ಬೆಳ್ಳಾರೆ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದೇವಿ ಹೈಟ್ಸ್‌ನ ಅನುಗ್ರಹ ಸಭಾಂಗಣದಲ್ಲಿ ಜು.28 ರಂದು ನಡೆಯಿತು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಆಸ್ಕರ್ ಆನಂದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭಹಾರೈಸಿದರು. ನೂತನ ಅಧ್ಯಕ್ಷರಾಗಿ ಪದ್ಮನಾಭ ಬೀಡು, ಕಾರ್ಯದರ್ಶಿ ಕೆ.ವಿನಯಕುಮಾರ್, ಸರ್ಜೆಂಟ್ ಆರ್ಮ್ ರಾಜಗೋಪಾಲ, ನಿಕಟಪೂರ್ವಾಧ್ಯಕ್ಷ ಮೋನಪ್ಪ ಗೌಡ...

ಸಂಪಾಜೆ : ಗ್ರಾಮದ ಸಮಸ್ಯೆಯ ಬಗ್ಗೆ ಸಹಾಯಕ ಕಮೀಷನರ್ ನೇತ್ರತ್ವದಲ್ಲಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್ ಅವರ ನೇತೃತ್ವದಲ್ಲಿ ಅಧ್ಯಕ್ಷತೆಯಲ್ಲಿ ಸಂಪಾಜೆ ಗ್ರಾಮದ ಸಮಸ್ಯೆ ಬಗ್ಗೆ ಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ಗ್ರಾಮದ ಸಮಸ್ಯೆಗಳ ಸಂಪೂರ್ಣ ವಿವರ ನೀಡಿದರು. ಸಹಾಯಕ ಕಮಿಷನರ್ ಪ್ಲಾಟಿಂಗ್ ಸಮಸ್ಯೆ ಬಗ್ಗೆ ಪ್ರತಿ ಸರ್ವೆ ನಂಬರ್ ಮಾಹಿತಿ ಪಡೆದು, ಜಂಟಿ ಸರ್ವೆ...
Ad Widget

ಗುತ್ತಿಗಾರು : ಲೋಕಾರ್ಪಣೆಗೆ ಸಿದ್ದವಾದ ವಿದ್ಯುತ್ ಸಬ್ ಸ್ಟೇಷನ್

ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ 33/11 ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು ಶೀಘ್ರ ಕಾರ್ಯಾರಂಭಗೊಳ್ಳಲಿದೆ. ಇದರಿಂದ ಈ ಭಾಗದ ಕೃಷಿಕರ,ವರ್ತಕರ, ಕಿರು ಇಂಡಸ್ಟ್ರಿಗಳ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ಯಶಸ್ವಿಯಾಗಿ ನಡೆದ “ಅರೆಭಾಷೆ ಪದ್ಯ ಕವನಗಳ ಗಮ್ಮತ್” ಆನ್ ಲೈನ್ ಕಾರ್ಯಕ್ರಮ

ಕಿರಣ ರಂಗ ಅಧ್ಯಯನ ಸಂಸ್ಥೆ ಗುತ್ತಿಗಾರು ಸಾರಥ್ಯದಲ್ಲಿ ಕಲಾಮಾಯೆ(ರಿ.) ಏನೆಕಲ್, ನೆಗೆ ನೆನ್ನೆಕ್ಕಿ ತಂಡ ಪ್ರಸ್ತುತ ಪಡಿಸಿದ ಅಮರ ಸುಳ್ಯ ಸುದ್ದಿ ಮತ್ತು ಸೋಲಾರ್ ಪಾಯಿಂಟ್ ನಿಂತಿಕಲ್ಲು ಸಹಕಾರದೊಂದಿಗೆ ಸೀನಿಯರ್ ಟಿವಿ ಆನ್ಲೈನ್ "ಅರೆಭಾಷೆ ಪದ್ಯ ಕವನಗಳ ಗಮ್ಮತ್" ಕಾರ್ಯಕ್ರಮ ಜನಮೆಚ್ಚುಗೆ ಗಳಿಸಿ ಯಶಸ್ವಿಯಾಗಿ ನಡೆಯಿತು.ಇದು ಕೇವಲ ಸ್ಪರ್ದೆಯಾಗಿ ನಡೆಸದೆ ಬರಹಗಾರರಿಗೆ, ಓದುಗರಿಗೆ, ಕೇಳುಗರಿಗೆ ಒಂದು...

ಬೆಳ್ಳಾರೆ – ಮೊಗ್ರ- ಗುತ್ತಿಗಾರು 33 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಸಂಪರ್ಕ ನೀಡುತ್ತಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸಲು ಮೆಸ್ಕಾಂ ಸೂಚನೆ

ಗುತ್ತಿಗಾರು ಗ್ರಾಮದ ಮೊಗ್ರ ಎಂಬಲ್ಲಿ ಹೊಸದಾಗಿ ನಿರ್ಮಿಸಲಾದ 33/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡಲು ಬೆಳ್ಳಾರೆಯಲ್ಲಿ ಹಾಲಿ ಇರುವ ವಿದ್ಯುತ್ ವಿತರಣಾ ಕೇಂದ್ರದಿಂದ ನೂತನವಾಗಿ ರಚಿಸಲಾದ 5 ಕಿ.ಮೀ. ಭೂಗತ ಕೇಬಲ್ ಹಾಗೂ 17.1 ಕಿ.ಮೀ. ಓವರ್ ಹೆಡ್ ಮಾರ್ಗದಲ್ಲಿ ಜುಲೈ 30 ರಂದು ವಿದ್ಯುತ್ ಸಂಪರ್ಕ ನೀಡಲಾಗುವುದು .ನೆಟ್ಟಾರಿನಿಂದ ಬೆಳ್ಳಾರೆ,...

ಪತ್ರಕರ್ತರಿಗೆ ಸವಾಲುಗಳು ಬಂದಾಗ ಜನತೆ ಅವರ ಬೆಂಬಲಕ್ಕೆ ನಿಲ್ಲಬೇಕು : ಮಹೇಶ್ ಪುಚ್ಚಪ್ಪಾಡಿ

ಪತ್ರಕರ್ತರು ಉತ್ತಮ ಕೆಲಸ ಮಾಡಿದಾಗ ಹಲವಾರು ಸವಾಲುಗಳು ಎದುರಾಗುತ್ತವೆ.ಅವುಗಳನ್ನು ಎದುರಿಸಿ ಮುನ್ನಡೆಯಲು ಪತ್ರಕರ್ತರಿಗೆ ಸಮಾಜದ ಬೆಂಬಲ ಬೇಕಾಗಿದೆ ಎಂದು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಹೇಳಿದ್ದಾರೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ರಂಗಮಯೂರಿ ಕಲಾಶಾಲೆಯ ಸಭಾಭವನದಲ್ಲಿ ಜು.29ರಂದು ನಡೆದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಉಪನ್ಯಾಸ ನೀಡಿದರು. ಮಾಧ್ಯಮ ಕ್ಷೇತ್ರವನ್ನು ಪ್ರಜಾ ಪ್ರಭುತ್ವದ...

ಅಕ್ರಮ ಮರ ಸಾಗಾಟ – ಇಬ್ಬರ ಬಂಧನ, ಮರ ವಶ

ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನುಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ಅರಣ್ಯ ತನಿಖಾ ಠಾಣೆ ಸಿಬ್ಬಂದಿಗಳು ಪತ್ತೆಹಚ್ಚಿದ್ದಾರೆ. ಮರದ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳಾದ ಕಾಂಞಗಾಡ್ ಕುರಿಚಿಯಲ್ ನಿವಾಸಿ ಪಿ.ದನೇಶ್(28) ಹಾಗೂ ಕಣ್ಣೂರು ನಿವಾಸಿ ಎಂ.ರಾಹುಲ್(26) ಎಂಬುವವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಪ್ರಮುಖ ಆರೋಪಿ ಅಚ್ಚು (ಅಶ್ರಫ್) ವಿರಾಜಪೇಟೆಯ ನಿವಾಸಿಯಾಗಿದ್ದು,...

ನಡುಗಲ್ಲು : ಶ್ರಮದಾನ -ರಸ್ತೆ ದುರಸ್ತಿ

ನಾಲ್ಕೂರು 1ನೇ ವಾರ್ಡ್ ನಡುಗಲ್ಲು ಭಾಗದ ಕಲ್ಲಾಜೆ, ಅಂಬೆಕಲ್ಲು, ಎರ್ದಡ್ಕ, ಅಂಜೇರಿ, ಕಾಯರ್ ಮುಗೆರ್, ಮರಕತ, ಇಜ್ಜಿನಡ್ಕ, ಚಾರ್ಮತ ಭಾಗದ ರಸ್ತೆಗಳು ವಿಪರೀತ ಮಳೆಯಿಂದ ಕೆಸರಾಗಿದ್ದರಿಂದ ಸಂಚಾರಕ್ಕೆ ಕಷ್ಟವಾಗುತ್ತಿತ್ತು. ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ಜು.27 ರಂದು ಗ್ರಾಮಸ್ಥರ ಸಹಕಾರದೊಂದಿಗೆ ಶ್ರಮದಾನವನ್ನು ಮಾಡಲಾಯಿತು. ✍ವರದಿ :- ಉಲ್ಲಾಸ್ ಕಜ್ಜೋಡಿ

ಸುಳ್ಯ : ವಾಹನ ಡಿಕ್ಕಿಯಾಗಿ ಪಾದಾಚಾರಿ ಗಂಭೀರ

ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಪೆರಾಜೆ ಬಂಗಾರಕೋಡಿಯ ಗೋಪಾಲ ಕಜೆಮೂಲೆಯವರು ರಸ್ತೆ ದಾಟುತ್ತಿದ್ದ ವೇಳೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ. ತಕ್ಷಣ ಅದೇ ಬೊಲೆರೋದಲ್ಲಿ ಸರಕಾರಿ ಆಸ್ಪತ್ರೆಗೆ ತಂದು ಮಂಗಳೂರಿನ ಕೆ.ಎಸ್.ಹೆಗ್ಡೆ...

ನ.ಪಂ.ಗೆ ಬಾರದ ನೀರಿನ ಬಿಲ್ : ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ- ನ.ಪಂ. ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೀವ್ರ ತರಾಟೆ

ಅಧಿಕಾರಿಗಳ ಬೇಜವಾಬ್ದಾರಿಯಿಂದ ನೀರಿನ ಬಿಲ್ ಅನ್ನು ಹಲವು ವರ್ಷಗಳಾದರೂ ನ.ಪಂ. ನಿಂದ ವಸೂಲಿ ಮಾಡಲು ಸಾಧ್ಯವಾಗಿಲ್ಲ. ೧.೫ ಕೋಟಿ ನೀರಿನ ಬಿಲ್ ಸೇರಿದಂತೆ ಹಲವು ಬಿಲ್‌ಗಳು ವಸೂಲಿಯಾಗಲು ಬಾಕಿಯಿದೆ. ಇನ್ನು ಒಂದು ತಿಂಗಳೊಳಗೆ ಬಿಲ್ ವಸೂಲಾತಿಯಾಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಎಚ್ಚರಿಕೆ ನೀಡಿದರು.ಸುಳ್ಯ ನ.ಪಂ. ಸಾಮಾನ್ಯ...
Loading posts...

All posts loaded

No more posts

error: Content is protected !!