನಲ್ಲಿ...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ವತಿಯಿಂದ ಫೆ.11 ರಂದು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಮತ್ತು ರೈತ ಉತ್ಪಾದಕ ಸಂಸ್ಥೆ ರಚಿಸುವ ಬಗ್ಗೆ ಮಾಹಿತಿ ಹಾಗೂ ತಾಳೆ ಬೆಳೆ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.ಸುಬ್ರಹ್ಮಣ್ಯ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅರಂತೋಡು ಹಿಂದೂ ರುದ್ರಭೂಮಿ ಅಭಿವೃದ್ಧಿಗೆ 2.5 ಲಕ್ಷ ಅನುದಾನ ಮಂಜೂರಾಗಿದ್ದು ಮಂಜೂರಾತಿ ಪತ್ರವನ್ನು ಜಿಲ್ಲಾನಿರ್ದೇಶಕರಾದ ಪ್ರವೀಣ್ ಕುಮಾರ್ ಪಂಚಾಯತ್ ಅಧ್ಯಕ್ಷರಾದ ಹರಿಣಿ ದೇರಾಜೆಯವರಿಗೆ ಹಸ್ತಾಂತರಿಸಿ ಶೀಘ್ರವಾಗಿ ಕಾಮಗಾರಿ ಪೂರ್ತಿಗೊಳ್ಳಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ವೇತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಯೋಜನಾಧಿಕಾರಿ...
Loading posts...
All posts loaded
No more posts
