ಬಾಳಿಲ ಮುಖ್ಯ ಶಿಕ್ಷಕರಾಗಿ ಯಶೋಧರ ನಾರಾಲು

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ಕನ್ನಡ ಶಿಕ್ಷಕರಾಗಿರುವ ಯಶೋಧರ ನಾರಾಲು ಅಧಿಕಾರ ವಹಿಸಿಕೊಂಡಿದ್ದಾರೆ. ಮುಖ್ಯ ಶಿಕ್ಷಕರಾಗಿದ್ದ ಎಂ.ಎಸ್. ಶಿವರಾಮ ಶಾಸ್ತ್ರಿಯವರು ಜು. ೩೧ ರಂದು ನಿವೃತ್ತಿಹೊಂದಿದ್ದರು. ಯಶೋಧರ ನಾರಾಲುರವರು ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಅಜ್ಜಾವರ, ಪದವಿ ಪೂರ್ವ ಶಿಕ್ಷಣವನ್ನು ಸುಳ್ಯ ಸರಕಾರಿ ಜೂನಿಯರ್ ಕಾಲೇಜು, ಪದವಿ (ಬಿ.ಎ) ಶಿಕ್ಷಣವನ್ನು ಎನ್.ಎಂ.ಸಿ.ಯಲ್ಲಿ ಪೂರೈಸಿದರು....

*ಸುಮಾರು 80 ವರ್ಷಗಳ ಇತಿಹಾಸವಿರುವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಖಾಸಗಿ ವ್ಯಕ್ತಿಯಿಂದ ಬೇಲಿ, ಸ್ಥಳಕ್ಕೆ ಐ ಎನ್ ಟಿ ಯು ಸಿ ರಾಜ್ಯ ಸಮಿತಿ ಉಪಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಸಮಿತಿಯ ಮುಖಂಡರುಗಳ ಭೇಟಿ*

ಕೊಡಗು ಜಿಲ್ಲೆ ಸಿದ್ದಾಪುರ ಬಳಿ ನೆಲ್ಲುದಿ ಕೇರಿ ನಲವತ್ತು ಎಕರೆ ಬರಡಿ ಕಾರ ಬಾಣೆ ಪ್ರದೇಶದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಮನೆಗಳು ಇದ್ದು ಈ ಪ್ರದೇಶಕ್ಕೆ ಮುಖ್ಯರಸ್ತೆಯಿಂದ ಸುಮಾರು ಎರಡು ಕಿಲೋಮೀಟರ್ ರಸ್ತೆಯು 80 ವರ್ಷಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸಿ ಕೊಂಡಿತ್ತು. ಈ ಗ್ರಾಮದಲ್ಲಿ ಪ್ರತಿಯೊಂದು ಕೆಲಸ ಕಾರ್ಯಕ್ಕೂ ಇಲ್ಲಿಯ ಜನತೆ ಈ ರಸ್ತೆಯನ್ನು ಅವಲಂಬಿಸಿಕೊಂಡು...
Ad Widget

ಬೆಳ್ಳಾರೆ: ಸೇವಾ ಭಾರತಿ ವತಿಯಿಂದ ಗುರುಪೂಜಾ ಕಾರ್ಯಕ್ರಮ

ಬೆಳ್ಳಾರೆ ಸೇವಾಭಾರತಿ ವತಿಯಿಂದ ಗುರು ಪೂರ್ಣಿಮೆಯ ಪ್ರಯುಕ್ತ ಗುರುಪೂಜೆ ಹಾಗೂ ಕಡಬ ಸರಸ್ವತಿ ವಿದ್ಯಾ ಸಂಸ್ಥೆಯ ಅಧ್ಯಾಪಕಿ ಉಷಾ ಅವರಿಗ ಅಭಿವಂದನಾ ಕಾರ್ಯಕ್ರಮ ‌ನಡೆಯಿತು. ಕಡಬದ ಸರಸ್ವತಿ ವಿದ್ಯಾಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು . ಬೆಳ್ಳಾರೆ, ಪೆರುವಾಜೆಯ ಸೇವಾ ಭಾರತಿ ಕಾರ್ಯಕರ್ತರು, ಸಂಘ ಸಂಸ್ಥೆಗಳ ಗಣ್ಯರು, ಹಿರಿಯರು, ಮಾತೆಯರು ಗುರುವಂದನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಾಜಿ ಸಚಿವ ರಮಾನಾಥ ರೈ ಭೇಟಿ ಮಾಡಿದ ಸುಳ್ಯದ ಕಾಂಗ್ರೆಸ್ ಮುಖಂಡರು

ಮಾಜಿ ಸಚಿವ ಬಿ ರಮಾನಾಥ ರೈ ರವರನ್ನು ಸುಳ್ಯ ಕಾಂಗ್ರೆಸ್ ಪಕ್ಷದ ಮುಖಂಡರು ಆಗಸ್ಟ್ 1ರಂದು ಸಂಜೆ ಸುಳ್ಯ ಗ್ರಾಂಡ್ ಪರಿವಾರ್ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಭೇಟಿಯಾದರು.ಮಾಜಿ ಸಚಿವ ರಮಾನಾಥ ರೈ ಪಕ್ಷದ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಸುಳ್ಯ ಮಾರ್ಗವಾಗಿ ಬಂಟ್ವಾಳ ಕ್ಕೆ ಹಿಂತಿರುಗುವ ವೇಳೆ ಸುಳ್ಯದ ಪಕ್ಷದ ಮುಖಂಡರುಗಳು...

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದೆ ಭವ್ಯ ಶ್ರೀರಾಮ ಮಂದಿರ – ಶ್ರೀರಾಮ ಮಂದಿರ ಧಾರ್ಮಿಕ ಸೌಹಾರ್ದತೆಯ ಸಂಕೇತವಾಗಿದೆ

📝📝.........ಭಾಸ್ಕರ ಜೋಗಿಬೆಟ್ಟುಪ್ರಚಾರ ಪ್ರಸಾರ ಪ್ರಮುಖ್, ವಿಶ್ವ ಹಿಂದೂ  ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ  ಸುತ್ತಲೂ ಭಜನೆಗಳು ಆರಂಭವಾಗಿದೆ , ಪ್ರತಿಯೊಂದು ಕಡೆ ಮನೆಗಳು ದೀಪಾಲಂಕರದಿಂದ ಕೂಡಿದೆ. ಕೇಸರಿ ಬಾವುಟಗಳು ರಾರಾಜಿಸುತ್ತಿವೆ ,ಭಕ್ತರ ಮನ ಮನದಲ್ಲಿ ರಾಮ ನಾಮ ಕೇಳಿ ಬರುತ್ತಿದೆ. ರಸ್ತೆಯ , ಮನೆಯ , ಕಂಪೌಂಡ್ ತಡೆಗೋಡೆಯ ಮೇಲೆ ಶ್ರೀ ರಾಮ ಚಂದ್ರನ ಚಿತ್ರವನ್ನು ಬಿಡಿಸಲಾಗಿದ್ದು...

*ಸಂಪಾಜೆ: ಗೂನಡ್ಕ ಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ*

ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಬಿ.ರಮಾನಾಥ ರೈಯವರು ಸಂಪಾಜೆ ಗ್ರಾಮದ ಗೂನಡ್ಕದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಕಚೇರಿಗೆ ಭೇಟಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ ರೈಯವರು" ಸಂಪಾಜೆ ಗ್ರಾಮವು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದೆ..ಇದಕ್ಕೆ ಕಾರಣ ಇಲ್ಲಿನ ಕಾಂಗ್ರೆಸ್ ನಾಯಕರು ಮಾಡಿದ...

ಯುವ ಮೋರ್ಚಾ ಅಧ್ಯಕ್ಷರಾಗಿ ಶ್ರೀ ಕೃಷ್ಣ ಎಂ.ಆರ್. – ಕಾರ್ಯದರ್ಶಿ ಸುನಿಲ್ ಕೇರ್ಪಳ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಕಡಬ ತಾಲೂಕು ಬಲ್ಯ ಗ್ರಾಮದ ಹೊಸಮಠದಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಶ್ರೀಕೃಷ್ಣ ಎಂ.ಆರ್. ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಸುಳ್ಯ ನಗರದ ಸುನಿಲ್ ಕೇರ್ಪಳ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ...

ಜಾನಕಿ ಚಾಳೆಪ್ಪಾಡಿ

ಕೊಲ್ಲಮೊಗ್ರ ಗ್ರಾಮದ ಚಾಳೆಪ್ಪಾಡಿ ಶಿವರಾಮ ಗೌಡರ ಧರ್ಮಪತ್ನಿ ಜಾನಕಿ (60) ಜು.31 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಕಿಶೋರ್, ಹರೀಶ, ಪ್ರಶಾಂತ, ಪುತ್ರಿ ಪ್ರಶಾಂತಿ ಹರ್ಷ ಜಾಲಮನೆ, ಸೊಸೆಯಂದಿರು, ಅಳಿಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಗಡಿಭಾಗದ ಮಣ್ಣು ತೆರವು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಕ್ರಮ: ಕೋಟ ಶ್ರೀನಿವಾಸ ಪೂಜಾರಿ

ಕಳೆದ ಹಲವಾರು ತಿಂಗಳುಗಳಿಂದ ಕೋರೋನಾ ವೈರಸ್ ಹಿನ್ನಲೆಯಲ್ಲಿ ಕೇರಳ ಕರ್ನಾಟಕದ ಗಡಿಭಾಗದ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಭಂದ ಹೇರಿ ರಸ್ತೆಗೆ ಮಣ್ಣು ಸುರಿಯಲಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಆ.೧ರಂದು ಸುಳ್ಯ ಆತ್ಮನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಗಡಿಭಾಗದ...

ವಿದ್ಯಾರ್ಥಿಗಳ ಜತೆ ಪ್ರಧಾನಿ ಮೋದಿ ಸಂವಾದ – ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಇಂದು ಸಂಜೆ ವಿದ್ಯಾರ್ಥಿಗಳ ಜತೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಹೊಸ ಶೈಕ್ಷಣಿಕ ನೀತಿ ಹಾಗೂ ಇತರ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳ ಜತೆ ಮಾತನಾಡಲಿದ್ದಾರೆ. ಇದರ ಲೈವ್ ವೀಕ್ಷಿಸಲು ಈ ಲಿಂಕ್ ಬಳಸಿ https://youtu.be/A6WCUUu0X7k
Loading posts...

All posts loaded

No more posts

error: Content is protected !!