- Monday
- August 17th, 2026
ಬೆಳ್ಳಾರೆಯಲ್ಲಿ ೨೨ ರ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಸೆ.೨೮ರಂದು ಸಂಜೆ 7 ಗಂಟೆ ಸುಮಾರಿಗೆ ಗಣೇಶ ಎಂಬಾತ ಕೆಲಸ ಮುಗಿಸಿ ಬಸ್ ನಲ್ಲಿ ಬಂದ ಯುವತಿ ಯ ಮೇಲೆ ಬಸ್ ನಿಲ್ದಾಣದಿಂದ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಸಂದರ್ಭ ಆಕೆಯ ಮೈ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಯುವತಿಯನ್ನು ಏಕಾಏಕಿ...
ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ. ಪಿ. ನಡ್ಡರವರ ಸೂಚನೆಯಂತೆ ಭಾರತೀಯ ಜನತಾ ಪಾರ್ಟಿ ಸುಳ್ಯ ಇದರ ವತಿಯಿಂದ ಪೆರುವಾಜೆ ಗ್ರಾಮದ ಬೂತ್ ಸಂಖ್ಯೆ 76 ರ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ರಮೇಶ್ ನಾಯ್ಕ ಮಠತ್ತಡ್ಕ ರವರ ಮನೆಯಲ್ಲಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿಯವರಿಂದ ನಾಮ ಫಲಕ ಅಳವಡಿಸುವ ಕಾರ್ಯಕ್ರಮ ಸೆ. 28 ರಂದು...
ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಭದ್ರತೆ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ಸೆ.29ರಂದು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರದಲ್ಲಿ ಮಾಹಿತಿಯನ್ನು ಸ್ಥಳೀಯ ವೈದ್ಯರಾದ ಕುಮಾರಿ ಪ್ರಿಯಾಂಕ ನಾಟಿಕೇರಿ ಅವರು ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಮಹಮದ್ ಇಸಾಕ್ ಅವರು ಮತ್ತು ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀಯುತ ಚಾರ್ಲ್ಸ್ ಅವರು...
ಐವರ್ನಾಡು ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, ದತ್ತಿ ನಿಧಿ ಹಾಗೂ ಪಠ್ಯ ಪೂರಕ ಅಭ್ಯಾಸ ಪುಸ್ತಕ ವಿತರಣೆ, 9ನೇ ತರಗತಿ ವಿದ್ಯಾರ್ಥಿನಿಗೆ ವೈದ್ಯಕೀಯ ಶ್ರವಣ ಸಾಧನ...
ಸುಳ್ಯ ತಾಲೂಕು ಪಂಬೆತ್ತಾಡಿ ದಿ. ಹೊನ್ನಪ್ಪ ಗೌಡರ ಪುತ್ರ ಸುನಿಲ್ ಕುಮಾರ್ರವರ ವಿವಾಹವು ಜಾಲ್ಸೂರು ಗ್ರಾಮದ ಆರ್ಭಡ್ಕ ದಿ. ಚಂದ್ರಶೇಖರ ಗೌಡರ ಪುತ್ರಿ ರಮ್ಯರವರೊಂದಿಗೆ ಸೆ.01ರಂದು ಆರ್ಭಡ್ಕ ವಧುವಿನ ಮನೆಯಲ್ಲಿ ನಡೆಯಿತು.
ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದ ಆಚರಣೆ ನಡೆಯಲಿದೆ.ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಎನ್.ಎಂ.ಸಿ ಯ ವಿಶ್ರಾಂತ ಪ್ರಾಂಶುಪಾಲರಾದ ಡಾ.ಪ್ರಭಾಕರ ಶಿಶಿಲ ಗಾಂಧಿ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಲೆನಾಡು ಸಿರಿ ಪ್ರಶಸ್ತಿ ಪುರಸ್ಕೃತ...
ಐನೆಕಿದು ನಿಸರ್ಗ ಯುವಕ ಮಂಡಲದ ರಂಗಮಂದಿರ ನಿಸರ್ಗ ವೇದಿಕೆಯ ನಿರ್ಮಾಣದ ಬಗ್ಗೆ ಐನೆಕಿದು ಶಾಲಾ ವಠಾರದಲ್ಲಿ ಸೆ.26 ರಂದು ನಿಸರ್ಗ ಯುವಕ ಮಂಡಲದ ಅಧ್ಯಕ್ಷರಾದ ಲಕ್ಷ್ಮೀಶ ಇಜ್ಜಿನಡ್ಕ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಸಭೆಯಲ್ಲಿ ರಂಗಮಂದಿರ ನಿರ್ಮಾಣ ಸಮಿತಿಯನ್ನು ರಚಿಸಲಾಯಿತು. ರಂಗಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಗಿರೀಶ್ ಪೈಲಾಜೆ, ಉಪಾಧ್ಯಕ್ಷರಾಗಿ ಕಿರಣ್ ಪೈಲಾಜೆ, ಕಾರ್ಯದರ್ಶಿಯಾಗಿ ಅಜಿತ್...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.05ರಿಂದ ನವರಾತ್ರಿ ಉತ್ಸವವು ಆರಂಭಗೊಳ್ಳಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅ.14ರವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪೂಜಾ ಕಾರ್ಯಗಳು ನೆರವೇರಲಿದ್ದು ದೇವಾಲಯಲ್ಲಿ ಪ್ರತಿದಿನ ಸಂಜೆ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಅ.05ರಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ರಂಗಪೂಜೆ ನಡೆಯಲಿದೆ. ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ...
ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕೊಡುವ ವಾರ್ಷಿಕ ಪ್ರಶಸ್ತಿಗೆ ಸುಳ್ಯದ ಇಬ್ಬರು ಆಯ್ಕೆಯಾಗಿದ್ದು, ಸೆ.26 ರಂದು ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಬೆಳ್ಳಾರೆಯ ಉದ್ಯಮಿ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ ಕಾಮಧೇನು,ಸಮಾಜ ಸೇವಕ ಮಂಜುನಾಥ ಮೇಸ್ತ್ರಿ ಬಳ್ಳಾರಿಯವರಿಗೆ...
ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ 18 ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ 'ಶ್ರೀ ನವರಾತ್ರಿ ಮಹೋತ್ಸವಗಳು' ಅ.07ನೇ ಗುರುವಾರದಿಂದ ಪ್ರಾರಂಭಗೊಂಡು ಅ.14ನೇ ಗುರುವಾರದವರೆಗೆ ವಿಜೃಂಭಣೆಯಿಂದ ಜರುಗಲಿದೆ.ಅ.07ರಂದು ಬೆಳಿಗ್ಗೆ 8.00ಗಂಟೆಗೆ ದೀಪೋಜ್ವಲನದೊಂದಿಗೆ ಮಹೋತ್ಸವ ಮೊದಲ್ಗೊಳ್ಳಲಿದೆ. ಪ್ರತಿನಿತ್ಯ ಮಧ್ಯಾಹ್ನ ಗಂಟೆ 12.00ರಿಂದ ಉಭಯ ದೇವರಿಗೆ ಮಹಾಪೂಜೆ, ಗಂಟೆ...
Loading posts...
All posts loaded
No more posts
