ಸುಬ್ರಹ್ಮಣ್ಯ : ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಭೆಯು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳಿಗೆ ಸೂಚಿಸಿದಂತೆ ಸರ್ವೇ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಗಳು ಜಂಟಿ ಸರ್ವೇ ಶೀಘ್ರವಾಗಿ ನಡೆಸಬೇಕು ಹಾಗೂ ಕಡಬ ತಾಲೂಕಿನ ಅಕ್ರಮ ಸಕ್ರಮ ಕಡತಗಳನ್ನು...

ಎನ್ ಎಂ ಸಿ: ಯುವ ರೆಡ್ ಕ್ರಾಸ್ ಘಟಕದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಪ್ರಯುಕ್ತರಕ್ತದಾನ ಶಿಬಿರವು 15- 8-- 2021ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇಲ್ಲಿಯ ರಕ್ತನಿಧಿ ಕೇಂದ್ರದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ)...
Ad Widget

ಪರ್ನೋಜಿ ಕೃಷ್ಣಪ್ಪ ಗೌಡ ನಿಧನ

ಶತಾಯುಷಿ ನಾರ್ಕೊಡು ಕೃಷ್ಣಪ್ಪ ಗೌಡ ನಿಧನತೊಡಿಕಾನ ಗ್ರಾಮದ ಪರ್ನೋಜಿ ನಾರ್ಕೋಡು ಮನೆಯ ಶತಾಯುಷಿ ಕೃಷ್ಣಪ್ಪ ಗೌಡ (106) ಸ್ವಗ್ರಹದಲ್ಲಿ ಶುಕ್ರವಾರ ನಿಧನರಾದರು.ಪುತ್ರರಾದ ಸುಂದರ ಗೌಡ, ಕೂಸಪ್ಪ ಗೌಡ, ಚಂಗಪ್ಪ ಗೌಡ, ಗಣಪಯ್ಯ ಗೌಡ, ಪುತ್ರಿ ಭಾಗೀರಥಿ ಹಾಗೂ ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಕುಟುಂಬಸ್ಥರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಳಂಜ: ಅಸಮರ್ಪಕ ರಸ್ತೆ – ನಡೆದುಕೊಂಡು ಹೋಗಿ ಕೋವಿಡ್ ಪರೀಕ್ಷೆ ನಡೆಸಿದ ಆರೋಗ್ಯ ಕಾರ್ಯಕರ್ತರು

ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಕಳಂಜ ಗ್ರಾಮದ ತಂಟೆಪ್ಪಾಡಿ-ನಾಲ್ಗುತ್ತು ಭಾಗಕ್ಕೆ ಕೋವಿಡ್ ಪರೀಕ್ಷೆಗೆ ತೆರಳಿದ್ದು ತಂಟೆಪ್ಪಾಡಿ-ನಾಲ್ಗುತ್ತು ರಸ್ತೆ ತೀರಾ ಹದಗೆಟ್ಟ ಕಾರಣ ವಾಹನ ಹೋಗದೆ ಸ್ವಾಬ್ ಪರೀಕ್ಷೆಗೆ ನಡೆದುಕೊಂಡು ಹೋಗುವಂತಾಯಿತು. ಈ ರಸ್ತೆಯ ದುಸ್ಥಿತಿಯಿಂದ ಈ ಭಾಗದ ಜನರು ಹಲವಾರು ವರ್ಷಗಳಿಂದ ಇದೇ ಗೋಳು ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯರಾದ ಲೋಕೇಶ್ ತಂಟೆಪ್ಪಾಡಿಯವರು...

ದಬ್ಬಡ್ಕ : ಅಕ್ರಮ ಮರ ಕಡಿದ ಪ್ರಕರಣ – ಮೂವರ ಬಂಧನ

ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ದಬ್ಬಡ್ಕ ನಿವಾಸಿಗಳಾದ ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್. ಇವರುಗಳನ್ನು ಬಂಧಿಸಿ ನ್ಯಾಯಾಂಗ...

ಕವನ :- ನೀನಾರು ಮಾನವ…?

ನಾನು ನಾನು ಎಂದು ನೀ ಜಂಭ ಪಡುವೆ…ಎಲ್ಲವೂ ನನ್ನದು ಎಂಬ ಭ್ರಮೆಯಲ್ಲಿ ಬದುಕುವೆ…ಪುಣ್ಯದ ಬೆಲೆಯನ್ನು ನೀ ಮರೆತುಬಿಡುವೆ…ಬದುಕಿನುದ್ದಕ್ಕೂ ಪಾಪ ಕಾರ್ಯವನ್ನೇ ಮಾಡುವೆ… ಅಹಂಕಾರದ ಕೋಟೆಯಲ್ಲಿ ನೀ ಬಂಧಿಯಾದೆ…ನಿನ್ನವರ ಪ್ರೀತಿಯನ್ನು ನೀ ಮರೆತುಹೋದೆ…ಯಾರ ಮಾತಿಗೂ ನೀ ಬೆಲೆ ನೀಡದಾದೆ…ಯಾರ ನೋವಿಗೂ ನೀ ಕರಗದಾದೆ… ಅಹಂಕಾರದ ಅಂಧಕಾರದಲ್ಲಿ ನೀ ಮುಳುಗಿಹೋದೆ…ನಾನೇ ಸರ್ವಸ್ವ ಎಂದು ನೀ ತಿಳಿದುಕೊಂಡೆ…ಜಗದಲ್ಲಿ ನನಗಿಂತ ಮೇಲ್ಯಾರೂ...

ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನಾಗರಪಂಚಮಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಇಂದು ನಾಗರಪಂಚಮಿ ಪ್ರಯುಕ್ತಶ್ರೀ ಕ್ಷೇತ್ರದ ದೇವರಮಾರು ನಾಗ ಬನದಲ್ಲಿ ಬೆಳಿಗ್ಗೆ ಹಾಲು, ಸಿಯಾಳಾಭಿಷೇಕ ತಂಬಿಲ ಸೇವೆ ನಡೆಯಿತು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ .ಪದ್ಮನಾಭ ಶೆಟ್ಟಿ ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

ತೊಡಿಕಾನ ನಾಗರ ಪಂಚಮಿ ಆಚರಣೆ

ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ನಾಗಕಟ್ಟೆಯಲ್ಲಿ ನಾಗರ ಪಂಚಮಿ ‌ ಪ್ರಯುಕ್ತ ನಾಗನಿಗೆ ಪೂಜೆ ಸಲ್ಲಿಸಿ ಹಾಲೆರೆಯಲಾಯಿತು.ದೇವಳದ ಪ್ರಧಾನ ಅರ್ಚಕ ಕೇಶವ ಮೂರ್ತಿ ಪೂಜಾ ಕಾರ್ಯ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು ಸಿಬ್ಬಂದಿಗಳು ಭಕ್ತಾಧಿಗಳು ಉಪಸ್ಥಿತರಿದ್ದರು.

ಮಿನುಂಗೂರು ದೇವಸ್ಥಾನದಲ್ಲಿ ನಾಗರ ಪಂಚಮಿ

ಮರ್ಕಂಜ: ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ವಿಶೇಷ ಅಭೀಷೆಕ ,ಪೂಜೆ ನಡೆಯಿತು

ಜಯನಗರ : ನಾಗರ ಪಂಚಮಿ ಆಚರಣೆ

ಜಯನಗರ ಕೊರಂಬಡ್ಕ ಶೀ ನಾಗಬ್ರಹ್ಮ ಆದಿಮೊಗೇರ್ಕಳದೈವಸ್ಥಾನದಲ್ಲಿ ಆ. 13 ರಂದುನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ನಾಗಬ್ರಹ್ಮ ದೇವರಿಗೆ ವಿಶೇಷ ಪೂಜಾ ವಿಧಿವಿಧಾನಗಳನ್ನು ದೈವಸ್ಥಾನದ ಪಾತ್ರಿಗಳು ನೆರವೇರಿಸಿದರು. ಈ ಸಂಧರ್ಭದಲ್ಲಿ ದೈವಸ್ಥಾನದ ಸಮಿತಿಯವರು ಮತ್ತು ಭಕ್ತರ ಸಮ್ಮುಖದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.
Loading posts...

All posts loaded

No more posts

error: Content is protected !!