ಇಂದಿನ ಪರಿಸ್ಥಿತಿಯಲ್ಲಿ ಮಾಧ್ಯಮವನ್ನು ಅನುಮಾನದ ದೃಷ್ಟಿಯಲ್ಲಿ ಜನಸಾಮಾನ್ಯನು ನೋಡುವಂತಾಗಿದೆ: ತಾರನಾಥ ಕಾಪಿಕಾಡ್

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವು ಸುಳ್ಯದ ಪರಿವಾರಕಾನದ ಉಡುಪಿ ಗ್ರ್ಯಾಂಡ್ ಪರಿವಾರ್ ಸಭಾಂಗಣದಲ್ಲಿ ಜು.28ರಂದು ಜರುಗಿತು. ಸುಳ್ಯ ತಾಲೂಕು ಯೂನಿಯನ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ತಹಶಿಲ್ದಾರ್ ಅನಂತಶಂಕರ್ ಅವರು ಉದ್ಘಾಟಿಸಿ, ಶುಭಹಾರೈಸಿದರು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ತಾರನಾಥ ಗಟ್ಟಿ ಕಾಪಿಕಾಡ್...

ಅಮರಮುಡ್ನೂರು ಪಂಚಾಯತ್ ಗೆ ಎಸಿಬಿ ದಾಳಿ

ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಆಗಿದೆ ಎಂದು ಗ್ರಾಮಸ್ಥರೊಬ್ಬರು ದೂರು ನೀಡಿರುವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಇಂದು ದಾಳಿ ನಡೆಸಿದ್ದು ಸಂಬಂಧಿಸಿದ ದಾಖಲೆಗಳು ಪಡೆದುಕೊಂಡು ತೆರಳಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಪಂಚಾಯತ್ ಅಧಿಕಾರಿಗಳು ಸಂಪರ್ಕಕ್ಕೆ ಲಭ್ಯರಾಗಿಲ್ಲ.
Ad Widget

ದ.ಕ.ಮಿತಿಮೀರಿದ ಅಕ್ರಮ ಜಾನುವಾರು ಸಾಗಾಟ ಮತ್ತು ಹಲ್ಲೆ ಪ್ರಕರಣ – ಸೂಕ್ತ ಕಾನೂನು ಕ್ರಮ ಕೈಗೊಂಡು ಕಡಿವಾಣ ಹಾಕಲು ಡಿಸಿ ಆದೇಶ

ಅಕ್ರಮ ಜಾನುವಾರು ಸಾಗಾಟ, ಹತ್ಯೆ ಮತ್ತು ಸಾಗಿಸುವ ವಾಹನ,ಜನರ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಖಡಕ್ ಸೂಚನೆ ರವಾನಿಸಿದ್ದಾರೆ. ಜು. 27 ರಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಕ್ರಮ ಜಾನುವಾರು...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(28.07.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 305 - 360ಹಳೆ ಅಡಿಕೆ 305 - 380ಡಬಲ್ ಚೋಲ್ 305 - 380 ಫಠೋರ 220 - 290ಉಳ್ಳಿಗಡ್ಡೆ 110 - 200ಕರಿಗೋಟು 110 - 185 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...

ತೊಡಿಕಾನ ದೇವಸ್ಥಾನದಲ್ಲಿ ಮಿಂಚುಬಂಧಕ ಆಳವಡಿಕೆ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಮಿಂಚುಬಂಧಕ ಅಳವಡಿಕೆ ಜು. 27 ರಂದು ನಡೆಯಿತು. ಇದನ್ನು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕೊಡುಗೆಯಾಗಿ ನೀಡಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ , ಯು.ಎಮ್ ಕಿಶೋರ್...

ಸುಳ್ಯ: ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಚಾಲನೆ

ಗ್ರಾಮ ವಿಕಾಸ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ಸಹಕಾರ ಭಾರತಿ ದ. ಕ. ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಡೆದ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಇದರ ಉದ್ಘಾಟನೆಯನ್ನು ಶಾಸಕರಾದ ಎಸ್. ಅಂಗಾರ ನೆರೆವೇರಿಸಿದರು. ಕೈಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ , ಪುತ್ತೂರು...

ಆ.2 – ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಚ್ಚ ಪಂಜ ಕಾರ್ಯಕ್ರಮ

ಸ್ವಚ್ಛ ಭಾರತ ಪರಿಕಲ್ಪನೆಯ ಉದ್ದೇಶದಲ್ಲಿ ಪಂಜದ ಅಸುಪಾಸು ರಸ್ತೆಯ ಇಕ್ಕೆಲಗಳನ್ನು ಆಗಸ್ಟ್ 2 ರಂದು ಸ್ವಚ್ಛಗೊಳಿಸಲು ನಿರ್ಧರಿಸಿದ್ದು ಕ್ಲಬ್ ನ‌‌ ಎಲ್ಲಾ ಸದಸ್ಯರು ಹಾಗೂ ಊರಿನ ಎಲ್ಲಾ ಸಂಘ ಸಂಸ್ಥೆಗಳು ಈ ಕಾರ್ಯಕ್ಕೆ ಸಹಕರಿಸಬೇಕಾಗಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಕರಿಮಜಲು ಹಾಗೂ ಪಂಜ ಗ್ರಾ.ಪಂ.ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಪ್ರಕಟಣೆ ಯಲ್ಲಿ...

ರಾಜ್ಯದಲ್ಲಿ ಒಂದು ಲಕ್ಷ ದಾಟಿದ ಕೊರೊನಾ ಸೊಂಕಿತರು – 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ – ಸಾವನ್ನಪ್ಪಿದವರ ಸಂಖ್ಯೆ 1,953 ಕ್ಕೆ ಏರಿಕೆ

ಕರ್ನಾಟಕದಲ್ಲಿಂದು 5,324 ಹೊಸ ಕೊರೊನಾಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು 1 ಲಕ್ಷ ಗಡಿ ದಾಟಿದೆ ದಕ್ಷಿಣ ಕನ್ನಡದಲ್ಲಿ ಇಂದು 119 ಪಾಸಿಟಿವ್ ದಾಖಲಾಗಿದೆ.ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳು 61,819 ಇದ್ದು ಇದುವರೆಗೂ 37,685 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆ ಫಲಿಸದೇ ಇಂದು 75 ಜನ ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 1,953...

ಗುತ್ತಿಗಾರಿನಲ್ಲಿ ಜು.29 ಉಚಿತ ಕೋವಿಡ್ ಪರೀಕ್ಷೆ

ಗುತ್ತಿಗಾರಿನಲ್ಲಿ ಜು.29 ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಈ ಪರೀಕ್ಷೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಉಚಿತವಾಗಿರಲಿದ್ದು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಯಲಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ ಎಂದು ಗುತ್ತಿಗಾರು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

ಸುಬ್ರಹ್ಮಣ್ಯದಲ್ಲಿ ನಾಳೆ (ಜು.28) ಉಚಿತ ಕೋವಿಡ್ ಪರೀಕ್ಷೆ

ಸುಬ್ರಹ್ಮಣ್ಯದಲ್ಲಿ ಜು.28 ರಂದು ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಸುಬ್ರಹ್ಮಣ್ಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಪರೀಕ್ಷೆ ನಡೆಯಲಿದ್ದು ಸಾರ್ವಜನಿಕರಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಉಚಿತವಾಗಿರಲಿದ್ದು ಕೊರೋನಾ ಲಕ್ಷಣ ಇದ್ದರೂ, ಇಲ್ಲದಿದ್ದರೂ ಪರೀಕ್ಷೆ ನಡೆಯಲಿದ್ದು ಸದುಪಯೋಗ ಪಡೆದುಕೊಳ್ಳುವಂತೆ ಕೋರಲಾಗಿದೆ. ಒಂದೊಮ್ಮೆ ಕೊರೋನಾ ಪಾಸಿಟಿವ್ ಬಂದರೂ ಸುಬ್ರಹ್ಮಣ್ಯದಲ್ಲೇ ಉಳಿಸಿಕೊಂಡು ಉಚಿತ ಚಿಕಿತ್ಸೆ...
Loading posts...

All posts loaded

No more posts

error: Content is protected !!