- Wednesday
- August 19th, 2026
ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕೃಷ್ಣನಗರ ಗುತ್ತಿಗಾರು ಇದರ ವತಿಯಿಂದ ಜೂ.13 ರಂದು ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 15 ಕುಟುಂಬಗಳಿಗೆ ದಿನಬಳಕೆಯ ಅಗತ್ಯ ದಿನಸಿ ಸಾಮಾಗ್ರಿಗಳನ್ನು ದಾನಿಗಳ ನೆರವಿನಿಂದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಭಕ್ತರು ಉಪಸ್ಥಿತರಿದ್ದರು. ✍ಉಲ್ಲಾಸ್ ಕಜ್ಜೋಡಿ
ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿತರಕ್ಷಣಾ ಸಮಿತಿ ವತಿಯಿಂದ ಬೆಳ್ಳಾರೆಯ ಅರ್ಹ ಬಡಕುಟುಂಬಗಳಿಗೆ ಕೋವಿಡ್ ಕಿಟ್ ವಿತರಣೆಗೆ ಜೂನ್ 12 ರಂದು ಚಾಲನೆ ನೀಡಲಾಯಿತು.ಹಿತರಕ್ಷಣಾ ಸಮಿತಿಯ ಗೌರವ ಸಲಹೆಗಾರರಾದ ಯು ಹೆಚ್ ಅಬೂಬಕ್ಕರ್ , ಅಬ್ದುಲ್ ಖಾದರ್ ಹಾಜಿ ಬಯಂಬಾಡಿ ,ಸಮಿತಿಯ ಅಧ್ಯಕ್ಷ ಮೊಯ್ದು ಕುಂಞ ಪನ್ನೆ , ಪ್ರಧಾನ ಕಾರ್ಯದರ್ಶಿ ಜಮಾಲುದ್ದೀನ್ ಕೆ ಎಸ್,...
ದೇವಚಳ್ಳ ಗ್ರಾಮದ ದೇವ ಕಾಲೋನಿ ಮತ್ತು ಅಡ್ಡನಪಾರೆಯಲ್ಲಿ ಕೋವಿಡ್ ಸಂತ್ರಸ್ತರಿಗೆ ಸೇವಾ ಭಾರತಿ ಮತ್ತು ಸಚಿವರಾದ ಎಸ್. ಅಂಗಾರ ರವರ ನೇತೃತ್ವದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಪಂಚಾಯತ್ ಸದಸ್ಯರಾದ ರಮೇಶ್ ಪಡ್ಪು,...
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 50 ಕ್ಕಿಂತ ಹೆಚ್ಚು ಸಕ್ರೀಯ ಪ್ರಕರಣಗಳಿರುವ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು ಹಾಗೂ ಅರಂತೋಡನ್ನು ಜೂ 14 ರಿಂದ 21 ರವರೆಗೆ ಲಾಕ್ ಡೌನ್ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜೂ. 14 ಬೆಳಿಗ್ಗೆ 9 ರಿಂದ ಜೂ 21 ಬೆಳಿಗ್ಗೆ 9 ರವರೆಗೆ ಲಾಕ್ ಡೌನ್ ಆಗಲಿದೆ....
ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ, ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ದಿ. ಬಾಲಕೃಷ್ಣ ಗೌಡರವರ ಧರ್ಮಪತ್ನಿ ಶ್ರೀಮತಿ ಚಂದ್ರಕಲಾ (78.ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.12ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಪ್ರಶಾಂತ್ ಮೋಂಟಡ್ಕ, ಪ್ರಸನ್ನ ಮೋಂಟಡ್ಕ, ಪುತ್ರಿ ಪ್ರಮೀಳಾ ಶಶಿಧರ ಕೊಲ್ಯ, ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನ ತಡೆಗಟ್ಟುವ ಹಿನ್ನೆಲೆಯಲ್ಲಿ ವೈದ್ಯರ ತಂಡ ಮನೆ ಮನೆಗೆ ಭೇಟಿ ಮಾಡಿ ಸಾರ್ವಜನಿಕರ ಆರೋಗ್ಯದ ವಿಚಾರಣೆ ಮತ್ತು ತಪಾಸಣಾ ಕಾರ್ಯಕ್ರಮ ನಡೆಯಿತು. ಈ ವೇಳೆ ವೈದ್ಯರ ತಂಡ, ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಸುಧ ವಾರಣಾಶಿ, ಕಮಲ, ಪಿ.ಡಿ.ಒ ಶ್ರೀಧರ , ಆರೋಗ್ಯ ಸಹಾಯಕಿ...
ಕೋವಿಡ್-19 ಹೊಡೆತಕ್ಕೆ ಇಡೀ ವಿಶ್ವವೇ ಪರಿತಪಿಸುತ್ತಿರುವಾಗ ರಾಜ್ಯದಲ್ಲಿ ಪಂಚಾಯತ್ ಅನುದಾನವನ್ನು ಅಲ್ಪ ಪ್ರಮಾಣದಲ್ಲಿ ಕಡಿತಗೊಳಿಸಿರುವುದು ಸರಿಯಾದ ಕ್ರಮವಾಗಿದೆ. ಹಿಂದೆಂದೂ ಕಾಣದ ಭೀಕರ ಸಾಂಕ್ರಾಮಿಕ ರೋಗದಿಂದ ಉಂಟಾದ ಸಂಕಷ್ಟದ ನಿರ್ವಹಣೆಗೆ ರಾಜ್ಯ ಸರಕಾರ ಸಾಕಷ್ಟು ಅನುದಾನವನ್ನು ನೀಡಿದೆ. ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಸಮಾಜದ ಶ್ರಮಿಕ ವರ್ಗದ ಕಣ್ಣೀರೊರೆಸಲು ಸಾವಿರಾರು ಕೋಟಿಯ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಬಡತನ ರೇಖೆಗಿಂತ...
ಸುಳ್ಯ ಶಾಂತಿನಗರ ನಿವಾಸಿ ಸುಳ್ಯ ಮೆಸ್ಕಾಂ ಉದ್ಯೋಗಿ ನಾಗೇಶ್ ಅವರ ಪುತ್ರ ಪ್ರಮೋದ್ (21) ಡೆಂಗ್ಯೂ ಜ್ವರಕ್ಕೆ ಬಲಿಯಾದ ದುರ್ದೈವಿ. ಕೆಲ ದಿನಗಳ ಹಿಂದೆ ಜ್ವರ ಕಂಡುಬಂದು ಡೆಂಗ್ಯೂ ಎಂದು ಗೊತ್ತಾಗುವ ವೇಳೆ ತೀವ್ರ ಅಸ್ವಸ್ಥರಾಗಿದ್ದರು. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ....
ಗುತ್ತಿಗಾರು ಗ್ರಾಮವನ್ನು ಕೇಂದ್ರವಾಗಿರಿಸಿ ಹತ್ತು ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕರ ಶಾಶ್ವತ ಅನುಕೂಲಕ್ಕಾಗಿ ಟ್ರಸ್ಟ್ ಮುಖಾಂತರ ದೇಣಿಗೆ ಸಂಗ್ರಹಣೆ ಮಾಡಿ ಅಂಬ್ಯುಲೆನ್ಸ್ ಖರೀದಿ ಮಾಡಿ ಮಿತ ದರದಲ್ಲಿ ಸೇವೆ ಒದಗಿಸುವ ಬಗ್ಗೆ ಸಭೆ ನಡೆಸಲಾಯಿತು. ಲಾಕ್ ಡೌನ್ ಮುಗಿದ ತಕ್ಷಣವೇ ಸದ್ರಿ ಯೋಜನೆಯನ್ನು ಅನುಷ್ಟಾನಗೊಳಿಸುವುದು ಮತ್ತು ದಾನಿಗಳು ಅಥವಾ ಸಂಸ್ಥೆಯೊಂದು ಅಂಬ್ಯುಲೆನ್ಸ್ ವಾಹನದ ಸಂಪೂರ್ಣ ವೆಚ್ಚವನ್ನು ಕೊಡುಗೆಯಾಗಿ...
Loading posts...
All posts loaded
No more posts
