ತಮಿಳುನಾಡಿನಲ್ಲಿ ಅರಳುತ್ತಿರುವ ತುಳುನಾಡಿನ ವಯೋಲಿನ್ ಪ್ರತಿಭೆ – ಸುಳ್ಯದ ರಾಜೇಶ್ ಕುಂಭಕೋಡು

ಹಿತ್ತಲ ಗಿಡ ಮದ್ದಲ್ಲ ಅನ್ನುವ ಗಾದೆ ಮಾತೊಂದಿದೆ‌. ತನ್ನೂರಿನಲ್ಲಿ ಗುರುತಿಸಲ್ಪಡದೇ ದೂರದ ಚೆನ್ನೈ ಮಹಾನಗರದಲ್ಲಿ ಕುಳಿತು ಸಂಗೀತ ಕ್ಷೇತ್ರದಲ್ಲಿ ಅಪರೂಪದ ಸಾಧನೆಗೈಯುತ್ತಿರುವ ವಯೋಲಿನ್ ವಾದಕ ರಾಜೇಶ್ ಕುಂಭಕೋಡು ಅವರು ಈ ಮಾತಿಗೆ ಜೀವಂತ ಸಾಕ್ಷಿ ಎಂದರೆ ತಪ್ಪಾಗಲಾರದು‌. ವಯೋಲಿನ್ ಕಲಿಯುವ ಏಕೈಕ ಗುರಿಯೊಂದಿಗೆ ಬರಿಗೈಯಲ್ಲಿ ಚೆನ್ನೈ ಗೆ ತೆರಳಿದ ಇವರನ್ನು ಸಂಗೀತ ಮಾತೆ ಕೈ ಹಿಡಿದು...

ಏನೆಕಲ್ಲು : ಅಪ್ರಾಪ್ತೆಯ ಅತ್ಯಾಚಾರ – ಯುವಕನ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತೆಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಮೆಟ್ಟಿನಡ್ಕ ನಿವಾಸಿ ಅರುಣ್ ಎಂಬಾತ ಕಳೆದೊಂದು ವರ್ಷದಿಂದ 17 ರ...
Ad Widget

ಸುಬ್ರಹ್ಮಣ್ಯ : ಅರಣ್ಯಾಧಿಕಾರಿಗಳಿಂದ ಯುವಕನಿಗೆ ಹಲ್ಲೆ ಆರೋಪ – ನಡೆಯಲಾಗದ ಸ್ಥಿತಿ ತಲುಪಿದ ಯುವಕ – ಅರಣ್ಯಾಧಿಕಾರಿಗಳಿಂದ ನಿರಾಕರಣೆ

ಅಕ್ರಮ ಹರಳು ಕಲ್ಲು ಅಗೆತಕ್ಕೆ ಸಂಬಂಧಿಸಿ ವಿಚಾರಣೆಗಾಗಿಕೊಲ್ಲಮೊಗ್ರು ಗ್ರಾಮದ ಇಬ್ಬರು ವ್ಯಕ್ತಿಗಳನ್ನು ಸುಬ್ರಹ್ಮಣ್ಯದ ಅರಣ್ಯಾಧಿಕಾರಿಗಳು ಕರೆದೊಯ್ದು ಓರ್ವ ಯುವಕನಿಗೆ ತೀವ್ರ ಹಲ್ಲೆ ನಡೆಸಿದ್ದರೆಂಬ ಆರೋಪ ಕೇಳಿಬಂದಿದ್ದು, ಆ ಯುವಕ ನಡೆಯಲಾಗದ ಸ್ಥಿತಿಯಲ್ಲಿದ್ದಾರೆ. ಆದರೆ ಈ ಹಲ್ಲೆ ಆರೋಪವನ್ನು ಅರಣ್ಯಾಧಿಕಾರಿಗಳು ನಿರಾಕರಿಸಿದ್ದಾರೆ.ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯಕೊಲ್ಲಮೊಗ್ರು ಗ್ರಾಮದ ಮೋಹನ ಕೊಳಗೆ ಎಂಬವರನ್ನು ಏ.27 ರಂದು ಅರಣ್ಯಾಧಿಕಾರಿಗಳು ಕೊಲ್ಲಮೊಗ್ರದಿಂದ...

ಸುಳ್ಯದಲ್ಲಿ ಇಂದು 78 ಸೋಂಕಿತರು ಪತ್ತೆ

ಸುಳ್ಯ ತಾಲೂಕಿನಲ್ಲಿ ಇಂದು 78 ಕೊರೋನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣ ಕಲ್ಲಗದ್ದೆ ನಿಧನ

ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿ ಕೃಷ್ಣ (40) ಅಲ್ಪಕಾಲದ ಅಸೌಖ್ಯದಿಂದ ಮೇ.4 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಾನಕಿ, ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಜಿಲ್ಲೆಯಲ್ಲಿ ಕೊರೊನ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ - ನಾಳೆ ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಖರೀದಿಗೆ ಅವಕಾಶ

ಕೊರೋನಾ ನಿಯಂತ್ರಣಕ್ಕಾಗಿ ದ.ಕ.ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಕ್ಕೆ ಜಿಲ್ಲಾಡಳಿತ ಬಂದಿದೆ. ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಮಾಡಲಾಗುವುದು.ಮೇ.15...

ಸುಳ- ಉಬರಡ್ಕ ರಸ್ತೆಗೆ ಮರ ಬಿದ್ದು ಬಂದ್ – ನಾಲ್ಕು ವಿದ್ಯುತ್ ಕಂಬ ತುಂಡು

ಉಬರಡ್ಕ ರಸ್ತೆಯ ಅಟಲ್ ನಗರದಲ್ಲಿ ಮರ ಬಿದ್ದು ನಾಲ್ಕು ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಮೇ.6 ರಂದು ಮುಂಜಾನೆ ನಡೆದಿದೆ. ಕೆಲಕಾಲ ರಸ್ತೆ ಬಂದ್ ಆಗಿತ್ತು.

ಕೊರೊನ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ಕಾನೂನು ಜಾರಿ ಮಾಡಬೇಕು

ಕೊರೋನಾ ಮಹಾಮಾರಿಯಿಂದ ಜನರ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ದಾರಿ ಒಂದೇ, ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ರೂಲ್ಸ್ ಜಾರಿ ಮಾಡಬೇಕು. ಸರ್ಕಾರ ಕೊಡುವ ಅನುದಾನ ನೇರ ಮೃತರ ಮನೆಯವರಿಗೆ ತಲುಪಬೇಕು ಮತ್ತು ರೋಗಿಗೆ ಬಳಸಿದ ಚಿಕಿತ್ಸೆಯ ವಿವರಣೆ ಒಂದು ರೂಪಾಯಿಯಿಂದ ಲಕ್ಷದ ತನಕ ಲಿಖಿತವಾಗಿ ರೋಗಿಯ ಮನೆಯವರಿಗೆ ಕೊಡಬೇಕು. ರೋಗಿಯು ತನ್ನ...

ಕೊಲ್ಲಮೊಗ್ರ : ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾ.ಪಂ.ಅಧ್ಯಕ್ಷರ ನಡುವೆ ಮಾತಿನ ಚಕಮಕಿ – ಕೋವಿಡ್ ನಿರ್ವಹಣಾ ತಂಡದಿಂದ ಕೆಲಸ ಸ್ಥಗಿತಗೊಳಿಸಲು ನಿರ್ಧಾರ – ಅರಣ್ಯ ಸಿಬ್ಬಂದಿ ಸ್ಪಷ್ಟನೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಅರಣ್ಯ ಸಿಬ್ಬಂದಿಗಳ ಮಧ್ಯೆ ಕಳೆದ ರಾತ್ರಿ (ಮೇ.4) ಮಾತಿನ ಚಕಮಕಿ ನಡೆದು, ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂದು ಆರೋಪಿಸಿರುವ ಗ್ರಾ.ಪಂ. ಕೋವಿಡ್ ನಿರ್ವಹಣಾ ತಂಡ ತನ್ನ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ ಘಟನೆ ವರದಿಯಾಗಿದೆ.ಮೇ. 4 ರಂದು ರಾತ್ರಿ ಕೊಲ್ಲಮೊಗ್ರದಲ್ಲಿ ಹೋಮ್ ಐಸೊಲೇಶನ್ ನಲ್ಲಿದ್ದವರಿಗೆ ಆಹಾರ ಸಾಮಾಗ್ರಿ ವಿತರಿಸುತ್ತಿದ್ದ...

ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣ ಹೆಚ್ಚಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು...
Loading posts...

All posts loaded

No more posts

error: Content is protected !!