ಕೊಲ್ಲಮೊಗ್ರು : ಅ.29 ರಂದು ಅರುಣೋದಯ ಜನರಲ್ ಸ್ಟೋರ್ ಶುಭಾರಂಭ

ಉದಯ ಶಿವಾಲ ಮಾಲಕತ್ವದ ಅರುಣೋದಯ ಜನರಲ್ ಸ್ಟೋರ್ ಅ.29 ನೇ ಶುಕ್ರವಾರದಂದು ಕೊಲ್ಲಮೊಗ್ರದ ಎಸ್.ಕೆ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದ್ದು, ನಮ್ಮಲ್ಲಿ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು, ನಂದಿನಿ ಹಾಲು, ಮೊಸರು ಹಾಗೂ ಉತ್ಪನ್ನಗಳು ದೊರೆಯುತ್ತವೆ ಎಂದು ಮಾಲಕರಾದ ಉದಯ ಶಿವಾಲ ತಿಳಿಸಿದ್ದಾರೆ. ವರದಿ :- ಉಲ್ಲಾಸ್ ಕಜ್ಜೋಡಿ

ಕೊಡಗು ಸಂಪಾಜೆ ಸೊಸೈಟಿ ಮಹಾಸಭೆ – ರೈತರಿಗೆ ಮಣ್ಣುಪರೀಕ್ಷೆ ಮಾಡಿಯೇ ಪೂರಕ ಗೊಬ್ಬರ ಪೂರೈಕೆಗೆ ಕ್ರಮ – ಅನಂತ್ ಊರುಬೈಲು

ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ 2020-21 ನೆ ಸಾಲಿನ ವಾರ್ಷಿಕ ಮಹಾಸಭೆಯು ಸಂಪಾಜೆ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ದಿನಾಂಕ 23.10.2021 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಎನ್.ಸಿ ಅನಂತ್ ರವರು ವಹಿಸಿದ್ದರು, ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ರೇಣುಕಾಕ್ಷ...
Ad Widget

ಕವಯಿತ್ರಿ, ಲೇಖಕಿ, ನೃತ್ಯಗಾರ್ತಿ, ಹಾಡುಗಾರ್ತಿ, ನಿರೂಪಕಿ ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಸೌರಭ ರತ್ನ” ರಾಜ್ಯ ಪ್ರಶಸ್ತಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು ಹಾಗೂ ಕಲ್ಕೂರ ಪ್ರತಿಷ್ಠಾನ ಇವರ ಸಹಯೋಗದಲ್ಲಿ15ರಂದು ತುಳು ಭವನ ಉರ್ವಸ್ಟೋರ್ ಮಂಗಳೂರಿನಲ್ಲಿ ಜರುಗಿದ ತುಳು, ಕನ್ನಡ ಸಾಹಿತ್ಯೋತ್ಸವದಲ್ಲಿ ಕವಯಿತ್ರಿ ,ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ , ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ "ಸೌರಭ ರತ್ನ" ರಾಜ್ಯ...

ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ಹಾಗೂ ಕರಪತ್ರ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಶಿಕ್ಷಕರ ಸಂಘದ ವತಿಯಿಂದ ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮ ಹಾಗೂ ಸ್ವಚ್ಛತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಕರಪತ್ರ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸುಳ್ಯದ ಕೆ ಎಫ್ ಡಿ ಸಿ ಗಾರ್ಡನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಾಯಿಗೀತಾ ಜ್ಞಾನೇಶ್...

ನ.01: ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ವತಿಯಿಂದ ಕೃಷ್ಣಲೀಲೆ-ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ ಹಾಗೂ ಯೋಧನಮನ ಕಾರ್ಯಕ್ರಮ

ಯುಗಪುರುಷ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾನುಗ್ರಹದೊಂದಿಗೆ ಆದರಣೀಯ ಡಿ.ಹರ್ಷೇಂದ್ರ ಕುಮಾರ್ ಅವರ ಶುಭಾಶಯಗಳೊಂದಿಗೆ ಯಕ್ಷಯೋಧ ಮಿತ್ರವೃಂದ ಕೋಟೆಮುಂಡುಗಾರು ಅರ್ಪಿಸುವ ಯಕ್ಷಗಾನ ಪ್ರದರ್ಶನ ಕೃಷ್ಣಲೀಲೆ-ವೀರ ಅಭಿಮನ್ಯು ಹಾಗೂ ಯೋಧನಮನ ಕಾರ್ಯಕ್ರಮ ನ.01ರಂದು ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ಜರುಗಲಿದೆ. ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಎಂ. ಕೂಸಪ್ಪ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ...

ಹರಿಹರ ಪಲ್ಲತ್ತಡ್ಕ : ಪ್ರಥಮ ಹಂತದ ಗ್ರಾಮಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಅ.22 ರಂದು ಪ್ರಥಮ ಹಂತದ ಗ್ರಾಮಸಭೆ ಗ್ರಾಮಪಂಚಾಯತ್ ಅದ್ಯಕ್ಷರಾದ ಜಯಂತ್ ಬಾಳುಗೋಡು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೃಷಿ ಇಲಾಖೆಯ ಅಧಿಕಾರಿ ಮೋಹನ್ ನಂಗಾರು ನೋಡೆಲ್ ಅಧಿಕಾರಿಯಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ವಿಜಯ ಅಂಙಣ ಹಾಗೂ ಗ್ರಾಮಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಶಿಲ್ಪಾ ಕೊತ್ನಡ್ಕ ಹಾಗೂ ಗ್ರಾಮಪಂಚಾಯತ್...

ಕ್ಷಯ ಮುಕ್ತ ಗ್ರಾಮ ಪಂಚಾಯತ್ ಟಾಸ್ಕ್ ಪೋರ್ಸ್ ಸಮಿತಿ ರಚನೆ ಮತ್ತು ಮಾಹಿತಿ ಕಾರ್ಯಕ್ರಮ

ನಮ್ಮ ದೇಶವನ್ನು 2025 ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ಪ್ರಧಾನಿಯವರ ಘೋಷಣೆಯಂತೆ ಮಡಪ್ಪಾಡಿ ಗ್ರಾಮ ಪಂಚಾಯತನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ ಮಾಡುವ ನಿಟ್ಟಿನಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚನಾ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಕ್ಷಯ ಚಿಕಿತ್ಸಾ...

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ದಸರಾ ಕವಿಗೋಷ್ಠಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ ಮತ್ತು ದಸರಾ ಕವಿ ಅಭಿನಂದನಾ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಖ್ಯಾತ ಚಿತ್ರ ಕಲಾವಿದರಾದ ಬಿ.ಕೆ.ಮಾಧವ ರಾವ್ ಮಂಗಳೂರುರವರು ಸಮಾರಂಭದ ಸರ್ವಾಧ್ಯಕ್ಷತೆ ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಭೀಮರಾವ್ ವಾಷ್ಠರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು . ದಸರಾ...

ಹರಿಹರ ಪಲ್ಲತ್ತಡ್ಕ : ಲಾರಿ ಮತ್ತು ಅಂಬ್ಯುಲೆನ್ಸ್ ನಡುವೆ ಅಪಘಾತ

ಹರಿಹರ ಪಲ್ಲತ್ತಡ್ಕದ ಪ್ರೈಮರಿ ಶಾಲೆಯ ಬಳಿ ಅ.21 ರ ಸಂಜೆ ಅಂಬ್ಯುಲೆನ್ಸ್ ಮತ್ತು ಲಾರಿಯ ನಡುವೆ ಅಪಘಾತ ಸಂಭವಿಸಿದ್ದು, ಹರಿಹರ ಪಲ್ಲತ್ತಡ್ಕದಿಂದ ತೆಂಗಿನ ಕಾಯಿ ಹೇರಿಕೊಂಡು ನಡುಗಲ್ಲು ಕಡೆಗೆ ಹೋಗುತ್ತಿದ್ದ ಲಾರಿ ಆ ಕಡೆಯಿಂದ ಬಂದ ಅಂಬ್ಯುಲೆನ್ಸ್ ಗೆ ಡಿಕ್ಕಿ ಹೊಡೆದಿದ್ದು, ಎರಡೂ ವಾಹನಗಳಿಗೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಲಾರಿ ಅಂಬ್ಯುಲೆನ್ಸ್ ಗೆ ಗುದ್ದಿ ರಸ್ತೆಯ...

ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕೆವಿಜಿಯವರ ಕುರಿತು ಅರೆಭಾಷೆ ಸರಣಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿಯವರಿಂದ ಮಡಿಕೇರಿ ಆಕಾಶವಾಣಿಯಲ್ಲಿ ಡಾ. ಕುರುಂಜಿ ವೆಂಕಟರಮಣ ಗೌಡೆರ ಕುರಿತು ಸರಣಿ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಆಕಾಶವಾಣಿಯು ಡಾ. ಕುರುಂಜಿ ವೆಂಕಟರಮಣ ಗೌಡರ ಜೀವನ ಮತ್ತು ಸಾಧನೆ ಕುರಿತು ಅರೆಭಾಷೆಯಲ್ಲಿ ಸರಣಿ ಕಾರ್ಯಕ್ರಮವನ್ನು ಪ್ರಸಾರ ಮಾಡಲಿದ್ದು, ಮೊದಲ ಹಂತದ ಕಾರ್ಯಕ್ರಮವನ್ನು ಡಾ. ಅನುರಾಧಾ ಕುರುಂಜಿಯವರು...
Loading posts...

All posts loaded

No more posts

error: Content is protected !!