ಸುಳ್ಯ ಬ್ಲಾಕ್ ಕಾಂಗ್ರೆಸ್ ಹಾಗೂ ನಗರ ಕಾಂಗ್ರೆಸ್ ಸಮಿತಿಯಿಂದ ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಪ್ರಯುಕ್ತ ವಿಶೇಷ ಪ್ರಾರ್ಥನೆ

ಇಂದು ಅಯೋಧ್ಯೆಯ ಶ್ರೀರಾಮನ ಜನ್ಮ ಸ್ಥಳದಲ್ಲಿಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆ ಕಾರ್ಯ ನಡೆಯುತ್ತಿದ್ದು ಆ ಭೂಮಿ ಪೂಜೆ ಪ್ರಯುಕ್ತ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ವಿಶೇಷ ಪ್ರಾರ್ಥನೆಯನ್ನು ಶ್ರೀ ಚೆನ್ನಕೇಶವ ದೇವಸ್ಥಾನದ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ ರವರ ಸಮ್ಮುಖದಲ್ಲಿ ಸಲ್ಲಿಸಲಾಯಿತು ....

ನಗರ ಪರಿಸರದ ಜನತೆಗೆ ಕೋವಿಡ್-೧೯ ಆಂಟಿಜನ್ ರ್‍ಯಾಪಿಡ್ ಪರೀಕ್ಷೆ ಇಂದು ಚಾಲನೆ

ಕೋವಿಡ್ ೧೯ರ ಹಿನ್ನಲೆಯಲ್ಲಿ ಸುಳ್ಯ ಪರಿಸರದ ಜನತೆಗೆ ಆಂಟಿಜನ್ ರ್‍ಯಾಪಿಡ್ ಪರೀಕ್ಷೆ ಆ.೫ ಮತ್ತು ೬ ರಂದು ನಡೆಸಲು ಈ ಮೊದಲು ತೀರ್ಮಾನಿಸಿದ್ದು ಅದರಂತೆ ಸುಳ್ಯ ರೋಟರಿ ಶಾಲೆಯಲ್ಲಿ ಸುಳ್ಯ ತಹಶೀಲ್ದಾರ್ ಅನಂತ ಶಂಕರ ಇಂದು ಚಾಲನೆ ನೀಡಿದರು. ಈ ಕಾರ್ಯಕ್ರಮವು ವರ್ತಕರ ಸಂಘ ಸುಳ್ಯ, ರೋಟರಿ ಮತ್ತು ಲಯನ್ಸ್ ಕ್ಲಬ್ ಸುಳ್ಯ, ತಾಲೂಕು ಆಡಳಿತ,...
Ad Widget

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(05.08.2020 ಬುಧವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 390ಡಬಲ್ ಚೋಲ್ 305 - 390 ಫಠೋರ 220 - 295ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 310 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ವಿಶ್ವ ಹಿಂದೂ ಪರಿಷತ್ ಭಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ಇದರ ವತಿಯಿಂದ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪುಣ್ಯಭೂಮಿ ಅಯೋಧ್ಯೆಯಲ್ಲಿ ಇಂದು ನೆರವೇರಲಿರುವ ಪ್ರಭು ಶ್ರೀರಾಮಚಂದ್ರನ ಭವ್ಯಮಂದಿರದ ಭೂಮಿಪೂಜೆಯ ಅಂಗವಾಗಿ ನೆರವೇರಿದ ಈ ವಿಶೇಷ ಪೂಜೆಯ ಸಂದರ್ಭದಲ್ಲಿ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕೊಡಗಿನಲ್ಲಿ ಇಂದು ನಿಷೇಧಾಜ್ಞೆ ಜಾರಿ

ಅಯೋಧ್ಯೆಯಲ್ಲಿ ಆಗಸ್ಟ್, 05 ರಂದು ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಹಾಗೆಯೇ ಕೋವಿಡ್-19 ಸೋಂಕು ಹರಡದಂತೆ ಸರ್ಕಾರದ ಮಾರ್ಗಸೂಚಿಯಂತೆ ಹಲವು ನಿರ್ಬಂಧಗಳನ್ನು ಪಾಲಿಸಬೇಕಿದೆ. ಈ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್...

ದ.ಕ.ಇಂದು ಭಾರಿ ಮಳೆ – ರೆಡ್ ಅಲರ್ಟ್ ಘೋಷಣೆ

 ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿರುವುದರಿಂದ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.ಆ.5ರಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಹಾಗೂ ಆ.6 ರಿಂದ 8ರವರೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹವಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಪೆರಾಜೆ ಮನೆ ಮೇಲೆ ಮರ ಬಿದ್ದು ಹಾನಿ

ಪೆರಾಜೆ ಗ್ರಾಮದ ದಾಸರಹಿತ್ಲು ಬಳಿ ನಿವಾಸಿ ಖದೀಜಮ್ಮ ರವರ ಮನೆಯ ಮೇಲೆ ಮರಬಿದ್ದು ಹಾನಿ ಸಂಭವಿಸಿದೆ.

ಮಡಿಕೇರಿ ನಗರದ ಓಂಕಾರೇಶ್ವರ ದೇವಾಲಯಕ್ಕೆ ಹೋಗುವ ರಸ್ತೆಯ ಮೇಲೆ ಬರೆ ಕುಸಿತ

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಕೊಡಗಿನ ವಿವಿಧ ಪ್ರದೇಶಗಳಲ್ಲಿ ಮನೆಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಸುಂಟಿಕೊಪ್ಪ ಪರಿಸರದಲ್ಲಿ ಇಂದು ಬೀಸಿದ ಭಾರೀ ಗಾಳಿ ಮಳೆಗೆ ಮನೆಗಳ ಮೇಲೆ ಮರಗಳು ಬಿದ್ದಿವೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಇನ್ನೊಂದು ಘಟನೆಯಲ್ಲಿ ಮಡಿಕೇರಿ ನಗರದ ಓಂಕಾರೇಶ್ವರ ದೇವಾಲಯದ ರಸ್ತೆಯಲ್ಲಿ ಭಾರಿ ಗಾತ್ರದ...

ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆಚರಿಸಿ, ಜತೆಗೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ : ಸನಾತನ ಸಂಸ್ಥೆ

ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ ಈ ಐತಿಹಾಸಿಕ ಕ್ಷಣವನ್ನು ಉತ್ಸಾಹದಿಂದ ಮತ್ತು ಆನಂದದಿಂದ ಆದರೆ ಕರೋನಾ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ಸರಕಾರದ ಎಲ್ಲ ನಿಯಮಗಳನ್ನು ಪಾಲಿಸಿ ಆಚರಿಸಿರಿ. ಈ ಭೂಮಿ...

ಕೊಡಗು : ಪೌರಕಾರ್ಮಿಕನಲ್ಲಿ ಮೂಡಿದ ಉರಗ ಪ್ರೇಮ

ಸುಂಟಿಕೊಪ್ಪ ಗ್ರಾಮ ಪಂಚಾಯತಿಯಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಬಾಲಚಂದ್ರ ಸ್ನೇಕ್ ಬಾಲನ್ ಎಂದೇ ಖ್ಯಾತಿಯನ್ನು ಪಡೆದುಕೊಂಡಿರುವ ಇವರು ಕಳೆದ 14 ವರ್ಷಗಳಿಂದ ಈ ಕಾಯಕವನ್ನು ಮಾಡುತ್ತಿದ್ದಾರೆ. ಉರಗಗಳ ಮೇಲೆ ಇಟ್ಟಿರುವ ಇವರ ಅಪಾರ ಪ್ರೀತಿ ಇಂದು ಸುಂಟಿಕೊಪ್ಪ ದ ಪರಿಸರದ ಜನತೆಗೆ ವರವಾಗಿದೆ. ಇಲ್ಲಿಯವರೆಗೆ ಸುಮಾರು 200 ಉರಗಗಳನ್ನು ಸಂರಕ್ಷಿಸಿರುವ ಇವರು ಸ್ಥಳೀಯ ಕಾಡುಗಳಲ್ಲಿ ಅವುಗಳನ್ನು...
Loading posts...

All posts loaded

No more posts

error: Content is protected !!