- Wednesday
- August 19th, 2026
ಸ್ವರ್ಣ ಮಹಿಳಾ ಮಂಡಲ (ರಿ) . ಕನಕಮಜಲು ಇದರ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಜು.31ರಂದು ಶ್ರೀ ಆತ್ಮ ರಾಮ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಕೃತಿಕಾ ಗುರುಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಲೂಕು ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಶ್ರೀಮತಿ ಶಾರದಾ ಉಗ್ಗಮೂಲೆ ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಿಳಾ...
ಕೋನಡ್ಕಪದವು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ರಚಿಸುವ ಬಗ್ಗೆ ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಜು.27ರಂದು ಸಭೆ ನಡೆಯಿತು.ಈ ಸಭೆಯಲ್ಲಿ ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕರುಗಳಾದ ಎಸ್.ಟಿ. ಜಯರಾಮ ರೈ, ನಾರಾಯಣ ಪ್ರಕಾಶ್ ಹಾಗೂ ಉಪವ್ಯವಸ್ಥಾಪಕರಾದ ಡಾ.ಸತೀಶ್ ರಾವ್ ಮತ್ತು ವಿಸ್ತರಣಾ ಅಧಿಕಾರಿ ನಾಗೇಶ್ರವರು ಭಾಗವಹಿಸಿ ಮಾಹಿತಿಯನ್ನು ನೀಡಿದರು.ನಂತರ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಪ್ರಸಿದ್ಧ ಚಿತ್ರ ಕಲಾವಿದ, ರಂಗ ನಿರ್ದೇಶಕ ಮೋಹನ್ ಸೋನಾ ರ ಸಾಕ್ಷ್ಯ ಚಿತ್ರ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಸಾಕ್ಷ್ಯ ಚಿತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಜೀವನ್ ರಾಂ ರಂಗಮನೆ,...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವರದಿ ವಾಚಿಸಿದರೆ, ಕೋಶಾಧಿಕಾರಿ ಲೋಕೇಶ್ ಗುಡ್ಡೆಮನೆ ಲೆಕ್ಕಪತ್ರ ಮಂಡಿಸಿದರು.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಸಂಘದ ಗೌರವಾಧ್ಯಕ್ಷ ಮುರಳೀಧರ ಅಡ್ಡನಪಾರೆ ವೇದಿಕೆಯಲ್ಲಿದ್ದರು.2021-22 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ...
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿಯವರಿಗೆ ನಡೆಸಿದ 2020- 21ನೇ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಪಲ್ಲವಿ ಕೆ ಎಸ್ ನಾಲ್ಕು ವರ್ಷಗಳ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ . ಇವರು ಕಾಣಿಯೂರು ಗ್ರಾಮದ ಅಬ್ಬರ ಮನೆ ಶ್ರೀ ಶಿವರಾಮ ಕೆ ಮತ್ತು...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಮ್ಮಾಜೆ, ಕಲ್ಲಬೆಟ್ಟು, ನೆಲ್ಲಿತೀರ್ಥ, ಗುರುಪುರ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ, ಬಂಟ್ವಾಳದ ವಗ್ಗ, ಪುತ್ತೂರಿನ ಬಲ್ನಾಡು, ಉಪ್ಪಿನಂಗಡಿ ಹಾಗೂ ಸುಳ್ಯದ ಪಂಜ ಮೊರಾರ್ಜಿ ದೇಸಾಯಿ/ ಡಾ|ಬಿ.ಆರ್ ಅಂಬೇಡ್ಕರ್/ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆಯನ್ನು ಜೂ.28ರಿಂದ ಆರಂಭಿಸಲಾಗಿದೆ.ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೬ನೇ ತರಗತಿಯಲ್ಲಿ...
ನೆಹರೂ ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಿಂದ "ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ"ಎಂಬ ವಿಷಯದ ಬಗ್ಗೆ ರಾಜ್ಯಮಟ್ಟದ ವೆಬಿನರ್ ಜುಲೈ 30ರಂದು ನಡೆಯಿತು.ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಕುಮಾರಿ ಕಾವ್ಯ ಪಿ ಹೆಗ್ಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಪೂವಪ್ಪ ಕಣಿಯೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ...
ವ್ಯಕ್ತಿಯೋರ್ವ ಅಮಲೇರಿ ಕಾರು ಚಲಾಯಿಸಿದ ಪರಿಣಾಮ ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಇನ್ನೊಂದು ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ರಸ್ತೆಯ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿ ಜು. 30 ರಂದು ನಡೆದಿದೆ. ಸುಳ್ಯದಿಂದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಪೇರಾಲಿನ ಹುಕ್ರಪ್ಪ ಗೌಡ ಎಂಬವರ ಮಗ ಮಂಜುನಾಥ್ ಚಲಾಯಿಸುತ್ತಿದ್ದ ಮಾರುತಿ...
ಚೊಕ್ಕಾಡಿ ಪ್ರೌಢಶಾಲೆ ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಚೊಕ್ಕಾಡಿ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿಯನ್ನು ಪುನರ್ ರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಸಚಿವರೂ ಆಗಿರುವ ಶಾಸಕ ಎಸ್. ಅಂಗಾರ ಹಾಗೂ ಸಂಚಾಲಕರಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಆಯ್ಕೆಯಾಗಿದ್ದಾರೆ. ಜುಲೈ 27 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಪುನರ್ ರಚನೆ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಕೌಟುಂಬಿಕ...
Loading posts...
All posts loaded
No more posts
