- Saturday
- August 22nd, 2026
ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಕೆ ಡಿ.16 ಕೊನೆಯ ದಿನವಾಗಿದ್ದು ಸುಳ್ಯ ತಾಲೂಕಿನಲ್ಲಿ ಒಟ್ಟು 851 ನಾಮಪತ್ರ ಸಲ್ಲಿಕೆಯಾಗಿದೆ. ಡಿ. 17 ರಂದು ನಾಮಪತ್ರ ಪರಿಶೀಲನೆ ನಡೆದು 20 ನಾಮಪತ್ರ ತಿರಸ್ಕೃತ ಗೊಂಡಿದೆ. ಕಣದಲ್ಲಿ 831 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ಹಿಂತೆಗೆಯಲು ಡಿ.19 ಕೊನೆಯ ದಿನವಾಗಿದೆ.ಕೊಡಿಯಾಲ ಗ್ರಾ.ಪಂ.ನ 6 ಸ್ಥಾನಗಳಿಗೆ 22, ಐವತ್ತೊಕ್ಲು (ಪಂಜ) ಗ್ರಾ.ಪಂ.ನ...
ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಯವರಿಗೆ ಬಂಟ್ವಾಳಕ್ಕೆ ವರ್ಗಾವಣೆ ಆದೇಶವಾಗಿದೆ. ಸುಳ್ಯಕ್ಕೆ ವೇದವ್ಯಾಸ ಮುತಾಲಿಕ್ ಬರಲಿದ್ದಾರೆ ಎಂದು ತಿಳಿದುಬಂದಿದೆ.ಅನಿತಾಲಕ್ಷ್ಮೀ ಯವರು 2 ವಾರದ ಹಿಂದೆಯಷ್ಟೇ ಸುಳ್ಯಕ್ಕೆ ಚುನಾವಣಾ ಹಿನ್ನೆಲೆಯಲ್ಲಿ ಬಂದಿದ್ದರು.
ಪುತ್ತೂರು ನ್ಯಾಯಾಲಯದಲ್ಲಿ ಶಿರಸ್ತೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಬ್ಬಾಸ್ ಸೋಣಂಗೇರಿ ಮುಖ್ಯ ಆಡಳಿತಾಧಿಕಾರಿಯಾಗಿ ಭಡ್ತಿಗೊಂಡು ಉಡುಪಿ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಾರೆ . ಮೂಲತಃ ಸುಳ್ಯ ಸೋಣಂಗೇರಿ ನಿವಾಸಿ ಯಾಗಿದ್ದು , ಪ್ರಸ್ತುತ ಪುತ್ತೂರು ದರ್ಬೆಯಲ್ಲಿ ವಾಸವಾಗಿರುವ ಅಬ್ಬಾಸ್ರವರು ಈ ಹಿಂದೆ ಪುತ್ತೂರು ನ್ಯಾಯಾಲಯದಲ್ಲಿ 9 ವರ್ಷ ವರುಷ ಶಿರಸ್ತೆದಾರರಾಗಿ ಸೇವೆ ಸಲ್ಲಿಸಿ, ಬಳಿಕ ಸುಳ್ಯದಲ್ಲಿ 9 ವರ್ಷ ಶಿರಸ್ತೆದಾರರಾಗಿ...
ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಕಬಳೆ ಕಟ್ಟಕೊಡಿ ಪರಿಸರದ ದಲಿತ ಕುಟುಂಬದ ನಿವಾಸಿಗಳು ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದೇ ಇದ್ದರೇ ಮತದಾನದ ಬಹಿಷ್ಕಾರದ ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ಯಾನರ್ ಅಳವಡಿಸಿದ ಘಟನೆ ಡಿಸೆಂಬರ್ 16ರಂದು ನಡೆದಿದೆ.
ಗ್ರಾಮ ಪಂಚಾಯತ್ ಚುನಾವಣೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ಇಂದು ನಡೆಯುತ್ತಿದ್ದು ಈ ವೇಳೆ ಅಜ್ಜಾವರ ಗ್ರಾಮದ 5 ನೇ ವಾರ್ಡಿನಲ್ಲಿ ಪಕ್ಷೆತರ ಅಭ್ಯರ್ಥಿ ಅಶೋಕ್ ಕುಮಾರ್ ಪಂಚಾಯತ್ ಗೆ ಬಂದಿದ್ದರು. ಅವರಿಗೆ ಪಂಚಾಯತ್ ನ ಎದುರಿನಲ್ಲೆ ಇರುವ ಬಸ್ ನಿಲ್ದಾಣದಲ್ಲಿ ಕಸದ ರಾಶಿ ಇರುವುದನ್ನು ಗಮನಿಸಿದ ಇವರು ತಕ್ಷಣವೇ ಕಸವನ್ನು ಹೆಕ್ಕಿ ಗುಡಿಸಿ ಶುಚಿಗೊಳಿಸಿದರು ಇವರಿಗೆ...
ಹವಿನ್ ಗುಂಡ್ಯ ನಿರ್ದೇಶನದ ಅರೆಭಾಸೆ ಕಿರುಚಿತ್ರ ಕೋಲ ಇದರ ಪ್ರೀಮಿಯರ್ ಶೋ , ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆದಿದ್ದು, ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಇದನ್ನು ಅಮರ ಸುದ್ದಿ ವೆಬ್ಸೈಟ್ ನಲ್ಲಿ ಕೂಡ ವೀಕ್ಷಿಸಬಹುದು. ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ. https://youtube.com/channel/UC1TXWsXaiF1XHj_55tVWs3A
ಪಂಜದ ಇತಿಹಾಸದಲ್ಲೆ ಮೊಟ್ಟಮೊದಲ ಬಾರಿಗೆ ಪಂಚಶ್ರೀ ಪ್ರೀಮಿಯರ್ ಲೀಗ್-೨೦೨೦' ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ ಡಿ.೧೩ರಂದು ಪಂಜ ಪರಿವಾರ ಪಂಚಲಿಂಗೇಶ್ವರ ದೇವಳದ ಮುಂಭಾಗದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮ ಅಧ್ಯಕ್ಷತೆಯನ್ನು ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಚಂದ್ರಶೇಖರ ಕರಿಮಜಲು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್...
ಗುತ್ತಿಗಾರು ಗ್ರಾಮ ಪಂಚಾಯತ್ ನ ಮೂರನೇ ವಾರ್ಡ್ ನಿಂದ ಬಿಜೆಪಿ ಬೆಂಬಲಿತರಾಗಿ ಸುಮಿತ್ರಾ ಮೂಕಮಲೆ ನಾಮಪತ್ರ ಸಲ್ಲಿಸಿದ್ದಾರೆ.
Loading posts...
All posts loaded
No more posts
