ಎಪ್ರಿಲ್ 5 : ಬೆಳ್ಳಾರೆಯಲ್ಲಿ ಮದನಿಯಂ ಸ್ವಲಾತ್ ಮಜ್ಲೀಸ್

ಬೆಳ್ಳಾರೆ: ಅಂತರ್ಜಾಲದಲ್ಲಿ ಲಕ್ಷಾಂತರ ವಿಶ್ವಾಸಿಗಳ ಮನಗೆದ್ದ ಮದನೀಯಂ ಸ್ವಲಾತ್ ಮಜ್ಲೀಸ್ ಎಪ್ರಿಲ್ 5 ರಂದು ಬೆಳ್ಳಾರೆಯ ತೆರೆದ ವೇದಿಕೆಯಲ್ಲಿ ನಡೆಯಲಿದೆ.. ಲತ್ತೀಪ್ ಸಖಾಫಿ ಕಾಂತಪುರಂ ನೇತ್ರತ್ವದಲ್ಲಿ ನಡೆಯುವ ಈ ಬ್ರಹತ್ ಸ್ವಲಾತ್ ಮಜ್ಲೀಸ್ ಕಾರ್ಯಕ್ರಮಕ್ಕೆ ಸಾವಿರಾರು ವಿಶ್ವಾಸಿಗಳು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಚಯರ್ಮೇನ್ ಮಹಮೂದ್ ಬಿ.ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಣ್ಮೂರು: ಕೋಟೆ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಕೋಟೆ ಫೌಂಡೇಶನ್ (Right to live)ಇದರ ವತಿಯಿಂದ ಎಣ್ಮೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವು ಮಾ.26 ರಂದು ನಡೆಯಿತು.ಅಕ್ಷರ, ಆರೋಗ್ಯ ಮತ್ತು ಆಶ್ರಯ ಎಂಬ ಉದಾತ್ತ ಧ್ಯೇಯಗಳೊಂದಿಗೆ ಕಾರ್ಯಾಚರಿಸುತ್ತಿರುವ ಕೋಟೆ ಫೌಂಡೇಶನ್ ಮೂಲಕ ಶಾಲಾ ಮಕ್ಕಳಿಗೆ ಈ ದಿನ ಉಚಿತ ಶಾಲಾ ಬ್ಯಾಗ್ ವಿತರಿಸಲಾಯಿತು.ಹಿರಿಯರು ಯೋಗ ಗುರುಗಳೂ ಆದ ಕೆ. ಗಣಪಯ್ಯ ಕಾರ್ಯಕ್ರಮವನ್ನು ದೀಪ...
Ad Widget

ಬೆಳ್ಳಾರೆ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಉಬರಡ್ಕದಿಂದ ಬೈಕ್ ರ‍್ಯಾಲಿ

ಸ್ವಾತಂತ್ರ್ಯೋತ್ಸವದ ಅಮೃತ ವರ್ಷದ ಅಂಗವಾಗಿ ಅಮರ ಸುಳ್ಯ ರೈತ ಕ್ರಾಂತಿ ನಡೆಸಿ ಬ್ರಿಟಿಷರನ್ನು ಓಡಿಸಿದ ಘಟನೆಯ ನೆನಪಿಗಾಗಿ ಮಾ.27ರಂದು ಬೆಳ್ಳಾರೆ ಸ್ವಾತಂತ್ರ್ಯದ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಆ ಪ್ರಯುಕ್ತ ಉಬರಡ್ಕ ಮಿತ್ತೂರು ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ದಿ. ಕೆದಂಬಾಡಿ ರಾಮಯ್ಯ ಗೌಡ ಇವರ ಸ್ಮರಣಾರ್ಥ ಮಾ. 27 ಶನಿವಾರದಂದು ಪೂರ್ವಾಹ್ನ 8.00 ಗಂಟೆಗೆ ಉಬರಡ್ಕ ಮಿತ್ತೂರು...

ಬಿಜೆಪಿ ಯುವಮೋರ್ಚಾ ವತಿಯಿಂದ ಉಚಿತ ಮಾಸ್ಕ್ ವಿತರಣೆ

ಬಿಜೆಪಿ ಯುವಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸುಳ್ಯದ ಸರಕಾರಿ ಬಸ್ ನಿಲ್ದಾಣದಲ್ಲಿ ಮತ್ತು, ಖಾಸಗಿ ಬಸ್ ನಿಲ್ದಾಣ ಹಾಗೂ ನಗರದ ವಿವಿಧ ಭಾಗಗಳಲ್ಲಿ ಉಚಿತ ಮಾಸ್ಕ್ ವಿತರಣೆಯ ಮೂಲಕ ಕೋರೋನ ಜಾಗೃತಿ ಮೂಡಿಸಲಾಯಿತು. ಈ ಕಾರ್ಯಕ್ರಮಕ್ಕೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ ಚಾಲನೆ ನೀಡಿದರು, ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್...

ಸಂಪಾಜೆ : ಕೊರಗಜ್ಜ ದೈವದ ಪವಾಡ – 12 ದೈವದ ಬದಲು ಕಾಣಿಸಿಕೊಂಡಿತು 13 ದೈವ

ತುಳುನಾಡಿನಲ್ಲಿ ಅಲ್ಲಲ್ಲಿ ಆಗಾಗ ಒಂದಲ್ಲ ಒಂದು ರೀತಿಯಲ್ಲಿ ಕೊರಗಜ್ಜನ ಪವಾಡಗಳು ನಡೆಯುತ್ತಿರುತ್ತದೆ. ಇಂತದೊಂದು ಪವಾಡ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರದಲ್ಲಿನ ಕೊರಗಜ್ಜನ ಸಾನಿಧ್ಯದಲ್ಲಿ ನಡೆದಿದೆ.ಮಾ.20 ರಂದು ರಾತ್ರಿ ದೊಡ್ಡಡ್ಕ ರಾಜರಾಂಪುರ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಆದಿಬ್ರಹ್ಮ ಮೊಗೇರ್ಕಳ 40 ನೇ ವರ್ಷದ ನೇಮೋತ್ಸವ ಮತ್ತು ಮಂತ್ರಮೂರ್ತಿ ಗುಳಿಗ ದೈವದ ಕೋಲ ನಡೆಯಿತು....

ಸುಳ್ಯ : ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸಲು ಸಚಿವರಿಗೆ ಮನವಿ

ಸುಳ್ಯ ವಿಧಾನ ಸಭಾ ಕ್ಷೇತ್ರ ಕ್ಕೊಳಪಟ್ಟ ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನ ಕೆಲವು ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸಲು ಮಾನ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಈಶ್ವರಪ್ಪರವರಿಗೆ, ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ನೇತೃತ್ವದಲ್ಲಿ ಸುಳ್ಯ ಮಂಡಲ ವತಿಯಿಂದ ಮನವಿ ಸಲ್ಲಿಸಲಾಯಿತು. ಅನುದಾನ ನೀಡುವ...

ಮಾ.27 ರಂಗಮನೆಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆಯಲ್ಲಿ ಮಾ.27 ರಂದು ಸಂಜೆ 4.30ಕ್ಕೆ ವಿಶ್ವ ರಂಗಭೂಮಿ ದಿನಾಚರಣೆಯನ್ನು ರಂಗ ಉಪನ್ಯಾಸ ಮತ್ತು ರಂಗಗೀತೆ ಗಾಯನ ಕಾರ್ಯಕ್ರಮದ ಮೂಲಕ ಆಚರಿಸಲಾಗುವುದು. 2021 ನೇ ವಿಶ್ವ ರಂಗಭೂಮಿ ದಿನದ ಸಂದೇಶ ವಾಚನ ಮತ್ತು ವರ್ತಮಾನ-ರಂಗಭೂಮಿಯ ಅನಿವಾರ್ಯತೆ ಈ ವಿಷಯದಲ್ಲಿ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಳಿಕ ರಂಗಮನೆ ನಾಟಕ...

ವಿವಾಹ ನಿಶ್ಚಿತಾರ್ಥ : ರೇಶ್ಮಾ – ನವೀನ

ಕಳಂಜ ಗ್ರಾಮದ ಮುಂಡುಗಾರು ಮನೆ ಶ್ರೀಮತಿ ಮತ್ತು ಶ್ರೀ ನಾಗಪ್ಪ ಗೌಡರವರ ಪುತ್ರಿ ರೇಶ್ಮಾರವರ ವಿವಾಹ ನಿಶ್ಚಿತಾರ್ಥವು ಶಾಂತಿಗೋಡು ಗ್ರಾಮದ ಮರಕ್ಕೂರು ಮನೆ ಶ್ರೀಮತಿ ಮತ್ತು ಶ್ರೀ ಪೂವಣಿ ಗೌಡರವರ ಪುತ್ರ ನವೀನರೊಂದಿಗೆ ಮಾ.24 ರಂದು ಮುಂಡುಗಾರು ವಧುವಿನ ಮನೆಯಲ್ಲಿ ನಡೆಯಿತು.

ಎಲಿಮಲೆ ಪ್ರೌಢಶಾಲೆಯಲ್ಲಿ ಪೋಲಿಸ್ ಕೆಡೆಟ್ ತರಬೇತಿ

ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ 2020-21 ಶೈಕ್ಷಣಿಕ ಸಾಲಿನ ಪೋಲಿಸ್ ಕೆಡೆಟ್ ತರಬೇತಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರಶೇಖರ ಪೇರಾಲ್ ನೆರವೇರಿಸಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ವಹಿಸಿದ್ದರು. ಸ್ಟೂಡೆಂಟ್ ಪೋಲಿಸ್ ಕೆಡೆಟ್ ನ ನೋಡೆಲ್ ಅಧಿಕಾರಿಗಳಾದ ಅನಿಲ್ ಹಾಗೂ ಮಲ್ಲಿಕಾರ್ಜುನ ಇವರು ಇದರ ಧ್ಯೇಯ ಉದ್ದೇಶಗಳ ಬಗ್ಗೆ...

ನಾಲ್ಕೂರು – ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಮರಕತ ದೇವಸ್ಥಾನದಲ್ಲಿ ಶ್ರಮದಾನ

ನಾಲ್ಕೂರು ಗ್ರಾಮದ ಮರಕತ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 𝟴𝟱𝟬 ವರ್ಷಗಳ ಹಿಂದಿನಿಂದಲೂ ಪೂಜಿಸಿಕೊಂಡು ಬಂದಿರುವ ವಿಶೇಷ ದೇವರ ಮೀನುಗಳಿಗೆ (ನಾಗಕನ್ನಿಕೆಯರೆಂದು ಪ್ರತೀತಿ ) ನೀರಿನ ಒಳಹರಿವು ಕಡಿಮೆ ಇರುವುದನ್ನು ಅರಿತ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮಾ.𝟮𝟭 ರಂದು ನೀರಿಗೆ ಅಡ್ಡಲಾಗಿ ಕಟ್ಟ ನಿರ್ಮಾಣ ಮಾಡಿ ನೀರಿನ ಮಟ್ಟವನ್ನು ಹೆಚ್ಚಿಸುವ ಕಾರ್ಯ ಮಾಡಿದರು. ಈ ಸಂದರ್ಭದಲ್ಲಿ...
Loading posts...

All posts loaded

No more posts

error: Content is protected !!