- Monday
- August 17th, 2026
ಗಾಂಧಿಜಯಂತಿ ಅಂಗವಾಗಿ ಬಿಜೆಪಿ ಗುತ್ತಿಗಾರು ಗ್ರಾಮ ಸಮಿತಿ ನೇತೃತ್ವದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಹರಿಯುವ ಶಂಖತೀರ್ಥ ನದಿಯ ಸ್ವಚ್ಚತಾ ಕಾರ್ಯಕ್ರಮ ಇಂದು ನಡೆಯಿತು. ದೇವಳದ ಸುತ್ತ ಹರಿಯುವ ನದಿಯಲ್ಲಿ ಬೆಳೆದ ಕಾಡು ಗಿಡಗಳು ಹಾಗೂ ತ್ಯಾಜ್ಯ ಪ್ಲಾಸ್ಟಿಕ್ ಮತ್ತು ಹುಲ್ಲು ಗಳನ್ನು ಕಡಿದು ಸ್ವಚ್ಛ ಗೊಳಿಸಲಾಯಿತು.ಈ ಸ್ವಚ್ಚತಾ ಕಾರ್ಯದಲ್ಲಿ ವಳಲಂಬೆ ದೇವಸ್ಥಾನದ...
ಬೂತ್ ಸಮಿತಿ ಅಧ್ಯಕ್ಷರಾದ ಬೂಡು ರಾಧಾಕೃಷ್ಣ ರೈ ಯವರ ನಿವಾಸದಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ ಸೆ.29 ರಂದು ನಡೆಯಿತು. ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನಾಮಫಲಕ ಅನಾವರಣಗೊಳಿಸಿದರು. ಮಂಡಲ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ, ರಾಕೇಶ್ ರೈ ಕೆಡೆಂಜಿ, ನಗರ ಬಿಜೆಪಿ ಅಧ್ಯಕ್ಷರಾದ ಐ ಬಿ ಚಂದ್ರಶೇಖರ್, ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಪಕ್ಷ ಸಂಘಟನೆ...
ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಂಬುಲೆನ್ಸ್ ಖರೀದಿ ವಿಚಾರವಾಗಿ ಸಮಾಲೋಚನ ಸಭೆ ಮತ್ತು ಮನವಿ ಪತ್ರ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಚೈತ್ರಭಾನು, ಗುತ್ತಿಗಾರು ಪಂಚಾಯತ್ ಪಿ. ಡಿ. ಓ. ಧನಪತಿ, ಸಿರಿಯಾಕ್ ಮ್ಯಾತ್ಯು ಆಚಳ್ಳಿ, ಡಿ.ಆರ್. ಉದಯಕುಮಾರ್ ದೇರಪ್ಪಜ್ಜನಮನೆ, ಶ್ರೀಮತಿ ಪುಷ್ಪಾವತಿ ದೇವಿದಾಸ್ ಬುಡ್ಲೆಗುತ್ತು. ಇಂಡಿಯನ್ ಆಯಿಲ್...
ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಈ ಸಾಲಿನ ನೇಶನ್ ಬಿಲ್ಡರ್ ಅವಾರ್ಡ್ ನ್ನು ವಿಜಯ್ಕುಮಾರ ನಡುತೋಟ ಅವರಿಗೆ ಸೆ.29 ರಂದು ನೀಡಿ ಗೌರವಿಸಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಶಾಲಾಭಿವೃದ್ಧಿ, ಪಾಠ ಹಾಗೂ ಪಠ್ಯೇತರ ಚಟುವಟಿಗಳಲ್ಲಿ ಮುಂಚೂಣಿಯಲ್ಲಿ ಇರುವವರಿಗೆ ಅಂತರಾಷ್ಟೀಯ ಸಂಸ್ಥೆ ರೋಟರಿಯಿಂದ ಕೊಡಮಾಡುವ 'ನೇಶನ್ ಬಿಲ್ಡರ್ ಅವಾರ್ಡ್' ಪ್ರಶಸ್ತಿಯನ್ನು ಈ ಬಾರಿ ಕಡಬ...
ಕೊಡಿಯಾಲ ಗ್ರಾಮ ಪಂಚಾಯತಿಯ ಸಾಮಾನ್ಯ ಸಭೆಯು ಸೆ.30ರಂದು ಗ್ರಾಮ ಪಂಚಾಯತಿಯ ಮಿನಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿನಡೆಯಿತು. ಸಾಮಾನ್ಯ ಸಭೆಯಲ್ಲಿ ಮ.ಗಾ.ಉ. ಖಾತ್ರಿ ಯೋಜನೆಯ ಪ್ರಸ್ತುತ ಕಾಮಗಾರಿ ಬೇಡಿಕೆಗಳ ಬಗ್ಗೆ, ಎರೆಹುಳು ತೊಟ್ಟಿ, ಬಚ್ಚಲುಗುಂಡಿ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು. ವಸತಿ ರಹಿತರ ಪಟ್ಟಿ ಪರಿಷ್ಕರಣೆ, ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಆಯೋಜಿಸುವ...
ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕೋಟೆಮುಂಡುಗಾರು ಇದರ 2020-21ನೇ ವರ್ಷದವಾರ್ಷಿಕ ಮಹಾಸಭೆಯು ಅ.08ನೇ ಶುಕ್ರವಾರ ಪೂರ್ವಾಹ್ನ ಗಂಟೆ 10-30ಕ್ಕೆ ಸರಿಯಾಗಿ ಸಂಘದ ಪ್ರಧಾನ ಕಛೇರಿ ಕೋಟೆಮುಂಡುಗಾರು ಇಲ್ಲಿನ ಸಭಾಭವನದಲ್ಲಿ ನಡೆಯಲಿದೆ. ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಎಂ ಇವರು ವಹಿಸಲಿದ್ದಾರೆ. ಎಲ್ಲಾ ಸದಸ್ಯರು ಸಭೆಗೆ ಸಕಾಲಕ್ಕೆ...
ಗುತ್ತಿಗಾರು ಹಾಗೂ ಹರಿಹರಪಲ್ಲತ್ತಡ್ಕದಲ್ಲಿ ಲಾಸ್ಯ ಕಲಾಶಾಲೆಯ ನೃತ್ಯ ತರಬೇತಿ ಅ.10 ಪುನರಾರಂಭಗೊಳ್ಳಲಿದೆ. ಪ್ರತಿ ಆದಿತ್ಯವಾರ ಹರಿಹರದಲ್ಲಿ ಬೆಳಿಗ್ಗೆ 9.30 ರಿಂದ 12.30 ರವರೆಗೆ ಹಾಗೂ ಗುತ್ತಿಗಾರಿನಲ್ಲಿ 2.30 ರಿಂದ 4.30 ರ ವರೆಗೆ ತರಗತಿಗಳು ನಡೆಯಲಿದೆ. ಆಸಕ್ತರು ದೂರವಾಣಿ ಮುಖಾಂತರ (ಮೊ: 94805 30310) ಸಂಪರ್ಕಿಸಬಹುದು ಎಂದು ಶಿಕ್ಷಕಿ ಶ್ರೀಮತಿ ರೇಶ್ಮಾ ಕಡ್ಯ ತಿಳಿಸಿದ್ದಾರೆ.
ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿಗೊಂಡು ಎಡಮಂಗಲ ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡ ಶ್ರೀಮತಿ ಭವ್ಯ ಎಂ.ಬಿ.ಯವರಿಗೆ ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ಸೆ.30 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ನೂತನ ಪಿ.ಡಿ.ಒ ಅನುಷಾರವರಿಗೆ...
ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಸುಮಾರು 9 ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಬಾಳಿಲ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡಿರುವ ಹೂವಪ್ಪ ಗೌಡ ರವರನ್ನು ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳ ಇವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಿ ಬೀಳ್ಗೊಡಲಾಯಿತು. ಈ ಸಂದರ್ಭದಲ್ಲಿ ಕೊಡಿಯಾಲ ಶಾಲಾ ಮುಖ್ಯ ಶಿಕ್ಷಕ ಸಿದ್ದರಾಜು, ಕೊಡಿಯಾಲ ಗ್ರಾ.ಪಂ. ಉಪಾಧ್ಯಕ್ಷ...
ಪಂಜ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಕಿರಿಭಾಗ ರವರು ಸೆ.30ರಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಸುಳ್ಯ ತಾಲೂಕು ಬಾಳುಗೋಡು ಗ್ರಾಮದ ಕಿರಿಭಾಗ ಶಿವಪ್ಪ ಮಾಸ್ತರ್ ಮತ್ತು ಅಮ್ಮಣಿ ದಂಪತಿಗಳ ಪುತ್ರರಾದ ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಳುಗೋಡು, ಪಂಜ, ಸುಬ್ರಹ್ಮಣ್ಯದಲ್ಲಿ ಪಡೆದು, ಸುಳ್ಯದ ನೆಹರೂ ಸ್ಮಾರಕ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜಶಾಸ್ತ್ರದಲ್ಲಿ...
Loading posts...
All posts loaded
No more posts
