- Friday
- June 19th, 2026
ಕೆ.ವಿ.ಜಿ ಅನುದಾನಿತ ಪ್ರೌಢಶಾಲೆ ಕೊಲ್ಲಮೊಗ್ರು(A.O.L.E).R ಸುಳ್ಯ ಇಲ್ಲಿ 2026-27ನೇ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಸಭೆಯು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕಮಲಾಕ್ಷ ಮುಳ್ಳುಬಾಗಿಲು ಇವರ ಅಧ್ಯಕ್ಷತೆಯಲ್ಲಿ ಜೂ.06 ರಂದು ನಡೆಯಿತು. ವಯೋನಿವೃತ್ತಿಯನ್ನು ಹೊಂದಿದ್ದು ಆದಾಗ್ಯೂ ಪ್ರಸ್ತುತ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ವೆಂಕಟ್ರಮಣ ಕೊಪ್ಪಡ್ಕ ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಶ್ರೀಮತಿ ತೇಜಾವತಿ ಅಂಬೆಕಲ್ಲು, ಮುಖ್ಯ ಗುರುಗಳಾದ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ 2025-26ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.06 ರಂದು ಅಪರಾಹ್ನ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ...
ಅಡ್ಕಾರು ಕುಟುಂಬದ ದೈವಸ್ಥಾನದಲ್ಲಿ ಜೂ.06 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಆಚರಣೆ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಕುಟುಂಬದ ತರವಾಡು ಮನೆಯಲ್ಲಿ ಬೆಳಿಗ್ಗೆ ಗಣಪತಿ ಹವನ, ನಾಗ ತಂಬಿಲ, ಮುಡಿಪು ಪೂಜೆ, ದೈವಗಳಿಗೆ ತಂಬಿಲ ಸೇವೆ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ನಂತರ ಸಂಜೆ ಗುರುಕಾರ್ನೂರು ಹಾಗೂ ಪಾಷಾಣಮೂರ್ತಿ ದೈವದ ಸಮ್ಮಾನ ನಡೆಯಿತು. ಈ ಸಂದರ್ಭದಲ್ಲಿ ಅಡ್ಕಾರು ಕುಟುಂಬಸ್ಥರು...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ದಿನನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜೂನ್ 01 ಸೋಮವಾರದಿಂದ ಜೂ.06 ಶನಿವಾರದವರೆಗೆ...
ಬೆಳ್ಳಾರೆ ಗ್ರಾಮದ ಉಮಿಕ್ಕಳ ದಿ.ಇಬ್ರಾಹಿಂ ಹಾಜಿಯವರ ಪತ್ನಿ ಕುಂಞ್ಞಲಿಮಾ(85)ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ಸ್ವಗೃಹದಲ್ಲಿ ನಿಧನರಾದರು.ಅವರು ಪುತ್ರರಾದ ಅಬ್ದುಲ್ ಕರೀಂ,ಹಮೀದ್, ಹನೀಫ್ ಪಿ. ಕೆ. ಹಾಗೂ ನಾಲ್ವರು ಪುತ್ರಿಯರು, ಮರಿಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ. ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ
ಕೊಲ್ಲಮೊಗ್ರು ಗ್ರಾಮದ ಗೋವಿಂದನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ಮಯೂರ ಕ್ರಿಕೆಟ್ ತಂಡ ಕಟ್ಟ ಗೋವಿಂದನಗರ ಇದರ ಸದಸ್ಯರು ಜೂ.05 ರಂದು ನೋಟ್ ಪುಸ್ತಕಗಳನ್ನು ಹಾಗೂ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಿ.ಎನ್, ಕ್ರಿಕೆಟ್ ತಂಡದ ಅಧ್ಯಕ್ಷರಾದ ಶರತ್ ಮತ್ತು ತಂಡದ ಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು,...
ಜೂ.06 ಶುಕ್ರವಾರದಂದು ವಿದ್ಯಾಬೋಧಿನೀ ಪ್ರೌಢ ಮತ್ತು ಪ್ರಾಥಮಿಕ ಶಾಲೆಯ ಸರ್ವ ಪೋಷಕರ ಸಭೆ ಮತ್ತು ವಿಶ್ವ ಪರಿಸರ ದಿನಾಚರಣೆ ಪ್ರೌಢಶಾಲೆಯ ಸಭಾಂಗಣ ದಲ್ಲಿ ನಡೆಯಿತು.ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ(ರಿ.) ಬಾಳಿಲ ಇದರ ಅಧ್ಯಕ್ಷ ಶ್ರೀ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದರು. ವಿದ್ಯಾಸಂಸ್ಥೆಗಳ ಸಂಚಾಲಕರು ಪಿ.ಜಿ.ಎಸ್.ಎನ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭಕೋರಿದರು. ವೇದಿಕೆಯಲ್ಲಿ ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹರಿಣಾಕ್ಷಿ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ವನ ನಿರ್ಮಾಣಕ್ಕೆ ಚಾಲನೆ, ಉಚಿತ ಸಸಿ ವಿತರಣೆ ಮತ್ತು ಉಪನ್ಯಾಸ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಹಾಗೂ ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ ವಹಿಸಿದ್ದರು.ಸುಳ್ಯ ಉಪ ವಿಭಾಗದ ಸಹಾಯಕ ಅರಣ್ಯ ಸoರಕ್ಷಣಾಧಿಕಾರಿ ಪ್ರಶಾಂತ್ ಪೈ ಯವರು ಶಾಲಾ ವನಕ್ಕೆ ಚಾಲನೆ...
ವಿಶ್ವ ಪರಿಸರ ದಿನದ ಅಂಗವಾಗಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸೋಣಂಗೇರಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಂಜಿತಾ ಪಿ...
ಸುಳ್ಯದ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 05 ರಂದು ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ರೊ. ಮೇಜರ್ ಡೊನೊರ್ ಡಾ|| ರಾಮ್ ಮೋಹನ್ ಕೆ.ಎನ್ ಶುಭ...
Loading posts...
All posts loaded
No more posts
